ವಿನೂತನ ಪುಣ್ಯಪರ್ವ “ಗಾಯತ್ರಿ ಮಹೋತ್ಸವ”

ಗಾಯತ್ರಿ ಮಂತ್ರದ ಮಹಿಮೆಯನ್ನು ತಿಳಿಸುವ ಸಲುವಾಗಿ ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ 09.02.2020 ಭಾನುವಾರ “ಗಾಯತ್ರಿ ಮಹೋತ್ಸವ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಂತ್ರಾರ್ಥವನ್ನು ತಜ್ಞ ವಿದ್ವಾಂಸರು ವಿಭಿನ್ನ ದೃಷ್ಟಿಕೋನದಿಂದ ವಿಶ್ಲೇಷಿಸುವ , ಸಂಧ್ಯಾವಂದನೆಯ ಮಹತ್ವವನ್ನು ತಿಳಿಸುವ ವಿವಿಧ ವಿಚಾರ ಗೋಷ್ಠಿಗಳು ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ಗಾಯತ್ರಿ ದೇವಿಯ ಮೆರವಣಿಗೆ, ಜ್ಯೋತಿ ಜ್ವಾಲನದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಗೌರವಾನ್ವಿತ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಹಾಗೂ ಮಾನ್ಯ ಶಾಸಕರಾದ ಶ್ರೀ ರವಿಸುಬ್ರಹ್ಮಣ್ಯ […]

Continue Reading

ಹೊಸಾಡುವಿನಲ್ಲಿ ಗೋ ಸಂಧ್ಯಾ

ಹೊಸಾಡು ಅಮೃತಧಾರಾ ಗೋಬ್ಯಾಂಕ್ ಆರವರಣದಲ್ಲಿ ಫೆ.೮ರಂದು ಸಂಜೆ ೫ಗಂಟೆಗೆ ಗೋಪ್ರೇಮಿಗಳ ವಾರ್ಷಿಕ ಗೋ ಸ್ನೇಹಕೂಟ ಹಾಗೂ ಬೆಳದಿಂಗಳೂಟ ಕಾರ್ಯಕ್ರಮ ಗೋಸಂಧ್ಯಾ ಗೋವಿನತ್ತ ನಮ್ಮ ಚಿತ್ತ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆ ಗೌರವಾಧ್ಯಕ್ಷೆ ಭಾರತಿ ಪಾಟೀಲ ವಹಿಸಲಿದ್ದು, ಕುಮಟಾ – ಹೊನ್ನಾವರ ಶಾಸಕ ದಿನಕರ ಕೆ. ಶೆಟ್ಟಿ, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಭಟ್ಕಳ – ಹಿನ್ನಾವರ ಶಾಸಕ ಸುನೀಲ ನಾಯ್ಕ, ಯಲ್ಲಾಪುರ ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ ಭಾಗವಹಿಸಲಿದ್ದಾರೆ. ಲಾಸಾ ಸೂಪರ್ ಜೆನಿರಿಕ್ಸ್ ನಿರ್ದೇಶಕ ಎಸ್. ಜಿ. […]

Continue Reading

ಭಾಗವತರಿಗೆ ಭಾವಾರ್ಪಣೆ ~ ಹೊಸ್ತೋಟ ಭಾಗವತರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಯಕ್ಷ ಋಷಿ ದಿ. ಹೊಸ್ತೋಟ ಮಂಜುನಾಥ ಭಾಗವತರಿಗೆ ಶ್ರದ್ಧಾಂಜಲಿ ಸಲ್ಲಿಸುವ “ಭಾಗವತರಿಗೆ  ಭಾವಾರ್ಪಣ” ಕಾರ್ಯಕ್ರಮ ಫೆಬ್ರವರಿ 01 ರಂದು ಮಧ್ಯಾಹ್ನ 3.30 ರಿಂದ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆಯಲಿದೆ. ಭಾಗವತರ ವ್ಯಕ್ತಿತ್ವ ದರ್ಶನ ಹಾಗೂ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಂವಾದ ಮುಂತಾದ ವಿಶೇಷ “ಗುಣ ~ ಗಾನ ~ ಗೌರವ” ಕಾರ್ಯಕ್ರಮಗಳು ನಡೆಯಲಿದ್ದು, ಎಂ.ಕೆ ಭಾಸ್ಕರ್ ರಾವ್ ಹಾಗೂ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಪ್ರೊ ಎಂ. ಎ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹವ್ಯಕ ಮಹಾಸಭೆಯ […]

Continue Reading

ವಿಶ್ವವಿದ್ಯಾ ಪೀಠ ವಿಶಿಷ್ಟ ಹಾಗೂ ವಿಭಿನ್ನ ಕಲ್ಪನೆಯ ಕೇಂದ್ರ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಗಳು

ಪೆರಾಜೆ: ಭಾರತೀಯವಾದ ಅನೇಕ ವಿದ್ಯೆಗಳಿಗೆ ಅಮೂಲಾಗ್ರ ಶಿಕ್ಷಣದ ಕೊರತೆ ಇದೆ. ಎಲ್ಲಾ ವಿಧ್ಯೆಗಳು ಒಂದೇ ಸೂರಿನಲ್ಲಿ ಸಿಗಬೇಕೆಂಬ ನಿಟ್ಟಿನಲ್ಲಿ ವಿಶ್ವವಿದ್ಯಾ ಪೀಠದ ಸ್ಥಾಪನೆ ನಡೆಸಲಾಗುತ್ತಿದೆ. ಭಾರತೀಯತೆಯ ಜತೆಗೆ ಸಮಯುಗದ ಅಗತ್ಯಗಳನ್ನು ಕಲಿಸುವ ಕಾರ್ಯ ಮಾಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ನಿಷ್ಠೆ ಹಾಗೂ ಜ್ಞಾನವನ್ನು ತುಂಬುವ ಕಾರ್ಯವಾಗಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಗಳು ಹೇಳಿದರು. ಅವರು ಶುಕ್ರವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದ ಜನಭವನದಲ್ಲಿ ಫೆ.16ರಂದು ಮಂಗಳೂರಿನಲ್ಲಿ ನಡೆಯುವ ವಿವಿ ಸಂವಾದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾರ್ಗದರ್ಶನ ಮಾಡಿದರು. ಪೂರ್ಣ […]

Continue Reading

ಗೋಸ್ವರ್ಗಕ್ಕೆ ಬೇಟಿ

ಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.

Continue Reading

ಎಲ್ಲವೂ ನಿನ್ನದು ಎಂಬ ಭಾವ ಇರಲಿ : ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ಬೆಂಗಳೂರು: ಯಾವಾಗಲೂ ನನ್ನದು ಎಂಬ ಭಾವ ಬರಬಾರದು ಎಲ್ಲವೂ ನಿನ್ನದು ಎಂಬುದು ಬರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು. ಗಿರಿನಗರ ಶ್ರೀರಾಮಾಶ್ರಮದ ಪುನರ್ವಸುಭವನದಲ್ಲಿ ಭಾನುವಾರ ನಡೆದ ಧಾರಾ-ರಾಮಾಯಣ ಕಾರಣ-ಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ನನ್ನ ನಿನ್ನ(ದೇವರ) ಮಧ್ಯೆ ಭೇದವಿಲ್ಲವಾಗಿಯೂ ಕೂಡ ಪ್ರಭು ನಾನು ನಿನ್ನವನು ಎನ್ನುವಾಗ ತುಂಬ ಸಮರ್ಪಣಾ ಭಾವ ಇದೆ ಹೊರತು ನೀನು ನನ್ನವನು ಎನ್ನುವಾಗ ನೀನು ನನ್ನವನು ಮಾತ್ರ ಎಂಬುದು ಬಂದಾಗ ಎಲ್ಲ ತಂಟೆ, ತಕರಾರುಗಳು ಶುರುವಾಗುತ್ತದೆ. […]

Continue Reading

ಪೊಸಡಿಗುಂಪೆ ಶಂಕರ ಧ್ಯಾನ ಮಂದಿರದಲ್ಲಿ ಸೇವಾ ಅರ್ಘ್ಯ ಕಾರ್ಯಕ್ರಮ

ಗುಂಪೆ: ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಪೊಸಡಿ ಗುಂಪೆಯ ಶ್ರೀ ಶಂಕರ ಧ್ಯಾನ ಮಂದಿರದ ಪರಿಸರದಲ್ಲಿ ಜ.೧೮ ರಂದು ಬಜಕೂಡ್ಳು ಅಮೃತಧಾರಾ ಗೋ ಶಾಲೆಯ ಗೋಮಾತೆಗಳಿಗಾಗಿ ’ಗೋವಿಗಾಗಿ ಮೇವು’ ಸೇವಾ ಅರ್ಘ್ಯ ಕಾರ್ಯಕ್ರಮ ನೆರವೇರಿತು. ಗುಂಪೆ ವಲಯ ಬಿಂದು-ಸಿಂಧು ಪ್ರಧಾನರಾದ ಶಂಕರನಾರಾಯಣನ್ ಗುಂಪೆ ಧ್ವಜಾರೋಹಣಗೈದರು. ಗುರುವಂದನೆ, ಗೋವಂದನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಳ್ಳೇರಿಯಾ ಮಂಡಲ ವಿದ್ಯಾರ್ಥಿ ವಾಹಿನಿ ಪ್ರಮುಖ ಗುರುಮೂರ್ತಿ ಮೇಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಹಂಪಿನಗರ: ಬೆಂಗಳೂರಿನ ಹಂಪಿನಗರದಲ್ಲಿರುವ ಶ್ರೀಭಾರತೀ ವಿದ್ಯಾಲಯದಲ್ಲಿ ಜ.೧೭ ಹಾಗೂ ೧೮ ರಂದು ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಹಾಗೂ ವಾರ್ಷಿಕೋತ್ಸವಗಳು ಬಹಳ ಸಂಭ್ರಮದಿಂದ ನೆರವೇರಿದವು. ಈ ಬಾರಿ “ನೇಚರ್ ಈಸ್ ಎ ಟೀಚರ್ ” ಎಂಬ ವಿಷಯವಸ್ತುವನ್ನು ಆಯ್ದುಕೊಳ್ಳಲಾಗಿತ್ತು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರಿಂದ ದೀಪೋಜ್ವಲನದ ಮೂಲಕ ವಾರ್ಷಿಕೋತ್ಸವದ ಕಾರ್ಯಕ್ರಮ ಆರಂಭವಾಯಿತು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ “ಮಕ್ಕಳೆಂದರೆ ಬಾಡದ ಪುಷ್ಪಗಳಾಗಬೇಕು;ಶಾಲೆಯಲ್ಲಿ ಶಿಕ್ಷಕನ ಪಾತ್ರ ಬಹಳ ಮುಖ್ಯವಾದುದು. ಮಕ್ಕಳ ಜೀವನ-ಉಜ್ಜೀವನಗಳು ಶಿಕ್ಷಕರ ಕೈಯಲ್ಲಿದೆ.ಈ ಶಾಲೆಯಲ್ಲಿರುವ ಒಂದೊಂದು ಮಗುವೂ ಅರಿವಿನ […]

Continue Reading

ಗೋಸಂಕ್ರಾಂತಿ ಆಚರಣೆ

ಮಾಲೂರು: ಬೆಂಗಳೂರು ಗಾಯಿತ್ರಿ ಪರಿವಾರದ ಸುಮಾರು ೧೫೦ ಸದಸ್ಯರನ್ನೊಳಗೊಂಡು ತಂಡ ಮಾಲೂರು ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಜೃಂಭಣೆಯಿಂದ ಗೋಸಂಕ್ರಾಂತಿ ಆಚರಿಸಿದರು. ಅನಿಲ್, ಪಟೇಲ್, ಪ್ರಫುಲ್, ಗೋಶಾಲೆ ಪರವಾಗಿ ಮಹಾಬೀರ್ ಸೋನಿಕ, ಕೃಷ್ಣ ಭಟ್, ಮುರಳೀಕೃಷ್ಣ, ಮಂಜುನಾಥ್ ಭಟ್, ಅನಂತ, ಲಕ್ಷ್ಮೀಶ ಮತ್ತಿತರರು ಹಾಜರಿದ್ದರು.

Continue Reading

ಹನುಮಾನ ಚಾಲೀಸಾ ಪಠಣ

ಮಾಲೂರು: ಬೆಂಗಳೂರು ಗಾಯತ್ರಿ ಯುವ ಪರಿವಾರದ ವತಿಯಿಂದ ಮಾಲೂರು ಆಂಜನೇಯ ದೇವಸ್ಥಾನದಲ್ಲಿ (ಶ್ರೀ ರಾಘವೇಂದ್ರ ಗೋ ಆಶ್ರಮ ಮಾಲೂರು) ಹನುಮಾನ ಚಾಲೀಸಾ ಪಠಣ ನಡೆಯಿತು.

Continue Reading

ಗೋವುಗಳಿಗೆ ಮೇವು

ಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಉಮೇಶ ಸಾಲೆ ಅವರು ತಮ್ಮ ಹಾಳೆ ತಟ್ಟೆ ತಯಾರಿಕಾ ಘಟಕದಿಂದ ಒಂದು ಫಿಕ್‌ಅಪ್ ಹಾಳೆಯ ಮೇವನ್ನು ಗೋವುಗಳಿಗಾಗಿ ಸಮರ್ಪಿಸಿದರು. ಅಜಿತ್ ಕುಂಚಿನಡ್ಕ, ಗಣರಾಜ ಕಡಪ್ಪು, ರಾಮ ಮೂಲ್ಯ ಈ ಕಾರ್ಯಕ್ಕೆ ಸಹಾಯವಿತ್ತರು.

Continue Reading

ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಕಥಾವಾಚನ

ಗೋಲೋಕ: ಹೊಸನಗರ ಮಹಾನಂದಿ ಗೋಲೋಕದಲ್ಲಿ ವಿರಾಜಮಾನನಾಗಿರುವ ಗೋವರ್ಧನಗಿರಿಧಾರಿ ಶ್ರೀಗೋಪಾಲಕೃಷ್ಣನ ಸನ್ನಿಧಾನದಲ್ಲಿ ಪ್ರತೀ ಹುಣ್ಣಿಮೆಯಂದು ನಡೆಯುವ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಕಥಾವಾಚನ ಸಂಪನ್ನಗೊಂಡಿದೆ. ಪ್ರಧಾನ ಅರ್ಚಕರಾದ ವೇದ ಮೂರ್ತಿ ಸತೀಶ್ ಭಟ್ ನೇತೃತ್ವದಲ್ಲಿ ಪ್ರಕಾಶ್ ಭಟ್ ದಂಪತಿಗಳು ಶಿವಮೊಗ್ಗ ಇವರ ಯಾಜಮಾನತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದೆ. ಸುಮಾರು ನೂರನಲವತ್ತೈದು ಪೂಜೆ ನೆರವೇರುವುದರೊಂದಿಗೆ ನೂರಾರು ಗೋಭಕ್ತರು ಭಾಗವಹಿಸಿದ್ದರು. ಕೃಷ್ಣಪ್ರಸಾದ ಎಡಪ್ಪಾಡಿ, ಜಿ.ಟಿ.ದಿವಾಕರ್, ಶಿವರಾಮ್ ಭಟ್, ಕೃಷ್ಣರಾಜ್ ಅರಸ್, ಇವರುಗಳೊಂದಿಗೆ ಗೋಲೋಕ ಸಮಿತಿಯ ಸದಸ್ಯರುಗಳು ಕೂಡ ಭಾಗವಹಿಸಿದ್ದರು. ಸಂಜೆ ೬ ಗಂಟೆಗೆ […]

Continue Reading

ಗೋವುಗಳ ದತ್ತು ಸ್ವೀಕಾರ

ಹೊಸಾಡ: ಅಮೃತಧಾರಾ ಗೋಬ್ಯಾಂಕ್‌ಗೆ ಲಾಸಾ ಸೂಪರ್ ಜೆನಿರಿಕ್ ನಿರ್ದೇಶಕ ಶಿವಾನಂದ ಜಿ. ಹೆಗಡೆ ಮತ್ತು ಸಹೋದ್ಯೋಗಿಗಳು ಆಗಮಿಸಿ ಅಭಯ ಗೋ ದತ್ತು ಯೋಜನೆಯಡಿಯಲ್ಲಿ ೫೦ ಗೋವುಗಳನ್ನು ದತ್ತು ಸ್ವೀಕರಿಸಿ ಹೊಸ ಚರಿತ್ರೆಯನ್ನು ಸೃಷ್ಟಿಸಿದರು.

Continue Reading

ಗುಂಪೆ ವಲಯದ ಶಿಷ್ಯ ಬಾಂಧವರ ಭಜನಾ ಕಾರ್ಯಕ್ರಮ

ಮುಳ್ಳೇರಿಯ: ಶ್ರೀ ಮಜ್ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಪೊಸಡಿ ಗುಂಪೆಯ ಶ್ರೀ ಶಂಕರ ಧ್ಯಾನ ಮಂದಿರದಲ್ಲಿ ಪ್ರತೀ ತಿಂಗಳ ಪರ್ವ ದಿನಗಳಲ್ಲಿ ನಡೆಸುವ ಭಜನಾ ಕಾರ್ಯಕ್ರಮವನ್ನು ಗೋ ದಿನದ ಅಂಗವಾಗಿ ಜ.೧೪ ರಂದು ಗುಂಪೆ ವಲಯದ ಶಿಷ್ಯ ಬಾಂಧವರ ನೇತೃತ್ವದಲ್ಲಿ ನಡೆಸಲಾಯಿತು. ಮುಳ್ಳೇರಿಯ ಮಂಡಲ ಸಂಘಟನಾ ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಧ್ವಜಾರೋಹಣ ಗೈದರು. ಗುರುವಂದನೆ,  ರಾಮತಾರಕ ಜಪದೊಂದಿಗೆ ಆರಂಭವಾದ ಭಜನಾ ಕಾರ್ಯಕ್ರಮವನ್ನು ಶಾಂತಿ ಮಂತ್ರದೊಂದಿಗೆ ಕೊನೆಗೊಳಿಸಲಾಯಿತು. […]

Continue Reading

ಪಶು ಆಹಾರ ಸಮರ್ಪಣೆ

ಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.

Continue Reading

ಗೋವುಗಳ ಮೇವುಗಾಗಿ ಮುಳಿಹುಲ್ಲು ಸಂಗ್ರಹ

ಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವುಗಾಗಿ ಮುಳಿಹುಲ್ಲು ಸಂಗ್ರಹಿಸುವ ಶ್ರಮದಾನವು ಜ.೧೨ ದಂದು ಪೆರ್ಲ ಪರಿಸರದಲ್ಲಿ ಜರಗಿತು. ಶ್ರಮದಾನದಲ್ಲಿ ಅಕ್ಷಯ ಯುವಕ ಮಂಡಲ ಬಿರ್ಮುಲೆಯ ಮಾಧವ, ಪ್ರಕಾಶ್ ಕಾಮತ್, ರವಿ, ರಮೇಶ, ಸದಾಶಿವ, ವಿನೋದ, ಗಂಗಾಧರ, ರೋಹಿತ್ ಕುಲಾಲ್, ರಮೇಶ ನಾಯಕ್, ಹಾಗು ಹುಲ್ಲು ಕತ್ತರಿಸುವ ಯಂತ್ರದಲ್ಲಿ ಉತ್ತರ ಪ್ರದೇಶದ ಗೌತಮ್, ಬಿಮಲ್,ಶೇರ್ ಸಿಂಗ್ ಹಾಗು ಅನಿಲ್ ಮತ್ತು ಹುಲ್ಲು ಸಾಗಾಟದಲ್ಲಿ ಶಿವಪ್ರಸಾದ್ ಟ್ರನ್ಸಪೋರ್ಟನ ರಾಮಣ್ಣ ಸಹಕರಿಸಿದರು. ಶ್ರಮದಾನದಲ್ಲಿ ಮುಳ್ಳೇರಿಯಾ ಮಹಾಮಂಡಲದ ಅಧ್ಯಕ್ಷರು, ಎಣ್ಮಕಜೆ ಹವ್ಯಕ ವಲಯದ […]

Continue Reading

ಗೋವಿನ ಜತೆಗೆ ಚಿಗುರು ತಂಡ

ಮಾಲೂರು: ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ “ಚಿಗುರು” ಗ್ರೂಪ್ ನ ೨೦ ಸದಸ್ಯರು ಗೋ ವೀಕ್ ಎಂಡ್ ಆಚರಿಸಿದರು. ಜ.೧೧ ಸಂಜೆಯಿಂದ ಜ. ೧೨ ಸಂಜೆಯವರೆಗೆ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಹರಿಸಿ, ವಿವಿಧ ಆಟೋಟ, ಚಟುವಟಿಕೆ ನಡೆಸಿ ಗೋ ಶಾಲೆಗೂ ಕಾಣಿಕೆ ಸಮರ್ಪಿಸಿದರು.

Continue Reading

ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ

ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕೃತ ಪಾಠಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಕೃತಜ್ಞತೆ’ ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಸಂದೀಪ ಭಟ್ಟ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ’ ಎಂದು ಕರೆ ನೀಡಿದರು. ಮಹಾಮಂಡಲದ ವೈದಿಕ ವಿಭಾಗದ ನೀಲಕಂಠ ಯಾಜಿ ಮಾತನಾಡಿ, ಇಂದು ನೀಡಿರುವ ವಿದ್ಯಾರ್ಥಿ ಸಹಾಯನಿಧಿ ವಿದ್ಯಾರ್ಥಿಗಳಿಗೆ ಶ್ರೀಸಂಸ್ಥಾನದವರು ಆಶೀರ್ವದಿಸಿ […]

Continue Reading

ಯಕ್ಷಕಲೆಯ ಧ್ರುವನಕ್ಷತ್ರ: ರಾಘವೇಶ್ವರ ಶ್ರೀ ಬಣ್ಣನೆ

ಬೆಂಗಳೂರು: ರಸ ಋಷಿಯೆಂದೇ ಯಕ್ಷಗಾನ ಪ್ರಿಯರಿಂದ ಕರೆಸಿಕೊಂಡಿದ್ದ ಖ್ಯಾತ ಭಾಗವತ, ಪ್ರಸಂಗಕರ್ತ ಮತ್ತು ಸೃಜನಶೀಲ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ ಅವರ ನಿಧನದಿಂದ ಈ ಅಪೂರ್ವ ಕಲೆಯ ಪ್ರಮುಖ ಕೊಂಡಿ ಕಳಚಿಕೊಂಡಂತಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹ್ವಾಸ್ವಾಮೀಜಿಯವರು ಬಣ್ಣಿಸಿದ್ದಾರೆ. ಯಕ್ಷರಂಗದ ಧ್ರುವನಕ್ಷತ್ರ ಎನಿಸಿಕೊಂಡ ಅವರ ಅಪೂರ್ವ ಸಾಧನೆ ಅಜರಾಮರ ಎಂದು ಸ್ವಾಮೀಜಿ ವಿವರಿಸಿದ್ದಾರೆ. ಯಕ್ಷಗಾನದ ಸ್ವರೂಪ, ವೈವಿಧ್ಯ ಮತ್ತು ಗುಣಮಟ್ಟದ ಬಗೆಗಿನ ವಿಶ್ವಕೋಶ ಎನಿಸಿಕೊಂಡಿದ್ದ ಭಾಗವತರು, ನೋತಿಗುಡ್ಡದ ಕುಟೀರದಲ್ಲಿ ಯಕ್ಷಕಲೆಯ ಮೌನಕ್ರಾಂತಿಗೆ […]

Continue Reading

ಗೋಪಾಲ್ಸ್ ಟೀಮ್ ಸಂಕ್ರಮಣ ಆಚರಣೆ

ಮಾಲೂರು: ಗೋಪಾಲ್ಸ್ ಟೀಮ್ನ್ ಸುಮಾರು ೫೦೦ ಜನ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಸಂಕ್ರಮಣ ಆಚರಣೆ ಮಾಡಿ ಸಂತೋಷ ಪಟ್ಟರು. ಗೋ ಶಾಲೆ ವತಿಯಿಂದ ಎತ್ತಿನಬಂಡಿ ಸವಾರಿ, ಎಲ್ಲರಿಗೂ ಊಟೋ ಪಚಾರ ಮಾಡಲಾಯಿತು. ಕಾರ್ಯಕ್ರಮಕ್ಕೆ ಗೋಶಾಲೆಯ ಎಲ್ಲರೂ ಗೋಪಾಲ್ಸ್ ತಂಡಕ್ಕೆ ಸಂಪೂರ್ಣ ಸಹಕಾರ ನೀಡಿದರು.

Continue Reading