01.08.2019

ದಿನ ಭವಿಷ್ಯ

          

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ /
ಗ್ರೀಷ್ಮ ಋತು / ಆಷಾಢ ಮಾಸ/
ಕೃಷ್ಣಪಕ್ಷ/ ಅಮಾವಾಸ್ಯ ತಿಥಿ/

ಗುರುವಾರ/ಪುಷ್ಯ ನಕ್ಷತ್ರ /

ದಿನಾಂಕ 01.08.2019

  °~•~°~•~°~•~°~•~°~•~°

 

ಮೇಷ

ಗೃಹಪಯೋಗಿ ವಸ್ತುಗಳು ಖರೀದಿಗೆ ಉತ್ತಮ ಅವಕಾಶ ದೊರೆಯುತ್ತದೆ. ಒಡವೆ ವಸ್ತ್ರಗಳ  ಖರೀದಿ, ಆಭರಣಗಳ ಖರೀದಿಗೆ ಉತ್ತಮ ವಕಾಶ ದೊರೆಯಲಿದೆ. ಜೀವನ ದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ 

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ 

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

   

ವೃಷಭ

ಆಹಾರದಿಂದಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಹಣಕಾಸಿನ ವಿಚಾರದಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ 

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


      ದಾಂಪತ್ಯ ಜೀವನದಲ್ಲಿ ಕಲಹ  ಸಂಭವಿಸುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ದೊರೆಯುತ್ತದೆ

ಪರಿಹಾರ 
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್ 

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್ 

ನಮಾಮಿ ಋಣಮುಕ್ತಯೇ ||

   °~•~°~•~°~•~°~•~°~•~°



ಕರ್ಕಾಟಕ

 ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

  °~•~°~•~°~•~°~•~°~•~°



ಸಿಂಹ

ಮಾತಿನ ಮೂಲಕ ಜಗಳ ಸಂಭವಿಸುವ ಲಕ್ಷಣಗಳಿರುವ ದರಿಂದ ಜಾಗರೂಕತೆಯಿಂದ ಇರಬೇಕು. ಖರ್ಚುವೆಚ್ಚಗಳು ಒದಗಿಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ನಡೆಯಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°     

 


ಕನ್ಯಾ


      ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ಆರೋಗ್ಯದ ಮಂದವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್  

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್ 

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°      

 


ತುಲಾ


        ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ 
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ 

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್ 

ನಮಾಮಿ ಪರಮೇಶ್ವರೀಮ್ ||


  °~•~°~•~°~•~°~•~°~•~°

 


ವೃಶ್ಚಿಕ


 
ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ದೊರೆಯುತ್ತದೆ. ಉತ್ತಮ ಸ್ಥಾನಮಾನ  ಗೌರವಗಳು ಲಭಿಸುತ್ತದೆ. ವೈವಾಹಿಕ ಜೀವನದಲ್ಲಿ ಉತ್ತಮ ಮನ ಶಾಂತಿ ನೆಮ್ಮದಿ ದೊರೆಯುತ್ತದೆ

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ 

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ 

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°

 


ಧನು


   
  ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವ್ಯವಹಾರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್ 

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ 

ತಸ್ಮೈ ಶ್ರೀಗುರವೇ ನಮಃ ||

      °~•~°~•~°~•~°~•~°~•~°

 


ಮಕರ


    ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ಅವರಿಗೆ ಉತ್ತಮ ಅವಕಾಶ ದೊರೆಯಲಿದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ

ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ. 

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

    °~•~°~•~°~•~°~•~°~•~°         

 


ಕುಂಭ  

 
      ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ವಾಹನ ಪ್ರಯಾಣ ಮಾಡುವ ಸಂದರ್ಭಗಳಲ್ಲಿ ಜಾಗ್ರತೆಯಿಂದಿರಿ

ಪರಿಹಾರ 
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ದೊರೆಯಲಿದೆ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.

 


ಜಪಿಸಲು :   
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°

 

{ವಿ. ಸೂ. : 

ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *