ಬಜಕೂಡ್ಲು ಗೋಶಾಲೆಯಲ್ಲಿ ಗಣೇಶ ಚತುರ್ಥಿ

ಸುದ್ದಿ

ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳ ಕಾಮದುಘಾ ಯೋಜನೆಯಲ್ಲಿ ಕಾರ್ಯಾಚರಿಸುತ್ತಿರುವ ಬಜಕೋಡ್ಲು ಅಮೃತಧಾರಾ ಗೋಶಾಲೆಯಲ್ಲಿ ಎಣ್ಮಕಜೆ ವಲಯ ವೈದಿಕ ವಿಭಾಗದ ನೇತೃತ್ವದಲ್ಲಿ ಸೆ.೨ರಂದು ಬೆಳಗ್ಗೆ ಗಣಪತಿ ಹವನ, ಗೋಪಾಲಕೃಷ್ಣ ಪೂಜೆ, ಗೋಪೂಜೆಯೊಂದಿಗೆ ಗಣೇಶ ಚತುರ್ಥಿ ಸಮಾರಂಭ ನಡೆಯಿತು. ಮಹಾಮಂಡಲ ಧರ್ಮಕರ್ಮ ಸಹಕಾರ್ಯದರ್ಶಿ ವೇ. ಮೂ. ಕೇಶವಪ್ರಸಾದ ಕೂಟೇಲು ಅವರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆದವು.

Author Details


Srimukha

Leave a Reply

Your email address will not be published. Required fields are marked *