ವೈಭವದೊಂದಿಗೆ ಸಂಪನ್ನವಾದ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರಪುವೇಶ ಮೆರವಣಿಗೆ
ಸಾಗರ: ರಾಘವೇಶ್ವರ ಸಭಾ ಭವನದಲ್ಲಿ ಸೆ.೨೨ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು. ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು ೧೦ ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು ೧.೫ ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. ೨ ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ […]
Continue Reading