ಅಂಬಾಗಿರಿಯಲ್ಲಿ ಶರನ್ನವರಾತ್ರಿ ಉತ್ಸವ ಹಾಗೂ ನೂತನ ಯಾಗಶಾಲೆ ಉದ್ಘಾಟನೆ ಸಂಪನ್ನ

ಶಿರಸಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆಶ್ವೀಜ ಶುಕ್ಲ ಪ್ರತಿಪದೆಯಿಂದ ನವಮಿಯವರೆಗೆ, ಅಕ್ಟೋಬರ್ 10 ರಿಂದ 17ರವರೆಗೆ ಶ್ರಿಸಂಸ್ಥಾನದ ಮಾರ್ಗದರ್ಶನದಂತೆ ಶಿರಸಿಯ ಅಂಬಾಗಿರಿ ಕಾಳಿಕಾಮಠದಲ್ಲಿ ಶರನ್ನವರಾತ್ರಿ ಉತ್ಸವ ಜರುಗಿತು.   ಈ ಅಂಗವಾಗಿ ಪ್ರತಿನಿತ್ಯ ಮಾತೆಯರಿಂದ ಕುಂಕುಮಾರ್ಚನೆ, ಪುರುಷರಿಂದ ಗಾಯತ್ರಿಜಪ, ದೇವೀಪಾರಾಯಣ ಮಹಾಪೂಜೆಗಳು, ದಶಮಿಯಂದು ಸಿಮೋಲ್ಲಂಘನ, ಅಷ್ಟಾವಧಾನ ಸೇವೆ ಮಹಾಮಂಗಳಾರತಿಯೊಂದಿಗೆ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.   ಅಲ್ಲದೇ ದಿನಾಂಕ 20ರಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಹಾಗೂ ಗೋಪ್ರವೇಶದೊಂದಿಗೆ ನೂತನ ಯಾಗಶಾಲೆ ಪ್ರಾರಂಭೋತ್ಸವ ನೆರವೇರಿತು. ಮರುದಿನ ದ್ವಾದಶಿಯಂದು […]

Continue Reading

ಬೆಳ್ಳೆಚ್ಚಾಲಿನಲ್ಲಿ ಪ್ರದೋಷಕಾಲದ ರುದ್ರಾರಾಧನೆ

ಶ್ರೀಸಂಸ್ಥಾನದವರ ನಿರ್ದೇಶನದಂತೆ ಲೋಕಕಲ್ಯಾಣಾರ್ಥವಾಗಿ ಪ್ರದೋಷಕಾಲದ ರುದ್ರಾರಾಧನೆಯು ಮುಳ್ಳೇರಿಯಾ ಮಂಡಲಾಂತರ್ಗತ ಚಂದ್ರಗಿರಿ ವಲಯದ ಬೆಳ್ಳೆಚ್ಚಾಲು ಘಟಕದ ಕುಜತ್ತೋಡಿ ಶ್ರೀ ರಾಜಗೋಪಾಲ ಶರ್ಮಾ ಅವರ ಮನೆಯಲ್ಲಿ ನವೆಂಬರ್ 20ರಂದು ನೆರವೇರಿತು.   ಈ ಕಾರ್ಯಕ್ರಮದಲ್ಲಿ 24 ಮಂದಿ ರುದ್ರಪಾಠಕರು ಭಾಗವಹಿಸಿದರು ಹಾಗೂ 17 ಮಂದಿ ಭಜನ ರಾಮಾಯಣ ಪಾರಾಯಣ ನಡೆಸಿದರು.

Continue Reading

ಶ್ರೀ ರಾಮಚಂದ್ರಾಪುರ ಮಠದಲ್ಲಿ ಏಕಾದಶಿಯಂದು ಸುಗ್ರಾಸ ಸಂತರ್ಪಣೆ!

ಹೌದು.. ಈ ಸಂತರ್ಪಣೆಯು ಪ್ರತಿ ಏಕಾದಶಿಯಂದೂ ಶ್ರೀ ರಾಮಚಂದ್ರಾಪುರ ಮಠದ ಆಶ್ರಯದಲ್ಲಿ ಸಂಜೆ ಆರು ಗಂಟೆಗೆ ಸರಿಯಾಗಿ ನಡೆಯುವಂತಾದ್ದು. ಇದೇನು ಶ್ರೀಮಠದಲ್ಲಿ ಏಕಾದಶಿಯಂದು, ಅದೂ ಸಂಜೆ ದೇವರು ಬರುವ ಹೊತ್ತಿನಲ್ಲಿ ಊಟ ಮಾಡುವುದೇ…., ಎಂದು ಬೆಚ್ಚಿ ಬಿದ್ದಿರಾ!! ಬನ್ನಿ…. ನೋಡಿ… ನೀವೂ ಈ ಸಂತರ್ಪಣೆಯಲ್ಲಿ ಭಾಗವಹಿಸಿ, ಮನಃತೃಪ್ತಿಯಾಗಿ ಉಣಬನ್ನಿ. ಈ ಸಮಾರಾಧನೆ ಬಹಳ ವಿಶಿಷ್ಟವಾದದ್ದು, ಅನನ್ಯವಾದ್ದದ್ದು. ಪುರಂದರದಾಸರು ಹೇಳಲಿಲ್ಲವೇ? ‘ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ, ವಿಠಲನಾಮ ತುಪ್ಪ ಬೆರೆಸಿ ಬಾಯಿ ಚಪ್ಪರಿಸಿರೋ ಎಂದು! ಈ ಏಕಾದಶಿ ಉತ್ಸವದ […]

Continue Reading

ಉತ್ಥಾನ ದ್ವಾದಶಿಯಂದು ಶ್ರೀಕರಾರ್ಚಿತ ಶ್ರೀರಾಮನಿಗೆ ೧೨೨ ಕೆಜಿ ಗೋಧಿ ಪಾಯಸ ನೈವೇದ್ಯ

ಬೆಂಗಳೂರು: ಉತ್ಥಾನದ್ವಾದಶಿಯ ಪುಣ್ಯಕಾಲದಂದು ಶ್ರೀಸಂಸ್ಥಾನದವರ ಸಂಕಲ್ಪದಂತೆ ಸಪರಿವಾರ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಅಖಂಡ (ಖಂಡವಿಲ್ಲದ ಇಡಿಯ ಗೋಧಿ) ಗೋಧಿ ಪಾಯಸವನ್ನು ನೈವೇದ್ಯವಾಗಿ ಸಮರ್ಪಿಸಲಾಯಿತು.   ಮುಂಜಾನೆ ಶ್ರೀಸಂಸ್ಥಾನದವರು ರಾಮದೇವರ ಪೂಜೆ ಗೈಯ್ಯುವ ವೇಳೆಗೆ ಘಮಘಮಿಸುವ ತುಂಡಿಲ್ಲದ ಗೋಧಿಯ ಪಾಯಸವನ್ನು ಸಿದ್ಧಪಡಿಸಲಾಗಿತ್ತು. ಒಟ್ಟು 8 ದ್ರೋಣದ ಪ್ರಮಾಣದಲ್ಲಿ ಅಂದ್ರೆ ಒಂದು ದ್ರೋಣಕ್ಕೆ 16 ಸೇರಿನ ಪ್ರಮಾಣದಲ್ಲಿ ಒಟ್ಟು 122.850 ಕೆಜಿ ಇಡಿ ಗೋಧಿಯ ಪಾಯಸ ಶ್ರೀರಾಮನಿಗೆ ಸಮರ್ಪಿತಗೊಂಡಿತು. ಶ್ರೀಸಂಸ್ಥಾನದ ಕರದಿಂದ ಅರ್ಚಿತಗೊಳ್ಳುವ ಶ್ರೀರಾಮನಿಗೆ ಪಾಯಸ ಸಮಪರ್ಣೆಗೊಂಡ ಬಳಿಕ ಪ್ರಸಾದವಾಗಿ ಈ […]

Continue Reading

ಕಲ್ಲಡ್ಕದ ಶ್ರೀಉಮಾಶಿವ ಕ್ಷೇತ್ರದಲ್ಲಿ ಶ್ರೀಶನೈಶ್ಚರ ಕಲ್ಪೋಕ್ತ ಪೂಜೆ ಸಂಪನ್ನ

ಕಲ್ಲಡ್ಕ: ಕಲ್ಲಡ್ಕದ ಕಲ್ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಶ್ರೀಸಂಸ್ಥಾನದವರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಶನಿವಾರ ಸಂಜೆ ಸಾಮೂಹಿಕ  ಶ್ರೀಶನೈಶ್ಚರ ಕಲ್ಪೋಕ್ತ ಪೂಜೆ ನೆರವೇರಿತು.   ಸೇವಾಸಮಿತಿಯ ಅಧ್ಯಕ್ಷರಾದ ರಾಕೋಡಿ ಶ್ರೀ ಈಶ್ವರ ಭಟ್ ಮತ್ತು ಪದಾಧಿಕಾರಿಗಳು, ಮಂಗಳೂರು ಮಂಡಲ ಗುರಿಕಾರರಾದ ಶ್ರೀ ಉದಯ ಕುಮಾರ್ ಖಂಡಿಗ, ಮೂಲಮಠ ಪ್ರತಿನಿಧಿ ಮುಳ್ಳುಂಜ ಶ್ರೀ ವೆಂಕಟೇಶ್ವರ ಭಟ್, ಕಲ್ಲಡ್ಕ ಹವ್ಯಕ ವಲಯಾಧ್ಯಕ್ಷ ಶ್ರೀ ಯು.ಎಸ್. ಚಂದ್ರಶೇಖರ ಭಟ್ ನೆಕ್ಕಿದರವು, ವಿಟ್ಲ ವಲಯ ದಿಗ್ದರ್ಶಕ ಶ್ರೀ ಸತೀಶ ಪಂಜಿಗದ್ದೆ, ಕೇಪು ವಲಯ […]

Continue Reading

ಸ್ವಾನುಭವ – ಶ್ರೀಮತಿ ಅನ್ನಪೂರ್ಣಾ ಕುಳಮರ್ವ

ತ್ವಮೇವ ಮಾತಾ ಚ ಪಿತಾ ತ್ವಮೇವ ತ್ವಮೇವ ಬಂಧುಶ್ಚ ಸಖಾ ತ್ವಮೇವ| ತ್ವಮೇವ‌ ವಿದ್ಯಾ ದ್ರವಿಣಂ ತ್ವಮೇವ ತ್ವಮೇವ ಸರ್ವಂ ಮಮ ದೇವದೇವ|| ಮೊಟ್ಟಮೊದಲು ಗುರುವೂ ರಾಮನೂ ಅದ್ವೈತವಾದ ಶ್ರೀಪೀಠಕ್ಕೆ ಕೋಟಿ ಕೋಟಿ ಪ್ರಣಾಮಗಳನ್ನು ಅರ್ಪಿಸುತ್ತೇನೆ. ಗುರುಕರುಣಾವರಣದೊಳಿರುವ ಅನ್ನಪೂರ್ಣಾ ಆದ ನಾನು ಮತ್ತೊಮ್ಮೆ ಗುರುಪದಕ್ಕೆ ಬರೆಯುತ್ತಿದ್ದೇನೆ. ಈ ಬರಹದಿಂದ ಗುರುಪೀಠಕ್ಕೆ ಸಂತೋಷ ಆಗಬಹುದೆಂಬ ವಿಶ್ವಾಸ ನನ್ನದು. ಇಲ್ಲಿಯವರೆಗೂ ನನ್ನ ಜೀವನದಲ್ಲಿ ಏನೇನೆಲ್ಲ ಘಟಿಸಿವೆಯೋ ಅವೆಲ್ಲವನ್ನೂ ಶ್ರೀಪೀಠದಲ್ಲಿ‌ ಕಾಲಕಾಲಕ್ಕೆ‌ ಭಿನ್ನವಿಸಿಕೊಂಡಿದ್ದೇನೆ. ಶ್ರೀರಾಮನನ್ನು, ಶ್ರೀಶಂಕರರನ್ನು ನಾವು ಕಂಡಿಲ್ಲ, ಆದರೆ ಶಂಕರರ […]

Continue Reading

ಅಮೃತಧಾರಾ ಗೋಶಾಲೆಯಲ್ಲಿ ಸಂಪನ್ನಗೊಂಡಿತು ಗೋಮಾತಾಸಪರ್ಯಾ~ಗೋಪಾಷ್ಟಮೀ

  ಪೆರ್ಲ: ಗೋಪಾಷ್ಟಮಿಯ ಶುಭ ಸಂದರ್ಭದಲ್ಲಿ ಶುದ್ಧ ದೇಶೀಯ ತಳಿಯ ಗೋಮಯದಿಂದ ತಯಾರಿಸಿದ ಗೋವರ್ಧನಗಿರಿಯಲ್ಲಿ ಗುರುವಾರ ರಾತ್ರಿ ಭಗವಾನ್ ಶ್ರೀಕೃಷ್ಣನಿಗೆ ನಡೆದ ರಂಗಪೂಜೆಯನ್ನು ದೀಪದ ಬೆಳಕಿನಲ್ಲಿ ಭಕ್ತಿಭಾವದೊಂದಿಗೆ ಆಚರಿಸಿ ಅನೇಕ ಭಕ್ತಾದಿಗಳು ಕಣ್ತುಂಬಿಕೊಂಡರು.   ಶ್ರೀಸಂಸ್ಥಾನದವರ ದಿಗ್ದರ್ಶನದಲ್ಲಿ ನಡೆಯುತ್ತಿರುವ ಕಾಸರಗೋಡು -ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಕಳೆದ ಒಂದುವಾರದಿಂದ ನಡೆದು ಬರುತ್ತಿದ್ದ ಗೋಮಾತಾ ಸಪರ್ಯಾ ಹಾಗೂ ೮ನೇ ವರ್ಷದ ಗೋಪಾಷ್ಟಮೀ ಮಹೋತ್ಸವವು ಗುರುವಾರ ರಾತ್ರಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನವಾಯಿತು. ಬೆಳಗ್ಗೆ ಗಣಪತಿ ಹವನ, ಕಾಮಧೇನು ಹವನ, […]

Continue Reading

ದ್ವೀಪದಲ್ಲೊಂದು ದಿವ್ಯತೆ; ಪ್ರಕೃತಿಯ ಅನುಪಮ ರಮ್ಯತೆ; ಶ್ರೀಕ್ಷೇತ್ರ ಹೈಗುಂದ; ಅಪರೂಪ; ಅತಿವಿಶಿಷ್ಟ

ಶಾಂತಗಂಭೀರವಾಗಿ ಹರಿಯುವ ಸುಂದರ ಶರಾವತಿಯ ಮಡಿಲಲ್ಲಿದೆ ಹೈಗುಂದ. ತಾಯಿ ಶ್ರೀದುರ್ಗಾಂಬಿಕೆಯ ಸಾನ್ನಿಧ್ಯದ ಮಹಿಮೆ ಇದರದ್ದು. ಹವ್ಯಕ ಬ್ರಾಹ್ಮಣರ ಮೂಲನೆಲೆ ಈ ಪ್ರಾಚೀನ ಯಾಗಭೂಮಿ. ವರ್ಷಋತುವಿನ ವರ್ಷಾಧಾರೆಯ ತಂಪಿನಲ್ಲೂ, ಗ್ರೀಷ್ಮದ ಸುಡುಬಿಸಿಲಿನ ತಾಪದಲ್ಲೂ ಹಚ್ಚಹಸುರಾಗಿ ತೋರುವದು ಈ ದ್ವೀಪ.   ಸುಮಾರು ೧೫೦೦ ವರ್ಷಗಳ ಹಿಂದೆ ಕದಂಬರ ದೊರೆ ಬನವಾಸಿಯ ರಾಜ ಮಯೂರವರ್ಮ ಯಾಗಕ್ಕಾಗಿ ಆರಿಸಿದ ಸ್ಥಳ ಹೈಗುಂದ. ಯಾಗರಕ್ಷಣೆಗಾಗಿ ನದಿಯನ್ನು ಎರಡು ಭಾಗವಾಗಿಸಿ ಯಾಗಭೂಮಿಯ ಸುತ್ತಲೂ ನೀರು ಹರಿಯುವಂತೆ ಮಾಡಿದ. ಸರಸ್ವತೀ ನದಿಯ ತೀರದಲ್ಲಿರುವ ಅಹಿಚ್ಛತ್ರವೆಂಬ ನಗರದಿಂದ […]

Continue Reading

ಹವ್ಯಕ ಮಹಾಮಂಡಲದ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ: ವಿವಿಧ ಮಂಡಲಗಳಲ್ಲಿ ಚೆಕ್ ವಿತರಣೆ

ವಿದ್ಯಾಭ್ಯಾಸ ನಡೆಸಲು ಆರ್ಥಿಕ ತೊಂದರೆ ಎದುರಿಸುತ್ತಿರುವ ಶ್ರೀಮಠದ ಶಿಷ್ಯರ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀ ರಾಮಚಂದ್ರಾಪುರ ಮಠ ಪ್ರತಿ ವರ್ಷದಂತೆ ಈ ವರ್ಷವೂ, 2018-19 ನೇ ಸಾಲಿನ ಅರ್ಹ 221 ವಿದ್ಯಾರ್ಥಿಗಳಿಗೆ ಮೊದಲ ಹಂತದಲ್ಲಿ ₹9,36,000ಗಳನ್ನು ಮಂಜೂರುಗೊಳಿಸಿದೆ.   ದಿನಾಂಕ 11.11.2018ನೆಯ ಭಾನುವಾರದಂದು ಮಹಾಮಂಡಲದ ಏಳು ಮಂಡಲಗಳಲ್ಲಿ ಆರ್ಥಿಕ ಸಹಾಯಧನವನ್ನು ಚೆಕ್ ಮೂಲಕ ವಿತರಣೆ ಮಾಡಲಾಯಿತು. ಕುಮಟಾ, ಹೊನ್ನಾವರ, ಮಂಗಳೂರು, ಉಪ್ಪಿನಂಗಡಿ, ಮುಳ್ಳೇರಿಯ, ಉತ್ತರ ಬೆಂಗಳೂರು, ದಕ್ಷಿಣ ಬೆಂಗಳೂರು ಮಂಡಲಗಳ ಒಟ್ಟು 173 ವಿದ್ಯಾರ್ಥಿಗಳಿಗೆ ₹6,70,000ಗಳ ಸಹಾಯಧನ […]

Continue Reading

ಹವ್ಯಕ ಮಂಡಲ ಕುಮಟ ವತಿಯಿಂದ ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ

ಕುಮಟಾ: ಕುಮಟಾ ಹವ್ಯಕ ಮಂಡಲದ ವತಿಯಿಂದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯ ಯೋಜನೆಯ ಚೆಕ್ ವಿತರಣೆ ಕಾರ್ಯಕ್ರಮವು ನಡೆಯಿತು. ಕೆಕ್ಕಾರಿನ ಶ್ರೀ ರಘೋತ್ತಮ ಮಠದಲ್ಲಿ‌ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀ ಗಣೇಶ ಹೆಗಡೆ ಪ್ರಾಸ್ತಾವಿಕವಾಗಿ ಶ್ರೀಪೀಠದ ಶಿಷ್ಯಕಳಕಳಿ, ಭಕ್ತವಾತ್ಸಲ್ಯ, ಸಮಾಜ ಮುಖಿ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಬಳಿಕ ಮಂಡಲದ ಅಧ್ಯಕ್ಷರಾದ ಶ್ರೀ ಮಂಜುನಾಥ ಸುವರ್ಣಗದ್ದೆ ಇವರು ಮಾತನಾಡಿ, ವಿದ್ಯಾ ಸಹಾಯವು ಸಮಾಜ ನಿಮ್ಮೊಂದಿಗಿದೆ ಎಂಬುದರ ಸಂಕೇತವಾಗಿದೆ ಎಂದರು. ಇದರೊಂದಿಗೆ ವಿದ್ಯಾರ್ಥಿಗಳ ಭ್ರಮಾಲೋಕ, ಹವ್ಯಕರ ಸಂಖ್ಯೆಯ ಕಳವಳಕಾರಿ ಸ್ಥಿತಿ, […]

Continue Reading

ಶ್ರೀಸಂಸ್ಥಾನದವರಿಂದ ವಿದ್ಯಾ ಸಹಾಯ ಸ್ವೀಕರಿಸಿದ ವಿದ್ಯಾರ್ಥಿಗಳು

ಬೆಂಗಳೂರು: ಬೆಂಗಳೂರು ಉತ್ತರ ಮತ್ತು ದಕ್ಷಿಣ ಮಂಡಲದ ಮೂರು ವಿದ್ಯಾರ್ಥಿಗಳು ಇಂದು ವಿದ್ಯಾ ಸಹಾಯವನ್ನು ಶ್ರೀಸಂಸ್ಥಾನದವರ ಅಮೃತ ಕರಕಮಲಗಳಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಬೆಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ವೈ.ಕೆ.ಎನ್. ಶರ್ಮ, ಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ ಹೆಗಡೆ ಅಂತರವಳ್ಳಿ, ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಅಶ್ವಿನಿ ಅರವಿಂದ, ಉತ್ತರ ಬೆಂಗಳೂರು ಮಂಡಲದ ವಿದ್ಯಾರ್ಥಿವಾಹಿನೀ ಪ್ರಧಾನ ಶ್ರೀಮತಿ ಸಂಧ್ಯಾ ಕಾನತ್ತೂರು ಉಪಸ್ಥಿತರಿದ್ದರು. ವಿದ್ಯಾಸಹಾಯ ವಿತರಣೆಗೂ ಮುನ್ನ, ಮಹಾಮಂಡಲದ ಸೂಚನೆಯಂತೆ ವಿದ್ಯಾರ್ಥಿಗಳಿಗೆ ಶ್ರೀಮಠದ ಪರಿಚಯ, ವಿದ್ಯಾರ್ಥಿಗಳಿಗಿರುವ ಸೇವಾವಕಾಶ, ಇರಬೇಕಾದ ಬದ್ಧತೆ, […]

Continue Reading

ಅಮೃತಧಾರಾ ಗೋಶಾಲೆಯಲ್ಲಿ ಶನಿದೋಷ ನಿವಾರಣೆಗೆ ನಡೆಯಿತು‌ ವಿಶೇಷಪೂಜೆ: ನವೆಂಬರ್ 15 ರವರೆಗೂ ನಡೆಯಲಿದೆ ಪೂಜಾ ಕಾರ್ಯ

ಪೆರ್ಲ: ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಶನಿವಾರ ಶನಿದೋಷ ನಿವಾರಣೆಗಾಗಿ ಶ್ರೀ ಆಂಜನೇಯ ಕಲ್ಪೋಕ್ತ ಪೂಜೆ ಹಾಗೂ ಆಂಜನೇಯ ಹೋಮ ನಡೆಯಿತು.   ನೂರಾರು ಭಕ್ತಾದಿಗಳು ಈ ಸಂದರ್ಭದಲ್ಲಿ ಭಕ್ತಭಾವದೊಂದಿಗೆ ಶನಿದೋಷ ನಿವಾರಣೆಗಾಗಿ ಪೂಜೆ ನಡೆಸಿದರು. ಬೆಳಗ್ಗೆ ಮಹಾಗಣಪತಿ ಹೋಮ, ಕಾಮಧೇನು ಹವನ, ಗೋಪೂಜೆಗಳು ನಡೆದವು. ಮಧ್ಯಾಹ್ನ ಪೂರ್ಣಾಹುತಿಯ ಅನಂತರ ವೈದಿಕ ಪ್ರಧಾನ ವೇದಮೂರ್ತಿ ಶ್ರೀ ಕೇಶವ ಪ್ರಸಾದ ಕೂಟೇಲು ಪ್ರಾರ್ಥನೆ‌ ಸಲ್ಲಿಸಿದರು.   ಈ ಸೇವೆಯನ್ನು ಕಾರ್ತಿಕ ಮಾಸದ ಶನಿವಾರದ ದಿನ ಶನಿದೋಷ ನಿವಾರಣೆಗಾಗಿ […]

Continue Reading

ರಾಮಾಶ್ರಮದಲ್ಲಿ ಕಾರ್ತೀಕ ದೀಪೋತ್ಸವ ಆರಂಭ: ಸರ್ವರಿಗೂ ಹಾರ್ದಿಕ ಸ್ವಾಗತ

ಬೆಂಗಳೂರು: ಬೆಳಕಿನ‌ ಹಬ್ಬ ದೀಪಾವಳಿ ಮುಗಿಯುತ್ತಿದ್ದಂತೆ ಕಾರ್ತೀಕ ದೀಪೋತ್ಸವದ ಸಂಭ್ರಮ ಆರಂಭವಾಗುತ್ತದೆ. ಅಂತೆಯೇ ಬೆಂಗಳೂರಿನಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖಾಮಠದಲ್ಲಿಯೂ ಕಾರ್ತೀಕ ದೀಪೋತ್ಸವ ನವೆಂಬರ್ 8ರಿಂದ ಆರಂಭವಾಗಿದೆ.   ಈಗಾಗಲೇ ಪ್ರತಿದಿನ‌‌ ಸಂಜೆ ಸಪರಿವಾರ ಸಹಿತ ಶ್ರೀರಾಮದೇವರ ಸನ್ನಿಧಿಯಲ್ಲಿ, ಶ್ರೀಸಂಸ್ಥಾನದವರ ದಿವ್ಯ ಉಪಸ್ಥಿತಿಯ ದೀಪೋತ್ಸವ ನಡೆಯುತ್ತಿದ್ದು ಬೆಳಗುವ ದೀಪಗಳ‌ ನಡುವೆ ರಾಮದೇವರು ಹಾಗೂ ಶ್ರೀಸಂಸ್ಥಾನದವರನ್ನು ನೋಡುವುದೇ ಒಂದು ದಿವ್ಯ ಅನುಭವವಾಗಿದೆ.   ಕಾರ್ತಿಕ ದೀಪೋತ್ಸವ ಸೇವೆಯು ಕಾರ್ತಿಕ ಶುದ್ಧ ಪಾಡ್ಯದಿಂದ ಮಾರ್ಗಶಿರ ಶುದ್ಧ ಷಷ್ಠಿಯವರೆಗೆ ಅಂದರೆ ನವೆಂಬರ್ 8 […]

Continue Reading

ಮುಂಬೈನಲ್ಲೂ ನಡೆಯಿತು ಸಂಭ್ರಮದ ಗೋಪೂಜೆ: ನಿಜಾರ್ಥದಲ್ಲಿ ಬೆಳಕಿನ ಹಬ್ಬ ಆಚರಿಸಿದ ಗೋಪ್ರೇಮಿಗಳು

ಮುಂಬೈ: ದೀಪಾವಳಿಗೂ ಗೋಪೂಜೆಗೂ ಅವಿನಾಭಾವ ಸಂಬಂಧವಿದೆ. ಅದರಲ್ಲೂ ಕೃಷಿ ಅವಲಂಬಿತ ಎಲ್ಲ ಭಾಗಗಳಲ್ಲೂ ದೀಪಾವಳಿಯಲ್ಲಿ ಗೋಪೂಜೆ ನಡೆಸುವುದು ವಾಡಿಕೆ. ಆದರೆ ಗೋಪೂಜೆ ಕೇವಲ ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲ ಮಹಾನಗರಗಳಲ್ಲೂ ಇದೆ. ಶ್ರೀರಾಮಚಂದ್ರಾಪುರಮಠ ಹಾಗೂ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಮುಂಬಯಿಯ ಕೋಲಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯಲ್ಲಿ, ಯಾವ ಗ್ರಾಮೀಣ ಪ್ರದೇಶಕ್ಕೂ ಕಡಿಮೆ ಇಲ್ಲದಂತೆ ಗೋಪೂಜೆಯೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಲಾಯಿತು.   ನವೆಂಬರ್ 8ರಂದು ನಡೆದ ಗೋಪೂಜೆಯಲ್ಲಿ ಮುಂಬಯಿ ವಲಯ ಅಧ್ಯಕ್ಷ ಶ್ರೀ ಕೃಷ್ಣ ಭಟ್ಟ ಗುಡ್ಡೆಬಾಳ ಪಾಲ್ಗೊಂಡು ಪೂಜೆ‌ ಸಲ್ಲಿಸಿದರು. ಈ […]

Continue Reading

ಜೇಡ್ಲ ಗೋಶಾಲೆಯಲ್ಲಿ ದೀಪಾವಳಿ : ಗೋಪೂಜೆ- ಕುಂಕುಮಾರ್ಚನೆ

ಸುಳ್ಯ : ಸುಳ್ಯ ಹವ್ಯಕ ವಲಯದ ವತಿಯಿಂದ ಸಂಪಾಜೆಯ ಜೇಡ್ಲದಲ್ಲಿರುವ ಶ್ರೀಮಠದ ಗೋಶಾಲೆಯಲ್ಲಿ ನವೆಂಬರ್ 09ರಂದು ಶೃದ್ಧಾಭಕ್ತಿಯಿಂದ ಗೋಪೂಜೆ‌ ನೆರವೇರಿಸಲಾಯಿತು.   ಗೋಪೂಜೆ ಸಂದರ್ಭದಲ್ಲಿಯೇ ಮಾತೆಯರು ಕುಂಕುಮಾರ್ಚನೆ ಗೈಯ್ದರು. ಅಲ್ಲದೇ ಸುಳ್ಯ ವಲಯ ವೈದಿಕ-ಸಂಸ್ಕಾರ ವಿಭಾಗದ ವತಿಯಿಂದ 114ನೇ ವೇದವಾಹಿನಿ ಪಾರಾಯಣವನ್ನೂ ಕೈಗೊಳ್ಳಲಾಯಿತು. ವೈದಿಕರಾದ ಎತ್ತುಕಲ್ಲು ಶ್ರೀ ನಾರಾಯಣ ಭಟ್, ಅರಂಬೂರು ಶ್ರೀ ಕೃಷ್ಣ ಭಟ್, ಶ್ರೀ ವಿಶ್ವಕೀರ್ತಿ ಜೋಯಿಸರು, ಶ್ರೀ ವೆಂಕಟೇಶ ಶಾಸ್ತ್ರೀ ಪಾರಾಯಣ ಹಾಗೂ‌ ಇತರ ಧಾರ್ಮಿಕ‌ ವಿಧಿವಿಧಾನ ನಡೆಸಿಕೊಟ್ಟರು.   ವಲಯದ ಅಧ್ಯಕ್ಷರಾದ […]

Continue Reading

ಕವಿತೆ – ರಾಮಕಥಾ ರಸಾಸ್ವಾದ

ಇದೆಂಥಾ ಉತ್ಕೃಷ್ಟ ಭಾವೋನ್ಮಾದ ….. ರಾಮ ಸ್ಮರಣೆಯ ಸಾಗರದಲಿ ತೇಲಿ….. ಹೃದಯದಲಿ ಮಗುವಿನ ನರ್ತನ… ತೋಯುತಿದೆ ಆನಂದದಲಿ ನಯನ…. ನನ್ನೊಳಗಿನ ರಾವಣನ ಸಂಹಾರ ಇದುವೇ ಭಕ್ತಿಯ ಅನಾವರಣ ……. ಮನದೆಲ್ಲಾ ಕ್ಲೇಷಗಳ ತೊಳೆದು ರಾಮ ರಸ ಗಂಗೆ ಹರಿಯುತಲಿಹುದು……. ರಾಮ ಕಥೆಯ ರಸದೌತಣವನುಂಡು ಮನದಲಿ ಶಾಂತಿ ತುಂಬಿಹುದು… ಜಗದೆಲ್ಲೆಡೆ ರಾಮ ನಾಮ ನದಿ ಹರಿಯಲಿ… ಇಳೆಯ ಕೊಳೆಯನು ಪುನಃ ಬರದಂತೆ ತೊಳೆಯಲಿ… ರಾಗ ದ್ವೇಷಗಳಲಿದು ಪರಿಶುಧ್ಧ ಪ್ರೇಮ ಉಳಿಯಲಿ…… ಎಲ್ಲರ ಹೃದಯದಲಿ ಪರಿಪೂರ್ಣ ರಾಮ ನೆಲೆ ನಿಲ್ಲಲಿ… […]

Continue Reading

ಮಾಲೂರು‌ ಗೋಶಾಲೆಯಲ್ಲಿ ಗೋಪೂಜೆ – ದೀಪೋತ್ಸವ – ಪುಣ್ಯಕಾರ್ಯದಲ್ಲಿ‌ ಪಾಲ್ಗೊಂಡ‌ ಗೋಪ್ರೇಮಿಗಳು

ಮಾಲೂರು: ಮಾಲೂರು ತಾಲೂಕು ಗಂಗಾಪುರದ ಶ್ರೀರಾಘವೇಂದ್ರ ಗೋಆಶ್ರಮದಲ್ಲಿ ದೀಪಾವಳಿ ಅಂಗವಾಗಿ ನವೆಂಬರ್ 8 ರ ಸಂಜೆ ಗೋಪೂಜೆ‌ ನಡೆಯಿತು.   ವೇ. ಮೂ. ಗೋಪಾಲಕೃಷ್ಣ ಭಟ್ ರವರ ಮಾರ್ಗದರ್ಶನದಲ್ಲಿ ಗೋ‌ ಆಶ್ರಮ ನಿರ್ವಹಣಾ ಸಮಿತಿ ಕೋಶಾಧ್ಯಕ್ಷರು ಸೇರಿದ ಸಮಸ್ತರ ಪರವಾಗಿ ಗೋಪೂಜೆ ನಡೆಸಿದರು.   ಅನಂತರ‌ ದೀಪಾವಳಿ ಬೆಳಕನ್ನು ಗೋಶಾಲೆಯಲ್ಲೂ ಮೂಡಿಸುವ ಉದ್ದೇಶದಿಂದ ಗೋಶಾಲೆ‌ ಉದ್ದಕ್ಕೂ‌ ಹಣತೆಯನ್ನು ಹಚ್ಚಿ ದೀಪೋತ್ಸವ ನೆರವೇರಿಸಲಾಯಿತು.   ಇದೇ ಸಂದರ್ಭದಲ್ಲಿ ಸ್ಥಳದಲ್ಲಿರುವ ಶ್ರೀ ಸಿದ್ಧ ಆಂಜನೇಯಸ್ವಾಮಿ ದೇವರಿಗೂ ವಿಶೇಷ ಅಭಿಷೇಕ ಪೂಜೆ […]

Continue Reading

ಇಂದಿನಿಂದ ಪೆರ್ಲದಲ್ಲಿ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ

ಪೆರ್ಲ: ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಇಂದಿನಿಂದ ನವೆಂಬರ 15ರ ತನಕ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮಿ ಮಹೋತ್ಸವ ನಡೆಯಲಿದೆ.   ನವೆಂಬರ್ ೭ ಬುಧವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ದೇವತಾ ಪ್ರಾರ್ಥನೆ, ಸಪ್ತಶುದ್ಧಿ, ಪುಣ್ಯಾಹ, ಮಂಟಪ ಸಂಸ್ಕಾರ, ವಾಸ್ತು ಪೂಜೆ, ರಾಕ್ಷೋಘ್ನ ಹವನ, ನ.8ರಂದು ಬೆಳಗ್ಗೆ 7ರಿಂದ ಗಣಪತಿ ಹವನ, ಕಾಮಧೇನು ಹವನ, ಸಂಜೆ 4.30ರಿಂದ ಭಜನರಾಮಾಯಣ, ವಿಷ್ಣುಸಹಸ್ರನಾಮ ಪಾರಾಯಣ, ಗೋಪೂಜೆ, ತುಳಸೀಪೂಜೆ, ಗೋಪಾಲಕೃಷ್ಣ ಪೂಜೆ, ರಾತ್ರಿ 7ರಿಂದ ದೀಪೋತ್ಸವ, ಮಂಗಳಾರತಿ, ಪ್ರಸಾದ […]

Continue Reading

ದೀಪಾವಳಿಯಂದು ಮಹಾನಂದಿ ಗೋಲೋಕಕ್ಕೆ ಬನ್ನಿ- ಗೋಪೂಜೆ ಸಲ್ಲಿಸಿ, ಗೋಗ್ರಾಸ ನೀಡಿ ಪುಣ್ಯಪ್ರಾಪ್ತಿ ಮಾಡಿಕೊಳ್ಳಿ

ಹೊಸನಗರ: ಗೋವುಗಳು ಅನಾದಿಕಾಲದಿಂದಲೂ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಗೋವುಗಳು ಎಷ್ಟರಮಟ್ಟಿಗೆ ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿತ್ತು ಎಂದರೆ ಹಿಂದಿನ ಕಾಲದಲ್ಲಿ ಯಾರ ಬಳಿ ಹೆಚ್ಚು ಗೋವುಗಳಿದೆ ಎಂಬ ಆಧಾರದ ಮೇಲೆ ಆತನ ಸಿರಿತನವನ್ನು ನಿರ್ಧರಿಸಲಾಗುತ್ತಿತ್ತು. ಅನ್ಯವಸ್ತುಗಳ ವಿನಿಮಯವೂ ಗೋವುಗಳ‌ ಮೂಲಕವೇ ಆಗುತ್ತಿತ್ತು. ಉಡುಗೊರೆಯಾಗಿಯೂ ಗೋವುಗಳನ್ನೇ ಕೊಡಲಾಗುತ್ತಿತ್ತು.   ಮನುಷ್ಯನ ಜೀವನ ಸಂಪೂರ್ಣ ಗೋ ಆಧಾರಿತ ಎಂದರೆ ತಪ್ಪಾಗಲಾರದು. ಏಕೆಂದರೆ ತಾಯಿ ಎದೆಹಾಲು ಕೊಡುವುದನ್ನು ನಿಲ್ಲಿಸಿದ ಮೇಲೆ ಅದಕ್ಕೆ ಪ್ರತಿಯಾಗಿ ತನ್ನ ಅಮೃತಸದೃಶ ಕ್ಷೀರವನ್ನು ಮನುಕುಲಕ್ಕೆ ಪೂರೈಸಿ ಮನುಷ್ಯನನ್ನು […]

Continue Reading