ಅವಿಚ್ಛಿನ್ನ ಗುರುಪರಂಪರೆಯ ಅರಿವು-ಹರಿವು ಸಂಚಿಕೆ -೭
ಬ್ರಹ್ಮರ್ಷಿಗಳಲ್ಲಿ ಶ್ರೇಷ್ಠರಾದ ವಸಿಷ್ಠರ ಮರಿಮಗ, ಶಕ್ತಿ ಮಹರ್ಷಿಯ ಮೊಮ್ಮಗ, ಪರಾಶರರ ಪುತ್ರ ಮತ್ತು ಶುಕಬ್ರಹ್ಮರ್ಷಿಯ ತಂದೆಯಾದ ಅಕಲ್ಮಷರೂ, ತಪೋನಿಧಿಯೂ ಆದ ವ್ಯಾಸಮಹರ್ಷಿಗಳಿಗೆ ನಮಿಸುತ್ತಾ ಮುಂದುವರೆಯೋಣ. ತಾಯಿ ದೇವಿ ಸತ್ಯವತಿಯ ಆಜ್ಞಾನುಸಾರ ಸಂತತಿಯ ಭಾಗ್ಯವನ್ನು ಕರುಣಿಸಿ ನಶಿಸುತ್ತಿದ್ದ ಆ ಕುರುಕುಲವನ್ನು ಉಳಿಸಿದ ಮಹಾಮಹಿಮರು. ಸಮಾಜಕ್ಕೆ ಅವರ ಅರಿವಿನ ಹರಿವು ಯಾವ ಯಾವ ರೂಪದಿಂದ ಹರಿಯಿತೆಂದು ತಿಳಿಯಲು ಅವರ ರಚನೆಗಳನ್ನು ಅವಲೋಕಿಸೋಣ. ಮಹಾಕಾವ್ಯ ಮಹಾಭಾರತ, ವೇದರಾಶಿಯ ವಿಂಗಡಣೆಯಷ್ಟೇ ಅಲ್ಲದೆ ವೇದಾಂತನ್ಯಾಯವನ್ನು ಸಮರ್ಥಿಸುವ ಬ್ರಹ್ಮಸೂತ್ರ, ವೇದಾರ್ಥವನ್ನು ವಿವರಿಸುವ ಹದಿನೆಂಟು ಪುರಾಣಗಳನ್ನು ರಚಿಸಿದರೆಂದು […]
Continue Reading