ಶ್ರೀ ಶ್ರೀ ವಿಶ್ವಸಂತೋಷ ಗುರೂಜಿಯವರಿಂದ ಗೋಕರ್ಣಶ್ರೀಕ್ಷೇತ್ರದ ದರ್ಶನ

ಶ್ರೀಗೋಕರ್ಣ

ಗೋಕರ್ಣ: ಶ್ರೀ ಬಾರಕೂರು ಸಂಸ್ಥಾನಮಠದ ಶ್ರೀ ಶ್ರೀ ವಿಶ್ವಸಂತೋಷ ಸ್ವಾಮೀಜಿಗಳವರು, ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿ ಅಭಿಷೇಕ, ಪೂಜೆ ನೆರವೇರಿಸಿದರು. ಪೂಜೆಯ ನಂತರ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ಶ್ರೀ ನಾಗರಾಜ ನಾಯಕ ತೊರ್ಕೆ, ಶ್ರೀ ಆನಂದು ಕವರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶ್ರೀ ಶ್ರೀ ವಿಶ್ವಸಂತೋಷ ಸ್ವಾಮೀಜಿಗಳವರಿಗೆ ಪೂರ್ಣಫಲ ಸಮರ್ಪಿಸಿದರು. ವೇ. ಶ್ರೀ ವಿನೋದ ಜಂಭೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

 

Author Details


Srimukha

Leave a Reply

Your email address will not be published. Required fields are marked *