ಮಾತೆಯ ಮಮತೆಯ ಕರೆ : ಸಿಗಂದೂರು ಚೌಡೇಶ್ವರೀದೇವಿಯ ರಥೋತ್ಸವ
ಶ್ರೀಸಿಗಂದೂರುಚೌಡೇಶ್ವರಿ! ‘ನೀನೇ ಎಲ್ಲ’ ಎನ್ನುವ ಭಾವದಲ್ಲಿ ಬೇಡಿ ಬರುವ ಭಕುತರಿಗೆ ಎಂದೂ ‘ಇಲ್ಲ’ ಎನ್ನದ ಕರುಣಾಕರೀ. ಹಾಗೆಯೇ ‘ನೀನೇನಲ್ಲ’ ಎನ್ನುವ ದುರುಳರ ದುರಹಂಕಾರವನ್ನು ‘ಹುಂ’ಕಾರ ಮಾತ್ರದಿಂದಲೇ ಸಂಹರಿಸುವ ದುಷ್ಟಭಯಂಕರಿಯೂ ಹೌದು. ಮಾತೆಯ ಶಕ್ತಿಯೇ ಅಂತಹದ್ದು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಯ ಹಿನ್ನೀರ ಪ್ರದೇಶದ ಮೂಲೆಯಲ್ಲಿರುವ, ಗೂಗಲ್ಲಿಗೂ ಸಿಗದ ಸಿಗಂದೂರಿನ ಕಾನನದಲ್ಲಿ ತಾನು ಕುಳಿತು, ದೇಶದ ಮೂಲೆ-ಮೂಲೆಯಿಂದ ಸಾಮಾನ್ಯ ಆದ್ಮಿ-ಉದ್ಯಮಿ, ಸಂತ-ಶ್ರೀಮಂತ ಮುಂತಾದ ಯಾವುದೇ ಭೇದವಿಲ್ಲದೇ, ಲಕ್ಷಾಂತರ ಜನರನ್ನು ತನ್ನಲ್ಲಿಗೆ ಕರೆಸಿಕೊಳ್ಳುತ್ತಿರುವುದು ಆಕೆಯ ಪ್ರಭಾವವನ್ನು […]
Continue Reading