ಮಾಧ್ಯಮಗಳನ್ನು ಧಮನಿಸುತ್ತಿರುವುದು ಖಂಡನೀಯ

ಸುದ್ದಿ

ನಾಡಿನ ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಶ್ರೀ ವಿಶ್ವೇಶ್ವರ ಭಟ್ ಅವರ ಮೇಲೆ ಪತ್ರಿಕಾ ವರದಿಯೊಂದರ ಕಾರಣಕ್ಕಾಗಿ ದೂರು ದಾಖಲಿಸಿರುವುದು ಖಂಡನೀಯವಾಗಿದ್ದು,  ಪತ್ರಿಕಾರಂಗದ ಮೇಲಿನ ಈ ದಮನಕಾರಿ ನೀತಿಯನ್ನು ಶ್ರೀ ಅಖಿಲ ಹವ್ಯಕ ಮಹಾಸಭೆ ಖಂಡಿಸುತ್ತದೆ.

 

ಉಪಲಬ್ಧವಾದ ಮಾಹಿತಿಯನ್ನಾಧರಿಸಿ ವರದಿಗಳನ್ನು ಪ್ರಕಟಿಸುವುದು ಮಾಧ್ಯಮಗಳಲ್ಲಿ ಸರ್ವೇಸಾಮಾನ್ಯ. ಸುದ್ದಿ ಮೂಲವನ್ನಾಧರಿಸಿದ ಪತ್ರಿಕಾ ವರದಿ ಪ್ರಕಟಿಸಿದ ಮಾತ್ರಕ್ಕೆ ವಿವಿಧ ಸೆಕ್ಷನ್’ಗಳಡಿಯಲ್ಲಿ ದೂರು ದಾಖಲಿಸಿ ; ಪತ್ರಿಕೆಯನ್ನು ಯಾ ಪತ್ರಕರ್ತರನ್ನು ಪ್ರತಿಬಂಧಿಸಲು ಉದ್ಯುಕ್ತವಾಗಿರುವುದು ಆಡಳಿತ ಪಕ್ಷಕ್ಕೆ ಶೋಭೆತರುವಂತದ್ದಲ್ಲ. ಸಂವಿಧಾನದ ನಾಲ್ಕನೇ ಅಂಗವಾದ ಮಾಧ್ಯಮ ರಂಗವನ್ನು ಈ ರೀತಿಯಾಗಿ ನಿರ್ಬಂಧಿಸಲು ಹವಣಿಸುತ್ತಿರುವುದು ನಿಜಕ್ಕೂ ಆತಂಕಕಾರಿ.

 

ಸಂವಿಧಾನ ಪ್ರದತ್ತವಾದ ಅವಕಾಶಗಳನ್ನು ಸಂವಿಧಾನ ಪ್ರದತ್ತವಾದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಬಳಸುತ್ತಿರುವುದು ಖಂಡನೀಯ. ಸರ್ಕಾರ ತನ್ನ ಇತಿಮಿತಿಗಳನ್ನು ಅರ್ಥಮಾಡಿಕೊಂಡು ಈ ತಕ್ಷಣ ದೂರನ್ನು ಹಿಂಪಡೆಯಬೇಕು ಹಾಗೂ ಮಾಧ್ಯಮ ರಂಗದ ಸ್ವಾತಂತ್ರ್ಯವನ್ನು ಕಸಿಯಬಾರದು ಎಂದು ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಶ್ರೀ ಅಖಿಲ ಹವ್ಯಕ ಮಹಾಸಭೆ ಆಗ್ರಹಿಸುತ್ತದೆ.

Author Details


Srimukha

Leave a Reply

Your email address will not be published. Required fields are marked *