08.02.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ / ಚತುರ್ಥೀ ತಿಥಿ/

ಶುಕ್ರವಾರ/ ಪೂರ್ವಭಾದ್ರ ನಕ್ಷತ್ರ /

ದಿನಾಂಕ: 08.02.2019

 °~•~°~•~°~•~°~•~°~•~°

ಮೇಷ

        ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನವಾದ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಕಂಡುಬರುವ ಲಕ್ಷಣ ಇರುವುದರಿಂದ ದುಂದುವೆಚ್ಚ ಮಾಡಬೇಡಿ. ಜಾಗರೂಕತೆಯಿಂದ ವ್ಯವಹರಿಸಿ. ಚರ್ಮ ಸಂಬಂಧವಾದ ತೊಂದರೆಗಳು, ಅಲರ್ಜಿ, ತಲೆನೋವು, ಮುಂತಾದವು ಬರುವ ಲಕ್ಷಣಗಳು ಇದೆ. ವಾಹನ ಓಡಾಟದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಏರ್ಪಡುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಆಗುತ್ತದೆ. ನಿಮ್ಮ ವ್ಯವಹಾರಗಳಲ್ಲಿನ ಕಾರ್ಯಕ್ಷಮತೆಯನ್ನು ಮೆಚ್ಚಿ ಅಧಿಕಾರಿಗಳಿಂದ ಪ್ರಶಂಸೆ  ಕೇಳಿ ಬರುವುದು. ಉತ್ತಮ ರೀತಿಯಲ್ಲಿ ಧನ ಲಾಭವಾಗುವುದು. ಮೂತ್ರ ಸಂಬಂಧಿ ತೊಂದರೆ, ಮೈ ಕೈ ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದ ತೊಂದರೆಗಳು ಬರುವ ಲಕ್ಷಣಗಳು ಇದೆ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು. ದಾಂಪತ್ಯಜೀವನದಲ್ಲಿ ಸುಖ ಶಾಂತಿ ನೆಲೆಸುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಕೈಗೆತ್ತಿಕೊಂಡಿರುವ ಕೆಲಸ ಕಾರ್ಯವು ನಿಧಾನಗತಿಯಿಂದ ಮುನ್ನಡೆಯುವುದು ಮತ್ತು ಅಡೆತಡೆಗಳು ಕಂಡುಬರುವುದು. ಹಿರಿಯರಿಂದ ಧನಸಹಾಯ ಒದಗಿ ಬರುತ್ತದೆ ಹಾಗೂ ಉತ್ತಮ ಸಂಪಾದನೆಯಾಗುತ್ತದೆ. ಉದರ ಸಂಬಂಧಿ, ನರಸಂಬಂಧಿ , ವಾತ ಸಂಬಂಧಿ ತೊಂದರೆಗಳು ಬರುವ ಲಕ್ಷಣಗಳಿವೆ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಎದುರಾಗುತ್ತದೆ. ಅನುಮಾನಗಳಿಗೆ ಆಸ್ಪದ ಕೊಡಬೇಡಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಉದಾಸೀನತೆ ಬಿಟ್ಟು ಮುಂದುವರಿದಲ್ಲಿ ಶುಭ.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ. ದಾಂಪತ್ಯ ಜೀವನದಲ್ಲಿ ಸಂಭವಿಸುವ ಕಲಹದಿಂದಾಗಿ ಮನಶ್ಶಾಂತಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಉದರ ಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವುಗಳು ಮುಂತಾದವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಉತ್ತಮ ಫಲ ಲಭ್ಯ. ಗುರು-ಹಿರಿಯರನ್ನು, ತಂದೆ ತಾಯಿಯನ್ನು ಗೌರವಿಸಿ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

 °~•~°~•~°~•~°~•~°~•~°



ಸಿಂಹ

     ಕೆಲಸ ಕಾರ್ಯದಲ್ಲಿ ನೂತನ ಯೋಜನೆಗಳನ್ನು  ತೊಡಗಿಸಿಕೊಳ್ಳಬೇಕಾಗುತ್ತದೆ. ಮಾಡುತ್ತಿರುವ ಖರ್ಚುವೆಚ್ಚಗಳಿಂದಾಗಿ ಕುಟುಂಬದಲ್ಲಿ ಕಲಹಗಳು ಉಂಟಾಗುವ ಸಂಭವಗಳಿವೆ. ದಾಂಪತ್ಯಜೀವನದಲ್ಲಿ ಸುಖ. ಉದರ ಸಂಬಂಧಿ ತೊಂದರೆಗಳು, ಅಲರ್ಜಿ  ಮುಂತಾದ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು ಹಾಗೂ ಆಹಾರದ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ  ನಿಧಾನಗತಿಯ ಹಿನ್ನಡೆ ಕಂಡುಬರುತ್ತದೆ. ವಿನಾಕಾರಣ ಖರ್ಚುವೆಚ್ಚ ಒದಗಿಬರುವುದು. ಕುಟುಂಬದಲ್ಲಿ ಕಲಹ ಏರ್ಪಡುವುದು. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾನಸಿಕ ಖಿನ್ನತೆ, ಶೀತ ಜ್ವರ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು:
ವಸುದೇವಸುತಂ  ದೇವಂ

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಂ  

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಪಡೆಯುತ್ತೀರಿ. ದಾಂಪತ್ಯಜೀವನದಲ್ಲಿ ಸುಖಶಾಂತಿ ನೆಲೆಸುತ್ತದೆ. ಉದರ ಸಂಬಂಧಿ ತೊಂದರೆಗಳು,  ಶೀತ ಜ್ವರಗಳು ಬರುವ ಲಕ್ಷಣಗಳಿವೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಇದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡುಬರಲಿದ್ದು ಅಧಿಕಾರ ವರ್ಗದವರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ವಿನಾಕಾರಣ ಖರ್ಚುವೆಚ್ಚ ಒದಗಿ ಬರಲಿದ್ದು ಕುಟುಂಬದಲ್ಲಿ ಸಮಸ್ಯೆ ತಲೆದೋರುತ್ತದೆ. ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳಿದ್ದು ಮಾತಿನಲ್ಲಿ ಬಗ್ಗೆ ಗಮನ ಇರಲಿ. ಪಿತ್ತ ಸಂಬಂಧಿತ ತೊಂದರೆಗಳು ಬರುವ ಲಕ್ಷಣಗಳಿವೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು  ಮುಂದುವರಿದಲ್ಲಿ ಮಾತ್ರ ಶುಭ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಕಾರ್ಯಕ್ಷೇತ್ರದಲ್ಲಿ ನಿಧಾನಗತಿಯ ಹಿನ್ನಡೆ  ಕಂಡುಬರುವುದು. ಖರ್ಚುವೆಚ್ಚ ಜಾಸ್ತಿ ಆಗುವುದು, ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯಜೀವನದಲ್ಲಿ ಸುಖ. ಮೂತ್ರ ಸಂಬಂಧಿ ತೊಂದರೆಗಳು, ಮೈ ಕೈ ಗಂಟು ನೋವುಗಳು, ಮಾನಸಿಕ ಖಿನ್ನತೆ ಮುಂತಾದ ತೊಂದರೆಗಳು ಬರುವಂತಹ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಶ್ರದ್ಧೆಯಿಂದ ಮುಂದುವರಿದಲ್ಲಿ ಮಾತ್ರ ಶುಭ. ಗುರುಹಿರಿಯರ ಮಾರ್ಗದರ್ಶನದಂತೆ ನಡೆಯಿರಿ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಮುನ್ನಡೆಗಳು ಕಾಣುತ್ತಿದೆ. ಆರ್ಥಿಕವಾಗಿ ಉತ್ತಮ ಸಂಪಾದನೆ ಆದರೂ ಕೂಡ ಅಧಿಕ ಖರ್ಚುವೆಚ್ಚ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುತ್ತದೆ. ಮಲಬದ್ಧತೆ, ಚರ್ಮ ಸಂಬಂಧಿ ತೊಂದರೆಗಳು ಕಂಡುಬರುವ ಲಕ್ಷಣ ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿಯೂ ಅಭಿವೃದ್ಧಿಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ, ಮಾನಸಿಕ ಶಾಂತಿಯನ್ನು ಪಡೆದುಕೊಳ್ಳುತ್ತೀರಿ. ಆರೋಗ್ಯದಲ್ಲಿ ಶೀತ, ಜ್ವರ, ತಲೆನೋವು, ಕಣ್ಣು ನೋವು ಮುಂತಾದ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಮುನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರವಾಗಿ ಮುನ್ನಡೆ ಸಾಧಿಸುತ್ತೀರಿ. ದಾಂಪತ್ಯಜೀವನದಲ್ಲಿ ಸುಖ. ಉದರ ಸಂಬಂಧಿ ತೊಂದರೆ, ಮೈ ಕೈ ಗಂಟು ನೋವು,  ಶೀತ ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *