ಮುಳ್ಳೇರಿಯ ಮಂಡಲದಲ್ಲಿ ಗುರಿಕ್ಕಾರರ ಗುರುಮಾರ್ಗ ಕಾರ್ಯಾಗಾರ

ಮುಳ್ಳೇರಿಯಾ: ಮುಳ್ಳೇರಿಯಾ ಮಂಡಲದ ನಾಲ್ಕು ಕೆಂದ್ರಗಳಲ್ಲಿ ದಿನಾಂಕ 30/11/2025 ಹಾಗೂ 01/12/2025 ರಂದು ಗುರಿಕ್ಕಾರರ ಗುರುಮಾರ್ಗ ಕಾರ್ಯಾಗಾರ ನಡೆಯಿತು. 30 ನೇ ತಾರೀಕಿನಂದು ಬೆಳಗ್ಗೆ ಪೆರಡಾಲ, ಪಳ್ಳತ್ತಡ್ಕ, ಎಣ್ಮಕಜೆ, ಚಂದ್ರಗಿರಿ ವಲಯಗಳಿಗೆ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ, ಮಧ್ಯಾಹ್ನ ನಂತರ ಕುಂಬಳೆ, ನೀರ್ಚಾಲು, ಕಾಸರಗೋಡು, ಗುಂಪೆ ವಲಯಗಳಿಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ, 1 ನೇ ತಾರೀಕಿನಂದು ಬೆಳಗ್ಗೆ ಸುಳ್ಯ, ಗುತ್ತಿಗಾರು, ಈಶ್ವರ ಮಂಗಲ ವಲಯಗಳಿಗೆ ಸರಳಿಕುಂಜದ ಧರ್ಮಾರಣ್ಯದಲ್ಲಿ ಮಧ್ಯಾಹ್ನ ನಂತರ ಕೊಡಗು ವಲಯದ ಕುಮಾರ ಕೃಪಾದಲ್ಲಿ […]

Continue Reading

ಡಾ. ಹರೀಶ ಹೆಗಡೆ ಅವರಿಗೆ 2025ರ ಪ್ರತಿಷ್ಠಿತ ಪಂ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಯುವ ಪುರಸ್ಕಾರ

  ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್ ಅಶೋಕೆಯ ಸ್ವರಾತ್ಮ ಗುರುಕುಲದ ಪ್ರಧಾನ ಪ್ರಾಚಾರ್ಯರಾದ ಡಾ. ಹರೀಶ ಹೆಗಡೆ ಅವರು 2025ರ ಪ್ರತಿಷ್ಠಿತ ಪಂ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಯುವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಯಲ್ಲಾಪುರದ ವಜ್ರಳ್ಳಿಯಲ್ಲಿ ಮಾಧ್ಯಮಿಕ ವಿದ್ಯಾಭ್ಯಾಸ ಮಾಡುವಾಗಲೇ ದತ್ತಾತ್ರೇಯ ಗಾಂವಕರರ ಬಳಿ ಸಂಗೀತದ ಓಂಕಾರ ಪ್ರಾರಂಭಿಸಿದರು. ಮುಂದೆ ಉಡುಪಿಯಲ್ಲಿ ಸಂಸ್ಕೃತ ವಿದ್ವತ್ ಜೊತೆಗೆ ಪಂ. ಮಹಾಬಲೇಶ್ವರ ಭಾಗವತರಲ್ಲಿ ಸಂಗೀತ ಅಧ್ಯಯನ ನಡೆಸಿದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿ.ಮ್ಯೂಸಿಕ್ ಮತ್ತು ಎಂ.ಮ್ಯೂಸಿಕ್ ಪದವಿಗಳನ್ನು ಅಭ್ಯಸಿಸುವಾಗ, ಪಂ. ಶ್ರೀಪಾದ ಹೆಗಡೆ […]

Continue Reading

ಚಾತುರ್ಮಾಸ್ಯ ಪ್ರಶಸ್ತಿಯ ಪರಮಾನುಗ್ರಹಕ್ಕೆ ಪಾತ್ರರಾದ ಶ್ರೀಧರಣ್ಣ ಶ್ರೀರಾಮ ಸಾಯುಜ್ಯಕ್ಕೆ

ಪಿಡಿಎಸ್ ಎಂದೇ ಖ್ಯಾತರಾದ ಸಾಗರ ಸಮೀಪದ ಭೀಮನಕೋಣೆಯ ನಮ್ಮ ಶ್ರೀಧರಣ್ಣ ಕೆಲಕಾಲದ ಅಸೌಖ್ಯದಿಂದ ಇಂದು ಬೆಳಗಿನ ಜಾವ ಕಾಲವಶರಾದರು ಎಂಬ ಸುದ್ದಿ ತೀವ್ರ ನೋವಿನದ್ದು. ನಮ್ಮ ಮಠದ ಕಾರ್ಯ ಎಂದರೆ ತನ್ನ ಸ್ವಂತ ಕಾರ್ಯಕ್ಕಿಂತ ಹೆಚ್ಚಿನದು ಎಂದು ದೃಢವಾಗಿ ನಂಬಿ ಕಾರ್ಯ ಮಾಡಿದವರು ಅವರು. ಶ್ರೀ ಮಠದ ವ್ಯವಸ್ಥೆಯಲ್ಲಿ ಹಲವಾರು ಮಹತ್ವದ ಹುದ್ದೆಗಳನ್ನು ನಿರ್ವಹಿಸಿ, ಗುರುಗಳ ಪ್ರೀತಿಗೆ ಪಾತ್ರರಾದವರು. ದೊಡ್ಡ ದೊಡ್ಡ ಮಹತ್ವದ ಕಾರ್ಯಗಳ ಸಂಪೂರ್ಣ ನೇತೃತ್ವ ಇದ್ದಾಗಲೂ, ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ತೋರಿದವರು. […]

Continue Reading

ಗ್ರಾಮರಾಜ್ಯ ಟ್ರಸ್ಟ್ ವಿಷ ಮುಕ್ತ ಅಡುಗೆ ಮನೆ – ಮುಕ್ತ ಮಾತು

ಶ್ರೀರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಗ್ರಾಮರಾಜ್ಯ ಟ್ರಸ್ಟ್ ಇದರ ಸಮಾಜ ಕ್ಷೇಮದ ಚಿಂತನೆಯ ೧೫ ಸಾರ್ಥಕ ವರ್ಷಗಳ ಸೇವೆಯ ಸಲುವಾಗಿ ಸಮಾಜದ ಜೊತೆಗೆ ಬೆರೆಯುವ , ಸಮಾಜದೊಂದಿಗೆ ಜೋಡಿಸಿಕೊಳ್ಳುವ ಅಭಿಯಾನವೇ ” ವಿಷ ಮುಕ್ತ ಅಡುಗೆ ಮನೆ – ಮುಕ್ತ ಮಾತು ” ಕಾರ್ಯಕ್ರಮ. ಇತ್ತೀಚೆಗೆ ಈ ಕಾರ್ಯಕ್ರಮಕ್ಕೆ ನಿವೃತ್ತ ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳು , ಸಾಹಿತಿಗಳು , ಕಾದಂಬರಿಕಾರರು , ಮೇಲಾಗಿ ಶ್ರೀ ಸಂಸ್ಥಾನದವರು ನಡೆಸಿಕೊಡುವ ರಾಮಕಥೆಯ ಕವಿ , ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ […]

Continue Reading

ಗ್ರಾಮರಾಜ್ಯ ಟ್ರಸ್ಟ್ ಗೆ ಗಣ್ಯ ಮಾನ್ಯರ ಭೇಟಿ

  ಶ್ರೀ ರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಂಕಲ್ಪದ ಯೋಜನೆ ಗ್ರಾಮರಾಜ್ಯ ಟ್ರಸ್ಟ್ (ರಿ). ಈ ಸಂಸ್ಥೆಗೆ ಸಾರ್ಥಕ ೧೫ ಸಂವತ್ಸರಗಳು ತುಂಬಿರುವ ಶುಭ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಮತ್ತು ತನ್ಮೂಲಕ ನೆಮ್ಮದಿ ಎನ್ನುವ ಕಲ್ಪನೆಯ ಅಡಿಯಲ್ಲಿ ವಿಷ ಮುಕ್ತ ಅಡುಗೆ ಮನೆಯ ಕಲ್ಪನೆ ಸಮಾಜಕ್ಕೆ ಸಾಧ್ಯವಾದಷ್ಟು ತಲುಪಿಸುವ ಯೋಚನೆ ನಮ್ಮದು. ಈ ನಿಟ್ಟಿನಲ್ಲಿ ಸಮಾಜದ ಕೆಲವು ಗಣ್ಯ ಮಾನ್ಯರನ್ನು ಆಹ್ವಾನಿಸಿ ಶ್ರೀಸಂಸ್ಥಾನದವರ ಪರಿಕಲ್ಪನೆ ಮತ್ತು ಸಮಾಜಕ್ಕೆ ಗಣ್ಯರ ಮೂಲಕ […]

Continue Reading

ಸೇವೆಗೆ ಫಲ ಇದೆ ಅದು ಶಾಶ್ವತ ಧನ್ಯತೆ ನೀಡಲಿದೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನಿಸ್ವಾರ್ಥವಾದ ಸೇವೆಗೆ ವಿಶೇಷ ಫಲವಿದೆ ಮತ್ತು ಅದು ಶಾಶ್ವತವಾದ ಧನ್ಯತೆಯನ್ನು ನೀಡಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.   ಸಾಗರ ಅಗ್ರಹಾರದ ಶ್ರೀರಾಘವೇಶ್ವರ ಸಭಾ ಭವನ ಸಮಿತಿ  ಏರ್ಪಡಿಸಿದ್ದ ಭವನ  ನಿರ್ಮಾಣಕ್ಕೆ ಸಹಕರಿಸಿದವರಿಗೆ ಗೌರವ ಸಮರ್ಪಣೆ ಧನ್ಯಾನುಗ್ರಹ ಸಮಾರಂಭದಲ್ಲಿ ಅವರು ದಿವ್ಯಸಾನ್ನಿಧ್ಯವಹಿಸಿ ದಾನಿಗಳಿಗೆ ಆಶೀರ್ವದಿಸಿ ನಂತರ ಆಶೀರ್ವಚನ ನೀಡಿದರು. ನಮ್ಮ ದೊಡ್ಡ ಗುರುಗಳು ಆ ಕಷ್ಟ ಕಾಲದಲ್ಲಿಯೂ ಇಲ್ಲಿಯ ನೆಲ ಖರೀದಿಸಿ ಕಾಪಾಡಿಕೊಂಡು ಬಂದಿರುವುದು ಒಂದು ಸಂಗತಿಯಾದರೆ ತಾಯಿ […]

Continue Reading

ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಇಲ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ. ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧ್ಯ ಎನ್ನುವ ಆತ್ಮವಿಶ್ವಾಸ ಇದ್ದರೆ ಆ ಕೆಲಸದಲ್ಲಿ ಸಾಧನೆ ಖಚಿತ. ಆರಂಭದಲ್ಲಿಯೇ ಸಾಧ್ಯವಾ.. ಸಾಧ್ಯವಿಲ್ಲ ಎನ್ನುವ ಅನುಮಾನಗಳು ಹುಟ್ಟಿದರೆ ಒಂದು ಹೆಜ್ಜೆಯನ್ನೂ ಮುಂದಿಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀರಾಘವೇಶ್ವರ ಭವನದಲ್ಲಿ ಕಳೆದ 15 ದಿನಗಳಿಂದ ನಡೆದ ‘ನವರಾತ್ರ ನಮಸ್ಯಾ’ ಸಮಾರೋಪ ಧಾರ್ಮಿಕ ಸಭೆಯಲ್ಲಿ ಶನಿವಾರ ಅವರು ಆಶೀರ್ವಚನ […]

Continue Reading

ಸಂಘ ಜೀವಿಯಾಗಿ ಬದುಕಿ, ಆಧ್ಯಾತ್ಮಿಕಕ್ಕೆ ಶರಣಾಗಿ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಸಾಮಾಜಿಕವಾಗಿ ಬದುಕನ್ನು ಕಂಡುಕೊಳ್ಳುವವನಿಗೆ ಒಂಟಿತನ ಎಂದೂ ಕಾಡುವುದಿಲ್ಲ ಹಾಗಾಗಿ ಸಂಘ ಜೀವಿಯಾಗಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾ ಲಲಿತೋಪಾಖ್ಯಾನ ಪ್ರವಚನದ ಸಮಾರೋಪದಲ್ಲಿ ಅವರು ನುಡಿದರು. ಪ್ರಸ್ತುತ ದಿನಮಾನದಲ್ಲಿ ವೃದ್ದರನ್ನು ಒಂಟಿಯಾಗಿ ಬಿಟ್ಟು ಹೋಗಲಾಗುತ್ತಿದೆ ಆಗೆಲ್ಲ ಅವರನ್ನು ಒಂಟಿತನ ಕಾಡುವುದು ಸಹಜ ಆದರೆ ಸಂಘ ಜೀವಿಯಾಗುವುದು ಒಂದು ಪ್ರಯೋಜನವಾದರೆ ಮೊದಲಿಂದಲೂ ಆಧ್ಯಾತ್ಮಿಕಕ್ಕೆ ಶರಣಾಗಿ ಬದುಕಿದರೆ ಕೊನೆಯಲ್ಲಿ […]

Continue Reading

ಇನ್ನೊಬ್ಬರಿಗೆ ಕಷ್ಟ ಕೊಟ್ಟು ಖುಷಿ ಪಡುವವರು ರಕ್ಕಸರು : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ: ಇನ್ನೊಬ್ಬರ ಕಷ್ಟ ನೋಡಿ ಖುಷಿ ಪಡುವ ವರ್ಗ ಒಂದಾದರೆ ಇನ್ನೊಬ್ಬರಿಗೆ ತಾವೇ ಕಷ್ಟ ಕೊಟ್ಟು ಖುಷಿ ಪಡುವ ವರ್ಗ ಇನ್ನೊಂದು ಈ ಎರಡೂ ವರ್ಗದವರು ದುರ್ಜನರು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.   ಸಾಗರದ ಶ್ರೀರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ವಿಜಯದಶಮಿ ವಿಶೇಷದೊಂದಿಗೆ ನವರಾತ್ರ ನಮಸ್ಯಾದ 11 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಕಷ್ಟ ನೋಡಿ ಖುಷಿ ಪಡುವ ವರ್ಗ ನರಾಧಮರಾದರೆ ಕಷ್ಟ ಕೊಟ್ಟು ಖುಷಿ […]

Continue Reading

ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಭಾವ ಇಲ್ಲದ ಅರ್ಚನೆಗೆ ಯಾವುದೇ ಫಲ ಇಲ್ಲ. ಪೂಜೆಯಲ್ಲಿ ದೇವರಿಗೆ ಎಷ್ಟು ವಸ್ತು ಸಮರ್ಪಿಸುತ್ತಿದ್ದೇವೆ ಎನ್ನುವುದಕ್ಕಿಂತ ಭಕ್ತಿಯಲ್ಲಿ ಭಾವಿಸಿ ಪೂಜೆ ಮಾಡುತ್ತಿದ್ದೇವೆಯೇ? ಎನ್ನುವುದು ಅತೀ ಮುಖ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 10 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಯಾರ ಕುರಿತು ಪೂಜಿಸುತ್ತೇವೋ ಆ ಕುರುಣಾಮಯಿಯ ಕುರಿತು ನಮ್ಮ ಚಿತ್ತಭಿತ್ತಿಯಲ್ಲಿ ಭಾವನೆಯೇ […]

Continue Reading

ಪ್ರಕೃತಿಗೆ ವಿರುದ್ಧವಾಗಿ ನಡೆದುಕೊಂಡರೆ ಆಪತ್ತು ಖಚಿತ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ: ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ಅವನನ್ನೇ ಸ್ಮರಿಸಬೇಕು ಇನ್ನು ಸೋತಾಗ ಹೇಗೂ ಭಗವಂತನ ನೆನಪು ಮಾಡಲೇ ಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 9 […]

Continue Reading

ದುರಹಂಕಾರ ವಿಚಿತ್ರ ರೋಗ ಅದು ವ್ಯಕ್ತಿಯ ಪತನಕ್ಕೆ ಕಾರಣ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ:  ದುರಹಂಕಾರ ಎನ್ನುವುದು ಮನುಷ್ಯ ದೇಹದೊಳಗೆ ತಿಳಿಯದೆ ಬಂದಿರ ಬಹುದಾದ ಖಾಯಿಲೆ ಇದ್ದ ರೀತಿ, ಗೊತ್ತಿರುವ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದು ನಮ್ಮ ದೇಹದೊಳಗೆ ಗೊತ್ತಿಲ್ಲದಿರುವ ಖಾಯಿಲೆ ಇದ್ದರೆ ಅದಕ್ಕೆ ಚಿಕಿತ್ಸೆ ಸಾಧ್ಯವಿಲ್ಲ ಈ ದುರಹಂಕಾರವೂ ಅದೇ ರೀತಿ ಇದಕ್ಕೆ ಚಿಕಿತ್ಸೆ ಇಲ್ಲ ಅದು ಅವನ ಪತನದಲ್ಲಿ ಪರಿವಸನವಾಗಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ೮ ನೇ […]

Continue Reading

ಕರುಣೆ – ಆಯುಧಾ ಎರಡೂ ದೇವಿಯಲ್ಲಿದೆ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ದೇವಿಯಲ್ಲಿ ಸಹಜಾನಂದದ ಪ್ರತೀಕವಾದ ಕರುಣೆಯ ಮಂದಹಾಸವೂ ಇದೆ. ವಿವಿಧ ರೀತಿಯ ಆಯುಧಗಳನ್ನು ದೇವಿ ಧರಿಸಿದ್ದಾಳೆ. ನಾವು ಭಂಡಾಸುರರಾದರೆ ದೇವಿ ಆಯುಧ ಪ್ರಯೋಗ ಮಾಡುತ್ತಾಳೆ. ನಾವು ಪುಣ್ಯದ ದಾರಿಯಲ್ಲಿ ಸಾಗಿದರೆ ದೇವಿಯ ಕರುಣೆಗೆ ಪಾತ್ರರಾಗುತ್ತೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ‘ನವರಾತ್ರ ನಮಸ್ಯಾ’ ದ ಏಳನೇ ದಿನ ಲಲಿತೋಪಾಖ್ಯಾನ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿದರು. ನಮ್ಮ ನಡೆ ನುಡಿಗಳು ನಾವು ದೇವಿಯ ಕರುಣಾಪೂರಿತ […]

Continue Reading

ನವರಾತ್ರಿ ಎಂದರೆ ಮನರಂಜನೆಯಲ್ಲ. ಅದು ದೇವಿಯ ಆರಾಧನೆ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ ಬದಲಾಗಿ ದೇವಿಯ ಆರಾಧನೆ ಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆ, […]

Continue Reading

ನಾವು ನಮ್ಮ ವಶದಲ್ಲಿದ್ದರೆ ಮಾತ್ರ ಸಾಧನೆ ಸಾಧ್ಯ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನಾವು ನಮ್ಮ ವಶದಲ್ಲಿರಬೇಕು. ಹಾಗಿದ್ದರೆ ಮಾತ್ರ ನೆಮ್ಮದಿ. ಮನಸ್ಸು, ದೇಹ ನಮ್ಮ ವಶದಲ್ಲಿಲ್ಲ ಎಂದಾದರೆ ಯಾವ ಸಾಧನೆಯನ್ನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ‘ನವರಾತ್ರ ನಮಸ್ಯಾ’ದ ಐದನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಇಂದು ಊರು, ರಾಜ್ಯ ಜಗತ್ತು ತನ್ನ ವಶವಾಗಬೇಕು ಎನ್ನುವ ಮನಸ್ಸು ಹೊಂದಿರುವ ಮನುಷ್ಯ ತನ್ನನ್ನು ತಾನು ವಶವಿಟ್ಟುಕೊಳ್ಳಲಾಗದಿರುವ ಪರಿಸ್ಥಿತಿಯಲ್ಲಿದ್ದಾನೆ. ಕ್ಷಣಕ್ಕೂ […]

Continue Reading

ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಜಗತ್ತಿನಲ್ಲಿ ಸಹನೆಗಿಂತ ಮತ್ತೊಂದು ದೊಡ್ಡ ಅಸ್ತ್ರ ಇಲ್ಲವೇ ಇಲ್ಲ. ಕಷ್ಟ ಎದುರಿಸುವ ಆತ್ಮಸ್ಥೈರ್ಯ ಸದಾ ಬೆಳೆಸಿಕೊಳ್ಳಬೇಕು, ದೇವತೆಗಳಿಗೂ ಕಷ್ಟ ಬಂದಾಗ ಅದನ್ನು ಸಹನೆಯಿಂದ ಕೇಳಿ, ಸ್ಥೈರ್ಯ ನೀಡಿದ ದೇವಿ ಸಹನೆಗೊಂದು ಆದರ್ಶ ಎಂದು ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾ 4 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ದೇವಿಯ ಸಹನೆಯನ್ನು ಬಣ್ಣಿಸುವಾಗ […]

Continue Reading

ಪೂಜೆಯ ವೇಳೆ ಒಳ ಮನಸ್ಸು ಒಳಿತನ್ನೇ ಯೋಚಿಸಬೇಕು ಕೆಡುಕಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

  ಸಾಗರ : ದೇವಿಯ ನಾಮ ಕಿವಿಯ ಮೇಲೆ ಬೀಳುವುದಕ್ಕೂ ಪುಣ್ಯಯೋಗ ಬೇಕು ಅದೃಷ್ಟವೂ ಇರಬೇಕು ಅನುಷ್ಠಾನದ ಭಾವವಿರಬೇಕು ಅಂತವರ ಬದುಕಿನಲ್ಲಿ ಆಕೆಯ ಕರುಣೆಯ ಕಿರಣ ಬೀಳಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಮೂರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ದೇವರ ಪೂಜೆ ಮಾಡುವುದು ಎಷ್ಟು ಮುಖ್ಯವೋ ಅದರಲ್ಲಿ ಏಕಾಗ್ರತೆಯೂ ಅಷ್ಟೇ ಮುಖ್ಯ ಮತ್ತು ಪ್ರಾರ್ಥನೆಯೂ ಒಳ್ಳೆಯದೇ ಇರಬೇಕು, […]

Continue Reading

ತ್ಯಾಗದಿಂದ ಮಾತ್ರವೇ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಕರ್ಮದಿಂದ ಅಲ್ಲ ತ್ಯಾಗದಿಂದ ಮಾತ್ರ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ನಮ್ಮಲ್ಲಿ ಸ್ವಾರ್ಥ ಇಲ್ಲದೆ, ನಮ್ಮಲ್ಲಿರುವ ಸಮಸ್ತವನ್ನು ಸಮರ್ಪಿಸುವ ಮನೋಭಾವ ಇದ್ದಾಗ ದೇವರ ಒಲುಮೆ ಸಾಧ್ಯ. ಅಂತಹ ಒಲುಮೆ ಪಡೆಯಬೇಕಾದರೆ ನಮ್ಮಲ್ಲಿರುವ ನಾನು ನನ್ನದು ಎನ್ನುವ ಮೋಹ ತ್ಯಜಿಸಬೇಕು. ಅದೇ ತ್ಯಾಗ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಎರಡನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ನಿತ್ಯ ಬೇರೆಬೇರೆ […]

Continue Reading

ಗ್ರಾಮರಾಜ್ಯದ ಮುಖ್ಯಸ್ಥಾನಕ್ಕೆ ಭೇಟಿ

  ಬೆಂಗಳೂರು: ಗ್ರಾಮರಾಜ್ಯದ ಮುಖ್ಯಸ್ಥಾನಕ್ಕೆ ಯೋಜನಾ ಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶ ಶರ್ಮಾ ಸಂಪ ಭೇಟಿ ನೀಡಿದರು. ‘ಗ್ರಾಮರಾಜ್ಯ’ ನಮ್ಮ ದಿನಸಿ ಮತ್ತಿತರ ಗೃಹೋಪಯೋಗಿ ವಸ್ತುಗಳನ್ನು ರೈತರು ಮತ್ತು ಉತ್ಪಾದಕರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ತಲುಪಿಸುವ ಒಂದು ಸಮಾಜೋಪಯೋಗಿ ಸಂಸ್ಥೆ. ವಾಣಿಜ್ಯದ ಆಸಕ್ತಿ ಇರದ ಸೇವಾಸಂಸ್ಥೆ. ಈ ಮೂಲಕ ಗ್ರಾಮಗಳನ್ನು ಸದೃಢಗೊಳಿಸುವ ಮಹತ್ತ್ವಾಕಾಂಕ್ಷೆಯ ಅಭಿಯಾನ. ಜೊತೆಗೆ ಗ್ರಾಹಕರ ದೈನಂದಿನವನ್ನೂ ಸ್ವಸ್ಥಗೊಳಿಸುವ ಸದುದ್ದೇಶವೂ ಇದರದ್ದು. ಬೆಂಗಳೂರಿನಲ್ಲಿ ಕೇಂದ್ರಸ್ಥಾನವಲ್ಲದೆ, ಅಸಂಖ್ಯ ಶಾಖೆಗಳನ್ನೂ ಹೊಂದಿ, ರಾಜ್ಯದ ಆಯ್ದ ಪ್ರದೇಶಗಳಲ್ಲೂ ಇದು ಕಾರ್ಯ […]

Continue Reading

ಮೂಲ ಮರೆತವರು ಅಸ್ತಿತ್ವ ಕಳೆದುಕೊಳ್ಳುತ್ತಾರೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ

ಸಾಗರ: ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ ಮಾಡುವುದಕ್ಕೆ ಮನಸ್ಸಿಲ್ಲ. ದುಃಖ ಬೇಡ, ಆದರೆ ದುಃಖದ ಮೂಲವಾದ ಪಾಪ ಮಾಡುವುದನ್ನು ನಿಲ್ಲಿಸುವುದಿಲ್ಲ. ಇದು ಬದಲಾಗಿ ಪುಣ್ಯದ ಕಾರ್ಯದಲ್ಲಿ ಮನಸ್ಸು, ದುಃಖದಿಂದ ದೂರವಿರುವ ಕಾರ್ಯ ಮಾಡುವಂತಾಗಲು ಇರುವ ದಾರಿ ಒಂದೇ. ಅದು ಜಗನ್ಮಾತೆಯಾದ ರಾಜರಾಜೇಶ್ವರಿಯ ಧ್ಯಾನ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸೋಮವಾರ ಸಾಗರದ ರಾಘವೇಶ್ವರ ಸಭಾಭವನದಲ್ಲಿ ಆರಂಭಗೊಂಡ ’ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಶ್ರೀ […]

Continue Reading