” ರಾಮಾಯಣ ಸಿದ್ಧ ” ಬಿ ವಿ ನಾರಾಯಣ ಭಟ್ಟರಿಗೆ ಗೌರವಾರ್ಪಣೆ.
ಶ್ರೀ ಮದ್ವಾಲ್ಮೀಕಿ ರಾಮಾಯಣದ ೧೦೮ ಪಾರಾಯಣ ಮಾಡಿ ವಿಶೇಷವಾಗಿ ಸಾಧನೆ ಮಾಡಿದ ಮುಳ್ಳೇರಿಯಾ ಮಂಡಲಾಂತರ್ಗತ ಎಣ್ಮಕಜೆ ಹವ್ಯಕ ವಲಯದ ಕಾಟುಕುಕ್ಕೆ ಘಟಕದ ಗುರಿಕ್ಕಾರರಾಗಿರುವ ಬಿ ವಿ ನಾರಾಯಣ ಭಟ್ಟರಿಗೆ ಗೌರವಾರ್ಪಣಾ ಕಾರ್ಯಕ್ರಮವು ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ನಿರ್ದೇಶನದಂತೆ ಪೆರ್ಲದ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಶ್ರೀ ಗೋವರ್ಧನ ಧರ್ಮಮಂದಿರದಲ್ಲಿ ಸೆ.೨೬ರಂದು ಸಂಪನ್ನವಾಯಿತು. ಧ್ವಜಾರೋಹಣ ಶಂಖನಾದವಾಗಿ ಗುರುವಂದನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಮಹಾ ಮಂಡಲ ಮುಷ್ಠಿ ಭಿಕ್ಷಾ ಪ್ರಧಾನರಾದ ಶ್ರೀಕೃಷ್ಣ ಭಟ್ಟ ಮೀನಗದ್ದೆ ಅವರು ಗೋಪೂಜೆ ನೆರವೇರಿಸಿದರು. ಬಳಿಕ […]
Continue Reading