ಶ್ರೀಸಂಸ್ಥಾನದವರಿಂದ ವಿದ್ಯಾ ಸಹಾಯ ಸ್ವೀಕರಿಸಿದ ವಿದ್ಯಾರ್ಥಿಗಳು

ಆರ್ತತ್ರಾಣ ಶಿಕ್ಷಣ ಸುದ್ದಿ

ಬೆಂಗಳೂರು: ಬೆಂಗಳೂರು ಉತ್ತರ ಮತ್ತು ದಕ್ಷಿಣ ಮಂಡಲದ ಮೂರು ವಿದ್ಯಾರ್ಥಿಗಳು ಇಂದು ವಿದ್ಯಾ ಸಹಾಯವನ್ನು ಶ್ರೀಸಂಸ್ಥಾನದವರ ಅಮೃತ ಕರಕಮಲಗಳಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಬೆಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ವೈ.ಕೆ.ಎನ್. ಶರ್ಮ, ಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ ಹೆಗಡೆ ಅಂತರವಳ್ಳಿ, ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಅಶ್ವಿನಿ ಅರವಿಂದ, ಉತ್ತರ ಬೆಂಗಳೂರು ಮಂಡಲದ ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಸಂಧ್ಯಾ ಕಾನತ್ತೂರು ಉಪಸ್ಥಿತರಿದ್ದರು.

ವಿದ್ಯಾಸಹಾಯ ವಿತರಣೆಗೂ ಮುನ್ನ, ಮಹಾಮಂಡಲದ ಸೂಚನೆಯಂತೆ ವಿದ್ಯಾರ್ಥಿಗಳಿಗೆ ಶ್ರೀಮಠದ ಪರಿಚಯ, ವಿದ್ಯಾರ್ಥಿಗಳಿಗಿರುವ ಸೇವಾವಕಾಶ, ಇರಬೇಕಾದ ಬದ್ಧತೆ, ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಠದ ಕಾರ್ಯಕ್ರಮಗಳನ್ನು, ಸೇವಾಕಾರ್ಯಗಳನ್ನು ಪ್ರಸಾರ ಮಾಡುವ ಮೂಲಕ ಮಾಡಬಹುದಾದ ಸೇವೆ ಇತ್ಯಾದಿ ಮಾಹಿತಿ ನೀಡಲಾಯಿತು.

ಉತ್ತರ ಬೆಂಗಳೂರು ಮಂಡಲದ ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಸಂಧ್ಯಾ ಕಾನತ್ತೂರು ಹಾಗೂ ದಕ್ಷಿಣ ಬೆಂಗಳೂರು ಮಂಡಲದ ಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ ಹೆಗಡೆ , ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಅಶ್ವಿನಿ ಅರವಿಂದ ವಿಧ್ಯಾರ್ಥಿಗಳ ಜೊತೆ ಸಂವಹನ ನಡೆಸುವ ಮೂಲಕ ವಿಷಯ ಮನದಟ್ಟು ಮಾಡಿಸಿದರು.

 

Author Details


Srimukha

Leave a Reply

Your email address will not be published. Required fields are marked *