ಮಂಗನಕಾಯಿಲೆ ಶಾಶ್ವತ ಪರಿಹಾರಕ್ಕೆ ರಾಘವೇಶ್ವರ ಶ್ರೀ ಒತ್ತಾಯ
ಗೋಕರ್ಣ: ವಿಶ್ವದಲ್ಲಿ ಕೊರೋನಾ ಅಟ್ಟಹಾಸದ ನಡುವೆಯೇ ರಾಜ್ಯದ ಮಲೆನಾಡು ಭಾಗದಲ್ಲಿ ಹಾಗೂ ನೆರೆ ರಾಜ್ಯಗಳ ಕೆಲವೆಡೆ ಮಂಗನ ಕಾಯಿಲೆ ವ್ಯಾಪಕವಾಗಿ ಹರಡಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಸ್ವಾಮೀಜಿಯವರು ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ, ಕೊಪ್ಪ ತಾಲೂಕುಗಳಲ್ಲಿ ಈ ಸಾಂಕ್ರಾಮಿಕ ವ್ಯಾಪಕವಾಗಿ ಹರಡಿದ್ದು, 250ಕ್ಕೂ ಹೆಚ್ಚು ಮಂದಿಗೆ ಸೊಂಕು ತಗುಲಿದೆ. […]
Continue Reading