07.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/

ಶುಕ್ಲಪಕ್ಷ/ಚತುರ್ಥಿ ತಿಥಿ/

ಶುಕ್ರವಾರ/ಪುಷ್ಯಾ ನಕ್ಷತ್ರ /



ದಿನಾಂಕ: 07.06.2019

 °~•~°~•~°~•~°~•~°~•~°

ಮೇಷ
ದೂರದ ಬಂಧುಗಳ ಆಗಮನದಿಂದಾಗಿ ಸಂತಸ ದೊರೆಯಲಿದೆ. ಗೃಹಪಯೋಗಿ ವಸ್ತುಗಳು ಖರೀದಿಗೆ ಉತ್ತಮ ಅವಕಾಶ ದೊರೆಯಲಿದೆ. ವಾಹನ ಲಾಭ, ಭೂಲಾಭ, ಆಭರಣ ಹಾಗೂ ಬಟ್ಟೆಗಳ ಖರೀದಿಗೆ ಉತ್ತಮ ಅವಕಾಶ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ಯುವಕ-ಯುವತಿಯರಿಗೆ ವಿವಾಹಯೋಗ ಒದಗಿಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ದಾಂಪತ್ಯಜೀವನದಲ್ಲಿ  ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ಏರುಪೇರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಉತ್ತಮ ಮನಃಶಾಂತಿ, ಸಂತೋಷ ಶ್ರೇಯಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ  ಅಭಿವೃದ್ಧಿ ಕಂಡುಬರುವುದು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶ ದೊರೆಯಲಿದೆ. ಕೆಲಸದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಅಭಿವೃದ್ಧಿ ದೊರೆಯಲಿದೆ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ಕೆಲಸದಲ್ಲಿ ಉತ್ತಮ ಬದಲಾವಣೆ ಕಂಡುಬರುವುದು. ನಿಮ್ಮ ಪರಿಶ್ರಮಕ್ಕೆ ತಕ್ಕುದಾದ ಫಲ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯುತ್ತದೆ. ವ್ಯವಹಾರದಲ್ಲಿ ಬದಲಾವಣೆಗಳು ಕಂಡು ಬರುವುದು. ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ದಾಂಪತ್ಯ ಜೀವನದಲ್ಲಿ  ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು. ದಂಪತಿ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಬರುವುದು. ಆರೋಗ್ಯದಲ್ಲಿ  ಏರುಪೇರು ಆಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :

ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ಮಾಡುವಂತಹ ಕೆಲಸಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ  ನೆಲೆಗೊಳ್ಳುವುದು. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *