ಮುಜುಂಗಾವು ವಿದ್ಯಾಪೀಠಕ್ಕೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ದೇಣಿಗೆ ಸಮರ್ಪಣೆ

ಮುಳ್ಳೇರಿಯಾ: ಮಂಡಲದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನೂತನವಾಗಿ‌ ನಿರ್ಮಿಸುತ್ತಿರುವ ಭೊಜನ ಶಾಲೆಗೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ಸಹಾಯಧನವನ್ನು ವಿತರಿಸಲಾಯಿತು.   ಗುಂಪಿನಲ್ಲಿರುವ 60 ಜನರು ಈ ಕಾರ್ಯದಲ್ಲಿ ಭಾಗಿಯಾಗಿ 60606 ರೂ. ಸಂಗ್ರಹಿಸಿ ವಿದ್ಯಾಪೀಠಕ್ಕೆ ಸಮರ್ಪಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ ಹಿಳ್ಳೆಮನೆ, ಕೋಶಾಧಿಕಾರಿ ಉದನೇಶ್ವರ ಪ್ರಸಾದ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ ಮಾರ್ಗ, ಹಿರಿಯ ಅಧ್ಯಾಪಕರಾದ ಬಾಲಕೃಷ್ಣ ಶರ್ಮ ದೇಣಿಗೆಯನ್ನು ಸ್ವೀಕರಿಸಿದರು.   […]

ಕೌದಳ್ಳಿಯಲ್ಲಿರುವ ಗೋಫಲ ಘಟಕಕ್ಕೆ ಕನ್ನೇರಿ ಮಠದ ಪೀಠಾಧಿಪತಿಗಳ ಭೇಟಿ

ಹನೂರು: ಕೌದಳ್ಳಿಯಲ್ಲಿ ಗೋಫಲ ಟ್ರಸ್ಟ್‌ನ ಘಟಕಕ್ಕೆ ಶ್ರೀಕ್ಷೇತ್ರ ಸಿದ್ಧಗಿರಿ ಮಹಾಸಂಸ್ಥಾನ, ಕನ್ನೇರಿ ಮಠದ ಪೀಠಾಧಿಪತಿಗಳಾದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿಯವರು ಭೇಟಿ ನೀಡಿದರು. 2017 ರಲ್ಲಿ ಹನೂರು ತಾಲೂಕಿನಲ್ಲಿ ಬರಗಾಲ ಸಂದರ್ಭದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ರಾಮಚಂದ್ರಪುರ ಮಠವು ಗೋವುಗಳಿಗೆ ಮೇವು ಕೊಟ್ಟಿರುವುದನ್ನು ಗಮನಕ್ಕೆ ತರಲಾಯಿತು. ಶ್ರೀ ರಾಮಚಂದ್ರಾಪುರ ಮಠವು ಈಗ ಗೋಫಲ ಟ್ರಸ್ಟಿನ ಮೂಲಕ ಸಾವಯವ ಗೊಬ್ಬರ ಘಟಕ ಮಾಡಿ ಗೋಪಾಲಕರಿಂದ ಉತ್ತಮ ಮೌಲ್ಯದೊಂದಿಗೆ ಸೆಗಣಿ ಖರೀದಿ ಮಾಡುವುದರ ಮೂಲಕ ಗೋಪಾಲಕರಿಗೆ […]