ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ. ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ […]

Continue Reading

 ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3

ಸಾಗರ: ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ 3 ಸಾಗರ ಬಾಪಟ್ ಸಭಾಭವನದಲ್ಲಿ ಭಾನುವಾರ ನಡೆಯಿತು. ಬೆಳಗ್ಗೆ ಶ್ರೀರಾಮ ದೇವರ ಸನ್ನಿಧಿಯಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಸಾಗರ ರಾಘವೇಶ್ವರ ಭವನ ಸಮಿತಿ ಅಧ್ಯಕ್ಷ ಹರನಾಥ ರಾವ್ ಮತ್ತಿಕೊಪ್ಪ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಶ್ರೀಮಠ ಅಂದಿನಿಂದ ಇಂದಿನವರೆಗೆ ವಿಷಯದ ಕುರಿತು ವಿದ್ವಾನ್ ಗಜಾನನ ರೇವಣಕಟ್ಟ ಮಾತಾಡಿದರು. ಶಾಸನತಂತ್ರ ಅಧ್ಯಕ್ಷ ಮೋಹನ ಹೆಗಡೆ ಅರ್ಹತೆಯ ಅಷ್ಟ ಸೂತ್ರಗಳ ಬಗ್ಗೆ ಸೇವಾ ಬಿಂದುಗಳಿಗೆ ತಿಳಿಸಿಕೊಟ್ಟರು. ಶ್ರೀಮಠದ ಆಡಳಿತ ವ್ಯವಸ್ಥೆಯಾದ […]

Continue Reading

ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಂಡರೆ ಆಪತ್ತು ಖಚಿತ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ: ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ಅವನನ್ನೇ ಸ್ಮರಿಸಬೇಕು ಇನ್ನು ಸೋತಾಗ ಹೇಗೂ ಭಗವಂತನ ನೆನಪು ಮಾಡಲೇ ಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 9 […]

Continue Reading

ದುರಹಂಕಾರ ವಿಚಿತ್ರ ರೋಗ ಅದು ವ್ಯಕ್ತಿಯ ಪತನಕ್ಕೆ ಕಾರಣ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ:  ದುರಹಂಕಾರ ಎನ್ನುವುದು ಮನುಷ್ಯ ದೇಹದೊಳಗೆ ತಿಳಿಯದೆ ಬಂದಿರ ಬಹುದಾದ ಖಾಯಿಲೆ ಇದ್ದ ರೀತಿ, ಗೊತ್ತಿರುವ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದು ನಮ್ಮ ದೇಹದೊಳಗೆ ಗೊತ್ತಿಲ್ಲದಿರುವ ಖಾಯಿಲೆ ಇದ್ದರೆ ಅದಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಈ ದುರಹಂಕಾರವೂ ಅದೇ ರೀತಿ ಇದಕ್ಕೆ ಚಿಕಿತ್ಸೆ ಇಲ್ಲ ಅದು ಅವನ ಪತನದಲ್ಲಿ ಪರಿವಸನವಾಗಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ೮ ನೇ […]

Continue Reading

ಸೆಪ್ಟೆಂಬರ್ – 30 – ಅಷ್ಟಮಿ – ಮಂಗಳವಾರ

  ಕಾರ್ಯಕ್ರಮದ ವಿವರ ಮೊಕ್ಕಾಂ – ರಾಘವೇಶ್ವರ ಸಭಾಭವನ – ಸಾಗರ 9.30am ಶ್ರೀಪೂಜೆ 3.15pm ಲಲಿತೋಪಾಖ್ಯಾನ ಪ್ರವಚನ 7.30pm ಶ್ರೀಪೂಜೆ

Continue Reading

ಕರುಣೆ – ಆಯುಧಾ ಎರಡೂ ದೇವಿಯಲ್ಲಿದೆ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ದೇವಿಯಲ್ಲಿ ಸಹಜಾನಂದದ ಪ್ರತೀಕವಾದ ಕರುಣೆಯ ಮಂದಹಾಸವೂ ಇದೆ. ವಿವಿಧ ರೀತಿಯ ಆಯುಧಗಳನ್ನು ದೇವಿ ಧರಿಸಿದ್ದಾಳೆ. ನಾವು ಭಂಡಾಸುರರಾದರೆ ದೇವಿ ಆಯುಧ ಪ್ರಯೋಗ ಮಾಡುತ್ತಾಳೆ. ನಾವು ಪುಣ್ಯದ ದಾರಿಯಲ್ಲಿ ಸಾಗಿದರೆ ದೇವಿಯ ಕರುಣೆಗೆ ಪಾತ್ರರಾಗುತ್ತೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ‘ನವರಾತ್ರ ನಮಸ್ಯಾ’ ದ ಏಳನೇ ದಿನ ಲಲಿತೋಪಾಖ್ಯಾನ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿದರು. ನಮ್ಮ ನಡೆ ನುಡಿಗಳು ನಾವು ದೇವಿಯ ಕರುಣಾಪೂರಿತ […]

Continue Reading

ನವರಾತ್ರಿ ಎಂದರೆ ಮನರಂಜನೆಯಲ್ಲ. ಅದು ದೇವಿಯ ಆರಾಧನೆ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ ಬದಲಾಗಿ ದೇವಿಯ ಆರಾಧನೆ ಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆ, […]

Continue Reading

ಸೆಪ್ಟೆಂಬರ್ -27 – ಪಂಚಮಿ – ಶನಿವಾರ

    ಕಾರ್ಯಕ್ರಮದ ವಿವರ       ಮೊಕ್ಕಾಂ – ರಾಘವೇಶ್ವರ ಸಭಾಭವನ – ಸಾಗರ   9.30am ಶ್ರೀಪೂಜೆ   3.15pm ಲಲಿತೋಪಾಖ್ಯಾನ ಪ್ರವಚನ   7.30pm ಶ್ರೀಪೂಜೆ

Continue Reading

ನಾವು ನಮ್ಮ ವಶದಲ್ಲಿದ್ದರೆ ಮಾತ್ರ ಸಾಧನೆ ಸಾಧ್ಯ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನಾವು ನಮ್ಮ ವಶದಲ್ಲಿರಬೇಕು. ಹಾಗಿದ್ದರೆ ಮಾತ್ರ ನೆಮ್ಮದಿ. ಮನಸ್ಸು, ದೇಹ ನಮ್ಮ ವಶದಲ್ಲಿಲ್ಲ ಎಂದಾದರೆ ಯಾವ ಸಾಧನೆಯನ್ನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ‘ನವರಾತ್ರ ನಮಸ್ಯಾ’ದ ಐದನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಇಂದು ಊರು, ರಾಜ್ಯ ಜಗತ್ತು ತನ್ನ ವಶವಾಗಬೇಕು ಎನ್ನುವ ಮನಸ್ಸು ಹೊಂದಿರುವ ಮನುಷ್ಯ ತನ್ನನ್ನು ತಾನು ವಶವಿಟ್ಟುಕೊಳ್ಳಲಾಗದಿರುವ ಪರಿಸ್ಥಿತಿಯಲ್ಲಿದ್ದಾನೆ. ಕ್ಷಣಕ್ಕೂ […]

Continue Reading

ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಜಗತ್ತಿನಲ್ಲಿ ಸಹನೆಗಿಂತ ಮತ್ತೊಂದು ದೊಡ್ಡ ಅಸ್ತ್ರ ಇಲ್ಲವೇ ಇಲ್ಲ. ಕಷ್ಟ ಎದುರಿಸುವ ಆತ್ಮಸ್ಥೈರ್ಯ ಸದಾ ಬೆಳೆಸಿಕೊಳ್ಳಬೇಕು, ದೇವತೆಗಳಿಗೂ ಕಷ್ಟ ಬಂದಾಗ ಅದನ್ನು ಸಹನೆಯಿಂದ ಕೇಳಿ, ಸ್ಥೈರ್ಯ ನೀಡಿದ ದೇವಿ ಸಹನೆಗೊಂದು ಆದರ್ಶ ಎಂದು ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾ 4 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ದೇವಿಯ ಸಹನೆಯನ್ನು ಬಣ್ಣಿಸುವಾಗ […]

Continue Reading

ಪೂಜೆಯ ವೇಳೆ ಒಳ ಮನಸ್ಸು ಒಳಿತನ್ನೇ ಯೋಚಿಸಬೇಕು ಕೆಡುಕಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ : ದೇವಿಯ ನಾಮ ಕಿವಿಯ ಮೇಲೆ ಬೀಳುವುದಕ್ಕೂ ಪುಣ್ಯಯೋಗ ಬೇಕು ಅದೃಷ್ಟವೂ ಇರಬೇಕು ಅನುಷ್ಠಾನದ ಭಾವವಿರಬೇಕು ಅಂತವರ ಬದುಕಿನಲ್ಲಿ ಆಕೆಯ ಕರುಣೆಯ ಕಿರಣ ಬೀಳಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಮೂರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ದೇವರ ಪೂಜೆ ಮಾಡುವುದು ಎಷ್ಟು ಮುಖ್ಯವೋ ಅದರಲ್ಲಿ ಏಕಾಗ್ರತೆಯೂ ಅಷ್ಟೇ ಮುಖ್ಯ ಮತ್ತು ಪ್ರಾರ್ಥನೆಯೂ ಒಳ್ಳೆಯದೇ ಇರಬೇಕು, […]

Continue Reading

ತ್ಯಾಗದಿಂದ ಮಾತ್ರವೇ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಕರ್ಮದಿಂದ ಅಲ್ಲ ತ್ಯಾಗದಿಂದ ಮಾತ್ರ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ನಮ್ಮಲ್ಲಿ ಸ್ವಾರ್ಥ ಇಲ್ಲದೆ, ನಮ್ಮಲ್ಲಿರುವ ಸಮಸ್ತವನ್ನು ಸಮರ್ಪಿಸುವ ಮನೋಭಾವ ಇದ್ದಾಗ ದೇವರ ಒಲುಮೆ ಸಾಧ್ಯ. ಅಂತಹ ಒಲುಮೆ ಪಡೆಯಬೇಕಾದರೆ ನಮ್ಮಲ್ಲಿರುವ ನಾನು ನನ್ನದು ಎನ್ನುವ ಮೋಹ ತ್ಯಜಿಸಬೇಕು. ಅದೇ ತ್ಯಾಗ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಎರಡನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ನಿತ್ಯ ಬೇರೆಬೇರೆ […]

Continue Reading

ಗ್ರಾಮರಾಜ್ಯದ ಮುಖ್ಯಸ್ಥಾನಕ್ಕೆ ಭೇಟಿ

  ಬೆಂಗಳೂರು: ಗ್ರಾಮರಾಜ್ಯದ ಮುಖ್ಯಸ್ಥಾನಕ್ಕೆ ಯೋಜನಾ ಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶ ಶರ್ಮಾ ಸಂಪ ಭೇಟಿ ನೀಡಿದರು. ‘ಗ್ರಾಮರಾಜ್ಯ’ ನಮ್ಮ ದಿನಸಿ ಮತ್ತಿತರ ಗೃಹೋಪಯೋಗಿ ವಸ್ತುಗಳನ್ನು ರೈತರು ಮತ್ತು ಉತ್ಪಾದಕರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ತಲುಪಿಸುವ ಒಂದು ಸಮಾಜೋಪಯೋಗಿ ಸಂಸ್ಥೆ. ವಾಣಿಜ್ಯದ ಆಸಕ್ತಿ ಇರದ ಸೇವಾಸಂಸ್ಥೆ. ಈ ಮೂಲಕ ಗ್ರಾಮಗಳನ್ನು ಸದೃಢಗೊಳಿಸುವ ಮಹತ್ತ್ವಾಕಾಂಕ್ಷೆಯ ಅಭಿಯಾನ. ಜೊತೆಗೆ ಗ್ರಾಹಕರ ದೈನಂದಿನವನ್ನೂ ಸ್ವಸ್ಥಗೊಳಿಸುವ ಸದುದ್ದೇಶವೂ ಇದರದ್ದು. ಬೆಂಗಳೂರಿನಲ್ಲಿ ಕೇಂದ್ರಸ್ಥಾನವಲ್ಲದೆ, ಅಸಂಖ್ಯ ಶಾಖೆಗಳನ್ನೂ ಹೊಂದಿ, ರಾಜ್ಯದ ಆಯ್ದ ಪ್ರದೇಶಗಳಲ್ಲೂ ಇದು ಕಾರ್ಯ […]

Continue Reading

ಶಾಸನತಂತ್ರ ~ ಸೇವಾಖಂಡ ಕಾರ್ಯಗಾರ -೨

  ಮಾಣಿ: ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಶಾಸನತಂತ್ರ ಸೇವಾಖಂಡ ಕಾರ್ಯಗಾರ – ೨ ೨೧/೦೯/೨೦೨೫ರಂದು ನಡೆಯಿತು. ಬೆಳಗ್ಗೆ ಶ್ರೀರಾಮ ದೇವರ ಸನ್ನಿಧಿ ಮುಂಭಾಗದಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಸಂಪನ್ಮೂಲ ಖಂಡದ ಶ್ರೀಸಂಯೋಜಕ ಹಾರಕರೆ ನಾರಾಯಣ ಭಟ್ ಹಾಗೂ ಮುಳ್ಳೇರಿಯ ಮಂಡಲ ಅಧ್ಯಕ್ಷ ಸರ್ಪಮಲೆ ಬಾಲಸುಬ್ರಹ್ಮಣ್ಯ ಭಟ್ ದೀಪಪ್ರಜ್ವಲಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಶಾಸನ ತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಅರ್ಹತೆಯ ಅಷ್ಟ ಸೂತ್ರಗಳ ಬಗ್ಗೆ ಸೇವಾ ಬಿಂದುಗಳಿಗೆ ತಿಳಿಸಿಕೊಟ್ಟರು. ಶಾಸನ ತಂತ್ರದ ಕಾರ್ಯದರ್ಶಿ […]

Continue Reading

ಮೂಲ ಮರೆತವರು ಅಸ್ತಿತ್ವ ಕಳೆದುಕೊಳ್ಳುತ್ತಾರೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ

ಸಾಗರ: ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ ಮಾಡುವುದಕ್ಕೆ ಮನಸ್ಸಿಲ್ಲ. ದುಃಖ ಬೇಡ, ಆದರೆ ದುಃಖದ ಮೂಲವಾದ ಪಾಪ ಮಾಡುವುದನ್ನು ನಿಲ್ಲಿಸುವುದಿಲ್ಲ. ಇದು ಬದಲಾಗಿ ಪುಣ್ಯದ ಕಾರ್ಯದಲ್ಲಿ ಮನಸ್ಸು, ದುಃಖದಿಂದ ದೂರವಿರುವ ಕಾರ್ಯ ಮಾಡುವಂತಾಗಲು ಇರುವ ದಾರಿ ಒಂದೇ. ಅದು ಜಗನ್ಮಾತೆಯಾದ ರಾಜರಾಜೇಶ್ವರಿಯ ಧ್ಯಾನ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸೋಮವಾರ ಸಾಗರದ ರಾಘವೇಶ್ವರ ಸಭಾಭವನದಲ್ಲಿ ಆರಂಭಗೊಂಡ ’ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಶ್ರೀ […]

Continue Reading

ವೈಭವದೊಂದಿಗೆ ಸಂಪನ್ನವಾದ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರಪುವೇಶ ಮೆರವಣಿಗೆ

ಸಾಗರ: ರಾಘವೇಶ್ವರ ಸಭಾ ಭವನದಲ್ಲಿ ಸೆ.೨೨ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು. ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು ೧೦ ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು ೧.೫ ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. ೨ ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ […]

Continue Reading

ಸೆ.22ರಿಂದ ಸಾಗರದಲ್ಲಿ ಸಂಭ್ರಮದ ’ನವರಾತ್ರ ನಮಸ್ಯಾ’ – ನಾಳೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಅದ್ದೂರಿ ಪುರಪ್ರವೇಶ

  ಸಾಗರ: ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಸಭಾ ಭವನದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಸೆ.22 ರಿಂದ ನಡೆಯಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ […]

Continue Reading

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಮರ್ಪಣೆ

ಗೋಕರ್ಣ: ಅಶೋಕೆಯಲ್ಲಿ ನಡೆದ ಮುಳ್ಳೇರಿಯಾ ಮಂಡಲದ ಛಾತ್ರ ಭಿಕ್ಷೆಯಂದು ಶ್ರೀರಾಮಚಂದ್ರಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ವಿ. ವಿ. ವಿ. ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಾಂಕೇತಿಕವಾಗಿ ಸಮರ್ಪಣೆ ಮಾಡಲಾಗಿತ್ತು. ಗುಂಪೆ ವಲಯದ ಮಾತೃಪ್ರಧಾನೆ ಗುಂಪೆ ಕಾವೇರಿ ಅಮ್ಮ ವಾಗ್ದಾನ ಮಾಡಿದಂತೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಅಂದಾಜು ೨೦,೦೦೦ ಮೌಲ್ಯದ ಕಲಿಕೋಪಕರಣಗಳನ್ನು ಶ್ರೀಮಠದ ಶಾಸನತಂತ್ರದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ ಎಡಪ್ಪಾಡಿ ಮೂಲಕ ಸೆ.೧೫ ರಂದು ಸಮರ್ಪಣೆ ಮಾಡಿದರು. ಅಶೋಕೆಯ ಇಂಜಿನಿಯರ್ ವಿಷ್ಣುಪ್ರಸಾದ್ ಬನಾರಿ ಉಪಸ್ಥಿತರಿದ್ದರು.

Continue Reading

ಈಜು ಸ್ಪರ್ಧೆಯಲ್ಲಿ ೩ ಚಿನ್ನ ಗಳಿಸಿದ ಅಮನ್ ಕೆ. ದೇವಾಡಿಗ

ಮಂಗಳೂರು: ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ೧೪ರ ವಯೋಮಾನ ವಿಭಾಗದ ೫೦ ಮೀ., ೧೦೦ ಮೀ. ಮತ್ತು ೨೦೦ ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ೩ […]

Continue Reading

ಮಾಹಿತಿ – ಸ್ಫೂರ್ತಿ : ಎರಡನ್ನೂ ನೀಡಿದ ಯೋಜನಾ ಖಂಡದ ಕಾರ್ಯಾಗಾರ

ಬೆಂಗಳೂರು: ಯೋಜನಾ ಖಂಡದ ಉದ್ದೇಶ, ರೂಪುರೇಷೆಗಳನ್ನು ಸದಸ್ಯರಿಗೆ ತಿಳಿಸುವ ಮತ್ತು ಸದಸ್ಯರ ಜವಾಬ್ದಾರಿಯ ಕಾರ್ಯದೀಕ್ಷೆಯನ್ನು ವಿಧಿಸುವ ಕಾರ್ಯಾಗಾರ ಬೆಂಗಳೂರಿನ ರಾಮಚಂದ್ರಾಪುರಮಠದ ಶಾಖೆ ರಾಮಾಶ್ರಮದಲ್ಲಿ ೧೪ ಸೆಪ್ಟೆಂಬರ್ ೨೦೨೫ ರಂದು ನಡೆಯಿತು. ಸಭಾ ಪೂಜೆಯನ್ನು ಯೋಜನಾಖಂಡದ ಸಂಯೋಜಕ ಕೆ ಎನ್ ಭಟ್ ನಡೆಸಿದರು. ಯೋಜನಾಖಂಡದ ಶ್ರೀ ಸಂಯೋಜಕ ವಿದ್ವಾನ್ ಜಗದೀಶ ಶರ್ಮ ಸಂಪ ಸಮಗ್ರವಾಗಿ ಶಾಸನ ತಂತ್ರ, ಅದರ ಕಾರ್ಯವಿಧಾನ, ಯೋಜನಾ ಖಂಡ, ಅದರಲ್ಲಿನ ಉಪಖಂಡ, ಅವುಗಳ ಕಾರ್ಯ ವ್ಯಾಪ್ತಿ ಇದೆಲ್ಲದರ ಕುರಿತು ವಿವರವಾಗಿ ಬಿಡಿಸಿ ತಿಳಿಸಿಕೊಟ್ಟರು. ಶಾಸನತಂತ್ರದ […]

Continue Reading