03.05.2019

ದಿನ ಭವಿಷ್ಯ

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ಚೈತ್ರ ಮಾಸ /
ಕೃಷ್ಣ ಪಕ್ಷ /ಚತುರ್ದಶಿ ತಿಥಿ/

ಶುಕ್ರವಾರ/ರೇವತಿ ನಕ್ಷತ್ರ /

ದಿನಾಂಕ 03.05.2019

 °~•~°~•~°~•~°~•~°~•~°

ಮೇಷ

          ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು,  ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ, ಗೃಹೋಪಯೋಗಿ ವಸ್ತುಗಳ ಖರೀದಿಗೆ ಅವಕಾಶಗಳು ಒದಗಿ ಬರುತ್ತದೆ.  ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ತೊಡಗಿಸಿಕೊಂಡ ಕೆಲಸ ದಾರಿಗಳಲ್ಲಿ ಕಷ್ಟನಷ್ಟಗಳು ಎದುರಾಗುತ್ತವೆ. ಮೋಸ ಹೋಗುವ ಸಾಧ್ಯತೆಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಅಧಿಕ ಖರ್ಚುವೆಚ್ಚಗಳು ಒದಗಿ ಬರುವ ಲಕ್ಷಣಗಳು ಇರುವುದರಿಂದ ದುಂದು ವೆಚ್ಚವನ್ನು ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ  ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಸಾಧ್ಯತೆಗಳು ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ  ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉತ್ತಮ ಶ್ರದ್ಧೆಯಿಂದ ಪರಿಶ್ರಮದಿಂದ  ಕೆಲಸವನ್ನು ತೊಡಗಿಸಿಕೊಂಡರೆ ಮಾತ್ರ ಅಭಿವೃದ್ಧಿ ಕಂಡು ಬರುವುದು ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಹೊಟ್ಟೆ ನೋವು, ಗಂಟು ನೋವು, ಬೆನ್ನು ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ತೊಡಗಿಸಿಕೊಂಡ  ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ಕಂಡು ಬಂದರೂ ಕೂಡ  ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ನರಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವು ,ಹೃದಯ ನೋವು ಮೊದಲಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮರೋಗ,  ಹೊಟ್ಟೆಗೆ ಬಂಧಿಸಿದ ತೊಂದರೆಗಳು, ತಲೆನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ  ಖರ್ಚು ವೆಚ್ಚವನ್ನು ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಆರೋಗ್ಯ ಸಂಬಂಧವಾದ ಸಣ್ಣ ಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಆರೋಗ್ಯ ಸಂಬಂಧಿ ಆದ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿಯನ್ನು ಹೊಂದುತ್ತೀರಿ.  ಆರ್ಥಿಕ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಶಾಂತಿ  ನೆಲೆಗೊಳ್ಳುತ್ತದೆ. ಭೂಲಾಭ, ವಾಹನ ಲಾಭ, ಮೊದಲಾದ ಅಭಿವೃದ್ಧಿ ಕಂಡು ಬರುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ.  ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿಯನ್ನು  ಹೊಂದುವಿರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬರುವುದು. ಅರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯುತ್ತದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *