15.04.2019

ದಿನ ಭವಿಷ್ಯ

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು /ಚೈತ್ರ ಮಾಸ /
ಶುಕ್ಲ ಪಕ್ಷ /ಏಕಾದಶಿ ತಿಥಿ /

ಸೋಮವಾರ/ಮಘಾ ನಕ್ಷತ್ರ/

ದಿನಾಂಕ: 15.04.2019

 °~•~°~•~°~•~°~•~°~•~°

ಮೇಷ

        ಸರಕಾರಿ ಕೆಲಸದಲ್ಲಿರುವವರು, ವೈದ್ಯರು ,ರಾಜಕೀಯ  ಸ್ಥಾನದಲ್ಲಿರುವವರು ಮೊದಲಾದವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಯುವಕ-ಯುವತಿಯರಿಗೆ ವಿವಾಹ ಯೋಗ ಬರುತ್ತದೆ, ಉತ್ತಮ ಆರೋಗ್ಯವನ್ನು ಹೊಂದುತ್ತೀರಿ ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ.



ಪರಿಹಾರ:
ಮಂಗಳ ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಧರಣೀಗರ್ಭಸಂಭೂತಮ್ | ವಿದ್ಯುತ್ಕಾಂತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ | ಮಂಗಲಮ್ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°

    

ವೃಷಭ

         ಆತ್ಮಸ್ಥೈರ್ಯದಿಂದ ಎದೆಗುಂದದೆ ಮುನ್ನಡೆದಾಗ ಮಾತ್ರ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆಗಳು ಎದುರಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.




ಪರಿಹಾರ
ಶುಕ್ರ  ಗ್ರಹರ ಆರಾಧನೆಯನ್ನು ಮಾಡಿಕೊಂಡು ಬಂದಲ್ಲಿ  ಶುಭ.

ಜಪಿಸಲು :
ಹಿಮಕುಂದ ಮೃಣಾಲಾಭಮ್ (ಸಮಾಭಾಸಂ) | ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಮ್ | ಭಾರ್ಗವಂ ಪ್ರಣಮಾಮ್ಯಹಮ್ ||

°~•~°~•~°~•~°~•~°~•~°



ಮಿಥುನ


   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರಬಹುದು,  ಸ್ನೇಹಿತರಿಂದ ಸಹಾಯವನ್ನು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ನರಸಂಬಂಧಿ ತೊಂದರೆಗಳು, ರಕ್ತ ಸಂಬಂಧಿ ತೊಂದರೆಗಳು  ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ವಾಹನ ಪ್ರಯಾಣದ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮುನ್ನಡೆ  ದೊರೆಯುತ್ತದೆ.



ಪರಿಹಾರ  
ಬುಧ  ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಪ್ರಿಯಂಗುಕಲಿಕಾಶ್ಯಾಮಮ್ |  ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಮ್ | ತಂ ಬುಧಂ  ಪ್ರಣಮಾಮ್ಯಹಮ್ ||

  °~•~°~•~°~•~°~•~°~•~°



ಕರ್ಕಾಟಕ

   
ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ವೈದ್ಯರು, ರಾಜಕಾರಣಿಗಳು, ಸರಕಾರಿ ಕೆಲಸದಲ್ಲಿ ಇರುವವರಿಗೆ ಉತ್ತಮ   ಹುದ್ದೆ, ಸ್ಥಾನಮಾನ ಗೌರವಗಳು ಲಭಿಸುತ್ತವೆ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಮೈ ಕೈ ಗಂಟು ನೋವು, ಹೊಟ್ಟೆ ನೋವು ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ.

ಪರಿಹಾರ
ಚಂದ್ರ ಗ್ರಹರ ಆರಾಧನೆಯಿಂದ ಉತ್ತಮ ಅಭಿವೃದ್ಧಿ ಕಂಡು ಬರುವುದು.

ಜಪಿಸಲು :
ದಧಿಶಂಖತುಷಾರಾಭಮ್ |  ಕ್ಷೀರೋದಾರ್ಣವಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಮ್ | ಶಂಭೋರ್ಮುಕುಟಭೂಷಣಮ್ ||

 °~•~°~•~°~•~°~•~°~•~°



ಸಿಂಹ

 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ.  ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾದ ಅಂತಹ ಪರಿಸ್ಥಿತಿ ಒದಗಿ ಬರುವುದರಿಂದ ಖರ್ಚು ವೆಚ್ಚಗಳನ್ನು ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ರವಿ ಗ್ರಹರ ಆರಾಧನೆಯಿಂದ  ಶುಭವಾಗಲಿದೆ.

ಜಪಿಸಲು :
ಜಪಾಕುಸುಮಸಂಕಾಶಮ್ | ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರಿಂ ಸರ್ವಪಾಪಘ್ನಮ್ | ಪ್ರಣತೋಽಸ್ಮಿ ದಿವಾಕರಮ್ ||

    °~•~°~•~°~•~°~•~°~•~°      


ಕನ್ಯಾ


     ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತದೆ. ಆತ್ಮಸ್ಥೈರ್ಯ ಕುಂದುತ್ತದೆ, ಹಣಕಾಸಿನ ವಿಚಾರದಲ್ಲಿ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಯುವಕ-ಯುವತಿಯರಿಗೆ ವಿವಾಹ ಯೋಗ ಒದಗಿ ಬರುತ್ತದೆ, ಆರೋಗ್ಯದಲ್ಲಿ  ನಿಧಾನಗತಿಯ ಚೇತರಿಕೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.



ಪರಿಹಾರ
ಗೋಪಾಲ ಕೃಷ್ಣನ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ವಂದೇ ವೃಂದಾವನಚರಮ್ | ವಲ್ಲವೀಜನವಲ್ಲಭಮ್ |
ಜಯಂತೀ ಸಂಭವಂ ಧಾಮ | ವೈಜಯಂತೀವಿಭೂಷಣಮ್ ||

  °~•~°~•~°~•~°~•~°~•~°       


ತುಲಾ


       ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅಭಿವೃದ್ಧಿ ಸ್ಥಾನಮಾನ ಗೌರವಗಳು ಲಭಿಸಲಿವೆ, ವ್ಯಾಪಾರಸ್ಥರಿಗೆ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ.  ಹಣಕಾಸಿನ ವಿಚಾರದಲ್ಲೂ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಅಲರ್ಜಿ ಮೊದಲಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ ದೊರೆಯಲಿದೆ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
ಉತ್ತಮ ಕೆಲಸವನ್ನು ಕೈಗೊಂಡರು ಕೂಡ ಅಡೆತಡೆಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ತೊಂದರೆಯನ್ನು ಎದುರಿಸಬೇಕಾದ ಅಂತಹ ಪರಿಸ್ಥಿತಿ ಒದಗಿ ಬಿಡುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಲೆಸುತ್ತದೆ. ಕುಟುಂಬದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ  ಸಂಭವವಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್ | ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ | ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    
ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ನೂತನ ವ್ಯಾಪಾರವನ್ನು ತೊಡಗಿಸಿಕೊಳ್ಳುವವರಿಗೆ ಅವಕಾಶಗಳು ಒದಗಿ ಬರುತ್ತದೆ. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಆಲಸಿ ತನವನ್ನು ಬಿಟ್ಟೂ ಮುಂದುವರಿದರೆ ಮಾತ್ರ ಮುನ್ನಡೆ.
ಪರಿಹಾರ
ಗುರು ಗ್ರಹರ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ದೇವಾನಾಂ ಚ ಋಷೀಣಾಂ ಚ | ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಮ್ | ತಂ ನಮಾಮಿ ಬೃಹಸ್ಪತಿಮ್ ||

     °~•~°~•~°~•~°~•~°~•~°


ಮಕರ


    ನೂತನ ಗೃಹ, ವಾಹನ ಖರೀದಿ,   ಗೃಹಉಪಯೋಗಿ ವಸ್ತುಗಳ ಖರೀದಿ, ಮುಂತಾದವುಗಳಿಗೆ ಅವಕಾಶಗಳು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಅಲರ್ಜಿ ಚರ್ಮರೋಗ  ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಮುನ್ನಡೆ.



ಪರಿಹಾರ
ಶನಿ ದೇವರ ಆರಾಧನೆಯಿಂದ ಶುಭ.  

ಜಪಿಸಲು :
ನೀಲಾಂಜನಸಮಾಭಾಸಮ್ | ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಮ್ | ತಂ ನಮಾಮಿ ಶನೈಶ್ಚರಮ್||

   °~•~°~•~°~•~°~•~°~•~°          


ಕುಂಭ  


       ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು, ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ.  ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.
ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ | ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್  | ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


    ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ  ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಗಳು ಕಂಡು ಬರುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.

ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ನಮಸ್ತೇ ಪುಂಡರೀಕಾಕ್ಷ | ನಮಸ್ತೇ ಪುರುಷೋತ್ತಮ |
ನಮಸ್ತೇ  ಸರ್ವಲೋಕಾತ್ಮನ್ | ನಮಸ್ತೇ ತಿಗ್ಮಚಕ್ರಿಣೇ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}

Author Details


Srimukha

Leave a Reply

Your email address will not be published. Required fields are marked *