20.05.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

ಕೃಷ್ಣಪಕ್ಷ/ದ್ವಿತೀಯಾ ತಿಥಿ/

ಸೋಮವಾರ/ಜ್ಯೇಷ್ಠಾ ನಕ್ಷತ್ರ /



ದಿನಾಂಕ: 20.05.2019

 °~•~°~•~°~•~°~•~°~•~°

ಮೇಷ

ಉತ್ತಮ ಪ್ರಯತ್ನದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಅಭಿವೃದ್ಧಿ ಕಂಡು ಬರುವುದು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಚರ್ಮರೋಗ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತವೆ. ಆರ್ಥಿಕ ವಿಚಾರದಲ್ಲಿ ತೊಂದರೆಗಳನ್ನು ಎದುರಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಖರ್ಚುವೆಚ್ಚವನ್ನು ನಿಭಾಯಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಜ್ವರ, ಮೂತ್ರ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಉತ್ತಮವಾಗಿ ನೀರನ್ನು ಸೇವಿಸಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹಾರವನ್ನು ನೋಡಿಕೊಳ್ಳಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತವೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಶೀತ ಜ್ವರ, ತಲೆನೋವು, ಕಣ್ಣು ನೋವು, ಕಫ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆಯಬೇಕು.  



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಹಾಗೂ ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನಿಮ್ಮ ಕಾರ್ಯಕ್ಷಮತೆಗೆ ಅಧಿಕಾರಿಗಳಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುವುದು. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಮಾಡುವಂತಹ ಕೆಲಸ  ಕಾರ್ಯಗಳಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವುಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ  ಸ್ಥಾನಮಾನ ಗೌರವಗಳು ಲಭಿಸುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಆರೋಗ್ಯ ಸಂಬಂಧಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯಲಿದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ.  ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯವಹಾರದಲ್ಲಿ ಮೋಸ ಹೋಗುವ ಸಾಧ್ಯತೆಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ  ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.  
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ಉತ್ತಮ ಪರಿಶ್ರಮ ಹಾಗೂ ಶ್ರದ್ಧೆಯಿಂದ ಮುನ್ನಡೆದಲ್ಲಿ ಮಾತ್ರ ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು  ಬರುವುದು. ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ  ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ಆಲಸ್ಯ ಹಾಗೂ ಅಶ್ರದ್ಧೆಯಿಂದ  ಕಾರ್ಯಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *