11.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ /ಷಷ್ಠಿ ತಿಥಿ/

ಸೋಮವಾರ/ ಅಶ್ವಿನಿ ನಕ್ಷತ್ರ /

ದಿನಾಂಕ 11.02.2019

 °~•~°~•~°~•~°~•~°~•~°

ಮೇಷ

        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ.  ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ. ಶೀತ, ಜ್ವರ, ತಲೆನೋವು, ಚರ್ಮ ಸಂಬಂಧಿ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಗುರುಹಿರಿಯರ ಮಾರ್ಗದರ್ಶನದಂತೆ ಮುಂದುವರಿಯಿರಿ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಉದ್ಯೋಗ ಕ್ಷೇತ್ರದಲ್ಲಿ ತೊಂದರೆ  ಎದುರಿಸಬೇಕಾಗುತ್ತದೆ. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುವುದು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಆಹಾರದಲ್ಲಿ ಗಮನವಿರಲಿ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಕೆಲಸ ಕಾರ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ವಿನಾಕಾರಣ ಕಲಹ ಸಂಭವಿಸುವ ಸಾಧ್ಯತೆಗಳಿರುವುದರಿಂದ  ಜಾಗರೂಕರಾಗಿರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ರಕ್ತ ಸಂಬಂಧಿ ತೊಂದರೆ, ಮುಂತಾದವು ಬರುವ ಲಕ್ಷಣ ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಹಿರಿಯರ   ಸಲಹೆ, ಆದೇಶವನ್ನು ಪಾಲಿಸಿ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ವ್ಯವಹಾರಿಕ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕವಾಗಿ ನಿಧಾನಗತಿಯ ಹಿನ್ನಡೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಏರ್ಪಡುತ್ತವೆ.  ರಕ್ತಕ್ಕೆ ಸಂಬಂಧಿಸಿದ ತೊಂದರೆಗಳು, ಮೈ ಕೈ ಗಂಟು ನೋವು, ಮೂತ್ರ ಸಂಬಂಧಿ ತೊಂದರೆಗಳು ಬರುವ ಲಕ್ಷಣ ಇದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ನಿಧಾನಗತಿಯ ಏಳಿಗೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ. ಮೇಲಿನ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿಬರುವುದು.  ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ದೊರೆಯುವುದು. ಉತ್ತಮ ಆರೋಗ್ಯ ಭಾಗ್ಯವನ್ನು ಪಡೆಯುವಿರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಮಾಡುವಂತಹ ಕೆಲಸ ಕಾರ್ಯದಲ್ಲಿ ಉತ್ತಮ  ಏಳಿಗೆ ಕಂಡುಬರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ನೂತನ ಉದ್ಯೋಗ ಯೋಗಭಾಗ್ಯಗಳು ಒದಗಿ ಬರಲಿದೆ. ಆರ್ಥಿಕವಾಗಿ ಮುನ್ನಡೆ ಸಾಧಿಸುತ್ತೀರಿ. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಮ್ಮದಿ ದೊರೆಯುತ್ತದೆ. ಉತ್ತಮ ಆರೋಗ್ಯ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಮುನ್ನಡೆ  ದೊರೆಯಲಿದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಖರ್ಚುವೆಚ್ಚಗಳು ಜಾಸ್ತಿ ಆಗುವುದು. ದಾಂಪತ್ಯಜೀವನದಲ್ಲಿ ಮಾತಿನ ಮೂಲಕ ಜಗಳ ಏರ್ಪಡುತ್ತದೆ. ಆದುದರಿಂದ ಜಾಗರೂಕರಾಗಿರಬೇಕು. ಶೀತ, ಜ್ವರ, ತಲೆನೋವು, ಕಣ್ಣು ನೋವು, ಮುಂತಾದ ತೊಂದರೆಗಳು ಬರುವ ಲಕ್ಷಣ ಇದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆ ಬಿಟ್ಟು ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ಕೆಲಸ ಕಾರ್ಯದಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕವಾಗಿ ನಿಧಾನಗತಿಯ ಹಿನ್ನಡೆ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಉತ್ತಮ ಆರೋಗ್ಯಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ತಮ್ಮ ಉದಾಸೀನತೆ ಬಿಟ್ಟು, ತಂದೆ ತಾಯಿಯರ ಮಾತಿನಂತೆ ಮುಂದುವರಿಯಬೇಕು.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ಹಣಕಾಸಿನ ತೊಂದರೆಗಳು ಕಂಡುಬರುವುದು. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಏರ್ಪಡುತ್ತವೆ. ಉತ್ತಮ ಆರೋಗ್ಯ ಹೊಂದುವಿರಿ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡುಬರಲಿದ್ದು ಉತ್ತಮ ವ್ಯವಹಾರಕ್ಕಾಗಿ ವಿನಿಯೋಗಿಸಿ. ದಾಂಪತ್ಯಜೀವನದಲ್ಲಿ ಸುಖ ನೆಲೆಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಕೆಲಸ ಕಾರ್ಯದಲ್ಲಿ ಉತ್ತಮ ಏಳಿಗೆ ಕಂಡು ಬರುತ್ತದೆ. ಉದಾಸೀನತೆಯಿಂದ ಕೆಲವೊಂದು ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಲಭಿಸುತ್ತದೆ. ದಾಂಪತ್ಯದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.  ವಿದ್ಯಾರ್ಥಿಗಳು ಸ್ವಪ್ರತಿಭೆಯಿಂದ ಉತ್ತಮ ಸ್ಥಾನಮಾನ ಪಡೆಯುತ್ತಾರೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *