ನಂತೂರು ಭಾರತೀ ಸಮೂಹ ಸಂಸ್ಥೆ : ಸಾಂಸ್ಕೃತಿಕ, ವಿಜ್ಞಾನ ಉತ್ಸವ ಸಂಸ್ಕೃತಿ, ವಿಜ್ಞಾನಕ್ಕೆ ಮಹತ್ವ : ದೀಪಕ್ ರೈ ಪಾಣಾಜೆ
ನಂತೂರು: ಇಂದು ಸಂಸ್ಕೃತಿ ಮತ್ತು ವಿಜ್ಞಾನಕ್ಕೆ ಮಹತ್ವ ನೀಡಲಾಗಿದೆ. ಕಲಾ ಪ್ರದರ್ಶನವೂ ಅಗತ್ಯ. ಈ ನಿಟ್ಟಿನಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕಲೆ, ವಿಜ್ಞಾನಕ್ಕೆ ಮಹತ್ವ ನೀಡಿದೆ ಎಂದು ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಹೇಳಿದರು. ಅವರು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಶಾಲೆ ಸಾಂಸ್ಕೃತಿಕ, ವಿಜ್ಞಾನ ಉತ್ಸವ ಉದ್ಘಾಟಿಸಿ, ಮಾತನಾಡಿದರು. […]