ತಾಳ್ಮೆಯ ಸಂಪಾದನೆ ತಪಸ್ಸಿನಿಂದ ಸಾಧ್ಯ: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆಯ ಸಂಪಾದನೆ ಆಗುವುದು ತಪಸ್ಸಿನಿಂದ; ಅತಿಯಾದ ಸುಖ, ದುಃಖವನ್ನು ತಡೆದುಕೊಳ್ಳುವ ತಾಳ್ಮೆ ದೊರಕುವುದು ತಪಸ್ಸಿನಿಂದ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬ್ರಹ್ಮಜ್ಞಾನವನ್ನು ಅನುಭವಿಸುವ ಯೋಗ್ಯತೆ ದೊರಕುವುದು ತಪಸ್ಸಿನಿಂದ ಮಾತ್ರ; ಅದನ್ನು ಅನುಭವಿಸಲು ಯೋಗಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಯೋಗ್ಯತೆ ಇದ್ದರೆ ಮಾತ್ರವೇ ಯೋಗ ಬರಬೇಕು. ಎಂದು ಮಾರ್ಮಿಕವಾಗಿ ನುಡಿದರು. ಯೋಗ್ಯತೆ ಇಲ್ಲದವನಿಗೆ ಯೋಗ […]
Continue Reading