ಪರೀಕ್ಷೆ ಎದುರಿಸುವ ಸಾಮರ್ಥ್ಯದ ಬಗ್ಗೆ ಕಾರ್ಯಗಾರ

ಶ್ರೀ ಭಾರತೀ ಸಮೂಹ ಸಂಸ್ಥೆಗಳ ಮಾನವ ಸಂಪನ್ಮೂಲ ಅಭಿವೃದ್ಧಿ ಘಟಕ ಪ್ರೇರಣಾದಿಂದ ಶ್ರೀ ಅನಂತ ನಾರಾಯಣ ಪದಕಣ್ಣಯ್ಯ ಇವರಿಂದ ಸರ್ಕಾರಿ ಪ್ರೌಢಶಾಲೆ ಮೂಡುಶೆಡ್ಡೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಮತ್ತು ಪರೀಕ್ಷೆ ಎದುರಿಸುವ ಸಾಮರ್ಥ್ಯ ಬಗ್ಗೆ ಕಾರ್ಯಾಗಾರ ನಡೆಸಲಾಯಿತು. ಸುಮಾರು 45 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಪ್ರಾಧ್ಯಾಪಕ ಭಾಸ್ಕರ್ ಹೊಸ ಮನೆ ಸ್ವಾಗತಿಸಿ, ವಂದಿಸಿದರು.  

Continue Reading

ವರ್ಧಂತಿ ಉತ್ಸವದಂತೆ ಆಚರಣೆಯಾಯ್ತು ಶಾಲೆಯ ಹುಟ್ಟುಹಬ್ಬ

ಮುಜುಂಗಾವು: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವವು 26.01.2019ರ ಶನಿವಾರ ನಡೆಯಿತು. ಬೆಳಗ್ಗೆ 9.30ಕ್ಕೆ ದೀಪಪ್ರಜ್ವಲನೆ, ಶಂಖನಾದ ಹಾಗೂ ಧ್ವಜಾರೋಹಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶ್ರೀ ಪುರುಷೋತ್ತಮಾಚಾರ್ಯರು ಧ್ವಜಾರೋಹಣ ಮಾಡಿ ಮಾತನಾಡಿದರು.ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್. ಎನ್. ರಾವ್ ಮುನ್ನಿಪ್ಪಾಡಿ ಹಿತವಚನ ನುಡಿದರು. ಅಪರಾಹ್ನ 2 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ಎಡನಾಡು ಗ್ರಾಮದ ಗ್ರಾಮಾಧಿಕಾರಿಗಳಾದ ಶ್ರೀ ಸತ್ಯನಾರಾಯಣ ತಂತ್ರಿಯವರು ಮಾತನಾಡಿ, ಒಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬವೆಂದರೆ ಅವನಿಗೆ ಮಾತ್ರ […]

Continue Reading

ವಿಜ್ಞಾನ ಕಾರ್ಯಾಗಾರ : ರಸಪ್ರಶ್ನೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ

ಬೆಂಗಳೂರು: ಬೆಂಗಳೂರಿನ ಶ್ರೀಭಾರತೀ ವಿದ್ಯಾಲಯದಲ್ಲಿ ರಸಪ್ರಶ್ನೆ ಹಾಗೂ ವಿಜ್ಞಾನ ಕಾರ್ಯಾಗಾರ ನಡೆಯಿತು. ಇಸ್ರೋದ ನಿವೃತ್ತ ಹಾಗೂ ಹಿರಿಯ ವಿಜ್ಞಾನಿಗಳಾದ ಶ್ರೀ ಪಿ.ಜೆ . ಭಟ್ಟ ಕಾರ್ಯಾಗಾರ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. India’s space requirements and accomplishments ವಿಷಯದ ಬಗ್ಗೆ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಂಪನ್ಮೂಲ ವ್ಯಕ್ತಿಗಳು ಬಹುಮಾನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.  

Continue Reading

ಮೂರೂರಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳು ಇಂದು “ಥಟ್ ಅಂತ ಹೇಳಿ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

Continue Reading

ಶ್ರೀಭಾರತೀ ಸಂಸ್ಥೆಯಲ್ಲಿ ಮಾದಕದ್ರವ್ಯ ಜಾಗರಣ ಅಭಿಯಾನ

ನಂತೂರು: ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಗುಣನಡತೆಗಳ ಮೂಲಕ ಹೆತ್ತವರಿಗೆ, ಗುರುಹಿರಿಯರಿಗೆ, ವಿದ್ಯಾಸಂಸ್ಥೆಗೆ ಕೀರ್ತಿ ತರಬೇಕು. ಮಾದಕ ದ್ರವ್ಯವ್ಯಸನಗಳಿಗೆ ಬಲಿಯಾಗಬಾರದು. ಪೊಲೀಸ್ ಇಲಾಖೆ ಈ ಬಗ್ಗೆ ಎಚ್ಚರಿಕೆ ನೀಡುವುದರ ಜತೆಗೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳುತ್ತದೆ. ಇಲಾಖೆಯು ಮಾದಕ ವಸ್ತು ವಿತರಕರ ಜಾಲವನ್ನು ಪತ್ತೆ ಮಾಡಬೇಕು ಎಂದು ದ.ಕ.ಜಿ.ಪಂ. ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ ಒತ್ತಾಯಿಸಿದರು.   ಜನವರಿ 28, ಸೋಮವಾರದಂದು ಮಂಗಳೂರು ನಂತೂರು ಶ್ರೀಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀ ಸಭಾಭವನದಲ್ಲಿ ಶ್ರೀಭಾರತೀ ಪದವಿ […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ವಿಜಯನಗರದ ಶ್ರೀ ಭಾರತೀ ವಿದ್ಯಾಲಯದಲ್ಲಿ ೭೦ನೇ ಗಣರಾಜ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲಾಯಿತು.   ಗುರುವಂದನೆಯೊಂದಿಗೆ ಕಾರ್ಯಕ್ರಮ ಆರಂಭಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಗಣರಾಜ್ಯೋತ್ಸವದ ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳು ಕವಾಯತು ಪ್ರದರ್ಶನ, ದೇಶಭಕ್ತಿ ಗೀತ ಗಾಯನ,ಮುಂತಾದ ಮನರಂಜನಾ ಕಾರ್ಯಕ್ರಮಗಳು ಪ್ರದರ್ಶನಗೊಂಡವು.   ಶ್ರೀ ಗೋಪಾಲಕೃಷ್ಣ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಶಿಕ್ಷಕರ ಹಾಗೂ ಪಾಲಕರ ಕ್ರೀಡಾಕೂಟದಲ್ಲಿ ವಿಜೇತ ರಾದ ಶಿಕ್ಷಕರಿಗೆ ಹಾಗೂ ಪಾಲಕರಿಗೆ ಪ್ರಶಸ್ತಿಪತ್ರ ನೀಡಲಾಯಿತು.   ಶಾಲಾ ವಾರ್ಷಿಕೋತ್ಸವದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಲಲೋಒಯಿತು. ಶಾಲೆಯ […]

Continue Reading

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ `ವಸಂತೋತ್ಸವ’ ಸಮಾರಂಭ

ಬದಿಯಡ್ಕ: ಒಂದು ಮಗುವಿನ ಸರ್ವಾಂಗೀಣ ವಿಕಾಸವೇ ಶಿಕ್ಷಣದ ಉದ್ದೇಶವಾಗಿದೆ ಪಠ್ಯೇತರ ಚಟುವಟಿಕೆಗಳಿಗೂ ಪಠ್ಯ ಚಟುವಟಿಕೆಗಳಷ್ಟೇ ಪ್ರಾಧಾನ್ಯವನ್ನಿಟ್ಟು ಕೌಶಲ್ಯಾಧಾರಿತ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯು ನೀಡುತ್ತಾ ಬಂದಿದೆ. ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಯಾಗಿ ವಿಕಾಸಗೊಳ್ಳುವಂತೆ ಮಗುವಿನಲ್ಲಿರುವ ಪ್ರತಿಭೆಯನ್ನು ಮೊದಲೇ ಗುರುತಿಸಿ ರೂಪಿಸುವುದೇ ಶಿಕ್ಷಣವಾಗಿದೆ ಎಂಬುದಾಗಿ ಕವಿ, ಸಾಹಿತಿ ಹಾಗೂ ಮಂಗಳೂರು ಆಕಾಶವಾಣಿಯ ವಿಶ್ರಾಂತ ನಿರ್ದೇಶಕ ಡಾ.ವಸಂತ ಕುಮಾರ್ ಪೆರ್ಲ ಹೇಳಿದರು.   ಅವರು 20-01-2019 ರಂದು ನಡೆದ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ `ವಸಂತೋತ್ಸವ’ ಸಮಾರಂಭದಲ್ಲಿ ವಿಶೇಷ ಅಭ್ಯಾಗತರಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದರು. […]

Continue Reading

ಶ್ರೀ ಭಾರತೀ ಕಾಲೇಜಿನಲ್ಲಿ ಜೀವ ವಿಮೆಯಲ್ಲಿ ಉದ್ಯೋಗಾವಕಾಶಗಳು ಎಂಬ ಕುರಿತು ಮಾಹಿತಿ ಕಾರ್ಯಕ್ರಮ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶ್ರೀ ಭಾರತೀ ಕಾಲೇಜಿನಲ್ಲಿ ಜೀವ ವಿಮೆಯಲ್ಲಿ ಉದ್ಯೋಗಾವಕಾಶಗಳು ಎಂಬ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.   ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಎಲ್‌ಐಸಿಯ ಶಾಖೆ-1ರಲ್ಲಿ ಹಿರಿಯ ಶಾಖಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ರವಿರಾಜ್ ಕುಂಭಾಶಿ ಇವರು ಮಾತನಾಡಿ ಎಲ್‌ಐಸಿಯ ಮೂಲಕ ವಿದ್ಯಾರ್ಥಿಗಳಿಗೂ ಸ್ಕಾಲರ್‌ಶಿಪ್ ಅವಕಾಶವಿದೆ ಅದನ್ನು ಅವರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.   ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಎಲ್‌ಐಸಿಯ ಶಾಖೆ-1ರಲ್ಲಿ ಅಭಿವೃದ್ಧಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಶುಭಕರ್ ಇವರು […]

Continue Reading

ರಾಜ್ಯ ಮಟ್ಟದ ಚುನಾವಣಾ ರಸಪ್ರಶ್ನೆ : ಪ್ರಗತಿ ವಿದ್ಯಾಲಯ ಪ್ರಥಮ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಚುನಾವಣಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕು. ಸುಮುಖ ಭಟ್ಟ ಹಾಗೂ ಕು. ಸುಜಯ ಭಟ್ಟ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಶಿಕ್ಷಕವೃಂದ ಇವರನ್ನು ಅಭಿನಂದಿಸಿದೆ ಹಾಗೂ ಮುಂದಿನ ಹಂತದ ಸ್ಪರ್ಧೆಗೆ ಶುಭಕೋರಿದೆ.

Continue Reading

ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ : ಮಕ್ಕಳಲ್ಲಿ ರಾಷ್ಟ್ರಪ್ರಜ್ಞೆ ಬೆಳೆಸುವತ್ತ ಇನ್ನೊಂದು ಮುಖ್ಯ ಹೆಜ್ಜೆ

ಮೂರೂರು: ದಿನಾಂಕ 12.01.2019, ಶನಿವಾರದಂದು ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮದಿನ ಹಾಗೂ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರೂ ಶಾಲೆಯ ಮುಖ್ಯ ಅಧ್ಯಾಪಕರೂ ಆದ ಶ್ರೀ ಎಮ್. ಜಿ. ಭಟ್ಟ ಮಾತನಾಡಿ ಸ್ವಾಮಿ ವಿವೇಕಾನಂದರು ಮತ್ತು ರಾಮಕೃಷ್ಣ ಪರಮಹಂಸರ ತತ್ತ್ವದ ಸಾರಾಂಶವನ್ನು ಕಥೆಯ ರೂಪದಲ್ಲಿ ವಿವರಿಸಿದರು.   ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆರೆಸ್ಸೆಸ್ಸಿನ ಉತ್ತರಪ್ರಾಂತದ ಮಹಿಳಾ ಸಂಘಟಕರಾದ ಕುನಾರಿ ಸ್ನೇಹಾ ಹೆಗಡೆ ಉಪಸ್ಥಿತರಿದ್ದರು. ಪ್ರಗತಿ ವಿದ್ಯಾಲಯದ ವಿದ್ಯಾರ್ಥಿನಿ ಕು‌ಮಾರಿ ಸ್ವಾತಿ […]

Continue Reading

ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಅತಿರುದ್ರ ಪಾರಾಯಣ, ಪಲ್ಲಕ್ಕಿ ಉತ್ಸವ, ಹವನ ಸಂಪನ್ನ. ರಾಜ್ಯದೆಲ್ಲೆಡೆಯಿಂದ ರುದ್ರಾಧ್ಯಯಿಗಳು ಭಾಗಿ

  ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥ ‘ಅತಿರುದ್ರ ಪಾರಾಯಣ’, ಶ್ರೀ ದೇವರ ವಿಶೇಷ ‘ಪಲ್ಲಕ್ಕಿ ಉತ್ಸವ’ ಶ್ರೀ ಕ್ಷೇತ್ರ ಉಪಾಧಿವಂತ ಮಂಡಳದಿಂದ ‘ಮಹಾರುದ್ರ ಹವನ’ ಸಂಪನ್ನಗೊಂಡವು.   ಶ್ರೀರಾಮಚಂದ್ರಾಪುರಮಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಸಂಕಲ್ಪ ಮತ್ತು ಮಾರ್ಗದರ್ಶನದಲ್ಲಿ ಉಪಾಧಿವಂತ ಮಂಡಳ (ರಿ) ಗೋಕರ್ಣ ಇವರ ನೇತೃತ್ವದಲ್ಲಿ ಹಾಗೂ ಹವ್ಯಕ ಮಹಾಮಂಡಲದ ಸಹಯೋಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.   ರಾಜ್ಯದ ವಿವಿಧೆಡೆಯಿಂದ […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಪಾಲಕರ ಕ್ರೀಡಾಕೂಟ

ಬೆಂಗಳೂರು: ನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ಪಾಲಕರ ಕ್ರೀಡಾಕೂಟವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.   ಕಾಮಧೇನು ಧ್ವಜಾರೋಹಣ ನೆರವೇರಿಸಿ, ದೀಪ ಪ್ರಜ್ವಲನದೊಂದಿಗೆ ಪಾಲಕರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪಾಲಕರು ಆಸಕ್ತಿಯಿಂದ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.   ಶಾಲೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಹೆಗಡೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಪ್ರಮೋದ ಪಂಡಿತ್ ಅವರು ಕ್ರೀಡಾಕೂಟವನ್ನು ಉದ್ದೇಶಿಸಿ ಪ್ರೋತ್ಸಾಹ ಹಾಗೂ ಮೆಚ್ಚುಗೆಯ ಮಾತನಾಡಿದರು.  

Continue Reading

ಶ್ರೀರಾಘವೇಂದ್ರಭಾರತೀ ಸವೇದ ಸಂಸ್ಕ್ರತ ಮಹಾವಿದ್ಯಾಲಯದ ವಾಣೀಪೂಜಾ ಮತ್ತು ವಾರ್ಷಿಕೋತ್ಸವ

ವಿದ್ಯೆಯ ಸಾರ್ಥಕತೆಯು ಅದರ ಆಚರಣೆಯಲ್ಲಿದೆ : ಪ್ರಮೋದ ಪಂಡಿತ   ವೇದ-ಸಂಸ್ಕ್ರತಗಳ ಮಹತ್ತ್ವವು ಕೇವಲ ಅಧ್ಯಯನದಲ್ಲಿಲ್ಲ; ಅದರ ಆಚರಣೆಯಲ್ಲಿದೆ. ಆಚಾರವಂತನಾದ ವಿದ್ವಾಂಸನಿಗೇ ಜಗತ್ತು ಗೌರವವನ್ನು ಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳೆಲ್ಲರೂ ಜೀವನದಲ್ಲಿ ಆಚಾರ – ವಿಚಾರಗಳ ಶುದ್ಧತೆಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ವಿದ್ವಾಂಸ  ಹಾಗೂ ಅವನು ಕಲಿತ ವಿದ್ಯಾಲಯ ಎರಡೂ ಕೀರ್ತಿ ಪಡೆಯುತ್ತವೆ. ನಮ್ಮ ಪೂರ್ವಾಚಾರ್ಯರಿಂದ ಸ್ಥಾಪಿತವಾದ ಈ ವಿದ್ಯಾಲಯವು ನಮ್ಮೆಲ್ಲರ ಆರಾಧ್ಯ ಶ್ರೀಸಂಸ್ಥಾನದವರ ಕೃಪಾಶೀರ್ವಾದದಿಂದ ಸಾವಿರಾರು ವಿದ್ಯಾರ್ಥಿಗಳ ಆಶ್ರಯ ಸ್ಥಾನವಾಗಲಿ. ನಾಡಿನ ಎಲ್ಲ ವಿದ್ಯಾಲಯಗಳಿಗೆ ಆದರ್ಶವಾಗಲಿ, ಎಂದು ವಿದ್ಯಾವಿಭಾಗದ ಕಾರ್ಯದರ್ಶಿಗಳಾದ ಶ್ರೀ […]

Continue Reading

ಗೋಕರ್ಣ ದೇವಾಲಯ – ಶ್ರೀರಾಮಚಂದ್ರಾಪುರಮಠಕ್ಕೆ ಮತ್ತೊಂದು ಮಹತ್ವದ ಜಯ

ಗೋಕರ್ಣದ ಸಾರ್ವಭೌಮ ಶ್ರೀಮಹಾಬಲೇಶ್ವರ ದೇವಾಲಯ ಹಾಗೂ ಪರಿವಾರ ದೇವಾಲಯಗಳಿಗೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಶ್ರೀರಾಮಚಂದ್ರಾಪುರಮಠಕ್ಕೆ ಮತ್ತೊಂದು ಮಹತ್ವದ ಜಯ ಲಭಿಸಿದೆ. ಮಹಾಬಲೇಶ್ವರ ದೇವಾಲಯದ ಪಾರ್ಶ್ವದಲ್ಲಿರುವ ಆದಿಗೋಕರ್ಣದ ಪುನರ್ನಿರ್ಮಾಣಕ್ಕೆ ತಡೆ ನೀಡಬೇಕು ಎಂದು ಮಾಡಲಾಗಿದ್ದ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ ; ನ್ಯಾಯಾಲಯದ ವೆಚ್ಚವನ್ನು ಶ್ರೀಮಠಕ್ಕೆ ಸಂದಾಯಮಾಡುವಂತೆ ಅರ್ಜಿದಾರರಿಗೆ ಸೂಚಿಸಿ ಆದೇಶ ಹೊರಡಿಸಿದೆ.   ಆದಿಗೋಕರ್ಣ ದೇವಾಲಯ ಶಿಥಿಲವಾಗಿದ್ದ ಕಾರಣ, ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಂತೆ ಪುನರ್ನಿರ್ಮಾಣದ ಕಾರ್ಯವನ್ನು 2014 ರಲ್ಲಿ ಆರಂಭಿಸಲಾಗಿತ್ತು. ಅಭಿವೃದ್ಧಿಯನ್ನು ಸಹಿಸದ […]

Continue Reading

ಅಪ್ಸರಕೊಂಡ ಮಠದಲ್ಲಿ ನಡೆಯಲಿದೆ ಪ್ರತಿಷ್ಠಾಪನಾ ಕಾರ್ಯಕ್ರಮ : ಸಿದ್ಧತೆಗೆ ನಡೆದ ಪೂರ್ವಭಾವಿ ಸಭೆ

ಅಪ್ಸರಕೊಂಡ: ಶಾಖಾಮಠವಾದ ಅಪ್ಸರಕೊಂಡ ಮಠದಲ್ಲಿ ನಡೆಯಲಿರುವ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ಮಹತ್ತ್ವದ ಸಭೆ ನಡೆಯಿತು. ಕಾರ್ಯದರ್ಶಿ ಶ್ರೀ ಕೆ. ಜಿ. ಹೆಗಡೆಯವರು ಕಾರ್ಯಕ್ರಮದ ತಯಾರಿ ಬಗ್ಗೆ ಹಾಗೂ ಮುಂದಿನ ಅವಶ್ಯಕತೆ ಬಗ್ಗೆ ವಿವರಿಸಿದರು.   ಅಧ್ಯಕ್ಷರಾದ ಶ್ರೀ ಸುಬ್ರಾಯ ಹೆಗಡೆಯವರು ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಶ್ರೀ ಸುಬ್ರಾಯ ಭಟ್ಟರು, ಶ್ರೀ ಪಿ. ಎಸ್. ಭಟ್ಟರು, ಹೊನ್ನಾವರ ಕುಮಟಾ ಮಂಡಲದ ಅಧ್ಯಕ್ಷರು, ಗುರಿಕಾರರು, ಪದಾಧಿಕಾರಿಗಳು ಹಾಗೂ ಮಾತೃಪ್ರಧಾನೆಯರು ಸೇರಿದಂತೆ ಎಲ್ಲ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

Continue Reading

ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ Acid ದಾಳಿ ಬೆದರಿಕೆ

ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಶ್ರೀ ಸಂಸ್ಥಾನದವರ ಕಾರ್ಯದರ್ಶಿ ಮತ್ತು ಪದನಿಮಿತ್ತ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ  ಶ್ರೀ ಜಿ ಕೆ ಹೆಗಡೆ ಇವರ ಮೇಲೆ  ಆಸಿಡ್ ಧಾಳಿ ಮಾಡಲು ಸಂಚು ನಡೆದಿದೆ . ದಿನಾಂಕ 05-01-2019 ರಂದು ರಾತ್ರಿ 11.00 ಘಂಟೆ ಸುಮಾರಿಗೆ ಶ್ರೀ ಜಿ ಕೆ ಹೆಗಡೆಯವರು ಅಮಾವಾಸ್ಯೆ ರಥೋತ್ಸವ ಮುಗಿಸಿ ದೇವಾಲಯದಿಂದ ವಸತಿಗೆ ನಡೆದು ಹೋಗತ್ತಿರುವಾಗ ಶ್ರೀ ವಿಶ್ವನಾಥ ಫಣಿರಾಜ್ ಗೋಪಿ ಇವರು ಬೈಕಿನಲ್ಲಿ ಬಂದು : “ಜಿ ಕೆ ಹೆಗಡೆಯವರೇ, ನಿಮಗೆ ಆಸಿಡ್ ಹಾಕಲು […]

Continue Reading

ಹೊನ್ನಾವರ ತಲುಪಿದ ಹವ್ಯಕ ಜ್ಯೋತಿ

ಹೊನ್ನಾವರ: ಡಿಸೆಂಬರ್ 28ರಿಂದ‌‌ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ನೈದಾನದಲ್ಲಿ ನಡೆಯಲಿರುವ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ‌ ಹಾಗೂ ಅಖಿಲ ಹವ್ಯಕ ಮಹಾಸಭೆಯ ಅಮೃತಮಹೋತ್ಸವ ಕಾರ್ಯಕ್ರಮಗಳ ಉದ್ಘಾಟನೆಯು ವಿಭಿನ್ನವಾಗಿರಲಿದೆ. ಕರ್ನಾಟಕದಲ್ಲಿ ಹವ್ಯಕರ ಮೂಲಸ್ಥಾನವಾದ ಹೈಗುಂದದ ದೇವಳದಿಂದ ಜ್ಯೋತಿಯನ್ನು ಬೆಳಗಿಸಿ ರಥಯಾತ್ರೆಯಲ್ಲಿ ಭಾನ್ಕುಳಿಯ ಗೋಸ್ವರ್ಗದ ಮೂಲಕವಾಗಿ ಬೆಂಗಳೂರಿನ‌ ಅರಮನೆ ಮೈದಾನಕ್ಕೆ ತರಲಾಗುತ್ತದೆ. ಈ‌ ಪವಿತ್ರ ಜ್ಯೋತಿಯಿಂದ ದೀಪ ಬೆಳಗುವ ಮೂಲಕ ಸಮ್ಮೇಳನವು ಉದ್ಘಾಟನೆಗೊಳ್ಳಲಿದೆ.   ಡಿಸೆಂಬರ್ 26ರ ಬೆಳಗ್ಗೆ ಹೈಗುಂದದಿಂದ ಹೊರಟ ಜ್ಯೋತಿಯು ಹೊನ್ನಾವರವನ್ನು ತಲುಪಿದೆ. ಇಲ್ಲಿ […]

Continue Reading

ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿ : ಮೂರೂರು ಶಾಲೆಯ ಮುಕುಟಕ್ಕೆ ಇನ್ನೊಂದು ಗರಿ

ಮೂರೂರು: ಮೂರೂರು ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ವಿಭಾಗದ ಕು. ಅಭಿ ಅಡಿಗುಂಡಿ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು, ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾನೆ.   ಅಭಿ ಸತತ ಲ 3ನೆಯ ಬಾರಿ ರಾಷ್ಟ್ರಮಟ್ಟವನ್ನು ತಲುಪಿದ್ದು ಈತನ‌ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೆ ಕೋರಿವೆ.  

Continue Reading

ಶ್ರೀ ಭಾರತೀ ಗುರುಕುಲಂನಲ್ಲಿ ಅಷ್ಟಾವಧಾನ ಸಹಿತ ಪ್ರದೋಷ ಪೂಜೆ

ಹೊಸನಗರ : ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ಭಾರತೀ ಗುರುಕುಲಂನಲ್ಲಿ ದಿನಾಂಕ 20.12.2018ರ ಬುಧವಾರದಂದು ಅಷ್ಟಾವಧಾನ ಸಹಿತ ಪ್ರದೋಷ ಪೂಜೆ ಸಂಪನ್ನಗೊಂಡಿದೆ. ವೇದ, ಶಾಸ್ತ್ರ, ಪುರಾಣ,ಅಷ್ಟಕ,ಸಂಗೀತ, ವೇಣು,ವೀಣೆ,ಮೃದಂಗ, ಭರತನೃತ್ಯ ಸೇರಿದಂತೆ ಅಷ್ಟಾವಧಾನ ಸೇವೆ ನೆರವೇರಿದೆ.  

Continue Reading