ಶನಿನಮನ – ತಾಪಶಮನ: ಶನಿಜಯಂತೀ ವಿಶೇಷ ಕಾರ್ಯಕ್ರಮ
ಪೆರ್ಲ: ಬಜಕ್ಕೂಡ್ಲಿನ ಅಮೃತಧಾರಾ ಗೋಶಾಲೆಯಲ್ಲಿ ವೈಶಾಖ ಅಮಾವಾಸ್ಯೆಯಂದು (16-05-2026) ‘ಶನಿನಮನ -ತಾಪಶಮನ’ ವಿಶೇಷ ಕಾರ್ಯಕ್ರಮ ಸಂಪನ್ನಗೊಂಡಿತು. ಅಮಾವಾಸ್ಯೆ-ಶನಿವಾರಗಳ ಸಂಗಮವಾದ ಈ ಶನಿಜಯಂತಿಯ ಕಾಲ ಅಪರೂಪದಲ್ಲಿ ಅಪರೂಪ. ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನ-ಆಶೀರ್ವಾದಗಳೊಂದಿಗೆ ಶನೈಶ್ಚರನ ಈ ಮಹೋಪಾಸನೆ ನೆರವೇರಿತು. ಗುರುವಂದನೆಯೊಂದಿಗೆ ಆರಂಭಗೊಂಡು ಸ್ವಸ್ತಿ ಪುಣ್ಯಾಹ, ಬಾಲಗಣಪತಿ ಹವನ ನಡೆದವು. ಬೆಳಗ್ಗೆ 6:06 ಗಂಟೆಯಿಂದ ಗಣಪತಿ ಅಥರ್ವಶಿರ್ಷ ಪಾರಾಯಣ ಪ್ರಾರಂಭಗೊಂಡಿತು. 24 ಗಂಟೆಗಳ ನಿರಂತರ ಪಾರಾಯಣ ಮರುದಿನದ ಬೆಳಗ್ಗೆ ಸೂರ್ಯೋದಯಕ್ಕೆ ಸಮಾಪನಗೊಂಡಿತು. ಗಣಪತಿ ಅಥರ್ವಶೀರ್ಷ ಹವನ, ಶನಿ […]
ದೀಪಾವಳಿ ಆಚರಣೆ ಪ್ರಾತ್ಯಕ್ಷಿಕೆ
ಮಂಗಳೂರು: ಕಳೆದ ಭಾನುವಾರದಂದು (10-05-2026) ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯ ಆವರಣದಲ್ಲಿ ದೀಪಾವಳಿ ಹಬ್ಬದ ಸಂಭ್ರಮವಾಗಿತ್ತು. ಈಗಿನ್ನೂ ವೈಶಾಖದ ಶಾಖ, ಇದೇನಪ್ಪಾ ದೀಪಾವಳಿ- ಎಂಬ ಪ್ರಶ್ನೆಯೇ? ನಮ್ಮ ಭಾರತೀಯ ಸಂಸ್ಕೃತಿ-ಸಂಸ್ಕಾರಗಳಲ್ಲಿ ಸಾವಿರಾರು ವರ್ಷಗಳ ಹಿಂದಿನಿಂದಲೂ ಬೇರೂರಿರುವ ಶ್ರೇಷ್ಠ ಜೀವನ ಮೌಲ್ಯಗಳನ್ನು ಹಾಗೂ ನೈಜ ಆನಂದವನ್ನು ಹಬ್ಬದ ಆಚರಣೆಯ ವಿವಿಧ ಚಟುವಟಿಕೆಗಳ ಮೂಲಕ ಶ್ರೀಶಂಕರ ವೇದಪಾಠಶಾಲೆಯ ವಟುಗಳಿಗೆ ಹಾಗೂ ಶ್ರೀಶಂಕರ ಪರಂಪರಾ ಶಿಬಿರದ ಹೆಣ್ಣುಮಕ್ಕಳಿಗೆ ತೋರಿಸಿ ಕಲಿಸುವುದು ಈ ದಿನದ ಉದ್ದೇಶವಾಗಿತ್ತು. ಮುಂಚಿನ ದಿನವೇ ತಿಳಿಸಿದಂತೆ ಶಿಬಿರಾರ್ಥಿಗಳೆಲ್ಲರೂ ತಮ್ಮ […]