ಸಹಸ್ರ ಗೋವುಗಳ ಸ್ವಚ್ಛಂದ ಸಾಮ್ರಾಜ್ಯಕ್ಕೆ ಚಿತ್ತೈಸಿದ ಯತಿಗಳು

ಗೋಸ್ವರ್ಗ: ಶ್ರೀಸಂಸ್ಥಾನ ಗೌಡಪಾದಾಚಾರ್ಯ ಶ್ರೀಕೈವಲ್ಯ ಮಠಾಧೀಶ ಶ್ರೀ ಶ್ರೀಮದ್ ಶಿವಾನಂದ ಸರಸ್ವತಿ ಸ್ವಾಮೀಜಿಗಳು ಗೋಸ್ವರ್ಗಕ್ಕೆ ಚಿತ್ತೈಸಿದ್ದರು. ಶ್ರೀಗಳು ಗೋಮಾತೆಗೆ ಗ್ರಾಸ ಸಮರ್ಪಿಸಿ, ಗೋಸ್ವರ್ಗದ ಸಂಪೂರ್ಣ ಮಾಹಿತಿ ಪಡೆದು ಕಾರ್ಯವೈಖರಿಯ ಕುರಿತು ಶುಭ ಹಾರೈಸಿದರು.ಯತಿಗಳೊಂದಿಗೆ ಸಿದ್ಧಾಪುರದ ಜಿ.ಎಸ್.ಬಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆಗಮಿಸಿದ ಯತಿಗಳನ್ನು ಗೋಸ್ವರ್ಗದ ವತಿಯಿಂದ ಪೂರ್ಣಕುಂಭದೊಂದಿಗೆ ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು. ಶ್ರೀರಾಮದೇವ ಸನ್ನಿಧಿಯಲ್ಲಿ ಮಂಗಳಾರತಿ ನೆರವೇರಿಸಿ, ಫಲ ಕಾಣಿಕೆಯೊಂದಿಗೆ ಗೌರವಿಸಲಾಯಿತು. ಸಮಾಜಬಾಂಧವರ ಆಶಯದಂತೆ ದೇಶೀಗೋವಿನ ಪರಿಶುದ್ಧ ತಾಜಾ ಹಾಲನ್ನು ಸಮರ್ಪಿಸಲಾಯಿತು. ಈಸಂದರ್ಭದಲ್ಲಿ ಹವ್ಯಕ ಮಹಾಮಂಡಲದ ಅಧ್ಯಕ್ಷರಾದ […]

Continue Reading

ಸಾಧನಾ ಸಂಕಲ್ಪ ಪ್ರತಿಜ್ಞಾ ಸಮಾರಂಭ ಹಾಗೂ ಕಾಗೇರಿಯವರಿಗೆ ಸನ್ಮಾನ

ಬೆಂಗಳೂರು: ಇಂದು ಜನನಾಯಕರ ಕುರಿತಾಗಿ ಬಹಳಷ್ಟು ಮಾತನಾಡಲಾಗುತ್ತದೆ. ಆದರೆ ಜನರು ಹೇಗಿರುತ್ತಾರೋ ಅದೇ ರೀತಿಯ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷರಾದ ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಮಲ್ಲೇಶ್ವರದಲ್ಲಿರುವ ಶ್ರೀಅಖಿಲ ಹವ್ಯಕ ಮಹಾಸಭೆಯಲ್ಲಿ ನ.18ರಂದು ನಡೆದ ‘ಅಭಿನಂದನಾ ಸಮಾರಂಭ’ ಹಾಗೂ ‘ಸಾಧನಾ ಸಂಕಲ್ಪ’ ಕಾರ್ಯಕ್ರಮದಲ್ಲಿ ಹವ್ಯಕ ಮಹಾಸಭೆಯ ಗೌರವವನ್ನು ಸ್ವೀಕರಿಸಿ ಮಾತನಾಡಿದ ಕಾಗೇರಿಯವರು, ಸಮಷ್ಟಿ ಸಮಾಜದ ಎಲ್ಲಾ ವಿಭಾಗಗಳಲ್ಲಿ ಹವ್ಯಕರು ತಮ್ಮ ಪ್ರತಿಭಿಯಿಂದ ನಮ್ಮ ಸಮಾಜವನ್ನು ನಾಡು ಗುರುತಿಸುವಂತೆ ಆಗಿದೆ. ಸಮಾಜದ ಸಂಘಟನೆ […]

Continue Reading

ಗೋವಿಗಾಗಿ ಮೇವು ಮೇವಿಗಾಗಿ ನಾವು

ಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳಿಗೆ ಆಹಾರದ ಪೂರೈಕೆಗಾಗಿ ಗೋವಿಗಾಗಿ ಮೇವು – ಸೇವಾ ಅರ್ಘ್ಯ – ಶ್ರಮಾದಾನ ಕಾರ್ಯವು ಮುಳ್ಳೇರಿಯಾ ಹವ್ಯಕ ಮಂಡಲದ ಕುಂಬ್ಳೆ ವಲಯದ ಕಳತ್ತೂರು ಕಾರಿಂಜ ಹಳೆಮನೆ ಗೋಪಾಲಕೃಷ್ಣ ಭಟ್ಟರ ಮನೆಯಲ್ಲಿ ಗುರುವಂದನೆ, ಗೋವಂದನೆಯೊಂದಿಗೆ ನ.೧೭ ನಡೆಯಿತು. ಮುಳ್ಳೆರಿಯ ಮಂಡಲ ವಿದ್ಯಾರ್ಥಿವಾಹಿನಿ ಪ್ರಧಾನ ಗುರುಮೂರ್ತಿ ಮೇಣ ಇವರು ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ಮಾತೃತ್ವಂ ವಿಭಾಗದ ಕಂಬಾರು ಘಟಕದ ಸಂಚಾಲಕಿ ಸುಲೋಚನಾ ಬೆಜಪ್ಪೆಯ ನೇತೃತ್ವದಲ್ಲಿ ಹುಲ್ಲಿನ ಕಟಾವು ಮಾಡುವ ಕೆಲಸ ಪ್ರಾರಂಭ ಮಾಡಲಾಯಿತು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ […]

Continue Reading

ಗೋಆಶ್ರಮದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗೋಪ್ರೇಮಿಗಳು

ಮಾಲೂರು: ಬೆಂಗಳೂರು ನಗರದ ಎಚ್. ಬಿ. ಆರ್. ಬಡಾವಣೆಯ ಸುತ್ತಮುತ್ತಲಿನ ಗೋ ಪ್ರೇಮಿಗಳು ಗೋಆಶ್ಧಾರಮಕ್ಕೆ ಬೇಟಿ ನೀಡಿ ಗೋದಾನ‌, ಗೋಪೂಜೆ ಮಾಡಿ ಗೋಗ್ರಾಸ ನೀಡಿದರು. ಗೋಪೂಜೆಯ ನೇತೃತ್ವವ್ವನ್ನು ವಹಿಸಿದ ವೇ. ಮೂ. ಗೋಪಾಲಕೃಷ್ಣ ಕಾಕತ್ಕರ್ ಅವರು ಗೋಪೂಜೆಯ ಮಹತ್ವದವನ್ನು ವಿವರಿಸಿದರು. ಗೋಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಅಧ್ಯಕ್ಷ ಡಾ. ಶ್ಯಾಮಪ್ರಸಾದ್ ಗೋಶಾಲೆಯ ಹಾಗೂ ಭಾರತೀಯ ಗೋತಳಿಗಳ ಮಾಹಿತಿಯನ್ನು ನೀಡಿದರು. ಗೌವ್ಯ ಉತ್ಪನ್ನಗಳ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು. ಗೋಪ್ರೇಮಿಗಳು ಮರೆಯಾಗುವ ದೇಸೀ ಆಟಗಳ ಪರಿಚಯ ಮಾಡುವ ಜತೆಗೆ […]

Continue Reading

ಗೋಸ್ವರ್ಗದಲಿ ಸ್ವರಸಂಗಮ

ಗೋಸ್ವರ್ಗ: ಇಮ್ಯಾಜಿನೇಷನ್ ಸ್ಟುಡಿಯೋ ಪ್ರಸ್ತುತಪಡಿಸುತ್ತಿರುವ ಸ್ವರಸಂಗಮ ಮಾಸ್ಟರ್ ಸಿಂಗರ್’ನ ಮೂರನೇ ಸುತ್ತಿನ ಕಾರ್ಯಗಾರವು ಸಿದ್ದಾಪುರದ ಗೋಸ್ವರ್ಗದಲ್ಲಿ ನಡೆಯಿತು. ಮೂರು ದಿನಗಳ ಕಾಲ ಸ್ಪರ್ಧಾಳುಗಳು ಮುಂದಿನ ಹಂತದ ಸ್ಪರ್ಧೆಯ ವಿವಿಧ ರೀತಿಯ ವಿಷಯಗಳ ಬಗ್ಗೆ ಶ್ರೀಕಾಂತ ಕಾಳಮಂಜಿ, ಜಯರಾಮ ಭಟ್ ಹೆಗ್ಗಾರಳ್ಳಿ, ದೀಪಕ್ ಸಿದ್ದಾಪುರ, ಪ್ರತೀಕ್ ಟಿ ಎಂ ಸಾಗರ, ಹಾಗೂ ವಿಶೇಷ ಅತಿಥಿಯಾಗಿ ಆಗಮಿಸಿದಂತಹ ವಿದುಷಿ ಗಾಯತ್ರಿ ರವೀಂದ್ರ ಇವರುಗಳಿಂದ ಅನೇಕ ವಿಷಯಗಳ ಬಗ್ಗೆ ಹಾಗು ಸಂಗೀತದ ಚಾಕಚಕ್ಯತೆಗಳ ಬಗ್ಗೆ ತರಬೇತಿಯನ್ನಪಡೆದರು. ಪೂಜಾ ಭುವನಿ, ಆದಿಶೇಷ ಪಡುವಗೋಡು, […]

Continue Reading

ಗೋಸ್ವರ್ಗದಲ್ಲಿ ಮಾತೃವಿಭಾಗದಿಂದ ಗೋಪೂಜೆ

ಗೋಸ್ವರ್ಗ: ಸಿದ್ದಾಪುರ ಮಂಡಲದ ಮಾತೃವಿಭಾಗದಿಂದ ಗೋ ಪೂಜೆ ಹಾಗೂ ಕಾರ್ತೀಕ ದೀಪೋತ್ಸವ ಗಜಾನನ ಶಾಸ್ತ್ರೀಗಳವರ ನೇತೃತ್ವದಲ್ಲಿ ನಡೆಯಿತು. ಮಂಡಲದ ಮಾತೃಪ್ರಧಾನೆ ರಾಧಿಕಾ ಮತ್ತು ಗಜಾನನ ಭಟ್ಟ ದಂಪತಿಗಳು ಯಜಮಾನರಾಗಿ ಸಂಕಲ್ಪದಲ್ಲಿ ಪಾಲ್ಗೊಂಡರು. ಮಾತೃವಿಭಾಗದಿಂದ ಗೋವಿಗೆ ಹಿಂಡಿ ಚೀಲವೊಂದನ್ನು ಸಮರ್ಪಿಸಿಲಾಯಿತು. ಮಂಡಲದ ಅಧ್ಯಕ್ಷರಾದ ಸುಬ್ರಾಯ ಹೆಗಡೆ, ಕಾರ್ಯದರ್ಶಿ ಹರ್ಷಾ ಭಟ್ಟ. ಸಂಘಟನಾ ಕಾರ್ಯದರ್ಶಿ ಎಮ್ ಎಮ್ ಹೆಗಡೆ ಮಗೇಗಾರ, ಹಿರಿಯ ಮಾತೆ ಚಂದ್ರಮತಿ ಆರ್ ಹರ್ಗಿ, ಹಾಗೂ ವಲಯದ ಮಾತೃಪ್ರಧಾನರು ಹಾಗೂ ಮಾತೃತ್ವಮ್ ಸಾಗರ ಪ್ರಾಂತ್ಯ ಅಧ್ಯಕ್ಷೆ ವೀಣಾ […]

Continue Reading

ದತ್ತು ಗ್ರಾಮದಲ್ಲಿ ಭತ್ತದ ಕೊಯ್ಲು

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ದತ್ತು ಸ್ವೀಕರಿಸಿದ ಕುರ್ನಾಡು ಗ್ರಾಮದ ಗದ್ದೆಯಲ್ಲಿ ಭತ್ತದ ಕೊಯ್ಲು ನೆರವೇರಿಸಿತು. ಪ್ರಾಂಶುಪಾಲ ಪ್ರೊ.ಜೀವನ್ ದಾಸ್ ಮಾರ್ಗದರ್ಶನದಲ್ಲಿ ಎನ್ನೆಸ್ಸೆಸ್ ಯೋಜನಾಧಿಕಾರಿ ಅಶೋಕ್ ಎಸ್., ಸಹಶಿಬಿರಾಧಿಕಾರಿ ಪ್ರವೀಣ್ ಪಿ. ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರತಿಮ್ ಕುಮಾರ್ ಅವರ ನೇತೃತ್ವದಲ್ಲಿ ಎನ್ನೆಸ್ಸೆಸ್ ಸ್ವಯಂಸೇವಕರು ಶುಕ್ರವಾರ ಬೆಳಗ್ಗೆ ಗದ್ದೆಗಿಳಿದು ಕೊಯ್ಲು ಆರಂಭಿಸಿದರು. ಅರ್ಧ ಎಕರೆ ಗದ್ದೆಯಲ್ಲಿ ಎಂ.ಆರ್.೪ ಮತ್ತು ಭದ್ರಾ […]

Continue Reading

ಗೋವಿಗಾಗಿ ಮೇವು ಮೇವಿಗಾಗಿ ನಾವು

ಬಜಕೂಡ್ಲು: ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿಯವರ ಸದಾಶಯದಂತೆ ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವಿಗಾಗಿ ಶ್ರೀಯುತ ಪಡಿಯಡ್ಪು ಮಹೇಶ ಭಟ್ ರ ಹಿತ್ತಲಿನ ಹಸಿ ಹುಲ್ಲನ್ನು ಕಟಾವು ಮಾಡಲಾಯಿತು. ಪೆರಡಾಲವಲಯ ಅಧ್ಯಕ್ಷ ಪದ್ಮರಾಜ ಪಟ್ಟಾಜೆ ನೇತೃತ್ವದಲ್ಲಿ ಮುಳ್ಳೇರಿಯ ಮಂಡಲದ ಗೋ ಸೇವಕರ ಸೇವಾ ಅರ್ಘ್ಯ ನಡೆಯಿತು. ಮಹೇಶ ಭಟ್ ದಂಪತಿಗಳು ಕಾರ್ಯಕರ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಿದರು. ಶ್ರೀರಾಮಚಂದ್ರಾಪುರ ಮಠದ ಕಾಮದುಘ ಕಾರ್ಯದರ್ಶಿ ಡಾ. ವೈ. ವಿ. ಕೃಷ್ಣ ಮೂರ್ತಿ, ಗೋ ವಿಜ್ಞಾನ ತಂಡದ ಸಂಯೋಜಕ ಡಾ. ಜಯಪ್ರಕಾಶ ಲಾಡ, ಬಜಕೂಡ್ಲು ಗೋಶಾಲೆ […]

Continue Reading

ಗೋವಿಗಾಗಿ ಮೇವು ಮೇವಿಗಾಗಿ ನಾವು

ಜೇಡ್ಲ: ಸುಳ್ಯ ವಲಯ ಅಧ್ಯಕ್ಷ ಈಶ್ವರಕುಮಾರ ಭಟ್ಟ ಇವರ ನೇತ್ರತ್ವದಲ್ಲಿ ಗೋಶಾಲೆಯಲ್ಲಿರುವ ಗೋವಿಗಾಗಿ ಹಸಿಹುಲ್ಲನ್ನು ಕತ್ತರಿಸಿ ಕೊಡುವ ಕಾರ್ಯಕ್ರಮ ನ.೬ರಂದು ನಡೆಯಿತು. ಸುಳ್ಯ ಹವ್ಯಕ ವಲಯ ಸೇವಾ ವಿಭಾಗದ ವತಿಯಿಂದ ಡಾ.ರಾಜಾರಾಮರವರ ಆಶ್ರಯ ಕಂಪೌಂಡ್ ವಠಾರದ (ಸರಕಾರಿ ಆಸ್ಪತ್ರೆ ಹಿಂಭಾಗ)ಲ್ಲಿ ಹಸಿಹುಲ್ಲನ್ನು ಕತ್ತರಿಸಿ ಜೇಡ್ಲ ಗೋಶಾಲೆಗೆ ಕಳುಹಿಸಿ ಕೊಡಲಾಯಿತು. ಮೂಲಮಠದ ವಿವಿಪೀಠದ ನಿರ್ದೇಶಕರಾದ ಪ್ರೊ ಶ್ರೀಕೃಷ್ಣ ಭಟ್, ಮಾತೃವಿಭಾಗದ ರಾಜರಾಜೇಶ್ವರಿ, ವಲಯ ಕಾರ್ಯದರ್ಶಿ ವಿಜಯಕೃಷ್ಣ, ಈಶ್ವರ ಭಟ್ ಸೂರ್ತಿಲ, ಸೇವಾ ವಿಭಾಗದ ನಿರ್ದೇಶಕರಾದ ಎಂ.ಪ್ರಶಾಂತ್ ಭಟ್, ವೇಣುಗೋಪಾಲ […]

Continue Reading

ಗೋಪಾಷ್ಟಮೀ ಮಹೋತ್ಸವ

ಬಜಕೂಡ್ಲು: ಭಗವಾನ್ ಗೋಪಾಲಕೃಷ್ಣನು ಗೋವರ್ಧನಗಿರಿಯನ್ನೆತ್ತಿ ಗೋಕುಲವನ್ನು ಸಂರಕ್ಷಿಸಿದ ಪರ್ವಕಾಲದಲ್ಲಿ ಗೋಪಾಷ್ಟಮೀ ಮಹೋತ್ಸವ ನ.೪ರಂದು ವೈಭವದಿಂದ ಆಚರಿಸಲಾಯಿತು. ಬೆಳಗ್ಗೆ ೭ ರಿಂದ ಗುರುವಂದನೆ, ಕಾರ್ತಿಕ ಸೋಮವಾರದ ಪ್ರಯುಕ್ತ ಶತರುದ್ರಾಭಿಷೇಕ ಶಿವಪೂಜೆ, ಗೋಪೂಜೆ, ಸ್ತೋತ್ರಪಾರಾಯಣಗಳು, ಗಣಪತಿಹವನ, ನವಗ್ರಹಶಾಂತಿ, ಗೋವರ್ಧನಹವನ, ಕಾಮಧೇನುಹವನ, ಗೋಪಾಲಕೃಷ್ಣಹವನಗಳು ನಡೆದವು. ಮಾತೆಯರು ಕುಂಕುಮಾರ್ಚನೆ, ಭಜನೆ ನಡೆಸಿದರು. ಸಾಯಂಕಾಲ ೪ ರಿಂದ ಗುರುವಂದನೆ, ದೇಶೀ ಹಸುವಿನ ಗೋಮಯನಿರ್ಮಿತ ಭವ್ಯ ಗೋವರ್ಧನ ಪರ್ವತದಲ್ಲಿ ಗೋಪಾಲಕೃಷ್ಣ ಪೂಜೆ,ಭಕ್ತರಿಂದ ವಿಷ್ಣುಸಹಸ್ರನಾಮ ಪಾರಾಯಣ, ಲಕ್ಷ್ಮೀನೃಸಿಂಹಕರಾವಲಂಬಸ್ತೋತ್ರ ಪಠಣ, ಗೋಪೂಜೆ, ತುಳಸೀಪೂಜೆ, ಭಜನೆ ಹಾಗೂ ದೀಪೋತ್ಸವ ನಡೆಯಿತು. […]

Continue Reading

ಮಹಾನಂದಿ ಗೋಲೋಕದಲ್ಲಿ ಗೋಪಾಷ್ಟಮೀ ಕಾರ್ಯಕ್ರಮ

ಗೋಲೋಕ: ಗೋವರ್ಧನಗಿರಿ ಎತ್ತಿ ಗೋಪಾಲಕರನ್ನು ಗೋಕುಲವನ್ನು ರಕ್ಷಣೆ ಮಾಡಿದ ಶ್ರೀಕೃಷ್ಣ, ಗೋವರ್ಧನಗಿರಿಧಾರಿ ಎಂಬ ಹೆಸರನ್ನು ಪಡೆದದ್ದು ಕಾರ್ತಿಕ ಶುದ್ದ ಅಷ್ಟಮೀ ದಿನದಂದು. ಗೋಪಾಷ್ಟಮೀ ಎಂದು ಕರೆಯಲ್ಪಡುವ ಆ ದಿನದ ಆಚರಣೆಯು ನ.೪ನೇ ಸೋಮವಾರ ನೆರೆವೇರಿತು. ಗೋಮಯದಿಂದ ನಿರ್ಮಿಸಿದ ಗೋವರ್ಧನಗಿರಿಯನ್ನು ಅಲಂಕರಿಸಿ ಪೂಜಿಸುವುದರೊಂದಿಗೆ ದೀಪಗಳನ್ನು ಬೆಳಗಿಸಿ ದೀಪೋತ್ಸವವನ್ನೂ ಕೂಡ ಆಚರಿಸಲಾಯಿತು. ನಿರ್ವಾಹಕರಾದ ರಾಮಚಂದ್ರ ಭಟ್, ಸುಬ್ರಹ್ಮಣ್ಯ ಭಟ್ ಹೆದ್ಲಿ, ಅಶೋಕ ಹೆಗಡೆ, ರತ್ನಾಕರ್ ಭಟ್ ಮಳಲಿ, ಸದಾಶಿವ ಆಚಾರ್ ಹಾಗೂ ಗೋಪಾಲಕರು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದರು. ವೇದಮೂರ್ತಿ ವಿದ್ವಾನ್ […]

Continue Reading

ಇಸ್ಕಾನಿನ ಶ್ರೀ ಕಮಲಲೋಚನಜೀ ಬೇಟಿ

ಗೋಸ್ವರ್ಗ: ಮುಂಬಯಿ ಜುಹೂನಲ್ಲಿರುವ ಇಸ್ಕಾನಿನ ಶ್ರೀ ಕಮಲಲೋಚನಜೀ ಅವರು ಗೋಸ್ವರ್ಗಕ್ಕೆ ಭೇಟಿ ನೀಡಿದ್ದರು. ಕೇರಳದಿಂದ ಮುಂಬಯಿಗೆ ಹೊರಟಿದ್ದವರು ಗೋಸ್ವರ್ಗದ ಬಗ್ಗೆ ಮಾಹಿತಿ ಸಿಕ್ಕು ಶಿರಸಿಯಿಂದ ಬಂದು ಗೋಸ್ವರ್ಗವನ್ನು ವೀಕ್ಷಿಸಿ ಸಂಪೂರ್ಣ ಮಾಹಿತಿಗಳನ್ನು ಪಡೆದರು. ಶ್ರೀಸಂಸ್ಥಾನದವರ ಗೋರಕ್ಷಣಾ ಕಾರ್ಯದ ಕುರಿತು, ಗೋಸ್ವರ್ಗದ ಕಲ್ಪನೆಯ ಕುರಿತು ಹರ್ಷ ವ್ಯಕ್ತಪಡಿಸಿದರು. ಗೋವು ಉಳಿದರೆ ಮಾತ್ರ ಧರ್ಮದ ಉಳಿವು ಹಾಗಾಗಿ ಗೋಸಂರಕ್ಷಣಾ ಕಾರ್ಯ ಇನ್ನೂ ಚನ್ನಾಗಿ ನಡೆಯಲಿ ಎಂದು ತಿಳಿಸಿದರು.

Continue Reading

ಗುಂಪೆ ಹವ್ಯಕ ವಲಯ ಸಭೆ

ಗುಂಪೆ: ಮುಳ್ಳೇರಿಯಾ ಮಂಡಲಾಂತರ್ಗತ ಗುಂಪೆ ವಲಯದ ಸಭೆ ಹಳಕೋಡ್ಲು ಘಟಕದ ಅಧ್ಯಕ್ಷರಾದ ಗಣಪತಿ ಭಟ್ ಅವರ ನಿವಾಸದಲ್ಲಿ ನ.೩ರಂದು ಜರಗಿತು. ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಅಮ್ಮಂಕಲ್ಲು ರಾಮ ಭಟ್ ವಹಿಸಿದರು. ವಲಯ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಗತ ಸಭೆಯ ವರದಿ, ಮಹಾಮಂಡಲ ಸುತ್ತೋಲೆ,ಮಂಡಲ ವರದಿಗಳನ್ನು ಮಂಡಿಸಿದರು. ಪದಾಧಿಕಾರಿಗಳು ವಹಿಸಿಕೊಂಡಿರುವ ಜವಾಬ್ದಾರಿಗಳನ್ನು ನಿರ್ವಹಿಸಲು ವಿಭಾಗವಾರು ಮಾಹಿತಿಗಳನ್ನು ನೀಡಿದರು. ಜನವರಿ ತಿಂಗಳಿನಲ್ಲಿ ಸಮರ್ಪಿಸುವ ದೀಪಕಾಣಿಕೆ,ಗುರುಕುಲ ಕಾಣಿಕೆ, ಹಾಗೂ ಬೆಳೆ ಸಮರ್ಪಣೆ, ಉತ್ಸವ ಕಾಣಿಕೆಯ ಬಗ್ಗೆ ಮಾಹಿತಿ ನೀಡಿ ಮಾಹಿತಿ ನೀಡಿ, […]

Continue Reading

ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

ವಿಟ್ಲ: ಮಂಗಳೂರು ಹವ್ಯಕ ಮಂಡಲಾಂತರ್ಗತ ವಿಟ್ಲ ಹವ್ಯಕ ವಲಯದ ೨೧ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪದೋನ್ನತಿ ಹೊಂದಿದ ವಲಯ ಕೋಶಾಧಿಕಾರಿಯವರ ಸಮ್ಮಾನ ಸಮಾರಂಭ ವಿಟ್ಲ ಬೊಬ್ಬೆಕೇರಿ ಸೌಪರ್ಣಿಕಾ ಸಭಾಭವನದಲ್ಲಿ ಭಾನುವಾರ ನಡೆಯಿತು. ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿ, ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಸಂಘಟನೆ ಬಲಿಷ್ಠವಾಗಿದೆ. ಪರಂಪರೆಯ ಮಹತ್ವವನ್ನು ಸಾರುತ್ತ, ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಾಧನೆಯನ್ನು ಸಮಾಜಕ್ಕೆ ಅರ್ಪಿಸಿದ ಅವರು ದೇಸೀ ಗೋಸಂರಕ್ಷಣೆಗೆ ಮಹತ್ವದ […]

Continue Reading

ಬಜಕೂಡ್ಲು ಗೋಪಾಷ್ಟಮೀ ಮಹೋತ್ಸವ

ಬಜಕೂಡ್ಲು: ಅಮೃತಧಾರಾ ಗೋಶಾಲೆಯಲ್ಲಿ ಕಾರ್ತಿಕ ಶು.ಪಾಡ್ಯದಿಂದ ಅಷ್ಟಮೀವರೆಗೆ ನಡೆಯುವ ಗೋಮಾತಾಸಪರ್ಯಾ ಹಾಗೂ ಗೋಪಾಷ್ಟಮೀ ಮಹೋತ್ಸವ ದ ಏಳನೆಯ ದಿನದ ವಿವಿಧ ಕಾರ್ಯಕ್ರಮ ನಡೆಯಿತು. ನ.೩ರ ಆದಿತ್ಯವಾರದಂದು ಸಾಯಂಕಾಲ ೪.೩೦ ರಿಂದ ಗುರುವಂದನೆ, ದೇಶೀ ಹಸುವಿನ ಗೋಮಯನಿರ್ಮಿತ ಭವ್ಯ ಗೋವರ್ಧನ ಪರ್ವತದಲ್ಲಿ ಗೋಪಾಲಕೃಷ್ಣ ಪೂಜೆ, ಭಕ್ತರಿಂದ ವಿಷ್ಣುಸಹಸ್ರನಾಮ ಪಾರಾಯಣ, ಲಕ್ಷ್ಮೀನೃಸಿಂಹಕರಾವಲಂಬಸ್ತೋತ್ರ ಪಠಣ, ಗೋಪೂಜೆ, ತುಳಸೀಪೂಜೆ ಹಾಗೂ ದೀಪೋತ್ಸವ ಗಳನ್ನು ನಡೆಸುವ ಮೂಲಕ ಸಂಪನ್ನಗೊಂಡಿತು. ವಿಶೇಷವಾಗಿ ಶ್ರೀ ಲಕ್ಷ್ಮೀನೃಸಿಂಹಪೂಜೆ ಯನ್ನು ನೆರವೇರಿಸಲಾಯಿತು. ಪೆರ್ಲದ ಶ್ರೀದುರ್ಗಾ ಬಂಟ ಮಹಿಳಾ ಭಜನಾ ಸಂಘದವರು […]

Continue Reading

ವಿದ್ಯಾರ್ಥಿವಾಹಿನಿಯಿಂದ ವಿಕಸನ ಕಾರ್ಯಾಗಾರ

ಗಿರಿನಗರ: ಶ್ರೀರಾಮಚಂದ್ರಾಪುರಮಠದ ವಿದ್ಯಾರ್ಥಿವಾಹಿನಿಯಿಂದ ಹೊನ್ನಾವರ ಹಾಗೂ ಮುಳ್ಳೇರಿಯಾ ಮಂಡಲಗಳಲ್ಲಿ ವಿಕಸನ ಕಾರ್ಯಾಗಾರಗಳು ಭಾನುವಾರ ನಡೆಯಿತು. ಹೊನ್ನಾವರ ಮಂಡಲದ ಕಾರ್ಯಾಗಾರದಲ್ಲಿ ೭೭ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮಾಲತಿ ಪ್ರಕಾಶ, ವೇ. ಮೂ. ನೀಲಕಂಠ ಯಾಜಿ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಮುಳ್ಳೇರಿಯಾ ಮಂಡಲದಲ್ಲಿ ೫೮ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಉಂಡೇಮನೆ ವಿಶ್ವೇಶ್ವರ ಭಟ್, ವಿದ್ಯಾ. ಎಸ್. ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಹೊನ್ನಾವರ ಮಂಡಲದ ಕಾರ್ಯಾಗಾರದಲ್ಲಿ ೮೦ […]

Continue Reading

ಗೋವಿಗಾಗಿ ಮೇವು ಮೇವಿಗಾಗಿ ನಾವು

ಬಜಕೂಡ್ಲು: ಅಮೃತಧಾರಾ ಗೋಶಾಲೆಯಲ್ಲಿರುವ ಗೋವುಗಳ ಉದರಂಭರಣಕ್ಕಾಗಿ ಹಸಿಹುಲ್ಲನ್ನು ಕತ್ತರಿಸಿ ಕೊಡುವ ಕಾರ್ಯಕ್ರಮ ಕಾಸರಗೋಡು ವಲಯಾಧ್ಯಕ್ಷ ಅರ್ಜುನಗುಳಿ ಶಂಕರನಾರಾಯಣ ಭಟ್ ನೇತೃತ್ವದಲ್ಲಿ ನ.೩ರಂದು ಕಾಸರಗೋಡು ವಿದ್ಯಾನಗರ ಕುರುಡರಶಾಲೆಯ ಎದುರಿರುವ ಮಹಾತ್ಮಗಾಂಧಿ ಕಾಲೊನಿ ಯಲ್ಲಿ ನಡೆಯಿತು. ಕಾಸರಗೋಡು ವಲಯಾಧ್ಯಕ್ಷ ಯಸ್ ಯನ್ ಭಟ್ ಅರ್ಜುನಗುಳಿ, ವಲಯ ಕಾರ್ಯದರ್ಶಿ ಮಹಾಲಿಂಗೇಶ್ವರ ಭಟ್ ಮನ್ನಿಪ್ಪಾಡಿ, ಸಂಘಟನಾ ಕಾರ್ಯದರ್ಶಿ ಮಹೇಶ ಮನ್ನಿಪ್ಪಾಡಿ, ಶಿಷ್ಯ ಮಾಧ್ಯಮ ಪ್ರಧಾನ ಈಶ್ವರ ಭಟ್ ಕಿಳಿಂಗಾರು, ಗುಂಪೆ ವಲಯದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ವೈ.ಕೆ.ಗೋವಿಂದ ಭಟ್, ಸುಲೋಚನಾ ಕಾರಿಂಜ […]

Continue Reading

ಗೋವಿಗೆ ಮೇವು ಪೂರೈಕೆ

ಜೇಡ್ಲ: ಜಮೀನಲ್ಲಿ ವ್ಯರ್ಥವಾಗಿ ಹೋಗುತ್ತಿದ್ದ ಹಸಿ ಹುಲ್ಲನ್ನು ಜೇಡ್ಲ ಗೋಶಾಲೆಗೆ ನೀಡುವ ಕಾರ್ಯ ಸುಳ್ಯದಲ್ಲಿ ಶನಿವಾರ ನಡೆಯಿತು. ಸುಳ್ಯದ ಡಾ.ರಾಜಾರಾಮ ಅವರು ಇಬ್ಬರು ಕಾರ್ಮಿಕರಿಂದ ಕಟಾಯಿಸಿ ೯ ಕಟ್ಟ ಹುಲ್ಲನ್ನು ಉಬರಡ್ಕ ಸತ್ಯಶಂಕರ ಪರ್ತಜೆ ಇವರ ಓಮ್ನಿಯಲ್ಲಿ ಜೇಡ್ಲಕ್ಕೆ ಸಾಗಾಟ ಮಾಡಲಾಯಿತು. ಭಾನುವಾರವೂ ಇನ್ನಷ್ಟು ಕಟಾಯಿಸಿದ ಹುಲ್ಲು ಸಾಗಾಟಮಾಡಲಾಗಿವುದು. ಶಂಕರಿರಾಜ್ ಸುಳ್ಯ ಕಾರ್ಮಿಕರಿಗೆ ಊಟೋಪಚಾರ ವ್ಯವಸ್ಥೆಯನ್ನು ಮಾಡಿದ್ದರು.

Continue Reading

ಮಾತೃ ಭಾಷೆಯನ್ನು ಗೌರವಿಸಿ ಉಳಿಸಿ – ದೇವು ಹನೆಹಳ್ಳಿ

ನಂತೂರು: ನಾವು ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸಬೇಕು. ಆಗ ನಾವು ಮತ್ತು ಭಾಷೆಯ ಅಭಿವೃದ್ದಿ ಸಾಧ್ಯ ಎಂದು ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ದೇಶಕ ದೇವು ಹನೆಹಳ್ಳಿ ಹೇಳಿದರು.   ಅವರು ನ.೨ರಂದು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆಶ್ರಯ ದಲ್ಲಿ ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.   ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಎಲ್ಲಾ ಆಚರಣೆಗಳು […]

Continue Reading

ಕನ್ಯಾನದಲ್ಲಿ ರಾಮಾಯಣ ಪಾರಾಯಣ

ಕನ್ಯಾನ: ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಸಂಕಲ್ಪದಂತೆ ಅ.೨೧ರಂದು ಪ್ರಾರಂಭಿಸಿ ಅ.೨೯ g ವರೆಗೆ ಕನ್ಯಾನ ಹವ್ಯಕ ವಲಯದಲ್ಲಿ ರಾಮಾಯಣ ಪಾರಾಯಣ ನಡೆಯಿತು.   ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಂಗಳವಾರ ಪ್ರತಿ ರುದ್ರ ಪಾರಾಯಣ ಮತ್ತು ವಿಷ್ಣು ಸಹಸ್ರನಾಮ ಪಠಣದೊಂದಿಗೆ ಸಮಾಪನಗೊಂಡಿದೆ. ರಾಮಾಯಣದ ಅರ್ಥವಿವರಣೆಯನ್ನು ವೇದಮೂರ್ತಿ ಶಂಕರ ಭಟ್ಟರು ನೆರವೇರಿಸಿದರು.   ಸಮಾರೋಪ ಸಮಾರಂಭದಲ್ಲಿ ಕನ್ಯಾನ ಹವ್ಯಕ ವಲಯ ಅಧ್ಯಕ್ಷ ಈಶ್ವರಪ್ರಸಾದ್, ಕಾರ್ಯದರ್ಶಿ ರವಿಶಂಕರ ಪನೆಯಡ್ಕ ಮತ್ತು ಪದಾಧಿಕಾರಿಗಳು, ಗುರಿಕ್ಕಾರರು ಹಾಗೂ ಸರ್ವ ಸದಸ್ಯರು […]

Continue Reading