ವಿದ್ಯಾರಂಭ – ಶುಭಾರಂಭ
ಮಂಗಳೂರು: ‘ವಿದ್ಯಾರ್ಥಿಗಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯುಕ್ತ ಶಿಕ್ಷಣ ನೀಡಿದಾಗ ಪರಿಪೂರ್ಣವಾಗುತ್ತದೆ. ಮಕ್ಕಳಿಗೆ ಶಿಸ್ತು, ಉತ್ತಮ ನಡವಳಿಕೆ, ಜೀವನ ಮೌಲ್ಯ- ಇವುಗಳ ಪಾಠ ಸಿಗಬೇಕು’ ಎಂದು ಮೂಡಬಿದರೆಯ ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಭಟ್ ಗಾಳಿಮನೆ ಹೇಳಿದರು. ಅವರು ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಯ ಪಿ.ಯು.ಸಿ ವಿಭಾಗದ ‘ಎ ವೈಬ್ರೆಂಟ್ ಬಿಗಿನಿಂಗ್’ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಣೆಯ ‘ರಾಮ ಕೃಷಿ ರಸಾಯನ ಸಂಸ್ಥೆ’ಯ ಲೆಕ್ಕ ಮತ್ತು ಆರ್ಥಿಕ ಮುಖ್ಯಸ್ಥ ಅರವಿಂದ ರೈ ಅರ್ಪಿಣಿಗುತ್ತು ಅವರು ಮಾತನಾಡಿ […]
‘ಆಹಾ’ರೋತ್ಸವಕ್ಕೆ ಬನ್ನಿ
ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಜೂ.6 ಮತ್ತು 7 ರಂದು ಹಲಸುಮೇಳ- ಆಹಾರೋತ್ಸವ ಆಯೋಜಿಸಲಾಗಿದೆ. ಆಹಾರೋತ್ಸವದಲ್ಲಿ ಹಲಸಿನ ವಿವಿಧ ಖಾದ್ಯಗಳನ್ನು ಆಸ್ವಾದಿಸಬಹುದು. ಹಲಸಷ್ಟೇ ಅಲ್ಲದೆ, ಮಾವಿನ ಹಣ್ಣಿನ ಪ್ರಿಯರಿಗಾಗಿ ಮಲ್ಲಿಕಾ – ಅಲ್ಫೋನ್ಸ್ – ದಶ್ಹೇರಿ ಸೇರಿದಂತೆ ವಿವಿಧ ತಳಿಯ ಉತ್ಕೃಷ್ಟ ಗುಣಮಟ್ಟದ ಮಾವಿನಹಣ್ಣುಗಳು ಲಭ್ಯವಿರಲಿವೆ. ಇವುಗಳ ಜೊತೆಗೆ, ಗ್ರಾಹಕರಿಗೆ ನೇರವಾಗಿ ತಲುಪಿಸುವ ನಿಟ್ಟಿನಲ್ಲಿ ಮಲೆನಾಡಿನ ತಾಜಾ ತರಕಾರಿಗಳ ವಿಶೇಷ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಿಸಿಬಿಸಿ – ಬಗೆಬಗೆ ಆಹಾರ ಪ್ರಿಯರಿಗಾಗಿ ಮೇಳದ ಆವರಣದಲ್ಲೇ […]