ಜನಮನ ಸೆಳೆದ ಪಾಕವೈಭವ- ನಾಳೆ ಸೇವಾಸೌಧ ಸಮರ್ಪಣೆ

  ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ ‘ಸೇವಾಸೌಧ’ ಸಮರ್ಪಣಾ ಸಮಾರಂಭ ಶನಿವಾರ (ಜನವರಿ 28) ನಡೆಯಲಿದೆ. ಸ್ವಸ್ಥ ಮತ್ತು ಸಮರ್ಥ ಜಗತ್ತಿನ ನಿರ್ಮಾಣಕ್ಕೆ ಸುಯೋಗ್ಯ ಶಿಕ್ಷಣದ ಅಗತ್ಯತೆಯನ್ನು ಪರಿಕಲ್ಪಿಸಿ, ಭಾರತದ ಪ್ರಾಚೀನ ಶಿಕ್ಷಣ ವಿನ್ಯಾಸ ಹಾಗೂ ಶಿಕ್ಷಣಕ್ರಮಕ್ಕೆ ಕಾಯಕಲ್ಪ ಒದಗಿಸಬೇಕು ಎಂಬ ಮಹದಾಶಯದೊಂದಿಗೆ ಪರಮಪೂಜ್ಯರು ಅನುಷ್ಠಾನಗೊಳಿಸುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್‍ನ […]

Continue Reading

ಧರ್ಮಕಾರ್ಯ, ಶಾಶ್ವತ ಕಾರ್ಯಗಳಿಗೆ ನೆರವಾಗುವುದೇ ಸತ್ಕಾರ್ಯ: ರಾಘವೇಶ್ವರ ಶ್ರೀ

ಮಾಣಿ: ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಂಡು, ಸರಳ ಜೀವನ ಅಳವಡಿಸಿಕೊಂಡು ಸಮಾಜದ ಶಾಶ್ವತ ಕಾರ್ಯಗಳಿಗೆ ಧರ್ಮಕಾರ್ಯಗಳಿಗೆ ಕೊಡುಗೆ ನೀಡುವ ಮೂಲಕ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು. ಮಾಣಿ ಮಠದಲ್ಲಿ ನೂತನ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸರಳ ಜೀವನದಲ್ಲಿರುವ ಸುಖ- ಶ್ರೇಯಸ್ಸು ಯಾವುದರಲ್ಲೂ ಇಲ್ಲ. ಒಂದು ತುತ್ತು ಕಡಿಮೆ ಉಂಡು ಅದನ್ನು ಸಮಾಜಕ್ಕೆ ನೀಡಿ ಎಂಬ […]

Continue Reading

ಗುಂಪೆ ವಲಯ ಸಭೆ

  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯ ಸಭೆಯು ದಿನಾಂಕ ೦1 – 01 – 2023 ಆದಿತ್ಯವಾರ ಗುಂಪೆ ವಲಯ ಕಛೇರಿಯಲ್ಲಿ ನಡೆಯಿತು. ಶಂಖನಾದ , ಗುರುವಂದನೆ , ಗೋಸ್ತುತಿಯೊಂದಿಗೆ ಆರಂಭವಾದ ಸಭೆಯ ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಬಿ.ಎಲ್. ಶಂಭು ಹೆಬ್ಬಾರ್ ವಹಿಸಿದರು. ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಗತಸಭೆಯ ವರದಿ ಮತ್ತು ಮಹಾಮಂಡಲ ಸುತ್ತೋಲೆಯನ್ನು ವಾಚಿಸಿ ವಿಭಾಗವಾರು ವರದಿಗಳನ್ನು ನೀಡಿದರು. ಕೋಶಾಧ್ಯಕ್ಷರಾದ ರಾಜಗೋಪಾಲ ಅಮ್ಮಂಕಲ್ಲು ಡಿಸೆಂಬರ್ ತಿಂಗಳ ವಲಯ […]

Continue Reading

ರಾಮನ ಹಾದಿಯಲ್ಲಿ ಮುನ್ನಡೆಯೋಣ : ರಾಘವೇಶ್ವರ ಶ್ರೀ ಕರೆ

ಮಂಗಳೂರು: ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.ಮಾಣಿ ಮಠದ ಸಪರಿವಾರ ಶ್ರೀರಾಮಚಂದ್ರದೇವರ ಶಿಲಾಮಯ ಗರ್ಭಗುಡಿ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಶಿಷ್ಯರ ಮಾರ್ಗದರ್ಶನ ಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು.ನಮ್ಮತನ ಉಳಿಸೋಣ. ನಮ್ಮ ಆಚರಣೆ ಸಂಪ್ರದಾಯ, ಸಂಸ್ಕøತಿ, ಭಾಷೆ, ನಾಡು ನುಡಿ ಉಳಿಸಲು ನಮ್ಮಿಂದಾದ ಕೊಡುಗೆ ನೀಡೋಣ. […]

Continue Reading

ಸಮಾಜಕ್ಕೆ ಅಮೃತ ನೀಡುವ ಪಣ ತೊಡಿ: ಕಾರ್ಯಕರ್ತರಿಗೆ ರಾಘವೇಶ್ವರ ಶ್ರೀ ಸಲಹೆ

  ಗೋಕರ್ಣ: ಶ್ರೀಮಠದ ಸಮಸ್ತ ಪರಿವಾರ ಜೇನು ಗೂಡಿನಂತೆ. ಶ್ರೀಪೀಠ ರಾಣಿ ಹುಳದಂತೆ. ನಾವೆಲ್ಲ ಸೇರಿ ಜೇನು ಮಾತ್ರವಲ್ಲ; ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾನುವಾರ ಸಂಪನ್ನಗೊಂಡ ಗುರುಕುಲ ಚಾತುರ್ಮಾಸ್ಯದ ಕಾರ್ಯಕರ್ತರ ಸಮ್ಮಿಲನದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಕಾರ್ಯಕರ್ತರಲ್ಲಿ ಮಹಾಕಾಳಿಯ ಕೃಪೆ ಹಾಗೂ ಶಕ್ತಿಯ ಸಂಚಯನವಾಗಲಿ. ದೊಡ್ಡ ಸೇವೆಗೆ ಆಂಜನೇಯನ ಶಕ್ತಿ ಹಾಗೂ ವಿನಮ್ರತೆ ಎಲ್ಲ ಕಾರ್ಯಕರ್ತರಲ್ಲಿ ಬರಲಿ ಎಂದು ಆಶಿಸಿದರು. […]

Continue Reading

” ಸ್ವಯಂವರ ” ಕಾದಂಬರಿ ಲೋಕಾರ್ಪಣೆ

  ಗೋಕರ್ಣ : ಗೋಕರ್ಣದ ಅಶೋಕೆಯಲ್ಲಿ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಕರಕಮಲಗಳಿಂದ ಕಾಸರಗೋಡಿನ ಶ್ರೀಮುಖ ಮಾತೃತ್ವಮ್ ಲೇಖಕಿ‌ ಪ್ರಸನ್ನಾ ವಿ ಚೆಕ್ಕೆಮನೆ ಅವರ ಹವ್ಯಕ ಕಾದಂಬರಿ ” ಸ್ವಯಂವರ ” ಅಕ್ಟೋಬರ್ 1 ರಂದು ಲೋಕಾರ್ಪಣೆಗೊಂಡಿತು.   ನವರಾತ್ರಿಯ ಆರನೇ ದಿನ ಬಿಡುಗಡೆಯಾದ ಈ ಕೃತಿಯು ಲೇಖಕಿಯ ಆರನೆಯ ಕೃತಿಯಾಗಿದೆ. ಚಿಕ್ಕಮಗಳೂರಿನ ಅಪರಂಜಿ ಪ್ರಕಾಶನದ ಮೂಲಕ ಪ್ರಕಟವಾದ ಈ ಕಾದಂಬರಿಗೆ ಒಪ್ಪಣ್ಣ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಮಹೇಶ್ ಎಳ್ಯಡ್ಕ ಮುನ್ನುಡಿ ಬರೆದಿದ್ದಾರೆ.

Continue Reading

ಅಶೋಕೆಯಲ್ಲಿ ಗುರುಕುಲ ಚಾತುರ್ಮಾಸ್ಯ ಸಂಪನ್ನ ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್ ಶೀಘ್ರ: ರಾಘವೇಶ್ವರ ಶ್ರೀ

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಪ್ರಕಟಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ನಡೆದ ಗುರುಕುಲ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ನಮ್ಮ ಸಮಾಜದ ನಡೆ- ನುಡಿ, ಆಹಾರ- ವಿಹಾರ, ಸಂಸ್ಕøತಿ- ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಈ ವಿಶಿಷ್ಟ ಕ್ಯಾಂಪಸ್ ಇಡೀ ದೇಶಕ್ಕೆ ಆದರ್ಶವಾಗಲಿದೆ. ಈ ಅಹಿಚ್ಛತ್ರ ಮುಂದೊಂದು ದಿನ ವಿಶ್ವದ ಬೆಳಕಾಗಲಿದೆ ಎಂದು ನುಡಿದರು. […]

Continue Reading

ಮೋಹದ ಕ್ಷಯ ಮೋಕ್ಷಕ್ಕೆ ಕಾರಣ: ರಾಘವೇಶ್ವರ ಶ್ರೀ

  ಗೋಕರ್ಣ: ಮೋಹದ ಕ್ಷಯವೇ ಮೋಕ್ಷಕ್ಕೆ ಕಾರಣ. ಮೋಕ್ಷ ಬೇಕಾದರೆ ಮೋಹ ಕ್ಷಯವಾಗಬೇಕು. ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ ಅರ್ಪಿಸುವುದು ಸರ್ವಶ್ರೇಷ್ಠ ದಾನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಹತ್ತನೇ ದಾನ ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ […]

Continue Reading

ತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ

ಗೋಕರ್ಣ: ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ ನಿಶ್ಚಿಂತೆಯಿಂದ, ಧೈರ್ಯದಿಂದ ಇರುತ್ತಾನೆ. ತಪ್ಪು ಮಾಡದಿರುವುದನ್ನು ರೂಢಿಸಿಕೊಂಡಲ್ಲಿ ಸಹಜವಾಗಿಯೇ ನಿಜವಾದ ಧೈರ್ಯ ನಮಗೆ ಬರುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ […]

Continue Reading

ವಿನಾಯಕ ಚೌತಿ ಚಿತ್ರ ಸ್ಪರ್ಧೆ..

ವಿನಾಯಕ ಚೌತಿ ಮತ್ತೆ ಬಂದಿದ್ದು, ಹೊಸ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಶ್ರೀಮುಖ ತಂಡ ವಿನಾಯಕ ಚೌತಿ ಚಿತ್ರ ಸ್ವರ್ಧೆಯನ್ನು ಏರ್ಪಸಿದೆ. ಚಿತ್ರಗಳನ್ನು ಬಿಡಿಸುವವರ ಗಮನಕ್ಕೆ 1.ನಿಮ್ಮ ಸ್ವಂತ ಕಲ್ಪನೆಯನ್ನು ಎ೪ ಹಾಳೆಯಲ್ಲಿ ಬಿಡಿಸಿ 2.ಬಣ್ಣದ ಚಿತ್ರಗಳು, ಕಪ್ಪು ಬಿಳುಪು ಚಿತ್ರ, ಚುಕ್ಕಿ ಚಿತ್ರಗಳನ್ನು ಪರಿಗಣಿಸಲಾಗುವುದು 3.ಆಗಸ್ಟ್ 30 ರ ರಾತ್ರಿ 7 ಗಂಟೆ ಮೊದಲು ಬಂದ ಚಿತ್ರಗಳನ್ನು ಪರಿಗಣಿಸಲಾಗುವುದು 4.ಸ್ಕ್ಯಾನ್ ಮಾಡಿ ಮಿಂಚಂಚೆ ಮೂಲಕವೇ ಕಳುಹಿಸಬೇಕು ಮಿಂಚಂಚೆ ವಿಷಯದಲ್ಲಿ ಖಂಡ್ಡಾಯವಾಗಿ ವಿಭಾಗ, ಹೆಸರು, ವಿಳಾಸ, ಘಟಕ, ವಲಯ, ಮಂಡಲ […]

Continue Reading

ನಿಮ್ಮ ನಿಯಂತ್ರಣದಲ್ಲಿದ್ದರೆ ಕ್ರೋಧವೂ ದೋಷವಲ್ಲ- ರಾಘವೇಶ್ವರ ಶ್ರೀ

  ಗೋಕರ್ಣ: ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ವಿಶ್ಲೇಷಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ, ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು. ರಾಮ ಸ್ಥಾನಕ್ರೋಧ- ಜಿತಕ್ರೋಧ ಎಂಬ ಉಲ್ಲೇಖ […]

Continue Reading

ಪ್ರೀತಿ ಹೃದಯ ಬೆಸೆದರೆ ಕೋಪ ದೂರ ಮಾಡುವಂಥದ್ದು: ರಾಘವೇಶ್ವರ ಶ್ರೀ

  ಗೋಕರ್ಣ: ಪ್ರೀತಿ ಹೃದಯಗಳನ್ನು ಹತ್ತಿರ ತಂದರೆ ಕೋಪ ಹೃದಯಗಳನ್ನು ದೂರ ಮಾಡುತ್ತದೆ; ಜೀವ- ಜೀವಗಳನ್ನು, ಜೀವ- ದೇವರನ್ನೂ ದೂರ ಮಾಡುವಂಥದ್ದು. ಅರಿಷಡ್ವರ್ಗಗಳಲ್ಲಿ ಒಂದಾದ ಕ್ರೋಧ, ಮನಸ್ಸುಗಳ ಮಧ್ಯೆ, ಹೃದಯಗಳ ಮಧ್ಯೆ ಗೋಡೆ ಕಟ್ಟುವ ಕೆಲಸ ಮಾಡುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಭಾವ ಅಥವಾ ಪ್ರೀತಿ ಬೆಳೆದಂತೆ ಭಾಷೆ ಮೂಕವಾಗುತ್ತದೆ. ಭಾವ […]

Continue Reading

ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ

  ಗೋಕರ್ಣ: ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ; ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ […]

Continue Reading

ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆ

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ‘ ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆಯು 18 – 07 – 2022 ರಂದು ಅಂತರ್ಜಾಲದ ಗೂಗಲ್ ಮೀಟ್ ಮೂಲಕ ನೆರವೇರಿತು. ಗುರುವಂದನೆ ಗೋಸ್ತುತಿಯೊಂದಿಗೆ ಆರಂಭವಾದ ಸಭೆಯಲ್ಲಿ ಮಂಗಳೂರು ನಗರಸಮಿತಿ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಅಮೈ ಪ್ರಾಸ್ತಾವಿಕ ನುಡಿಗಳನ್ನಾಡಿ ಮಂಗಳೂರು ನಗರದ ಮಾತೃತ್ವಮ್ ಸಮಿತಿಯ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ತಿಳಿಸಿದರು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು ” ಮಂಗಳೂರು ನಗರಸಮಿತಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ […]

Continue Reading

ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ- ರಾಘವೇಶ್ವರ ಶ್ರೀ

ಗೋಕರ್ಣ: ಸಿಟ್ಟು ಎಂಬ ಬೆಂಕಿ ಮೊದಲು ನಮ್ಮನ್ನು ಸುಡುತ್ತದೆ; ಆ ಬಳಿಕ ಇತರರನ್ನು ಸುಡುತ್ತದೆ. ಕ್ರೋಧವೆಂಬ ಬೆಂಕಿ ನಮ್ಮ ಮನಸ್ಸು, ಬದುಕು, ಸಂಬಂಧ ಹೀಗೆ ಎಲ್ಲವನ್ನೂ ಸುಡುತ್ತದೆ. ಆದ್ದರಿಂದ ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ. ಸಿಟ್ಟನ್ನು ಗೆಲ್ಲುವ ಶಕ್ತಿಯನ್ನು ಶ್ರೀರಾಮ ನಮಗೆಲ್ಲ ಕರುಣಿಸಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಿಟ್ಟಿನ ಪರಿಣಾಮ ಎಂದೂ ಒಳ್ಳೆಯದಾಗುವುದಿಲ್ಲ. […]

Continue Reading

ಮಾತೃತ್ವ ಗೌರವಿಸುವುದು ಸಮಾಜದ ಕರ್ತವ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಮಾತೃ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಮಹಿಳೆಯಾಗಿ ಹುಟ್ಟುವಾಗಲೇ ಆಕೆ ದೇವಿಯ ಸ್ವರೂಪವಾಗಿ ಹುಟ್ಟುತ್ತಾಳೆ. ಹೆಣ್ಣನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ. ಅದು ಅತ್ಯಂತ ಪಾಪದ ಕಾರ್ಯ. ಆಕೆ ಕಣ್ಣೀರು ಇಟ್ಟರೆ ಅದು ಶಾಪ. ಮಹಿಳೆ ಸಂತೋಷವಾಗಿದ್ದರೆ ಮಾತ್ರ ಶ್ರೇಯಸ್ಸು ಎಂದು […]

Continue Reading

ಸನಾತನ ಸಂಸೃತಿಯ ಅರಿವು ಅಗತ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ಇಂದಿನ ಸಮಾಜಕ್ಕೆ ಸನಾತನ ಧರ್ಮದ ಬಗ್ಗೆ ಅಭಿರುಚಿ ಇದೆ. ಆದರೆ ಅರಿವು ಇಲ್ಲ. ಈ ಅರಿವನ್ನು ಮೂಡಿಸುವ ಪ್ರಯತ್ನವನ್ನು ‘ಆಯತನ’ ಗ್ರಂಥದ ಕನ್ನಡಾನುವಾದ ಗ್ರಂಥ ಮಾಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಆರ್.ಎಸ್.ಹೆಗಡೆಯವರ ಶತಮಾನಗಳಷ್ಟು ಹಳೆಯ ಆಯತನ ಎಂಬ ಕನ್ನಡಾನುವಾದ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. “ಸನಾತನ ಧರ್ಮದ ಬಗ್ಗೆ ಇಂದಿನ […]

Continue Reading

” ಶ್ರೀಮಠದ ಯೋಜನೆಗಳನ್ನು ಸಮರ್ಥವಾಗಿ ಕಾರ್ಯರೂಪಕ್ಕೆ ತರಲು ಮಾತೆಯರು ಸಂಘಟಿತರಾಗಬೇಕು ” : ಬಾಲಸುಬ್ರಹ್ಮಣ್ಯ ಭಟ್, ಸರ್ಪಮಲೆ

    ” ಶ್ರೀಮಠದ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ವಲಯದ ಪ್ರತೀ ಮನೆಯ ಮಾತೆಯರೂ ಸಂಘಟಿತರಾಗಬೇಕು.‌ ಮುಷ್ಟಿ ಭಿಕ್ಷಾ ಯೋಜನೆ, ಕುಂಕುಮಾರ್ಚನೆ , ಮಾತೃತ್ವಮ್, ಶ್ರೀರಾಮಭುಜಂಗ ಪ್ರಯಾತ ಸ್ತೋತ್ರ ಪಠಣವೇ ಮೊದಲಾದ ಕಾರ್ಯಗಳನ್ನು ಸಮರ್ಪಕವಾಗಿ ಮುನ್ನಡೆಸುವುದೇ ಮಾತೃ ವಿಭಾಗದ ಮುಖ್ಯ ಉದ್ದೇಶ ” ಎಂದು ಮುಳ್ಳೇರಿಯ ಮಂಡಲ ಅಧ್ಯಕ್ಷರಾದ ಸರ್ಪಮಲೆ ಬಾಲಸುಬ್ರಹ್ಮಣ್ಯ ಭಟ್ ಆಶಯ ವ್ಯಕ್ತಪಡಿಸಿದರು.   ಮುಳ್ಳೇರಿಯ ಮಂಡಲ ಮಾತೃವಿಭಾಗ ಹಾಗೂ ಮಾತೃತ್ವಮ್ ನ ಸಹಯೋಗದಲ್ಲಿ ಜುಲೈ ತಿಂಗಳ ವಿವಿಧ ದಿನಗಳಲ್ಲಿ ‌ನಡೆದ ಮುಳ್ಳೇರಿಯ […]

Continue Reading

ತಾಳ್ಮೆಯ ಸಂಪಾದನೆ ತಪಸ್ಸಿನಿಂದ ಸಾಧ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆಯ ಸಂಪಾದನೆ ಆಗುವುದು ತಪಸ್ಸಿನಿಂದ; ಅತಿಯಾದ ಸುಖ, ದುಃಖವನ್ನು ತಡೆದುಕೊಳ್ಳುವ ತಾಳ್ಮೆ ದೊರಕುವುದು ತಪಸ್ಸಿನಿಂದ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬ್ರಹ್ಮಜ್ಞಾನವನ್ನು ಅನುಭವಿಸುವ ಯೋಗ್ಯತೆ ದೊರಕುವುದು ತಪಸ್ಸಿನಿಂದ ಮಾತ್ರ; ಅದನ್ನು ಅನುಭವಿಸಲು ಯೋಗಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಯೋಗ್ಯತೆ ಇದ್ದರೆ ಮಾತ್ರವೇ ಯೋಗ ಬರಬೇಕು. ಎಂದು ಮಾರ್ಮಿಕವಾಗಿ ನುಡಿದರು. ಯೋಗ್ಯತೆ ಇಲ್ಲದವನಿಗೆ ಯೋಗ […]

Continue Reading

ಮಾತೃತ್ವಮ್ ಕಾಸರಗೋಡು ನಗರಸಮಿತಿ ಸಭೆ

ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ ಮಾತೃತ್ವಮ್ ‘ ನ ಕಾಸರಗೋಡು ನಗರಸಮಿತಿಯ ಸಭೆಯು ಜುಲೈ ೨ ರಂದು ಮೊತ್ತಮೊದಲಾಗಿ ಅಂತರ್ಜಾಲದ ಗೂಗಲ್ ಮೀಟ್ ಮೂಲಕ ನೆರವೇರಿತು. ಗುರುವಂದನೆ ಗೋಸ್ತುತಿಯೊಂದಿಗೆ ಆರಂಭವಾದ ಸಭೆಯಲ್ಲಿ ಕಾಸರಗೋಡು ನಗರದ ಅಧ್ಯಕ್ಷೆ ಕುಸುಮ ಪೆರ್ಮುಖ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಾಸರಗೋಡು ನಗರದ ಮಾತೃತ್ವಮ್ ಸಮಿತಿಯ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ತಿಳಿಸಿದರು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು ” ಕಾಸರಗೋಡು ನಗರಸಮಿತಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರಸ್ತುತ […]

Continue Reading