ಗೋಸ್ವರ್ಗದಲ್ಲಿ ಗೋದೀಪ ಕಾರ್ಯಾಗಾರ
ಗೋಸ್ವರ್ಗ: ಮಾತೃ ಹಾಗೂ ಮಾತೃತ್ವಮ್ ವಿಭಾಗ ದವರಿಂದ ಗೋಮಯದಿಂದ ಹಣತೆ ಗೋದೀಪ ತಯಾರಿಸುವ ಕಾರ್ಯಾಗಾರವನ್ನು ನ.೨೨ ಮತ್ತು ನ.೨೪ರವರೆಗೆ ಹಮ್ಮಿಕೊಳ್ಳಲಾಗಿತ್ತು. ಮಾತೆಯರಿಗೆ ವಿಕ್ರಮ ಭಟ್ ಇವರು ಗೋದೀಪ ತಯಾರಿಕೆಯ ವಿಧಾನವನ್ನು ತಿಳಿಸಿಕೊಟ್ಟರು. ನ.೨೨ ೧೦ ಮಾತೆಯರಿಂದ ೧೫ ಕೆ. ಜಿ. ಗೋಮಯದಿಂದ ೪ ತಾಸಿಗೆ ೭೩೦ ಹಣತೆಗಳನ್ನು ತಯಾರಿಸಲಾಯಿತು. ನ.೨೪ರಂದು ೧೦ ಮಾತೆಯರಿಂದ ೨೦ಕೆಜಿ ಗೋಮಯದಿಂದ, ೪ ತಾಸಿಗೆ ೧೦೬೬ ಹಣತೆಯನ್ನು ತಯಾರಿಸಲಾಯಿತು. ಸಿದ್ದಾಪುರ ಮಂಡಲ ವ್ಯಾಪ್ತಿಯ ಮಾತೆಯರು ಪಾಲ್ಗೊಂಡಿದ್ದರು.
Continue Reading