ಪ್ರಕೃತಿಯಿಂದ ಸಂಸ್ಕೃತಿಗೆ ಏರೋಣ, ವಿಕೃತಿಗೆ ಇಳಿಯದಿರೋಣ – ಶ್ರೀಸಂಸ್ಥಾನ

ಪ್ರಕೃತಿ ಸಂಸ್ಕೃತಿ ವಿಕೃತಿ ಮೂರು ಅರ್ಥ ಮಾಡಿಕೊಂಡಾಗ ಬದುಕು ಯಶಸ್ವಿಯಾಗುತ್ತದೆ. ಪ್ರಕೃತಿಯಿಂದ ಸಂಸ್ಕೃತಿಗೆ ಏರೋಣ, ವಿಕೃತಿಗೆ ಇಳಿಯದಿರೋಣ ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಸೇವಾ ಖಂಡದ ಕಾರ್ಯವೇಕ್ಷಣೆ ಮತ್ತು ತರಬೇತಿ ಉಪಖಂಡದ ವತಿಯಿಂದ ವೆಬಿನಾರ್ ಮೂಲಕ ನಡೆಯುವ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದ ಸಮಾರೋಪದಲ್ಲಿ ಆಶೀರ್ವಚನ ನೀಡಿದರು. ಪರಿಷ್ಕಾರಗಳಿಗೆ ಅಂತ್ಯ ಎಂಬುದಿಲ್ಲ. ಪ್ರತಿಯೊಬ್ಬರು ಪರಿಷ್ಕಾರಕ್ಕೆ ಒಳಗಾಗುವುದರಿಂದ ತರಬೇತಿಯ ಉದ್ದೇಶ ಪರಿಪೂರ್ಣವಾಗುತ್ತದೆ. ತರಬೇತಿಯಲ್ಲಿ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು. […]

Continue Reading

ವಿದ್ಯಾರ್ಥಿಗಳಿಗೆ ಪುರಸ್ಕಾರ

  ಮಂಗಳೂರು ಉತ್ತರ ವಲಯದಟಟi ಶೈಕ್ಷಣಿಕವಾಗಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಲಾಯಿತು. ನೇತ್ರಾ ಕೆ, ಸೌರಭ ಪಿ., ದಿಶಾ ಆರ್ ಹೆಗಡೆ ಅವರನ್ನು ಪುರಸ್ಕರಿಸಲಾಯಿತು. ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿಯವ ಶ್ರೀಕೃಷ್ಣ ಶರ್ಮ ಹಳೆಮನೆ, ವಲಯದ ಅಧ್ಯಕ್ಷ ಡಾ ಶಿವಶಂಕರ ಭಟ್, ಕಾರ್ಯದರ್ಶಿ ನಂದ ಕಿಶೋರ್ ಬೀರಂತಡ್ಕ, ಕೋಶಾಧಿಕಾರಿಯವ ಮುರಳೀಧರ ಅಡ್ಕೋಳಿ ಉಪಸ್ಥಿತರಿದ್ದರು. ವಲಯದ ವಿದ್ಯಾರ್ಥಿ ಪ್ರಧಾನರಾದ ದಿವಸ್ಪತಿ ಭಟ್ಟ ಕಾರ್ಯಕ್ರಮ ನಿರೂಪಿಸಿದರು.

Continue Reading

ನಂದಿನಿ ವಲಯದ ಪ್ರತಿಭಾ ಪುರಸ್ಕಾರ

ನಂದಿನಿ ವಲಯದ ಪ್ರತಿಭಾ ಪುರಸ್ಕಾರ ಸಮಾರಂಭ ವಲಯದ ಉಪಾಧ್ಯಕ್ಷರಾದ ಶ್ರೀ ಜಿ . ಎಮ್. ಭಟ್ಟರ ಮನೆಯಲ್ಲಿ ,ಅವರದೇ ಸ್ವಾಗತದೊಂದಿಗೆ  ನಡೆಯಿತು. ಎಸ್.ಎಸ್ .ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ   9 ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಅಭಿನಂದನೆ ಸಲ್ಲಿಸಲು ಸೇರಿದ್ದ ಸಭೆಯಲ್ಲಿ ಮಹಾಮಂಡಳದ ವಿದ್ಯಾರ್ಥಿವಾಹಿನೀ ಪ್ರಧಾನರಾದ ಸಂಧ್ಯಾ ಕಾನತ್ತೂರು, ಮಹಾಮಂಡಲದ ಕೋಶಾಧ್ಯಕ್ಷರಾದ ಜಿ.ಜಿ ಹೆಗಡೆಯವರು, ಬೆಂಗಳೂರು ಉತ್ತರ ಮಂಡಲದ ವಿದ್ಯಾರ್ಥಿವಾಹಿನೀ ಪ್ರಧಾನರಾದ ಕೇಶವ  ಮುರಳಿಯವರು ,ವಲಯದ ಅಧ್ಯಕ್ಷರಾದ  ಸತೀಶ ಹೆಗಡೆಯವರು,ವಲಯ ಉಪಾಧ್ಯಕ್ಷರಾದ ಜಿ.ಎಮ್ ಭಟ್ಟರು, ವಲಯ ಕಾರ್ಯದರ್ಶಿ  ಸುರೇಶ […]

Continue Reading

ಪ್ರಧಾನಮಠದಲ್ಲಿ ನವರಾತ್ರಿ ಆಚರಣೆ

  ನವರಾತ್ರಿಯ ಅಂಗವಾಗಿ ಹೊಸನಗರದ ಶ್ರೀರಾಮಚಂದ್ರಾಪುರಮಠದ ಪ್ರಧಾನಮಠದಲ್ಲಿ ವಿಶೇಷ ಪೂಜೆ ನಡೆಯಿತು. ಆಶ್ವೀಜ ಶುಕ್ಲ ಪ್ರತಿಪದಿಯಿಂದ ಪ್ರಾರಂಭವಾಗಿ ಬೆಳಿಗ್ಗೆ ಕಲಶ ಸ್ಥಾಪನೆ ಸಪ್ತಸಿತಿ ಪರಾಯಣ, ಸಾಯಂಕಾಲ ನವರಾತ್ರಿ ಪೂಜೆ ನೆರವೇರಿತು. ಅರ್ಚಕರಾಗಿ ಸತ್ಯನಾರಾಣ ಭಟ್ಟ, ವೈದಿಕರಾಗಿ ರಾಘವೇಂದ್ರ ಪ್ರಸಾದ ಅವರು ಪೂಜಾ ಕಾರ್ಯ ನೆರವೇರಿಸಿದರು.

Continue Reading

ಗುರಿಕ್ಕಾರ ಸಮಾವೇಶ

ರಾಮಚಂದ್ರಾಪುರ ಮಂಡಲ ವ್ಯಾಪ್ತಿಯ ಗುರಿಕ್ಕಾರ ಸಮಾವೇಶ ಹೊಸನಗರ ಪ್ರಧಾನಮಠದಲ್ಲಿ ನಡೆಯಿತು. ಧರ್ಮ ಕರ್ಮ ಖಂಡದ ರಾಮಕೃಷ್ಣ ಭಟ್ಟ ಕೂಟೇಲು, ಮುಳ್ಳೇರಿಯಾ ಮಂಡಲ ಗುರಿಕ್ಕಾರ ರಾದ ಸತ್ಯನಾರಾಯಣ ಮೋಗ್ರ, ಹವ್ಯಕ ಮಹಾಮಂಡಳದ ಸೇವಾ ಪ್ರಧಾನರಾದ ಎಂ. ಜಿ. ರಾಮಚಂದ್ರ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಸಾಗರ ಮಂಡಲ ಸಮನ್ವಯ ಸಭಾ ಸರಣಿಯ ಮೂರನೇ ಸಭೆ

ಶ್ರೀರಾಮಚಂದ್ರಾಪುರಮಠದ ಹವ್ಯಕ ಮಹಾಮಂಡಲ ಹಾಗೂ ಮಂಡಲ, ವಲಯಗಳ ಸಮನ್ವಯ ಸಭಾ ಸರಣಿಯ ಮೂರನೇ ಸಭೆ ಇಂದು ಸಾಗರ ಮಂಡಲದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಗುರುವಂದನೆಯ ನಂತರ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್ ಅವರ ಸಭಾಪೂಜೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ ಮಹಾಮಂಡಲ ಅಧ್ಯಕ್ಷ ಆರ್ ಎಸ್ ಹೆಗಡೆ ಹರಗಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಕನಸಿನ ಕೂಸಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಂಡಲ ಪದಾಧಿಕಾರಿಗಳಿಗೆ ಮಾಹಿತಿ‌ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ವರಿಷ್ಠಾಚಾರ್ಯ ವಿದ್ವಾನ್ […]

Continue Reading

ಸಿದ್ಧಾಪುರ ಮಂಡಲದ ಸಮನ್ವಯ ಸಭಾ ಸರಣಿಯ ಎರಡನೇ ಸಭೆ

ಶ್ರೀರಾಮಚಂದ್ರಾಪುರಮಠದ ಹವ್ಯಕ ಮಹಾಮಂಡಲ ಹಾಗೂ ಮಂಡಲ, ವಲಯಗಳ ಸಮನ್ವಯ ಸಭಾ ಸರಣಿಯ ಎರಡನೇ ಸಭೆ ಇಂದು ಸಿದ್ಧಾಪುರ ಮಂಡಲದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಗುರುವಂದನೆಯ ನಂತರ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್ ಸಭಾಪೂಜೆ ನಡೆಸಿದರು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಕನಸಿನ ಕೂಸಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಂಡಲ ಪದಾಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ವರಿಷ್ಠಾಚಾರ್ಯ ವಿದ್ವಾನ್ ಸತ್ಯನಾರಾಯಣ ಶರ್ಮಾ ಗೋಕರ್ಣ ಇವರು ಪಾರಂಪರಿಕ ಶಿಕ್ಷಣದ ಮಹತ್ವ ಹಾಗೂ ವಿಶ್ವವಿದ್ಯಾಪೀಠದಲ್ಲಿ ಆರಂಭಗೊಳ್ಳಲಿರುವ […]

Continue Reading

ಅಶೋಕಾವನದಲ್ಲಿ ಮಹಾಮಂಡಲ ಸಮನ್ವಯ ಸಭಾ ಸರಣಿಯ ಮೊದಲ ಸಭೆ

  ಶ್ರೀರಾಮಚಂದ್ರಾಪುರಮಠದ ಹವ್ಯಕ ಮಹಾಮಂಡಲ ಹಾಗೂ ಮಂಡಲ, ವಲಯಗಳ ಸಮನ್ವಯ ಸಭಾ ಸರಣಿಯ ಮೊದಲ ಸಭೆ ರಾಮಚಂದ್ರಾಪುರ ಮಂಡಲದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಕನಸಿನ ಕೂಸಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ವರಿಷ್ಠಾಚಾರ್ಯ ವಿದ್ವಾನ್ ಸತ್ಯನಾರಾಯಣ ಶರ್ಮಾ ಗೋಕರ್ಣ ಇವರು ಪಾರಂಪರಿಕ ಶಿಕ್ಷಣದ ಮಹತ್ವ ಹಾಗೂ ವಿಶ್ವವಿದ್ಯಾಪೀಠದಲ್ಲಿ ಆರಂಭಗೊಳ್ಳಲಿರುವ ಪಾರಂಪರಿಕ ಶಿಕ್ಷಣದ ಬಗ್ಗೆ ಮಾತನಾಡಿದರು. ವಿಶ್ವವಿದ್ಯಾಪೀಠದ ಆಡಳಿತಾಧಿಕಾರಿ ಸುರೇಂದ್ರ ಹೆಗಡೆ ವಿಶ್ವವಿದ್ಯಾಪೀಠದಲ್ಲಿರುವ ವಿವಿಧ ವ್ಯವಸ್ಥೆಗಳನ್ನು ಪರಿಚಯಿಸಿದರು. […]

Continue Reading

ಮಂಡಲ ವೈದಿಕ ಸಂಗಮ ಕಾರ್ಯಕ್ರಮ

ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ರಾಮಚಂದ್ರಾಪುರ ಮಂಡಲ ವೈದಿಕ ವಿಭಾಗವತಿಯಿಂದ ಮಂಡಲ ವೈದಿಕ ಸಂಗಮ ಕಾರ್ಯಕ್ರಮ ಅ.೧ರಂದು ನಡೆಯಿತು. ಧರ್ಮಕರ್ಮ ಖಂಡದ ರಾಮಕೃಷ್ಣ ಭಟ್ಟ ಕೂಟೇಲು, ಹವ್ಯಕ ಮಹಾಮಂಡಳ ಅಧ್ಯಕ್ಷ ಆರ್ ಎಸ್ ಹೆಗಡೆ ಹರಗಿ, ರಾಮಚಂದ್ರಾಪುರ ಮಂಡಲ ಅಧ್ಯಕ್ಷ ಸತ್ಯನಾರಾಯಣ ಭಾಗಿ, ಪ್ರಧಾನಮಠದ ನಿರ್ವಹಣಾ ಸಮಿತಿಯ ಅಧ್ಯಕ್ಷ ಗಣಪತಿ ಭಟ್ಟ ಜಟ್ಟಿಮನೆ, ಮಹಾಮಂಡಳ ಸೇವಾಪ್ರಧಾನರು ಮತ್ತು ರಾಮಚಂದ್ರಾಪುರ ಮಂಡಲ ಉಸ್ತುವಾರಿ ಎಂ ಜಿ ರಾಮಚಂದ್ರ, ರಾಮಚಂದ್ರಾಪುರ ಮಂಡಲ ಪ್ರಧಾನ ಗುರಿಕ್ಕಾರ ಕೌಲಕೈ ಕುಮಾರ, ರಾಮಚಂದ್ರಾಪುರ ಮಂಡಳ ವೈದಿಕ […]

Continue Reading

ಗೋವಧೆ ನಿಷೇಧ, ತಳಿ ಸಂವರ್ಧನೆಗೆ ಕಾಯ್ದೆ: ರಾಘವೇಶ್ವರ ಶ್ರೀ ಒತ್ತಾಯ

ಗೋಕರ್ಣ: ರಾಜ್ಯದಲ್ಲಿ ಸಂಪೂರ್ಣ ಗೋವಧೆ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ & ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆಯನ್ನು ನಾಳೆ (ಸೆ. 21)ಯಿಂದ ಆರಂಭವಾಗುವ ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಆಂಗೀಕರಿಸಬೇಕು ಎಂದು ರಾಮಚಂದ್ರಾಪುರಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶ್ರೀರಾಮಚಂದ್ರಾಪುರ ಮಠದಿಂದ ಚಾಲಿತವಾದ ಭಾರತೀಯ ಗೋಪರಿವಾರ ವತಿಯಿಂದ ಈಗಾಗಲೇ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ದೇಶದ ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬಹುಜನರ ಅಭಿಪ್ರಾಯಕ್ಕೆ […]

Continue Reading

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಭವ್ಯ ಭವಿಷ್ಯದ ಸೂಚಕ: ರಾಘವೇಶ್ವರ ಶ್ರೀ

ಗೋಕರ್ಣ: ಭವ್ಯ ಭವಿಷ್ಯದ ಸೂಚಕ, ದೇಶದ ದಿಶೆಯನ್ನೇ ಬದಲಾಯಿಸಬಲ್ಲ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಯ ಸಂಕಲ್ಪ ವಿದ್ಯಾ ಚಾತುರ್ಮಾಸ್ಯ ಸಂದರ್ಭದಲ್ಲಿ ಸಾಕಾರಗೊಂಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕವನದ ಆವರಣದಲ್ಲಿ ನಡೆದ 27ನೇ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ತಕ್ಷಶಿಲೆಯ ಪುನಃಸೃಷ್ಟಿ ಇದಾಗಲಿದೆ. ದೇಶದ ಭವಿಷ್ಯವನ್ನೇ ಬದಲಾಯಿಸಬಲ್ಲ ವ್ಯಕ್ತಿತ್ವಗಳು ಇಲ್ಲಿ ನಿರ್ಮಾಣವಾಗಲಿವೆ ಎಂದರು. ಶಿವನ ಆತ್ಮಲಿಂಗ ಕ್ಷೇತ್ರ, ಆಂಜನೇಯನ ಜನ್ಮಭೂಮಿ, ಶ್ರೀಶಂಕರರು ಮೂರು ಬಾರಿ ಪಾದಸ್ಪರ್ಶ ಮಾಡಿದ ಪುಣ್ಯಭೂಮಿ, ದೈವರಾತರ ಕರ್ಮಭೂಮಿಯಾದ ಗೋಕರ್ಣದ […]

Continue Reading

ರಾಘವೇಶ್ವರ ಶ್ರೀ ಸೀಮೋಲ್ಲಂಘನೆ, ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ

ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ್ಯ ಸೀಮೋಲ್ಲಂಘನ ಹಾಗೂ ಶ್ರೀಮಠದ ವತಿಯಿಂದ ನೀಡಲಾಗುವ ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ (ಸೆ. 2) ಗೋಕರ್ಣ ಬಳಿಯ ಅಶೋಕವನದಲ್ಲಿ ನಡೆಯಲಿದೆ. ಸೀಮೋಲ್ಲಂಘನೆ ಅಂಗವಾಗಿ ಗಂಗಾವಳಿ ನದಿಯನ್ನು ದಾಟಿ ಅಶೋಕೆಗೆ ಮರಳಿ ಧರ್ಮಸಭೆ ನಡೆಸುವರು. ಕೆ.ಎಸ್.ಗುರುಮೂರ್ತಿ ಶಿಕಾರಿಪುರ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ಅನುಗ್ರಹಿಸಲಿದ್ದಾರೆ ಎಂದು ಚಾತುರ್ಮಾಸ್ಯ ಸಮಿತಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಮೂಲತಃ ಶಿರವಂತೆ ಸೀಮೆ ಹೊಸಳ್ಳಿ ಗ್ರಾಮದ ಕಲ್ಸೇಮನೆ ವಾಸಿ ಸಿಬ್ಬಯ್ಯನವರ ಪುತ್ರರಾದ ಗುರುಮೂರ್ತಿಯವರು […]

Continue Reading

ಗೋನಿರ್ಭರತೆಯಿಂದ ಆತ್ಮನಿರಭರತೆ ಸಾಧ್ಯ – ಶ್ರೀಸಂಸ್ಥಾನ

ರಾಸಾಯನಿಕ ಕೃಷಿ ಒಂದಲ್ಲಒಂದು ದಿನ ರೈತನಕುತ್ತಿಗೆಗೆ ಉರುಳಾಗುತ್ತದೆ. ದೇಶೀ ಗೋವನ್ನು ಸಾಕಿಕೊಂಡುಇದ್ದವರುಯಾರೂಆತ್ಮಹತ್ಯೆ ಮಾಡಿಕೊಂಡಿಲ್ಲ. ಸ್ವಾವಲಂಬಿ ಎಂಬುದಕ್ಕೆ ಗೋವು ಬಲುದೊಡ್ಡ ನಿದರ್ಶನ. ಗೋನಿರ್ಭರತೆಯಿಂದಆತ್ಮನಿರಭರತೆ ಸಾಧ್ಯವಾಗುತ್ತದೆ.ದೇಶದ ಗಮನ ಗೋವಿನ ಕಡೆಗೆ ಹರಿಯುವಂತೆ ಮಾಡಬೇಕು.ಗೋವು ದೇಶಕ್ಕೆ ಬೆಳಕಿನ ಕಿರಣವಾಗಿದ್ದು, ತಂತ್ರಜ್ಞಾನಗಳು ಗೋಜ್ಞಾನದಕಡೆಗೆಕೊಂಡೊಯ್ಯುವಂತಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಶ್ರೀರಾಮಾಂದ್ರಾಪುರ ಮಠದ ವತಿಯಿಂದ ಎ೧ ಲಾಜಿಕ್ಸ್ ಮಂಗಳೂರು ಸಹಕಾರದಲ್ಲಿ ದೇಸೀ ಗೋವು ಆಧಾರಿತಕೃಷಿಯಕುರಿತು ದೇಸೀ ಗೋವು – ಸ್ವಾವಲಂಬಿ ಸಾವಯವ ಕೃಷಿ ವೆಬಿನಾರ್ ಸರಣಿಕಾರ್ಯಕ್ರಮದಲ್ಲಿ ಪರಮಪೂಜ್ಯರು ವಿಶೇಷ ಆಶೀರ್ವಚನ ನೀಡಿದರು. […]

Continue Reading

ಭತ್ತದ ಭಕ್ತಿ – ರಾಮ ನೈವೇದ್ಯ.

ಮಠದಲ್ಲಿ ಎಷ್ಟು ಬಗೆಯ ಸೇವೆಗಳಿದ್ದರೂ ಈ ಸೇವೆ ಅತಿವಿಶಿಷ್ಟವಾದುದು , ನೇರವಾಗಿ ಶ್ರೀರಾಮದೇವರಿಗೇ ಅದು ನೈವೇದ್ಯವಾಗಿ ಸಲ್ಲುವುದಲ್ಲವೇ ? – ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳು , ಶ್ರೀರಾಮಚಂದ್ರಾಪುರಮಠ ರಾಮನೈವೇದ್ಯ ಭತ್ತದ ಭಕ್ತಿಯಲ್ಲಿ ಮುಳ್ಳೇರಿಯ ಮಂಡಲ ಗದ್ದೆ ವ್ಯವಸಾಯವು ವಿರಳವಾಗುತ್ತಿರುವ ಈ ದಿನಗಳಲ್ಲಿ ಹಿರಿಯರು ಮತ್ತು ಅವರ ಮಾರ್ಗದರ್ಶನದಲ್ಲಿ ಮಕ್ಕಳು ರಾಮದೇವರ ನೈವೇದ್ಯಕ್ಕಾಗಿ ಭತ್ತದ ಕೃಷಿ ನಡೆಸಲು ನೇಜಿ ನೆಡುವ ಸುಂದರ ದೃಶ್ಯ ಕಂಡು ಬಂದದ್ದು ಕುಂಬಳೆ ಸೀಮೆ ಪ್ರದೇಶದಲ್ಲಿ. ಕೊರೋನಾ ಕಾರಣದಿಂದ ಎಲ್ಲೆಡೆ ಲಾಕ್ ಡೌನ್, ಪ್ರಯಾಣ, ಶಾಲೆ […]

Continue Reading

ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ

  ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ ಕಾರ್ಯ ರಾಮಚಂದ್ರಾಪುರ ಮಂಡಲದ ವೈದಿಕಪ್ರಧಾನರಾದ ಶೇಷಗಿರಿ ಭಟ್ಟ, ಲಕ್ಷ್ಮೀನಾರಾಯಣ ಭಟ್ಟ ಮಾಗಲು, ರಾಘವೇಂದ್ರ ಪ್ರಸಾದ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Continue Reading

ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ

ಅಶೋಕೆ: ಜಗತ್ತನ್ನು ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕನ್ನು ಹುಡುಕುತ್ತಿದೆಯಾದರೂ, ಸಿಗುತ್ತಿಲ್ಲ. ಈ ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂಬ ಹಾರೈಕೆ ಎಲ್ಲರದ್ದಾಗಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಅವರು ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ೨೭ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮಾ. ಶಾರ್ವರಿ ಎಂದರೆ ಕತ್ತಲು, […]

Continue Reading

5ರಿಂದ ರಾಘವೇಶ್ವರ ಶ್ರೀ ಚಾತುರ್ಮಾಸ್ಯ: ಭಕ್ತರ ಭೇಟಿಗೆ ಅವಕಾಶ ಇಲ್ಲ

ಬೆಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಈ ತಿಂಗಳ 5ರಿಂದ ಸೆಪ್ಟೆಂಬರ್ 2ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ. ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾ ಚಾತುರ್ಮಾಸ್ಯವಾಗಿ ಈ ಬಾರಿಯ ಚಾತುರ್ಮಾಸ್ಯವನ್ನು ಸರ್ಕಾರದ ನೀತಿ ನಿಯಮಗಳ ಚೌಕಟ್ಟಿನಲ್ಲಿ ಆಚರಿಸಲಾಗುತ್ತಿದೆ. ಸಮಗ್ರ ಭಾರತೀಯ ವಿದ್ಯೆಗಳ ಅಧ್ಯಯನದ ಸುಸ್ಥಾನವಾಗಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಹಾಗೂ ಅದಕ್ಕೆ ಪೀಠಿಕೆಯಾಗಿ ಮೂಡಿ ಬರುತ್ತಿರುವ ಅಪೂರ್ವ ಗುರುಕುಲಗಳ ಕಾರ್ಯ ಈ ಬಾರಿಯ ಚಾತುರ್ಮಾಸ್ಯದ […]

Continue Reading

ಕೊರೋನಾ ಸಂಕಷ್ಟಕ್ಕೆ ಶ್ರೀರಾಮಚಂದ್ರಾಪುರಮಠ ಸ್ಪಂದನೆ

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ವತಿಯಿಂದ ಗುರುವಾರ ಕೋವಿಡ್-19 ಪರಿಹಾರ ನಿಧಿಗೆ 2 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಯಿತು. ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಮತ್ತು ಸಂದೇಶ ತಲಕಾಲಕೊಪ್ಪ ಶ್ರೀಮಠದ ಪರವಾಗಿ ದೇಣಿಕೆ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಶ್ರೀಮಠದ ವಿವಿಧ ಅಂಗಸಂಸ್ಥೆಗಳು ಈಗಾಗಲೇ ವಲಸೆ ಕಾರ್ಮಿಕರು ಮತ್ತು ಬಡವರಿಗೆ ಆಹಾರ ಕಿಟ್‍ಗಳನ್ನು ಮತ್ತು ಅಗತ್ಯ ಸಾಮಗ್ರಿಗಳನ್ನು ವಿತರಿಸಿವೆ. ಶ್ರೀಮಠದ ಭಾರತೀಯ ಗೋ ಪರಿವಾರ ಟ್ರಸ್ಟ್ ವತಿಯಿಂದ ಅಧ್ಯಕ್ಷ ಆರ್.ಕೆ.ಬೆಳ್ಳಾರೆಯವರ ನೇತೃತ್ವದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ […]

Continue Reading

ಶ್ರೀ ರಾಮಚಂದ್ರಾಪುರ ಮಠದಿಂದ ಕಿಟ್ ವಿತರಣೆ

ಶ್ರೀ ರಾಮಚಂದ್ರಾಪುರ ಮಠ ಹೊಸನಗರ ವತಿಯಿಂದ ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೊಳಗಾದ ದಿನಗೂಲಿಯಿಂದ ಜೀವನ ನಡೆಸುವ ೪೮ ಕುಟುಂಬಗಳಿಗೆ ಅಕ್ಕಿ, ಬೇಳೆಕಾಳು, ಬೆಲ್ಲ, ಉಪ್ಪು ಸೇರಿದ ಕಿಟ್ ವಿತರಣೆಯನ್ನು ರಾಮಚಂದ್ರಾಪುರ ಗ್ರಾಮಪಂಚಾಯತಿ ಮುಖಾಂತರ ಶಾಸಕ ಆರಗ ಜ್ಞಾನೇಂದ್ರ ಅವರು ಮಾಡಿದರು. ನಿರ್ವಹಣಾ ಸಮಿತಿ ಅಧ್ಯಕ್ಷ ಜಟ್ಟಿಮನೆ ಗಣಪತಿ, ವ್ಯವಸ್ಥಾಪಕ ರಾಘವೇಂದ್ರಮಧ್ಯಸ್ಥ, ಮಾಧ್ಯಮ ಸಂಚಾಲಕ ಒಡ್ಡಿನಭೈಲು ವೆಂಟೇಶ, ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಸ್ವಾಮಿರಾವ್, ತಾಲೂಕು ಪಂಚಾಯಿತಿ ಸದಸ್ಯ ಚಂದ್ರಮೌಳಿ, ಗ್ರಾಮಪಂಚಾಯತಿ ಅಧ್ಯಕ್ಷರು, ಸದಸ್ಯರು, ಪಿ ಡಿ ಓ […]

Continue Reading

ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ – ಶ್ರೀಸಂಸ್ಥಾನ

ವೇದ ಮತ್ತು ದೇವ ಎನ್ನುವುದು ನಾಣ್ಯದ ಎರಡು ಮುಖಗಳಾಗಿದೆ. ದೇವನು ರಾಮನಾಗಿ ಬಂದರೆ, ವೇದವು ರಾಮಾಯಣವಾಗಿ ಬಂದಿದೆ. ರಾಮಾಯಣವೂ ಒಂದು ಅವತಾರವಾಗಿದ್ದು, ಅದು ಮರೆಯಾಗ ಅವತಾರವಾಗಿದೆ. ವೇದಗಳೆಂಬುದು ಕಠಿಣವಾಗಿದ್ದು, ರಾಮಾಯಣದಲ್ಲಿ ಕಥೆ, ರಸ, ತತ್ವ ಸೇರಿ ಜೀವನಕ್ಕೆ ಬೇಕಾದ ಸಂದೇಶವಿದೆ. ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯಪಟ್ಟಾಭಿಷೇಕ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ […]

Continue Reading