ನಂತೂರಿನಲ್ಲಿ ಶಂಕರಪಂಚಮೀ
ಮಂಗಳೂರು: ‘ಶ್ರೀಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ತ್ವಗಳು ಸಾರ್ವಕಾಲಿಕ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ವೈಶಾಖ ಶುಕ್ಲ ಪಂಚಮಿಯಂದು (21-04-2026) ನಡೆದ ಶ್ರೀಶಂಕರಾಚಾರ್ಯ ಜಯಂತಿ ಸಮಾರಂಭವನ್ನು […]
3ನೇ ವರ್ಷದ ಶಂಕರಶ್ರೀ ವೇದಪಾಠಶಾಲೆ ಆರಂಭ
ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯಲ್ಲಿ ಶಂಕರಶ್ರೀ ವೇದಪಾಠಶಾಲೆ ಸಮಿತಿ, ಭಾರತೀ ಎಜುಕೇಶನ್ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ 3ನೇ ವರ್ಷದ ಶಂಕರಶ್ರೀ ವೇದಪಾಠಶಾಲೆ ಮತ್ತು ಪರಂಪರಾ ಶಿಬಿರವು ವೈಶಾಖ ಶುದ್ಧ ಬಿದಿಗೆಯಂದು (19-04-2026) ಆರಂಭಗೊಂಡಿತು. ಮಕ್ಕಳ ಚಿಕಿತ್ಸೆ ತಜ್ಞರಾದ ಡಾ. ಸದಾಶಿವ ರಾವ್ ಉದ್ಘಾಟಿಸಿ ವೇದದ ಮಹತ್ತ್ವ, ಪರಂಪರೆಯ ಉಳಿಕೆ, ಕರ್ಮಪ್ರಧಾನ ಜೀವನದ ಆವಶ್ಯಕತೆ, ಫಲಾಪೇಕ್ಷೆ ಇಲ್ಲದೆ ಪರಂಪರೆಯನ್ನು ರಕ್ಷಿಸಬೇಕಾದುದರ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ಮುರಲಿಮೋಹನ […]