07.03.2019

ದಿನ ಭವಿಷ್ಯ

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಪ್ರತಿಪತ್ ತಿಥಿ/

ಗುರುವಾರ/ಪೂರ್ವಭಾದ್ರಾ ನಕ್ಷತ್ರ /

ದಿನಾಂಕ 07.03..2019

 °~•~°~•~°~•~°~•~°~•~°

ಮೇಷ

          ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆಹಾರ ಸಂಬಂಧಿಯಾಗಿ ಸುಂದರ ಗಳು ಬರುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದಿರಬೇಕು. ಅಲರ್ಜಿ, ಚರ್ಮದ ತೊದರೆಗಳು ಬಾಧಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು.  ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮಾತಿನ ಮೂಲಕ ಜಗಳಗಳು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ  ಅಭಿವೃದ್ಧಿ ಕಂಡುಬರುವುದು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ |

°~•~°~•~°~•~°~•~°~•~°



ಮಿಥುನ


   ಮಾಡುವಂತಹ ಕೆಲಸ ಕಾರ್ಯದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಅಡೆತಡೆಗಳು ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಕಲಹಗಳು  ಎದುರಾಗುತ್ತದೆ. ಮೈ ಕೈ ಗಂಟು ನೋವು, ಚರ್ಮ ಸಂಬಂಧಿ ತೊಂದರೆಗಳು, ಅಲರ್ಜಿ, ಶ್ವಾಸ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್|

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆ ಗೊಳ್ಳಲಿದೆ. ಉತ್ತಮ ಮನಃಶಾಂತಿ ದೊರೆಯುತ್ತದೆ.  ಉತ್ತಮ ಆರೋಗ್ಯವನ್ನು ಪಡೆಯುತ್ತೀರಿ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಏಳಿಗೆ ಕಂಡು ಬರುತ್ತದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ  ಸಣ್ಣಪುಟ್ಟ ಅಡೆತಡೆಗಳು ಕಂಡುಬರುತ್ತದೆ.  ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ.  ನಿಮ್ಮ ಕೈಗೆ ಸಿಗ ಬೇಕಾದಂತಹ ಹಣವು ಕೈತಪ್ಪಿ ಹೋಗುವುದು. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


    ಆರಂಭಿಸಿದ ಕೆಲಸ ಕಾರ್ಯದಲ್ಲಿ  ತೊಂದರೆ , ಅಡೆತಡೆಗಳು, ಕಷ್ಟ ನಷ್ಟಗಳು, ಶತ್ರು ಕಾಟ  ಮುಂತಾದವುಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು.   ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ವಿದ್ಯಾರ್ಥಿಗಳುಉತ್ತಮ ಪರಿಶ್ರಮದಿಂದ ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ .ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ. ತಂದೆಯ ಆರೋಗ್ಯದಲ್ಲಿ ಏರುಪೇರು ಆಗುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳು ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು  ಮುಂದುವರೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ತೊಡಗಿಸಿಕೊಂಡ  ಕೆಲಸ ಕಾರ್ಯ ದಲ್ಲಿ ಅಡೆತಡೆಗಳು, ಕಷ್ಟನಷ್ಟಗಳು ಎದುರಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳು ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಮಾಡುವಂತಹ ಕೆಲಸ ಕಾರ್ಯದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ.  ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳಲು ಇದೆ.  ಚರ್ಮ ಸಂಬಂಧಿ ತೊಂದರೆಗಳು, ಉಸಿರಾಟದಲ್ಲಿ ತೊಂದರೆ, ಅಲರ್ಜಿ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಸ್ವಪ್ರಯತ್ನದಿಂದ ಮುಂದುವರಿಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು:
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು.  ಆರ್ಥಿಕವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಆರೋಗ್ಯದಲ್ಲಿ  ಶೀತ ಜ್ವರ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳುಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಕೂಡ ತಕ್ಕಮಟ್ಟಿನ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು. ವಾಹನ ಪ್ರಯಾಣಗಳಲ್ಲಿ ಜಾಗರೂಕರಾಗಿರಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *