10.06.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/

ಶುಕ್ಲಪಕ್ಷ/ಅಷ್ಠಮಿ ತಿಥಿ/

ಸೋಮವಾರ/ಹುಬ್ಬಾ ನಕ್ಷತ್ರ /



ದಿನಾಂಕ: 10.06.2019

 °~•~°~•~°~•~°~•~°~•~°

ಮೇಷ
ಉತ್ತಮ ಶ್ರದ್ಧೆಯಿಂದ ಕೆಲಸ ತೊಡಗಿಸಿಕೊಳ್ಳಿ. ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ. ಹಿರಿಯ ಅಧಿಕಾರಿಗಳಿಂದ ಅಸಮಾಧಾನದ ಮಾತುಗಳು ಕೇಳಿ ಬರುವುದು.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ಆರೋಗ್ಯದಲ್ಲಿ ತೊಂದರೆ, ಮಾನಸಿಕ ಕಿರಿಕಿರಿ ಹಣಕಾಸಿನ ವಿಚಾರದಲ್ಲಿ ತೊಂದರೆ, ದಾಂಪತ್ಯ ಜೀವನದಲ್ಲಿ ಕಲಹಗಳನ್ನು ಎದುರಿಸಬೇಕಾಗುತ್ತದೆ.   ಕೆಲಸಕಾರ್ಯಗಳಲ್ಲಿ ಉತ್ತಮ ಪ್ರಯತ್ನ ಅತ್ಯಗತ್ಯ. ವಿದ್ಯಾರ್ಥಿಗಳು ಆಲಸಿತನ ವನ್ನು ಬಿಟ್ಟು ಮುನ್ನಡೆಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು.ಕುಟುಂಬದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನೂತನ ವ್ಯವಹಾರವನ್ನು ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶ ದೊರೆಯಲಿದೆ ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುವುದು


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ಅಡೆತಡೆಗಳು ಕಷ್ಟನಷ್ಟಗಳು ವ್ಯವಹಾರದಲ್ಲಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ವಿದ್ಯಾರ್ಥಿಗಳು ಉತ್ತಮ ಪ್ರಯತ್ನದಿಂದ ಮುನ್ನಡೆಯಬೇಕು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬರುತ್ತದೆ ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡುಬರುವುದು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಉತ್ತಮ ಏಳಿಗೆ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುವುದು ರಿಂದ ಜಾಗರೂಕತೆಯಿಂದ ಇರಬೇಕು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಜೀವನದಲ್ಲಿ  ಕಲಹ ಎದುರಿಸ ಬೇಕಾಗುವುದರಿಂದ ಜಾಗರೂಕತೆಯಿಂದ ಇರಬೇಕು. ಆಲಸ್ಯತನ ಬಿಟ್ಟು ಮುನ್ನಡೆಯಿರಿ

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ವ್ಯವಹಾರದಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುವುದು ರಿಂದ ಜಾಗ್ರತೆಯಿಂದಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯವಾಗಲಿದೆ   
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :

ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುವುದು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ಮಾನಸಿಕ ಕಿರಿಕಿರಿ ಹೆಚ್ಚುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯದಲ್ಲಿ ಏರುಪೇರು ಸಂಭವಿಸುತ್ತದೆ. ವಿದ್ಯಾರ್ಥಿಗಳಿಗೆ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *