ಜನಮನ ಸೆಳೆದ ಪಾಕವೈಭವ- ನಾಳೆ ಸೇವಾಸೌಧ ಸಮರ್ಪಣೆ

  ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ ‘ಸೇವಾಸೌಧ’ ಸಮರ್ಪಣಾ ಸಮಾರಂಭ ಶನಿವಾರ (ಜನವರಿ 28) ನಡೆಯಲಿದೆ. ಸ್ವಸ್ಥ ಮತ್ತು ಸಮರ್ಥ ಜಗತ್ತಿನ ನಿರ್ಮಾಣಕ್ಕೆ ಸುಯೋಗ್ಯ ಶಿಕ್ಷಣದ ಅಗತ್ಯತೆಯನ್ನು ಪರಿಕಲ್ಪಿಸಿ, ಭಾರತದ ಪ್ರಾಚೀನ ಶಿಕ್ಷಣ ವಿನ್ಯಾಸ ಹಾಗೂ ಶಿಕ್ಷಣಕ್ರಮಕ್ಕೆ ಕಾಯಕಲ್ಪ ಒದಗಿಸಬೇಕು ಎಂಬ ಮಹದಾಶಯದೊಂದಿಗೆ ಪರಮಪೂಜ್ಯರು ಅನುಷ್ಠಾನಗೊಳಿಸುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್‍ನ […]

Continue Reading

ಧರ್ಮಕಾರ್ಯ, ಶಾಶ್ವತ ಕಾರ್ಯಗಳಿಗೆ ನೆರವಾಗುವುದೇ ಸತ್ಕಾರ್ಯ: ರಾಘವೇಶ್ವರ ಶ್ರೀ

ಮಾಣಿ: ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಂಡು, ಸರಳ ಜೀವನ ಅಳವಡಿಸಿಕೊಂಡು ಸಮಾಜದ ಶಾಶ್ವತ ಕಾರ್ಯಗಳಿಗೆ ಧರ್ಮಕಾರ್ಯಗಳಿಗೆ ಕೊಡುಗೆ ನೀಡುವ ಮೂಲಕ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು. ಮಾಣಿ ಮಠದಲ್ಲಿ ನೂತನ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸರಳ ಜೀವನದಲ್ಲಿರುವ ಸುಖ- ಶ್ರೇಯಸ್ಸು ಯಾವುದರಲ್ಲೂ ಇಲ್ಲ. ಒಂದು ತುತ್ತು ಕಡಿಮೆ ಉಂಡು ಅದನ್ನು ಸಮಾಜಕ್ಕೆ ನೀಡಿ ಎಂಬ […]

Continue Reading

ಗುಂಪೆ ವಲಯ ಸಭೆ

  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯ ಸಭೆಯು ದಿನಾಂಕ ೦1 – 01 – 2023 ಆದಿತ್ಯವಾರ ಗುಂಪೆ ವಲಯ ಕಛೇರಿಯಲ್ಲಿ ನಡೆಯಿತು. ಶಂಖನಾದ , ಗುರುವಂದನೆ , ಗೋಸ್ತುತಿಯೊಂದಿಗೆ ಆರಂಭವಾದ ಸಭೆಯ ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಬಿ.ಎಲ್. ಶಂಭು ಹೆಬ್ಬಾರ್ ವಹಿಸಿದರು. ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಗತಸಭೆಯ ವರದಿ ಮತ್ತು ಮಹಾಮಂಡಲ ಸುತ್ತೋಲೆಯನ್ನು ವಾಚಿಸಿ ವಿಭಾಗವಾರು ವರದಿಗಳನ್ನು ನೀಡಿದರು. ಕೋಶಾಧ್ಯಕ್ಷರಾದ ರಾಜಗೋಪಾಲ ಅಮ್ಮಂಕಲ್ಲು ಡಿಸೆಂಬರ್ ತಿಂಗಳ ವಲಯ […]

Continue Reading

ಸಮಾಜಕ್ಕೆ ಅಮೃತ ನೀಡುವ ಪಣ ತೊಡಿ: ಕಾರ್ಯಕರ್ತರಿಗೆ ರಾಘವೇಶ್ವರ ಶ್ರೀ ಸಲಹೆ

  ಗೋಕರ್ಣ: ಶ್ರೀಮಠದ ಸಮಸ್ತ ಪರಿವಾರ ಜೇನು ಗೂಡಿನಂತೆ. ಶ್ರೀಪೀಠ ರಾಣಿ ಹುಳದಂತೆ. ನಾವೆಲ್ಲ ಸೇರಿ ಜೇನು ಮಾತ್ರವಲ್ಲ; ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾನುವಾರ ಸಂಪನ್ನಗೊಂಡ ಗುರುಕುಲ ಚಾತುರ್ಮಾಸ್ಯದ ಕಾರ್ಯಕರ್ತರ ಸಮ್ಮಿಲನದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಕಾರ್ಯಕರ್ತರಲ್ಲಿ ಮಹಾಕಾಳಿಯ ಕೃಪೆ ಹಾಗೂ ಶಕ್ತಿಯ ಸಂಚಯನವಾಗಲಿ. ದೊಡ್ಡ ಸೇವೆಗೆ ಆಂಜನೇಯನ ಶಕ್ತಿ ಹಾಗೂ ವಿನಮ್ರತೆ ಎಲ್ಲ ಕಾರ್ಯಕರ್ತರಲ್ಲಿ ಬರಲಿ ಎಂದು ಆಶಿಸಿದರು. […]

Continue Reading

ಅಶೋಕೆಯಲ್ಲಿ ಗುರುಕುಲ ಚಾತುರ್ಮಾಸ್ಯ ಸಂಪನ್ನ ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್ ಶೀಘ್ರ: ರಾಘವೇಶ್ವರ ಶ್ರೀ

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಪ್ರಕಟಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ನಡೆದ ಗುರುಕುಲ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ನಮ್ಮ ಸಮಾಜದ ನಡೆ- ನುಡಿ, ಆಹಾರ- ವಿಹಾರ, ಸಂಸ್ಕøತಿ- ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಈ ವಿಶಿಷ್ಟ ಕ್ಯಾಂಪಸ್ ಇಡೀ ದೇಶಕ್ಕೆ ಆದರ್ಶವಾಗಲಿದೆ. ಈ ಅಹಿಚ್ಛತ್ರ ಮುಂದೊಂದು ದಿನ ವಿಶ್ವದ ಬೆಳಕಾಗಲಿದೆ ಎಂದು ನುಡಿದರು. […]

Continue Reading

ಮೋಹದ ಕ್ಷಯ ಮೋಕ್ಷಕ್ಕೆ ಕಾರಣ: ರಾಘವೇಶ್ವರ ಶ್ರೀ

  ಗೋಕರ್ಣ: ಮೋಹದ ಕ್ಷಯವೇ ಮೋಕ್ಷಕ್ಕೆ ಕಾರಣ. ಮೋಕ್ಷ ಬೇಕಾದರೆ ಮೋಹ ಕ್ಷಯವಾಗಬೇಕು. ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ ಅರ್ಪಿಸುವುದು ಸರ್ವಶ್ರೇಷ್ಠ ದಾನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಹತ್ತನೇ ದಾನ ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ […]

Continue Reading

ತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ

ಗೋಕರ್ಣ: ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ ನಿಶ್ಚಿಂತೆಯಿಂದ, ಧೈರ್ಯದಿಂದ ಇರುತ್ತಾನೆ. ತಪ್ಪು ಮಾಡದಿರುವುದನ್ನು ರೂಢಿಸಿಕೊಂಡಲ್ಲಿ ಸಹಜವಾಗಿಯೇ ನಿಜವಾದ ಧೈರ್ಯ ನಮಗೆ ಬರುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ […]

Continue Reading

ನಿಮ್ಮ ನಿಯಂತ್ರಣದಲ್ಲಿದ್ದರೆ ಕ್ರೋಧವೂ ದೋಷವಲ್ಲ- ರಾಘವೇಶ್ವರ ಶ್ರೀ

  ಗೋಕರ್ಣ: ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ವಿಶ್ಲೇಷಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ, ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು. ರಾಮ ಸ್ಥಾನಕ್ರೋಧ- ಜಿತಕ್ರೋಧ ಎಂಬ ಉಲ್ಲೇಖ […]

Continue Reading

ಪ್ರೀತಿ ಹೃದಯ ಬೆಸೆದರೆ ಕೋಪ ದೂರ ಮಾಡುವಂಥದ್ದು: ರಾಘವೇಶ್ವರ ಶ್ರೀ

  ಗೋಕರ್ಣ: ಪ್ರೀತಿ ಹೃದಯಗಳನ್ನು ಹತ್ತಿರ ತಂದರೆ ಕೋಪ ಹೃದಯಗಳನ್ನು ದೂರ ಮಾಡುತ್ತದೆ; ಜೀವ- ಜೀವಗಳನ್ನು, ಜೀವ- ದೇವರನ್ನೂ ದೂರ ಮಾಡುವಂಥದ್ದು. ಅರಿಷಡ್ವರ್ಗಗಳಲ್ಲಿ ಒಂದಾದ ಕ್ರೋಧ, ಮನಸ್ಸುಗಳ ಮಧ್ಯೆ, ಹೃದಯಗಳ ಮಧ್ಯೆ ಗೋಡೆ ಕಟ್ಟುವ ಕೆಲಸ ಮಾಡುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಭಾವ ಅಥವಾ ಪ್ರೀತಿ ಬೆಳೆದಂತೆ ಭಾಷೆ ಮೂಕವಾಗುತ್ತದೆ. ಭಾವ […]

Continue Reading

ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ

  ಗೋಕರ್ಣ: ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ; ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ […]

Continue Reading

ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ- ರಾಘವೇಶ್ವರ ಶ್ರೀ

ಗೋಕರ್ಣ: ಸಿಟ್ಟು ಎಂಬ ಬೆಂಕಿ ಮೊದಲು ನಮ್ಮನ್ನು ಸುಡುತ್ತದೆ; ಆ ಬಳಿಕ ಇತರರನ್ನು ಸುಡುತ್ತದೆ. ಕ್ರೋಧವೆಂಬ ಬೆಂಕಿ ನಮ್ಮ ಮನಸ್ಸು, ಬದುಕು, ಸಂಬಂಧ ಹೀಗೆ ಎಲ್ಲವನ್ನೂ ಸುಡುತ್ತದೆ. ಆದ್ದರಿಂದ ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ. ಸಿಟ್ಟನ್ನು ಗೆಲ್ಲುವ ಶಕ್ತಿಯನ್ನು ಶ್ರೀರಾಮ ನಮಗೆಲ್ಲ ಕರುಣಿಸಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಿಟ್ಟಿನ ಪರಿಣಾಮ ಎಂದೂ ಒಳ್ಳೆಯದಾಗುವುದಿಲ್ಲ. […]

Continue Reading

ಮಾತೃತ್ವ ಗೌರವಿಸುವುದು ಸಮಾಜದ ಕರ್ತವ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಮಾತೃ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಮಹಿಳೆಯಾಗಿ ಹುಟ್ಟುವಾಗಲೇ ಆಕೆ ದೇವಿಯ ಸ್ವರೂಪವಾಗಿ ಹುಟ್ಟುತ್ತಾಳೆ. ಹೆಣ್ಣನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ. ಅದು ಅತ್ಯಂತ ಪಾಪದ ಕಾರ್ಯ. ಆಕೆ ಕಣ್ಣೀರು ಇಟ್ಟರೆ ಅದು ಶಾಪ. ಮಹಿಳೆ ಸಂತೋಷವಾಗಿದ್ದರೆ ಮಾತ್ರ ಶ್ರೇಯಸ್ಸು ಎಂದು […]

Continue Reading

ಸನಾತನ ಸಂಸೃತಿಯ ಅರಿವು ಅಗತ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ಇಂದಿನ ಸಮಾಜಕ್ಕೆ ಸನಾತನ ಧರ್ಮದ ಬಗ್ಗೆ ಅಭಿರುಚಿ ಇದೆ. ಆದರೆ ಅರಿವು ಇಲ್ಲ. ಈ ಅರಿವನ್ನು ಮೂಡಿಸುವ ಪ್ರಯತ್ನವನ್ನು ‘ಆಯತನ’ ಗ್ರಂಥದ ಕನ್ನಡಾನುವಾದ ಗ್ರಂಥ ಮಾಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಆರ್.ಎಸ್.ಹೆಗಡೆಯವರ ಶತಮಾನಗಳಷ್ಟು ಹಳೆಯ ಆಯತನ ಎಂಬ ಕನ್ನಡಾನುವಾದ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. “ಸನಾತನ ಧರ್ಮದ ಬಗ್ಗೆ ಇಂದಿನ […]

Continue Reading

ತಾಳ್ಮೆಯ ಸಂಪಾದನೆ ತಪಸ್ಸಿನಿಂದ ಸಾಧ್ಯ: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆಯ ಸಂಪಾದನೆ ಆಗುವುದು ತಪಸ್ಸಿನಿಂದ; ಅತಿಯಾದ ಸುಖ, ದುಃಖವನ್ನು ತಡೆದುಕೊಳ್ಳುವ ತಾಳ್ಮೆ ದೊರಕುವುದು ತಪಸ್ಸಿನಿಂದ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬ್ರಹ್ಮಜ್ಞಾನವನ್ನು ಅನುಭವಿಸುವ ಯೋಗ್ಯತೆ ದೊರಕುವುದು ತಪಸ್ಸಿನಿಂದ ಮಾತ್ರ; ಅದನ್ನು ಅನುಭವಿಸಲು ಯೋಗಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಯೋಗ್ಯತೆ ಇದ್ದರೆ ಮಾತ್ರವೇ ಯೋಗ ಬರಬೇಕು. ಎಂದು ಮಾರ್ಮಿಕವಾಗಿ ನುಡಿದರು. ಯೋಗ್ಯತೆ ಇಲ್ಲದವನಿಗೆ ಯೋಗ […]

Continue Reading

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” […]

Continue Reading

ರಾಮಚಂದ್ರಾಪುರ ಮಠದಿಂದ ಗೋಮಯ ಕಾಗದ ಲೋಕಾರ್ಪಣೆ

  ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವಶ್ವರಭಾರತೀ ಮಹಾಸ್ವಾಮೀಜಿ ಸೋಮವಾರ ನೆರವೇರಿಸಿದರು. ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷóಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ […]

Continue Reading

ತಾಳ್ಮೆಗೆ ತಪಸ್ಸಿನ ಫಲವಿದೆ: ರಾಘವೇಶ್ವರ ಶ್ರೀ

  ಗೋಕರ್ಣ: ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು […]

Continue Reading

ತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ

ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು. […]

Continue Reading

ತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ

ಗೋಕರ್ಣ: ಮನುಸ್ಮøತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ […]

Continue Reading

ನಂಬಿಕೆ ಜೀವನಕ್ಕೆ ಅಮೃತ ಇದ್ದಂತೆ: ರಾಘವೇಶ್ವರ ಶ್ರೀ

ಗೋಕರ್ಣ: ನಂಬಿಕೆ ಎಂಬ ಭಾವ ಜೀವನಕ್ಕೆ ಅಮೃತ ಇದ್ದಂತೆ. ದೇವರು ನಮ್ಮನ್ನು ಕಾಪಾಡುವ ಬದಲು ಅಚಲವಾದ ನಂಬಿಕೆ ಅಥವಾ ಭರವಸೆಯೇ ನಮ್ಮನ್ನು ಕೋಟೆಯಾಗಿ ನಮ್ಮನ್ನು ಕಾಯುತ್ತದೆ. ಆದ್ದರಿಂದ ಎಲ್ಲರೂ ದೇವರು, ಧರ್ಮ, ಗುರುವಿನಲ್ಲಿ, ಒಳಿತಿನಲ್ಲಿ ನಂಬಿಕೆ ಇಟ್ಟುಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳು ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಎಂಟನೇ ದಿನವಾದ ಬುಧವಾರ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಬಲವಾದ ನಂಬಿಕೆ ಇದ್ದರೆ ಅದು […]

Continue Reading