ನೂತನ ಕೋರ್ಸ್ ಆರಂಭ : ಕಲೆ – ಸಮರಕಲೆಗಳ ಕಲಿಕೆಗೆ ಅವಕಾಶ

ಸುದ್ದಿ

ನಂತೂರು: ಮಂಗಳೂರಿನ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಠಾರದಲ್ಲಿ ಸಂಗೀತ, ಭರತನಾಟ್ಯ, ಕರಾಟೆ, ಯೋಗ ತರಗತಿಗಳು ಮತ್ತು ಪೈಥಾನ್ ಕಂಪ್ಯೂಟರ್ ಕೋರ್ಸ್‌ಗಳು ಆರಂಭವಾಗಲಿದೆ.

ಫೆಬ್ರವರಿ 3ರಂದು ಬೆಳಗ್ಗೆ 10 ಗಂಟೆಗೆ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಯೋಗಗುರು ಶ್ರೀ ಗೋಪಾಲಕೃಷ್ಣ ಭಟ್ ದೇಲಂಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ರವಿ ಅಲೆವೂರಾಯ ವರ್ಕಾಡಿ, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ, ಶ್ರೀ ಸಂತೋಷ್ ಪಣಪಿಲ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *