ಗೋಶಾಲೆಗೆ ಸಮರ್ಪಣೆ

ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿ ವೆಂಕಟ್ರಮಣ ಕೋಡುಮಾಡು ಅವರು ವೈವಾಹಿಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಸಂದರ್ಭ ೪೦ ಕಿಲೋ ಹಿಂಡಿಯನ್ನು ಗೋಗ್ರಾಸವಾಗಿ ಸಮರ್ಪಿಸಿದರು.

Continue Reading

ಹೋಳಿಗೆ ಮುರಳಿಗಾಯನ

ಹೊಸಾಡಿನ ಅಮೃತಧಾರಾ ಗೋಶಾಲೆಯಲ್ಲಿ ಹೋಳಿ ಹಬ್ಬದ ಸೂರ್ಯಾಸ್ತದ ಸಂದರ್ಭದಲ್ಲಿ ಗೋಲಾಕೃಷ್ಣ ವಿಗ್ರಹದ ಮುಂಭಾಗದಲ್ಲಿ ಮನಕ್ಕೆ ಮುದ ನೀಡುವ ಮುರಳಿ ಗಾಯನ ಹಾಗೂ ಗೋವುಗಳ ವೀಕ್ಷಣೆ ನಡೆಯಿತು.

Continue Reading

ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ : ಅರವಿಂದ ರೈ ಅರ್ಪಿಣಿಗುತ್ತು

ನಂತೂರು ಮಾ.೮ : ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶಂಕರಶ್ರೀಸಭಾಭವನದಲ್ಲಿ ಶ್ರೀ ಭಾರತೀ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ದಿನಾಚರಣೆಯನ್ನು ಆಯೋಜಿಸಲಾಯಿತು. ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಅರ್ಪಿಣಿಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಶ್ರೀ ಭಾರತೀ ವಿದ್ಯಾ ಸಂಸ್ಥೆಯು ಸಂಸ್ಕೃತಿಯನ್ನು ಉಳಿಸುವ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣವನ್ನು ನೀಡುತ್ತದೆ. ತುಳುನಾಡಿನ ಸಂಸ್ಕೃತಿ ಅತ್ಯಂತ ಶ್ರೇಷ್ಠ. ನಾಡಿನ ಅನೇಕ ಕಡೆಗಳಿಗೆ ತೆರಳಿದಾಗ […]

Continue Reading

ಸಚಿವ ಶಿವರಾಮ ಹೆಬ್ಬಾರ್ ಗೆ ಹವ್ಯಕ ಮಹಾಸಭೆಯಿಂದ ಸನ್ಮಾನ 

ರಾಜ್ಯ ಸರ್ಕಾರದ ನೂತನ ಮಂತ್ರಿಗಳಾಗಿ ಆಯ್ಕೆಯಾಗಿ, ಕಾರ್ಮಿಕ ಮತ್ತು ಸಕ್ಕರೆ ಖಾತೆಯ ಹೊಣೆಯೊಂದಿಗೆ ಸೇವೆಸಲ್ಲಿಸುತ್ತಿರುವ ಹೆಮ್ಮೆಯ ಹವ್ಯಕ ಶ್ರೀ ಶಿವರಾಮ ಹೆಬ್ಬಾರ್ ಅವರಿಗೆ ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದ್ದು, 10.03.2020   ಮಂಗಳವಾರ ಸಂಜೆ 6.00  ಗಂಟೆಗೆ ಮಲ್ಲೇಶ್ವರದಲ್ಲಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಚಿವ ಶ್ರೀ ಶಿವರಾಮ ಹೆಬ್ಬಾರ್ ಮಹಾಸಭೆಯ ಗೌರವವನ್ನು ಸ್ವೀಕರಿಸಲಿದ್ದು, ಮಹಾಸಭೆಯ ಅಧ್ಯಕ್ಷ ಡಾ.ಗಿರಿಧರ ಕಜೆ ಕಾರ್ಯಕ್ರಮದ ಅಧ್ಯಕ್ಷತೆ […]

Continue Reading

ಶಾಸಕ ಅಂಗಾರ ಬೇಟಿ

ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಜೇಡ್ಲ ಸಂಪಾಜೆಗೆ ಸುಳ್ಯ ಶಾಸಕರಾದ ಅಂಗಾರ ಅವರು ಬೇಟಿ ನೀಡಿದರು. ಈ ಸಂದರ್ಭದಲ್ಲಿ ಗೋಶಾಲಾ ಸ್ಥಳ ದಾನಿಗಳಾದ ವೆಂಕಟ್ರಮಣಯ್ಯ ಇವರನ್ನು ಗೌರವಿಸಲಾಯಿತು. ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸುಳ್ಯ ಭಾಜಾಪ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹವ್ಯಕ ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಕೆ ಟಿ, ಗೋಶಾಲಾ ಶ್ರೀಸಂಯೋಜಕ ತಿರುಮಲೇಶ್ವರ ಪ್ರಸನ್ನ, ಭಾರತೀಯ ಗೋಪರಿವಾರದ ಅಶೋಕ ಕೆದ್ಲ, ಡಾ. ರವಿ, ಮಧುಗೋಮತಿ, ರಾಮಚಂದ್ರ ಅಜ್ಜಕಾನ ಉಪಸ್ಥಿತರಿದ್ದರು.

Continue Reading

ಇರುವ ಸ್ಥಳ ಪರಿಶುದ್ಧತೆಯನ್ನು ಸೂಚಿಸುತ್ತದೆ – ಗಿರೀಶ್ ಭರದ್ವಾಜ

ಸುಳ್ಯ: ಶ್ರದ್ಧೆಯಿಂದ ಸೇವೆ ಮಾಡಿದರೆ ಸಂಪತ್ತು ಹಾಗೂ ಕೀರ್ತಿ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಯುವ ಸಮುದಾಯ ವಿದೇಶದ ಶೋಕೀ ಜೀವನದಕ್ಕೆ ಮಾರು ಹೋಗದೆ ಸ್ವದೇಶೀ ಸಂಸ್ಕೃತಿಯನ್ನು ಪ್ರೀತಿಸುವ ಕಾರ್ಯ ಮಾಡಬೇಕು. ಮಳೆ ನೀರು ಬೀಳುವ ಸ್ಥಳದ ಮೇಲೆ ಪರಿಶುದ್ಧತೆಯನ್ನು ಪಡೆಯುತ್ತದೆ. ವಿದೇಶಿ ತಳಿಗಳನ್ನು ಬಿಟ್ಟು, ನಮ್ಮ ತಳಿಗಳನ್ನು ಸಾಕಿ ಲಾಭ ಪಡೆಯುವ ಸಮಯ ಈಗ ಬಂದಿದೆ. ದೇಶೀ ದನಗಳಷ್ಟು ನಾಜೂಕು ಪ್ರಾಣಿಗಳು ಬೇರೊಂದಿಲ್ಲ, ಅವುಗಳ ದೇಹವನ್ನು ಸವರುವುದರಿಂದ ನಮ್ಮಲ್ಲಿನ ಒತ್ತಡವನ್ನು ಕಮ್ಮಿಮಾಡಿಕೊಳ್ಳಬಹುದಾಗಿದೆ ಎಂದು ಪದ್ಮಶ್ರೀ ಗಿರೀಶ್ ಭರದ್ವಾಜ […]

Continue Reading

ವ್ಯಕ್ತಿಯ ಸಾಧನೆಗೆ ತಾಯಿಯ ಆಶೀರ್ವಾದದ ಬಲ ಬೇಕು: ಜಶೋದಾ ಬೆನ್ ಮೋದಿ

ಹೊಸನಗರ: ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವಾದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರೂ ಇದನ್ನು ಗಮನಿಸಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋದಾ ಬೆನ್ ಮೋದಿ ಹೇಳಿದರು. ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದ ಆವರಣದಲ್ಲಿರುವ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಕೋಟಿ ವಿಷ್ಣು ಸಹಸ್ರನಾಮ ಪಠಣ ಸಮರ್ಪಣೆ, ಸಹಸ್ರ ಛತ್ರ ಮೆರವಣಿಗೆ, ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಛತ್ರ ಸಮರ್ಪಣೆ, ಸೋಪಾನಮಾಲೆ ನಿರ್ಮಾಣಕ್ಕೆ ಶಿಲಾನ್ಯಾಸ, ಗೋ ಬಂಧಮುಕ್ತಿ, […]

Continue Reading

ಹೊಸನಗರ ಮಹಾನಂದಿ ಗೋಲೋಕದಲ್ಲಿ ವೈಭವದ ‘ಕೃಷ್ಣಾರ್ಪಣಮ್’ ಸಂಪನ್ನ

  ಹೊಸನಗರ: ಹೊಸನಗರದ ಮಹಾನಂದಿ ಗೋಲೋಕದಲ್ಲಿ ಇಂದು ಪ್ರತಿಷ್ಠಾ ವರ್ಧಂತಿ ಹಾಗೂ ವಿಷ್ಣು ಸಹಸ್ರನಾಮ ಪಾರಾಯಣದ ಸಮರ್ಪಣೆಯ ‘ಕೃಷ್ಣಾರ್ಪಣಮ್’ ಕಾರ್ಯಕ್ರಮಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಸಮ್ಮುಖದಲ್ಲಿ ನಡೆದವು. ಬೆಳಗ್ಗೆ 8 ಗಂಟೆಗೆ ಶ್ರೀಕರಾರ್ಚಿತ ಪೂಜೆ, 10 ಗಂಟೆಗೆ ಶ್ರೀಗುರುಭಿಕ್ಷಾ ಸೇವೆಗಳು ನಡೆದವು. 10:45ಕ್ಕೆ ಗೋಬಂಧಮುಕ್ತಿ ಗೋಶಾಲೆ ಲೋಕಾರ್ಪಣೆ ನಡೆಯಿತು. ಶ್ರೀ ದಿನೇಶ್ ಗುರೂಜಿ ಪಟ್ಟಣಗೆರೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಬಳಿಕ ಶ್ರೀಸಂಸ್ಥಾನದವರ ಸಾನಿಧ್ಯದಲ್ಲಿ ಶಿಲಾಸೋಪಾನಮಾಲೆ ಶಿಲಾನ್ಯಾಸ […]

Continue Reading

ಚಿತ್ರ ಸಮರ್ಪಣೆ

ಗೋಸ್ವರ್ಗದಲ್ಲಿ ನಡೆದ ಸರ್ವ ಸೇವಕ ಸಮಾವೇಶದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಗಳವರಿಗೆ ರವೀಂದ್ರ ಹೆಗಡೆ ಅವರು ಬಿಡಿಸಿದ ಚಿತ್ರವನ್ನು ಸಮರ್ಪಿಸಿ ಆಶೀರ್ವಾದ ಮಂತ್ರಾಕ್ಷತೆ ಪಡೆದರು.

Continue Reading

ಸೇವಕತ್ವ ದೇವತ್ವಕ್ಕೆ ಹತ್ತಿರ: ರಾಘವೇಶ್ವರ ಶ್ರೀ

ಸಿದ್ದಾಪುರ : ಸೇವಕತ್ವ ಕನಿಷ್ಟವಲ್ಲ, ಮನುಷ್ಯತ್ವಕ್ಕಿಂತ ಮೇಲಿನ ಮೆಟ್ಟಿಲು, ಅದು ಶ್ರೇಷ್ಠ. ನಾನು ನನಗಾಗಿ ಎಂದು ಸಾಮಾನ್ಯರು ಯೋಚಿಸಿದರೆ ದೇವರು ಅನವರತ ವಿಶ್ವಹಿತ ಚಿಂತನೆ ಮಾಡುತ್ತಾನೆ. ಸಮಾಜಕ್ಕಾಗಿ ಬದುಕುವವರು ದೇವರೇ ಆಗುತ್ತಾರೆ, ಸಾರ್ವಭೌಮನಾದ ಶ್ರೀರಾಮಚಂದ್ರನೂ ತನ್ನ ಬಗ್ಗೆ ಚಿಂತನೆ ನಡೆಸದೇ ಜೀವಕೋಟಿಗಳ ಕಲ್ಯಾಣಕ್ಕಾಗಿ, ಸರ್ವಭೂಮಿಯ ಹಿತಚಿಂತನೆಗಾಗಿ ಕಾರ್ಯ ಮಾಡುತ್ತಾನೆ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ಶ್ರೀರಾಮದೇವ ಭಾನ್ಕುಳಿ ಮಠ ಆವಾರದ ಗೋಸ್ವರ್ಗದಲ್ಲಿ ಹಮ್ಮಿಕೊಂಡಿದ್ದ “ಸರ್ವಸೇವಕ ಸಮಾವೇಶ”ದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಸರ್ವಭೂಮಿಯ ಹಿತಚಿಂತನೆ […]

Continue Reading

ಶ್ರೀರಾಮಚಂದ್ರಾಪುರ ಮಠದಿಂದ ವಿಶ್ವಕ್ಕೇ ಮಾದರಿ ಎನಿಸುವ ವಿಷ್ಣುಗುಪ್ತ ವಿವಿ: ರಾಘವೇಶ್ವರ ಶ್ರೀ

ಗೋಕರ್ಣ: ವಿಶ್ವಕ್ಕೇ ಮಾದರಿ ಎನಿಸುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠ ಮುಂದಾಗಿದೆ. ತಕ್ಷಶಿಲೆ ವಿವಿ ಮಾದರಿಯಲ್ಲಿ ಇದು ಬೃಹದಾಕಾರವಾಗಿ ಬೆಳೆಯಲಿದೆ ಎಂದು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶಿವರಾತ್ರಿ ಮಹೋತ್ಸವ ಅಂಗವಾಗಿ ನಡೆದ ಧರ್ಮಸಭೆಯಲ್ಲಿ ಪೂಜ್ಯರು ಆಶೀರ್ವಚನ ನೀಡಿದರು. ಇಂಥ ವಿದ್ಯಾಸಂಸ್ಥೆ ಕಟ್ಟುವ ಮುನ್ನ ಭದ್ರಕಾಳಿ ಶಿಕ್ಷಣ ಸಂಸ್ಥೆಯಂಥ ಉತ್ತಮ ಸಂಸ್ಥೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು. ಭಾರತೀಯ ಪ್ರಾಚೀನ ಶಿಕ್ಷಣ, ಕಲೆಗಳ ಪುನರುತ್ಥಾನ ನೂತನ ವಿದ್ಯಾಪೀಠದ ಉದ್ದೇಶ ಎಂದು ಹೇಳಿದರು. ಪುರಾತನ […]

Continue Reading

ವಿದ್ಯಾರ್ಥಿಗಳಿಗೆ ಭಾಷೆ, ಸಂಸ್ಕೃತಿಯ ಪರಿಚಯ ಅವಶ್ಯ : ಶಕುಂತಳಾ ಟಿ.ಶೆಟ್ಟಿ

ವಿದ್ಯಾರ್ಥಿಗಳಿಗೆ ಭಾಷೆ, ಸಂಸ್ಕೃತಿಯ ಪರಿಚಯ ಅವಶ್ಯ. ಉದಿಪು ಕಾರ್ಯಕ್ರಮದ ಮೂಲಕ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ, ತುಳುನಾಡಿನ ವಿವಿಧ ಮಜಲುಗಳನ್ನು ಉತ್ತಮವಾಗಿ ಬಿಂಬಿಸುವ ಅವಕಾಶ ಕಲ್ಪಿಸಲಾಯಿತು. ಆ ಮೂಲಕ ವಿದ್ಯಾರ್ಥಿ ಜೀವನದಲ್ಲೇ ಭಾಷೆ, ಸಂಸ್ಕೃತಿಯನ್ನು ಉಳಿಸಲು ಪ್ರೇರೇಪಣೆ ಸಿಕ್ಕಿದಂತಾಗಿದೆ. ತುಳು ಭಾಷೆಯ ಬಗ್ಗೆ ಗೌರವವಿರಬೇಕು ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹೇಳಿದರು. ಅವರು ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ […]

Continue Reading

ಬಿ. ಎಲ್. ಸಂತೋಷ್ ಬೇಟಿ

ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಬೇಟಿ ಮಾಡಿ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದರು.

Continue Reading

ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ – ಶ್ರೀಸಂಸ್ಥಾನ

ವೇದ ಮತ್ತು ದೇವ ಎನ್ನುವುದು ನಾಣ್ಯದ ಎರಡು ಮುಖಗಳಾಗಿದೆ. ದೇವನು ರಾಮನಾಗಿ ಬಂದರೆ, ವೇದವು ರಾಮಾಯಣವಾಗಿ ಬಂದಿದೆ. ರಾಮಾಯಣವೂ ಒಂದು ಅವತಾರವಾಗಿದ್ದು, ಅದು ಮರೆಯಾಗ ಅವತಾರವಾಗಿದೆ. ವೇದಗಳೆಂಬುದು ಕಠಿಣವಾಗಿದ್ದು, ರಾಮಾಯಣದಲ್ಲಿ ಕಥೆ, ರಸ, ತತ್ವ ಸೇರಿ ಜೀವನಕ್ಕೆ ಬೇಕಾದ ಸಂದೇಶವಿದೆ. ಸಂಸ್ಕೃತ ಭಾಷೆಯಲ್ಲಿರುವ ಸೊಗಸು ಬೇರಾವ ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯಪಟ್ಟಾಭಿಷೇಕ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ […]

Continue Reading

ನಿಷ್ಠೆ ಮತ್ತು ಜ್ಞಾನದ ಜತೆಗೆ ರಾಷ್ಟ್ರ ನಿರ್ಮಾಣ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರಿ

ಮಂಗಳೂರು: ಸಮಸ್ತ ಭಾರತೀಯ ವಿದ್ಯೆ- ಕಲೆಗಳ ಸಂರಕ್ಷಣೆ- ಸಂವರ್ಧನೆ- ಸಂಶೋಧನೆ ಮತ್ತು ಸಂಯೋಜನೆಯ ಮೂಲಕ ದೇಶಭಕ್ತ, ಧರ್ಮನಿಷ್ಠ, ಸಂಸ್ಕೃತಿ ಪ್ರೇಮಿ, ವಿಶ್ವಹಿತೈಷಿ ಸತ್ಪ್ರಜೆಗಳ ನಿರ್ಮಾಣದ ಮಹದುದ್ದೇಶದಿಂದ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಸ್ಥಾಪಿಸಲಾಗುತ್ತಿದೆ. ಇದು ಇತರ ವಿಶ್ವವಿದ್ಯಾಲಯಗಳಂತಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ದರ ಭಾರತೀ ಸ್ವಾಮೀಜಿ ಹೇಳಿದರು. ಮಂಗಳೂರಿನ ಪುರಭವನದಲ್ಲಿ ಭಾನುವಾರ ಆಯೋಜಿಸಲಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕುರಿತ ಬೃಹತ್ ಸಂವಾದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ಸಾಮಾನ್ಯ ವಿಶ್ವವಿದ್ಯಾಲಯಗಳು ತಲೆಮಾರಿಗೆ […]

Continue Reading

ತುಳುವನ್ನು ರಾಜ್ಯ ಭಾಷೆಯನ್ನಾಗಿಸಲು ಪ್ರಯತ್ನ : ವೇದವ್ಯಾಸ ಕಾಮತ್

ತುಳು ಸಾಹಿತ್ಯ ಆಕಾಡೆಮಿ ರೂಪಿಸಿದ ವಿವಿಧ ಯೋಜನೆಗಳಿಗೆ ಸರಕಾರ ಬೆಂಬಲ ನೀಡಲಿದೆ. ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಸರಕಾರ ಅನುಮೋದಿಸಲಿದೆ. ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಸಮಯವೂ ಹತ್ತಿರ ಬಂದಿದೆ. ತುಳು ಭಾಷೆಯ ಬೆಳವಣಿಗೆಗೆ ಸರ್ವರ ಸಹಕಾರ ಬೇಕು. ಸಂಪ್ರದಾಯಗಳನ್ನು, ತುಳು ನಾಡಿನ ಸಾಧಕ ಮಹನೀಯರ ಹೆಸರನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದರು.   ಅವರು ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ನಂತೂರು ಶ್ರೀ […]

Continue Reading

ಯಶಸ್ವಿಯಾದ ಗೋ ಸಂಧ್ಯಾ ಕಾರ್ಯಕ್ರಮ : ಸಾಕ್ಷಿಯಾದ ನಾಲ್ಕು ಸಾವಿರಕ್ಕೂ ಅಧಿಕ ಜನ

ಕುಮಟಾ: ಜಗತ್ತಿನ ಏಕೈಕ ಗೋ ಬ್ಯಾಂಕ್ ಎನಿಸಿಕೊಂಡಿರುವ ದೇಸೀ ಗೋ ತಳಿಯ ಸಂರಕ್ಷಣೆ ಹಾಗೂ ಸಂವರ್ಧನೆಗೆ ತನ್ನದೇ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಶ್ರೀ ಸಂಸ್ಥಾನದ ದಿವ್ಯ ಆಶೀರ್ವಾದದೊಂದಿಗೆ ನಡೆದ ಗೋ ಪ್ರೇಮಿಗಳ ವಾರ್ಷಿಕ ಗೋ ಸ್ನೇಹಕೂಟ ಹಾಗೂ ಬೆಳದಿಂಗಳೂಟದ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಅಮೃತಧಾರಾ ಗೋಶಾಲೆಯ ಗೌರವಾಧ್ಯಕ್ಷರಾದ ಭಾರತೀ ಪಾಟಿಲ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ಗೋಮೂತ್ರ ಅರ್ಕದಿಂದ ಮಾಡಲ್ಪಟ್ಟ ಗೋ-ನಿರ್ಮಲ (ಫಿನೈಲ್ […]

Continue Reading

ಶ್ರೀಸತ್ಯನಾರಾಯಣ ಪೂಜೆ ಕಥಾವಾಚನ

ಮಹಾನಂದಿ ಗೋಲೋಕದಲ್ಲಿ ವಿರಾಜಮಾನಸ್ಥನಾಗಿರುವ ಗೋವರ್ಧನಗಿರಿಧಾರಿ ಶ್ರೀಗೋಪಾಲಕೃಷ್ಣನ ಸನ್ನಿಧಿಯಲ್ಲಿ ಪ್ರತೀ ಹುಣ್ಣಿಮೆಯಂದು ಸಂಪನ್ನಗೊಳ್ಳುವ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಕಥಾವಾಚನ ನಡೆದಿರುತ್ತದೆ. ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಸತೀಶ್ ಭಟ್ ನೇತೃತ್ವದಲ್ಲಿ ಶ್ರೀಯುತ ಮಂಜುನಾಥ ಭಟ್ ದಂಪತಿಗಳು ಮಳಲಿ ಇವರ ಯಾಜಮಾನತ್ವದಲ್ಲಿ ಈ ಕಾರ್ಯಕ್ರಮ ಸಾಂಗವಾಗಿ ನೆರವೇರಿದೆ. ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭವಾಗಿ ೫ ಹುಣ್ಣಿಮೆ ಕಳೆಯಿತು. ಈ ಬಾರಿ ನೂರಹದಿನೈದು ಪೂಜೆಗಳು ನೆರವೇರಿವೆ. ಈ ಸಂದರ್ಭದಲ್ಲಿ ಅಧ್ಯಕ್ಷರು ಡಾ.ಸೀತಾರಾಮ್ ಪ್ರಸಾದ್, ಕಾರ್ಯದರ್ಶಿ ಕೆ.ಪಿ.ಎಡಪ್ಪಾಡಿ, ದಿವಾಕರ್ ಭಟ್, ಶಿವರಾಮ್ ಭಟ್ […]

Continue Reading

“ನಾ ಗೋವಾದರೆ”…..!!!!

ಮಾನವಾ..ಮಾನವಾ.ಓ ಮಾನವಾ..! ನೀ ಆರಿಗಾದೆಯೋ ಎಲೆ ಹುಲು ಮಾನವಾ, ‘ಗೋಸಂತತಿ’ಯ ಉಳಿಸದೇ.. ನನ್ನ ಹತ್ಯೆಯಾ ಮಾಡಿ ಸಿಗುವ ಫಲವೇನು ಮಾನವಾ..|1| ಎಳ್ಳ ಪ್ರೀತಿಯ ನೀ ಇತ್ತರೇ ಎನಗೆ ಬೆಟ್ಟದಾ ಮಮತೆಯ ನಾ ಕೊಡುವೆ ನಿನಗೆ.. ಹಳಸಿ- ಪುಂಟಿಸಿದ ಹಿಂಡಿ ಯನಿತ್ತರೆ… ‘ಅಮೃತಧಾರೆ’ಯನೇ ನಾ ಸುರಿವೆ ನಿನಗೆ.. ಅದರೂ ನಿನ್ನ ನಾಲಿಗೆಯ ಕ್ಷಣ ಚಪಲಕೆ.. ಎನ್ನ ಹತ್ಯೆಯ ಮಾಡಿ ಸಿಗುವ ಫಲವೇನು ಓ ಮಾನವಾ.|2| ಕರೆದರೆ ಹಾಲಾಗಿ,ಹೆಪ್ಪಿಸಿದರೆ ಮೊಸರಾಗಿ.. ಮಥಿಸಿದರೆ ಮಜ್ಜಿಗೆಯೊಳಗೆ ಬೆಣ್ಣೆಯಾಗಿ.. ತುಸು ಕಾಯಿಸಿದರೆ ತುಪ್ಪವಾಗಿ ನಿನ್ನ […]

Continue Reading

ಗಾಯತ್ರಿ ಮಹೋತ್ಸವ

ವರವನ್ನು ಬೇಡುವಾಗ, ಆ ವರದಿಂದ ಪ್ರಾಪ್ತವಾಗುವುದನ್ನು ಧರಿಸಲು, ನಿರ್ವಹಿಸಲು ನಾವು ಶಕ್ತರೇ ಎಂಬುದನ್ನು ಮೊದಲು ಆಲೋಚಿಸಬೇಕು. ನಮ್ಮ ಯೋಗ್ಯತೆಗೆ ಮೀರಿದ್ದನ್ನು ಕೇಳಬಾರದು. ಯೋಗ್ಯತೆಯನ್ನು ಮೀರಿದ ವರವೂ ಶಾಪವಾಗುತ್ತದೆ ಎಂದು ಶತಾವಧಾನಿ ರಾ. ಗಣೇಶ್ ಹೇಳಿದರು. ಶ್ರೀ ಅಖಿಲ ಹವ್ಯಕ ಮಹಾಸಭೆಯಲ್ಲಿ ನಡೆದ “ಗಾಯತ್ರಿ ಮಹೋತ್ಸವ” ಕಾರ್ಯಕ್ರಮದಲ್ಲಿ,  ‘ಗಾಯತ್ರಿ ತತ್ವ’ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡಿದ  ಶತಾವಧಾನಿ ರಾ. ಗಣೇಶ್, ಯಾರು ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರನ್ನು ಕಾಪಾಡುತ್ತಾಳೇ ಎಂಬ ಅರ್ಥದಲ್ಲಿ ಗಾಯತ್ರಿ ಎಂಬುದಾಗಿ ಹೇಳುತ್ತಾರೆ.  ಬೇರೆಬೇರೆ […]

Continue Reading