16.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ದ್ವಾದಶಿ ತಿಥಿ/

ಶನಿವಾರ/ ಆರ್ದ್ರ ನಕ್ಷತ್ರ /

ದಿನಾಂಕ16.02.2019

 °~•~°~•~°~•~°~•~°~•~°

ಮೇಷ

        ಆತ್ಮವಿಶ್ವಾಸದಿಂದ ಕೆಲಸವನ್ನು  ಮುಂದುವರಿಸಿಕೊಂಡು ಬಂದಲ್ಲಿ ಉತ್ತಮ ಏಳಿಗೆ ಕಂಡುಬರುವುದು. ಕೃಷಿ ಕ್ಷೇತ್ರದಲ್ಲಿ ಅಧಿಕ ಲಾಭ  ಪಡೆಯುವಿರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಕಣ್ಣುನೋವು, ಕುತ್ತಿಗೆನೋವು, ಚರ್ಮರೋಗ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉದಾಸೀನತೆ ಬಿಟ್ಟು ಉತ್ತಮ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಗುರುಹಿರಿಯರ ಮಾರ್ಗದರ್ಶನದಂತೆ ಮುಂದುವರಿಯಿರಿ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತುತೇ ||

°~•~°~•~°~•~°~•~°~•~°

    

ವೃಷಭ

         ಉತ್ತಮ ಪರಿಶ್ರಮದಿಂದ ಕೆಲಸವನ್ನು ನಿಭಾಯಿಸಿದರೂ  ಕೆಲಸದಲ್ಲಿ ತೊಂದರೆಗಳು ಕಂಡುಬರುವುದು. ಅಧಿಕಾರಿಗಳಿಂದ ಅಸಮಾಧಾನದ ಮಾತುಗಳನ್ನು ಕೇಳಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಕಫ, ಕಣ್ಣು ನೋವು, ಆಲಸ್ಯ, ದೇಹದಲ್ಲಿ ವಿಪರೀತ ಆಯಾಸ ಇಂತಹ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು. ತಾವು  ಅಪೇಕ್ಷಿಸಿದ ಮುನ್ನಡೆ ಕಂಡುಬರುವುದರಿಂದ ಸಂತೋಷ ಆಗುತ್ತದೆ.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

°~•~°~•~°~•~°~•~°~•~°



ಮಿಥುನ


   ಉತ್ತಮ ಪರಿಶ್ರಮದಿಂದ ಯಾವುದೇ ಕೆಲಸವನ್ನು ಕೈಗೊಂಡರೂ ಅಭಿವೃದ್ಧಿ ಕಂಡುಬರುತ್ತದೆ. ನೂತನ ಸ್ಥಾನಮಾನಗಳು ದೊರೆಯುವ ಸಂಭವವಿದೆ. ತಾವು ಸಂಪಾದಿಸುವ ಹಣವನ್ನು ಉತ್ತಮ ಕಾರ್ಯಕ್ಕಾಗಿ ವಿನಿಯೋಗಿಸಿ, ದುಂದುವೆಚ್ಚ ಮಾಡದಿರಿ.  ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಿವಾಹ ಯೋಗ ಒದಗಿಬರುತ್ತದೆ. ಉತ್ತಮ ಪರಿಶ್ರಮದಿಂದ ವಿದ್ಯಾರ್ಥಿಗಳು ಮುನ್ನಡೆಯಬೇಕು. ಕುಲಗುರುಗಳ ದರ್ಶನವನ್ನು ಪಡೆಯಿರಿ.



ಪರಿಹಾರ  
ಶ್ರೀಕೃಷ್ಣನ ಆರಾಧನೆ, ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ ದೇವಂ

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಂ

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಕಾರ್ಯಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುವುದು. ಆರಕ್ಷಣ ಕೆಲಸ ಮಾಡುವವರು ಉತ್ತಮ ಏಳಿಗೆಯನ್ನು ಪಡೆಯುತ್ತಾರೆ. ಉತ್ತಮ ಸಂಪಾದನೆ ಆದರೂ ಕೂಡ ಅಧಿಕ ಖರ್ಚುವೆಚ್ಚಗಳು ಕಂಡುಬರುವುದು. ಗಂಡಹೆಂಡತಿಯರ ನಡುವೆ ಸಣ್ಣಪುಟ್ಟ ಕಲಹಗಳು ಏರ್ಪಡುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಿ. ವಾತಕ್ಕೆ ಸಂಬಂಧಪಟ್ಟ ತೊಂದರೆಗಳು, ಕಾಲು ನೋವು, ಹೊಟ್ಟೆ ನೋವು, ದೇಹದಲ್ಲಿ ಉಷ್ಣ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತುತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಉತ್ತಮ ಧನ ಸಂಪಾದನೆಯಾಗುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು, ವಿವಾಹ ಯೋಗ  ಒದಗಿಬರುತ್ತದೆ. ದೇಹದಲ್ಲಿ ಉಷ್ಣತೆ, ಜ್ವರ, ಎದೆ ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಪರಿಶ್ರಮದಿಂದ ಮುಂದುವರಿದಲ್ಲಿ  ಮಾತ್ರ ಏಳಿಗೆ ದೊರೆಯುತ್ತದೆ.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ಕ್ಷೇತ್ರದಲ್ಲಿ ನೂತನ ಸ್ಥಾನಮಾನ ದೊರೆಯುತ್ತದೆ. ನೂತನ ಉದ್ಯೋಗ ಅಪೇಕ್ಷಿತ ರಿಗೆ

ಅವಕಾಶ ಒದಗಿಬರುತ್ತದೆ. ಅಧ್ಯಾಪಕ ವೃತ್ತಿ ಮಾಡುವವರಿಗೆ  ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ನೂತನ ವಾಹನ, ಮನೆ, ಗೃಹ ಉಪಯೋಗಿ ವಸ್ತುಗಳ ಖರೀದಿಗೆ ಅವಕಾಶ ಒದಗಿಬರುತ್ತದೆ. ಪಿತ್ತಕ್ಕೆ ಸಂಬಂಧಿಸಿದ ತೊಂದರೆಗಳು, ದೇಹದಲ್ಲಿ ಉಷ್ಣತೆ, ಹೊಟ್ಟೆನೋವು,  ಕಣ್ಣುನೋವು ಇಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹೆಂಡತಿ ಮಕ್ಕಳಿಗೆ ಆರೋಗ್ಯ ಹದಗೆಡುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು:
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ|  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ  ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ

ಭೂ ಸಂಬಂಧಿ ಕೆಲಸ ಮಾಡುವವರು, ವ್ಯಾಪಾರಸ್ಥರು ಹಾಗೂ ಕೃಷಿಕರಿಗೆ ಉತ್ತಮವಾದ ಏಳಿಗೆ ಕಂಡುಬರುವುದು. ಉತ್ತಮವಾಗಿ ಧನ ಸಂಪಾದನೆ ಆಗುವುದು. ದಾಂಪತ್ಯದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಹೊಟ್ಟೆ ನೋವು, ವಾಯು ಸಂಬಂಧಿ ತೊಂದರೆಗಳು, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಸ್ವಪ್ರಯತ್ನದಿಂದ ಉತ್ತಮ ಏಳಿಗೆ ಪಡೆಯುತ್ತಾರೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀ ಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ


 °~•~°~•~°~•~°~•~°~•~°


ವೃಶ್ಚಿಕ


  
ಆತ್ಮಸ್ಥೈರ್ಯದಿಂದ ಕೆಲಸಗಳಲ್ಲಿ ಮುನ್ನಡೆದರೆ ಉತ್ತಮ ಏಳಿಗೆ ಕಂಡುಬರಬಹುದು. ಶ್ರದ್ಧೆ ಹಾಗೂ ಏಕಾಗ್ರತೆಯಿಂದ ಕೆಲಸ ಮಾಡಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು

ಕುಟುಂಬದಿಂದ ಧನಸಹಾಯ ಒದಗಿ ಬರುತ್ತದೆ.  ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುವುದು. ವಾಹನ ಓಡಾಟದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ಪಿತ್ತಕ್ಕೆ ಮತ್ತು ರಕ್ತಕ್ಕೆ ಸಂಬಂಧಿಸಿದ ತೊಂದರೆಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ಮಕ್ಕಳ ಓಡಾಟದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು:
ಷಡಾನನಂ ಕುಂಕುಮರಕ್ತವರ್ಣಂ

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಂ

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


ನೂತನ ಆಲೋಚನೆಗಳಿಂದ ಕಾರ್ಯಕ್ಷೇತ್ರದಲ್ಲಿ  ಮನ್ನಣೆಗೆ ಪಾತ್ರರಾಗುವಿರಿ. ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿಬರುತ್ತದೆ.  ಆರ್ಥಿಕವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಿವಾಹ ಯೋಗ ಒದಗಿಬರುತ್ತದೆ. ವಾತ ಸಂಬಂಧಿ ತೊಂದರೆಗಳು, ಕಫ, ಕಣ್ಣು ನೋವು ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಆಲಸ್ಯ ಬಿಟ್ಟು ಮುಂದುವರಿಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ  ಕೂಡ ಸಣ್ಣಪುಟ್ಟ ಅಡೆತಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಕಂಡುಬರುವುದರಿಂದ ಮನಶ್ಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಶೀತ, ಜ್ವರ, ಕಫ, ಚರ್ಮರೋಗ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು. ತಾವು ಬಯಸಿದಂತಹ ಫಲಿತಾಂಶ ದೊರೆಯದೇ ಇರುವುದರಿಂದ ಕಠಿಣ ಪರಿಶ್ರಮದಿಂದ ಮುಂದುವರಿಯಿರಿ.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ

   °~•~°~•~°~•~°~•~°~•~°          


ಕುಂಭ  


      ಉದ್ಯೋಗದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ.  ಆಹಾರಕ್ಕೆ ಸಂಬಂಧಿಸಿದ ವ್ಯವಹಾರ ಮಾಡುವವರಿಗೆ ಉತ್ತಮ  ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ.  ದೇಹದಲ್ಲಿ ಉಷ್ಣತೆ, ಪಾದ ನೋವು, ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಂ

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಂ

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ ಬೆಳೆ ಕಂಡುಬರುತ್ತದೆ. ಉತ್ತಮ‌ಆರ್ಥಿಕ ಅಭಿವೃದ್ಧಿ ಕಂಡುಬರುವುದು. ದಾಂಪತ್ಯಜೀವನದಲ್ಲಿ  ಕಲಹವನ್ನು ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆ, ಉಷ್ಣ, ಕಣ್ಣುನೋವು ಮುಂತಾದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಶತ್ರುವಿನಿಂದ ದೂರ ಇರಿ. ವಿದ್ಯಾರ್ಥಿಗಳು ಉತ್ತಮ ಮನಸ್ಸಿನಿಂದ, ಏಕಾಗ್ರತೆಯಿಂದ ಮುಂದುವರಿದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶಾಂತಾಕಾರಂ ಭುಜಗಶಯನಂ

ಪದ್ಮನಾಭಂ ಸುರೇಶಂ  

ವಿಶ್ವಾಧಾರಂ ಗಗನಸದೃಶಂ

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಂ

ಯೋಗಿಹೃದ್ಧ್ಯಾನಗಮ್ಯಂ

ವಂದೇ ವಿಷ್ಣುಂ ಭವಭಯಹರಂ

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *