14.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ನವಮೀ ತಿಥಿ/

ಗುರುವಾರ / ರೋಹಿಣಿ ನಕ್ಷತ್ರ /

ದಿನಾಂಕ14.02.2019

 °~•~°~•~°~•~°~•~°~•~°

ಮೇಷ

        ಯಾವುದೇ ಕೆಲಸ ಕೈಗೊಂಡರೂ ಆತ್ಮವಿಶ್ವಾಸದಿಂದ ಮುಂದುವರಿದಲ್ಲಿ ಸಾಫಲ್ಯ ಕಾಣುವುದು. ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವುದರಿಂದ ಒಳ್ಳೆಯ ಕಾರ್ಯಕ್ಕಾಗಿ ಹಣವನ್ನು ವಿನಿಯೋಗಿಸಿ. ದಂಪತಿಗಳ ಮಧ್ಯೆ ಮಾತಿನ ಮೂಲಕವಾಗಿ ಜಗಳಗಳು ಸಂಭವಿಸುವ ಲಕ್ಷಣ ಇರುವುದರಿಂದ ಮಾತಿನ ಬಗ್ಗೆ ಗಮನವಿರಲಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ವಿದ್ಯಾಭ್ಯಾಸದಲ್ಲಿ ಉತ್ತಮ ಏಳಿಗೆ ಲಕ್ಷಣಗಳು ಕಂಡುಬರುತ್ತದೆ. ಸಂಗೀತ, ನೃತ್ಯ, ಹಾಗೂ ಕ್ರೀಡೆಯನ್ನು ಕಲಿಯುವವರಿಗೆ ಉತ್ತಮ ಅವಕಾಶ ದೊರೆಯಲಿದೆ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಮನಸ್ಸಿನಲ್ಲಿ ಸಂಕಲ್ಪಿಸಿದ ಕೆಲಸವನ್ನು ಹಿಂಜರಿಯದೇ ಮುಂದುವರಿಸಿದಲ್ಲಿ ಯಶಸ್ಸು ಕಾಣುತ್ತದೆ. ಸರಕಾರಿ ಕೆಲಸ ಮಾಡುವವರಿಗೆ ಉತ್ತಮ ಬಡ್ತಿ ದೊರೆಯುತ್ತದೆ. ಸಿಗಲು ಬಾಕಿ ಇರುವಂತಹ ಹಣವು  ದೊರೆಯುವ ಲಕ್ಷಣಗಳಿವೆ. ಕುಟುಂಬದಲ್ಲಿ ಉತ್ತಮ ಮನಶ್ಶಾಂತಿ ನೆಲೆಸುವುದು. ವಾತ, ಕಫಕ್ಕೆ ಸಂಬಂಧಿಸಿದ ತೊಂದರೆಗಳು, ಗುಹ್ಯರೋಗ, ಶೀತ, ಕಣ್ಣುನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಂದೆ ತಾಯಿಯ ಆಶೀರ್ವಾದವನ್ನು ಪಡೆದು, ಪರಿಶ್ರಮದಿಂದ ಮುಂದುವರಿಯಿರಿ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಸಂಕಲ್ಪಿಸಿದ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತದೆ. ಕೆಲಸದಲ್ಲಿ ಕಂಡುಬರುವ ಹಿನ್ನಡೆಯಿಂದಾಗಿ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿಬರುತ್ತದೆ. ಉತ್ತಮ ಸಂಪಾದನೆ ಆದರೂ ಖರ್ಚುವೆಚ್ಚ ಒದಗಿಬರುತ್ತದೆ. ದಂಪತಿಗಳ ನಡುವೆ ಸಣ್ಣಪುಟ್ಟ ಕಲಹಗಳು ಏರ್ಪಡುವ ಸಾಧ್ಯತೆಗಳಿವೆ. ಅನುಮಾನಗಳಿಗೆ ಎಡೆಮಾಡಿ ಕೊಡಬೇಡಿ. ಪಿತ್ತ ಜ್ವರ, ವಿಪರೀತ ಬಾಯಾರಿಕೆ, ಕಿವಿನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಂತೆ, ಉದಾಸೀನತೆ ಬಿಟ್ಟು ಮುಂದುವರಿಯಿರಿ.



ಪರಿಹಾರ  
ಶ್ರೀಕೃಷ್ಣನ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಯಾವುದೇ ಕೆಲಸಗಳನ್ನು ತೊಡಗಿಸಿಕೊಂಡರೂ  ಉತ್ತಮ ಸಾಫಲ್ಯ ಕಾಣುವಿರಿ. ನೂತನ ಉದ್ಯೋಗಾಕಾಂಕ್ಷಿಗಳಿಗೆ  ಉದ್ಯೋಗ ಅವಕಾಶಗಳು ಒದಗಿಬರುವುದು. ವ್ಯಾಪಾರಿಗಳಿಗೆ ಉತ್ತಮ ಲಾಭದಾಯಕ ವ್ಯವಹಾರ ಒದಗಿಬರುತ್ತದೆ. ದಂಪತಿಗಳು ಸಣ್ಣಪುಟ್ಟ ಕೆಲಸಗಳನ್ನು ಎದುರಿಸಬೇಕಾಗುತ್ತದೆ. ಕಾಲು ನೋವು, ಹೊಟ್ಟೆ ನೋವು, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ  ಪಶುವಿಗೆ ಆಪತ್ತು ಬರುವ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮವಾಗಿ ತೊಡಗಿಸಿಕೊಂಡರೆ ಮಾತ್ರ ಉತ್ತಮ ಏಳಿಗೆ ದೊರೆಯಲಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ. ಇರುವ ಉದ್ಯೋಗದಲ್ಲಿ ಉನ್ನತಿಯ ಸ್ಥಾನಮಾನ ಲಭ್ಯವಾಗಲಿದ್ದು  ಶ್ರದ್ಧೆಯಿಂದ ಕೆಲಸ ಮಾಡಿ. ವಿವಾಹಾಪೇಕ್ಷಿತರಿಗೆ ವಿವಾಹ ಯೋಗ ಒದಗಿಬರುತ್ತದೆ. ದಾಂಪತ್ಯದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಜ್ವರ, ವಾತ ಸಂಬಂಧಿ ತೊಂದರೆ, ದೇಹದಲ್ಲಿ ಅತಿಉಷ್ಣತೆ, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ  ಪರಿಶ್ರಮದಿಂದ ಮುಂದುವರಿಯಬೇಕು ಹಾಗೂ ಮೊಬೈಲ್ ಟಿವಿ ಮುಂತಾದುವುಗಳಿಂದ ದೂರವಿರಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ತೊಡಗಿಸಿಕೊಂಡ ಕಾರ್ಯವು ನಿಂತುಹೋಗುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ಸಂಪಾದಿಸಿದ ಹಣವನ್ನು ದುಂದುವೆಚ್ಚ ಮಾಡದಿರಿ. ವಿನಾಕಾರಣ ಖರ್ಚಿನಿಂದ ಮನಶ್ಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಕಣ್ಣು ನೋವು, ಕುತ್ತಿಗೆ ನೋವು, ಜ್ವರ, ಚರ್ಮರೋಗ ಇಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಕಾರ್ಯಕ್ಷೇತ್ರದಲ್ಲಿ ಉತ್ತಮ ಏಳಿಗೆ ಹೊಂದಿದ್ದರೂ ಮಾನಸಿಕ ಕಿರಿಕಿರಿ ಎದುರಿಸಬೇಕಾಗುತ್ತದೆ. ಉತ್ತಮ ಸಂಪಾದನೆಯಾಗುತ್ತದೆ. ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಲಾಭ ಬರಲಿದೆ. ವ್ಯಾಪಾರದಲ್ಲಿ ಬೆಳವಣಿಗೆ ಕಂಡುಬರುತ್ತದೆ.  ಹೊಟ್ಟೆಗೆ ಬಂಧಿಸಿದ ತೊಂದರೆ, ವಾಯು ಸಂಬಂಧಿ ತೊಂದರೆ, ಕಿವಿ ನೋವು ಮುಂತಾದವನ್ನು ಎದುರಿಸಬೇಕಾಗುತ್ತದೆ. ವಿದ್ಯಾಭ್ಯಾಸದಲ್ಲಿ ಉನ್ನತ ಏಳಿಗೆ ಕಂಡುಬರುತ್ತದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ದೊರೆಯಲಿದೆ. ಹೊಸ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ಇರುವವರಿಗೆ ಅವಕಾಶ ಒದಗಿಬರುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ದಾಂಪತ್ಯದಲ್ಲಿ ಸುಖ-ಶಾಂತಿ-ನೆಮ್ಮದಿ ಒದಗಿಬರುತ್ತದೆ. ವಿಪರೀತ ಬಾಯಾರಿಕೆ, ಅಧಿಕ ರಕ್ತದೊತ್ತಡ, ವಾಂತಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಪ್ರಯಾಣಿಸುವವರು ಜಾಗರೂಕತೆಯಿಂದಿರಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮುಂದುವರಿಯಬೇಕು. ಮಕ್ಕಳ ಆಟದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ಉದಾಸೀನತೆಯಿಂದ ಉದ್ಯೋಗದಲ್ಲಿ ಅವಕಾಶಗಳನ್ನು ಕಳೆದುಕೊಳ್ಳುತ್ತೀರಿ. ಚಾಕಚಕ್ಯತೆಯಿಂದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬಕ್ಕೋಸ್ಕರ ಹಣವನ್ನು ವಿನಿಯೋಗ ಮಾಡಬೇಕಾಗುತ್ತದೆ. ಕಫಕ್ಕೆ ಸಂಬಂಧಿಸಿದ ತೊಂದರೆಗಳು ಕಂಡುಬರುವುದರಿಂದ ಜಾಗರೂಕರಾಗಿರಬೇಕು. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉದಾಸೀನತೆಯನ್ನು ಬಿಟ್ಟು ಉತ್ತಮ ಪರಿಶ್ರಮದಿಂದ, ಏಕಾಗ್ರತೆಯಿಂದ ಮುಂದುವರೆದಲ್ಲಿ ಮಾತ್ರ ಶುಭ.


ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ವ್ಯಾವಹಾರಿಕವಾದ ಕಷ್ಟನಷ್ಟವನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ತೊಂದರೆಯಿಂದಾಗಿ ಕುಟುಂಬದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಯುವಕ ಯುವತಿಯರಿಗೆ ವಿವಾಹ ಯೋಗ ಒದಗಿಬರುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಮಾನಸಿಕ ಕಿರಿಕಿರಿ, ಕಣ್ಣು ನೋವು, ಪಿತ್ತ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಕೆಲಸ ಕಾರ್ಯಗಳಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ತಾಮ್ರ ವ್ಯಾಪಾರಸ್ಥರು, ಹೊಟೆಲ್ ವ್ಯಾಪಾರಸ್ಥರು ಮುಂತಾದವರಿಗೆ ಉತ್ತಮ ಲಾಭ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ-ನೆಮ್ಮದಿ ದೊರೆಯುತ್ತದೆ. ಅತಿಯಾದ ನಿದ್ರೆ, ಉತ್ಸಾಹಹೀನತೆ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ, ಏಕಾಗ್ರತೆಯಿಂದ ಮುಂದುವರೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುವುದು. ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ಉಷ್ಣ ಜ್ವರ, ಎದೆನೋವು, ಹೊಟ್ಟೆನೋವು, ಕಣ್ಣಿನ ರೋಗ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ರಾಜಭಯ, ಶತ್ರುಭಯ ಮತ್ತು ಕಳ್ಳರ ಭಯಗಳು ಉಂಟಾಗುತ್ತವೆ. ಹೆಂಡತಿಗೆ ಹಾಗೂ ಮಕ್ಕಳಿಗೆ  ಅನಾರೋಗ್ಯ ಉಂಟಾಗುವ ಸಂಭವವಿದೆ. ವಿದ್ಯಾರ್ಥಿಗಳು ಮೊಬೈಲ್, ಟಿವಿಗಳಿಂದ ದೂರ ಇದ್ದು ಏಕಾಗ್ರಚಿತ್ತದಿಂದ ಮುಂದುವರಿಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *