ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಕೃಷ್ಣ ಪಕ್ಷ /ಏಕಾದಶಿ ತಿಥಿ/
ಶನಿವಾರ/ಪೂರ್ವಾಷಾಢ/ಉತ್ತರಾಷಾಡಾ. ನಕ್ಷತ್ರ /
ದಿನಾಂಕ 02.03..2019
°~•~°~•~°~•~°~•~°~•~°
ಮೇಷ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರಗಳಲ್ಲಿ ಸಣ್ಣ ಪುಟ್ಟ ಅಡೆತಡೆಗಳು ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ:
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋsಸ್ತು ತೇ ||
°~•~°~•~°~•~°~•~°~•~°
ವೃಷಭ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕ ವಿಚಾರದಲ್ಲಿವಿಚಾರದಲ್ಲಿ ತೊಂದರೆಗಳು ಕಂಡುಬರುತ್ತದೆ. ವಿನಾಕಾರಣ ಧನವ್ಯಯ ಮಾಡದಿರಿ. ದಾಂಪತ್ಯ ಜೀವನದಲ್ಲಿ ಸುಖ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾಗಿ ಸಣ್ಣಪುಟ್ಟ ತೊಂದರೆಗಳನ್ನು ಗಳನ್ನು ಎದುರಿಸಬೇಕಾಗುತ್ತದೆ. ತಂದೆಯ ಆರೋಗ್ಯ ಹದಗೆಡುವ ಲಕ್ಷಣಗಳಿದ್ದು ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಅಭಿವೃದ್ಧಿ ಕಂಡು ಬರುವುದು.
ಪರಿಹಾರ
ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ಮಿಥುನ
ತಾವು ಮಾಡುತ್ತಿರುವ ಅಂತಹ ಕೆಲಸದಲ್ಲಿ ವಿನಾಕಾರಣ ಜಗಳ, ಅಸಮಾಧಾನತೆ, ನಷ್ಟ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ. ವಿನಾಕಾರಣ ಖರ್ಚು ಮಾಡಿದಿರಿ. ದಾಂಪತ್ಯ ಜೀವನದಲ್ಲಿ ಕಲಹವನ್ನು ಎದುರಿಸಬೇಕಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದ.
ಪರಿಹಾರ
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.
ಜಪಿಸಲು :
ವಸುದೇವಸುತಂ ದೇವಮ್
ಕಂಸಚಾಣೂರಮರ್ದನಮ್ |
ದೇವಕೀಪರಮಾನನ್ದಮ್
ಕೃಷ್ಣಂ ವನ್ದೇ ಜಗದ್ಗುರುಮ್ ||
°~•~°~•~°~•~°~•~°~•~°
ಕರ್ಕಾಟಕ
ವ್ಯಾವಹಾರಿಕ ಕ್ಷೇತ್ರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಗಂಟು ನೋವು, ತಲೆನೋವು ಶೀತ ಮುಂತಾದ ತೊಂದರೆ ಬರುವ ಸಾಧ್ಯತೆ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಹಠ, ಕೋಪವನ್ನು ಬಿಟ್ಟು ಮುಂದುವರಿಯಬೇಕು.
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.
ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ
ದುರ್ಗೇದೇವಿ ನಮೋsಸ್ತು ತೇ ||
°~•~°~•~°~•~°~•~°~•~°
ಸಿಂಹ
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ತಾವು ಸಂಪಾದಿಸಿದ ಹಣವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲಿದೆ. ಶೀತ ಜ್ವರ, ಕಫ, ಮುಂತಾದ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು
ಪರಿಹಾರ
ಶಿವನ ಆರಾಧನೆ ಅಗತ್ಯ.
ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕನ್ಯಾ
ಯಾವುದೇ ಕೆಲಸ ಕಾರ್ಯವನ್ನು ತೊಡಗಿಸಿಕೊಂಡರು ಕೂಡ ತೊಂದರೆಗಳು ಎದುರಾಗುತ್ತದೆ. ಸಂಪಾದಿಸಿದಂತ ಹಣವನ್ನು ಕುಟುಂಬದವರಿಗೆ ಗೋಸ್ಕರ ವಾಗಿ ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲಗುಳ್ಳ ಲಿದೆ. ಹೊಟ್ಟೆಗೆ ಸಂಬಂಧಿಸಿದಂತಹ ತೊಂದರೆಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಮೊಬೈಲ್ ಟಿವಿ ಮುಂತಾದವುಗಳಿಂದ ದೂರವಿದ್ದಷ್ಟು ಒಳ್ಳೆಯದು
ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ ಶುಭ.
ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||
°~•~°~•~°~•~°~•~°~•~°
ತುಲಾ
ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಹಿನ್ನಡೆ ಕಂಡುಬರುತ್ತದೆ. ಮನಶಾಂತಿ ಕಳೆದುಕೊಳ್ಳಬೇಕಾಗುತ್ತದೆ. ಆರ್ಥಿಕವಾದ ಹಿನ್ನಡೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಮುಂತಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ದುರ್ಗಾದೇವಿಯ ಆರಾಧನೆಯಂದ ಶುಭ.
ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||
°~•~°~•~°~•~°~•~°~•~°
ವೃಶ್ಚಿಕ
ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ಸಣ್ಣಪುಟ್ಟ ತೊಂದರೆ ಎದುರಿಸಬೇಕಾಗುತ್ತದೆ. ಆರ್ಥಿಕ ವಾದ ಹಿನ್ನಡೆ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಮಾತಿನ ಮೂಲಕ ಜಗಳ ಬರುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು. ಪಿತ್ತ ಸಂಬಂಧಿತ ತೊಂದರೆಗಳು ಬರುವ ಲಕ್ಷಣಗಳಿವೆ. ವಿದ್ಯಾರ್ಥಿಗಳು ಆಲಸಿ ತನವನ್ನು ಬಿಟ್ಟೂ ಮುಂದುವರಿಯಬೇಕು.
ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.
ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್
ಮಹಾಮತಿಂ ದಿವ್ಯಮಯೂರವಾಹಮ್ |
ರುದ್ರಸ್ಯ ಸೂನುಂ ಸುರಸೈನ್ಯನಾಥಮ್
ಗುಹಂ ಸದಾ ಶರಣಮಹಂ ಪ್ರಪದ್ಯೇ ||
°~•~°~•~°~•~°~•~°~•~°
ಧನು
ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರು ಕೂಡ ಅಡೆತಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯಗಳು ಒದಗಿ ಬರಲಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರಲಿದೆ
ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.
ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ / ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ
°~•~°~•~°~•~°~•~°~•~°
ಮಕರ
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಆಕಾಶ ಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ, ಉನ್ನತ ಪದವಿ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಭಾಗ್ಯ ಒದಗಿ ಬರುತ್ತದೆ. ಶ್ವಾಸಸಂಬಂಧಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು
ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.
ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ / ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||
°~•~°~•~°~•~°~•~°~•~°
ಕುಂಭ
ಮಾಡುವಂತಹ ಕೆಲಸ ಕಾರ್ಯಗಳಲ್ಲಿ ತಡೆಗಳು ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ವರ ಕಫ ಮುಂತಾದ ತೊಂದರೆ ಎದುರಿಸಬೇಕಾಗುತ್ತದೆ. ಮನಃಶಾಂತಿ ಹದಗೆಡುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು
ಪರಿಹಾರ
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.
ಜಪಿಸಲು:
ರುದ್ರಂ ಪಶುಪತಿಂ ಸ್ಥಾಣುಮ್
ನೀಲಕಂಠಂ ಉಮಾಪತಿಮ್ |
ನಮಾಮಿ ಶಿರಸಾ ದೇವಮ್
ಕಿಂ ನೋ ಮೃತ್ಯುಃ ಕರಿಷ್ಯತಿ ||
°~•~°~•~°~•~°~•~°~•~°
ಮೀನ
ವ್ಯಾವಹಾರಿಕ ಕ್ಷೇತ್ರಗಳಲ್ಲಿ ಅಡೆತಡೆಗಳು ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.
ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.
ಜಪಿಸಲು :
ಶಾಂತಾಕಾರಂ ಭುಜಗಶಯನಮ್
ಪದ್ಮನಾಭಂ ಸುರೇಶಮ್
ವಿಶ್ವಾಧಾರಂ ಗಗನಸದೃಶಮ್
ಮೇಘವರ್ಣಂ ಶುಭಾಂಗಮ್ |
ಲಕ್ಷ್ಮೀಕಾಂತಂ ಕಮಲನಯನಮ್
ಯೋಗಿಹೃದ್ಧ್ಯಾನಗಮ್ಯಮ್
ವಂದೇ ವಿಷ್ಣುಂ ಭವಭಯಹರಮ್
ಸರ್ವಲೋಕೈಕನಾಥಮ್ ||
°~•~°~•~°~•~°~•~°~•~°
{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}