ಗೋಸ್ವರ್ಗಕ್ಕೆ ಬೇಟಿ
ಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.
Continue Readingಗೋಸ್ವರ್ಗ: ಮುಖ್ಯಮಂತ್ರಿ ಯಡಿಯೂರಪ್ಪನವರ ತಾಂತ್ರಿಕ ಸಲಹೆಗಾರರಾದ ನಾಗರಾಜಯ್ಯ ಮತ್ತು ಎಸ್ ರಮೇಶ್ ಅವರು ಗೋಸ್ವರ್ಗಕ್ಕೆಬೇಟಿ ನೀಡಿ ಗೋವುಗಳ ಜತೆಗೆ ಕಾಲ ಕಳೆದರು. ಗೋವುಗಳ ಮಾಹಿತಿ ಪಡೆದುಕೊಂಡು ಸಂತಸ ಪಟ್ಟರು. ಗುರುಮೂರ್ತಿ ಶಿಕಾರಿಪುರ ಅವರು ಜೋತೆಗಿದ್ದರು.
Continue Readingಬೆಂಗಳೂರು: ಯಾವಾಗಲೂ ನನ್ನದು ಎಂಬ ಭಾವ ಬರಬಾರದು ಎಲ್ಲವೂ ನಿನ್ನದು ಎಂಬುದು ಬರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು. ಗಿರಿನಗರ ಶ್ರೀರಾಮಾಶ್ರಮದ ಪುನರ್ವಸುಭವನದಲ್ಲಿ ಭಾನುವಾರ ನಡೆದ ಧಾರಾ-ರಾಮಾಯಣ ಕಾರಣ-ಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ನನ್ನ ನಿನ್ನ(ದೇವರ) ಮಧ್ಯೆ ಭೇದವಿಲ್ಲವಾಗಿಯೂ ಕೂಡ ಪ್ರಭು ನಾನು ನಿನ್ನವನು ಎನ್ನುವಾಗ ತುಂಬ ಸಮರ್ಪಣಾ ಭಾವ ಇದೆ ಹೊರತು ನೀನು ನನ್ನವನು ಎನ್ನುವಾಗ ನೀನು ನನ್ನವನು ಮಾತ್ರ ಎಂಬುದು ಬಂದಾಗ ಎಲ್ಲ ತಂಟೆ, ತಕರಾರುಗಳು ಶುರುವಾಗುತ್ತದೆ. […]
Continue Readingಗುಂಪೆ: ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಪೊಸಡಿ ಗುಂಪೆಯ ಶ್ರೀ ಶಂಕರ ಧ್ಯಾನ ಮಂದಿರದ ಪರಿಸರದಲ್ಲಿ ಜ.೧೮ ರಂದು ಬಜಕೂಡ್ಳು ಅಮೃತಧಾರಾ ಗೋ ಶಾಲೆಯ ಗೋಮಾತೆಗಳಿಗಾಗಿ ’ಗೋವಿಗಾಗಿ ಮೇವು’ ಸೇವಾ ಅರ್ಘ್ಯ ಕಾರ್ಯಕ್ರಮ ನೆರವೇರಿತು. ಗುಂಪೆ ವಲಯ ಬಿಂದು-ಸಿಂಧು ಪ್ರಧಾನರಾದ ಶಂಕರನಾರಾಯಣನ್ ಗುಂಪೆ ಧ್ವಜಾರೋಹಣಗೈದರು. ಗುರುವಂದನೆ, ಗೋವಂದನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಳ್ಳೇರಿಯಾ ಮಂಡಲ ವಿದ್ಯಾರ್ಥಿ ವಾಹಿನಿ ಪ್ರಮುಖ ಗುರುಮೂರ್ತಿ ಮೇಣ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]
Continue Readingಹಂಪಿನಗರ: ಬೆಂಗಳೂರಿನ ಹಂಪಿನಗರದಲ್ಲಿರುವ ಶ್ರೀಭಾರತೀ ವಿದ್ಯಾಲಯದಲ್ಲಿ ಜ.೧೭ ಹಾಗೂ ೧೮ ರಂದು ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನ ಹಾಗೂ ವಾರ್ಷಿಕೋತ್ಸವಗಳು ಬಹಳ ಸಂಭ್ರಮದಿಂದ ನೆರವೇರಿದವು. ಈ ಬಾರಿ “ನೇಚರ್ ಈಸ್ ಎ ಟೀಚರ್ ” ಎಂಬ ವಿಷಯವಸ್ತುವನ್ನು ಆಯ್ದುಕೊಳ್ಳಲಾಗಿತ್ತು. ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರಿಂದ ದೀಪೋಜ್ವಲನದ ಮೂಲಕ ವಾರ್ಷಿಕೋತ್ಸವದ ಕಾರ್ಯಕ್ರಮ ಆರಂಭವಾಯಿತು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ “ಮಕ್ಕಳೆಂದರೆ ಬಾಡದ ಪುಷ್ಪಗಳಾಗಬೇಕು;ಶಾಲೆಯಲ್ಲಿ ಶಿಕ್ಷಕನ ಪಾತ್ರ ಬಹಳ ಮುಖ್ಯವಾದುದು. ಮಕ್ಕಳ ಜೀವನ-ಉಜ್ಜೀವನಗಳು ಶಿಕ್ಷಕರ ಕೈಯಲ್ಲಿದೆ.ಈ ಶಾಲೆಯಲ್ಲಿರುವ ಒಂದೊಂದು ಮಗುವೂ ಅರಿವಿನ […]
Continue Readingಮಾಲೂರು: ಬೆಂಗಳೂರು ಗಾಯಿತ್ರಿ ಪರಿವಾರದ ಸುಮಾರು ೧೫೦ ಸದಸ್ಯರನ್ನೊಳಗೊಂಡು ತಂಡ ಮಾಲೂರು ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಜೃಂಭಣೆಯಿಂದ ಗೋಸಂಕ್ರಾಂತಿ ಆಚರಿಸಿದರು. ಅನಿಲ್, ಪಟೇಲ್, ಪ್ರಫುಲ್, ಗೋಶಾಲೆ ಪರವಾಗಿ ಮಹಾಬೀರ್ ಸೋನಿಕ, ಕೃಷ್ಣ ಭಟ್, ಮುರಳೀಕೃಷ್ಣ, ಮಂಜುನಾಥ್ ಭಟ್, ಅನಂತ, ಲಕ್ಷ್ಮೀಶ ಮತ್ತಿತರರು ಹಾಜರಿದ್ದರು.
Continue Readingಮಾಲೂರು: ಬೆಂಗಳೂರು ಗಾಯತ್ರಿ ಯುವ ಪರಿವಾರದ ವತಿಯಿಂದ ಮಾಲೂರು ಆಂಜನೇಯ ದೇವಸ್ಥಾನದಲ್ಲಿ (ಶ್ರೀ ರಾಘವೇಂದ್ರ ಗೋ ಆಶ್ರಮ ಮಾಲೂರು) ಹನುಮಾನ ಚಾಲೀಸಾ ಪಠಣ ನಡೆಯಿತು.
Continue Readingಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವಿಗಾಗಿ ಉಮೇಶ ಸಾಲೆ ಅವರು ತಮ್ಮ ಹಾಳೆ ತಟ್ಟೆ ತಯಾರಿಕಾ ಘಟಕದಿಂದ ಒಂದು ಫಿಕ್ಅಪ್ ಹಾಳೆಯ ಮೇವನ್ನು ಗೋವುಗಳಿಗಾಗಿ ಸಮರ್ಪಿಸಿದರು. ಅಜಿತ್ ಕುಂಚಿನಡ್ಕ, ಗಣರಾಜ ಕಡಪ್ಪು, ರಾಮ ಮೂಲ್ಯ ಈ ಕಾರ್ಯಕ್ಕೆ ಸಹಾಯವಿತ್ತರು.
Continue Readingಗೋಲೋಕ: ಹೊಸನಗರ ಮಹಾನಂದಿ ಗೋಲೋಕದಲ್ಲಿ ವಿರಾಜಮಾನನಾಗಿರುವ ಗೋವರ್ಧನಗಿರಿಧಾರಿ ಶ್ರೀಗೋಪಾಲಕೃಷ್ಣನ ಸನ್ನಿಧಾನದಲ್ಲಿ ಪ್ರತೀ ಹುಣ್ಣಿಮೆಯಂದು ನಡೆಯುವ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಕಥಾವಾಚನ ಸಂಪನ್ನಗೊಂಡಿದೆ. ಪ್ರಧಾನ ಅರ್ಚಕರಾದ ವೇದ ಮೂರ್ತಿ ಸತೀಶ್ ಭಟ್ ನೇತೃತ್ವದಲ್ಲಿ ಪ್ರಕಾಶ್ ಭಟ್ ದಂಪತಿಗಳು ಶಿವಮೊಗ್ಗ ಇವರ ಯಾಜಮಾನತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದೆ. ಸುಮಾರು ನೂರನಲವತ್ತೈದು ಪೂಜೆ ನೆರವೇರುವುದರೊಂದಿಗೆ ನೂರಾರು ಗೋಭಕ್ತರು ಭಾಗವಹಿಸಿದ್ದರು. ಕೃಷ್ಣಪ್ರಸಾದ ಎಡಪ್ಪಾಡಿ, ಜಿ.ಟಿ.ದಿವಾಕರ್, ಶಿವರಾಮ್ ಭಟ್, ಕೃಷ್ಣರಾಜ್ ಅರಸ್, ಇವರುಗಳೊಂದಿಗೆ ಗೋಲೋಕ ಸಮಿತಿಯ ಸದಸ್ಯರುಗಳು ಕೂಡ ಭಾಗವಹಿಸಿದ್ದರು. ಸಂಜೆ ೬ ಗಂಟೆಗೆ […]
Continue Readingಹೊಸಾಡ: ಅಮೃತಧಾರಾ ಗೋಬ್ಯಾಂಕ್ಗೆ ಲಾಸಾ ಸೂಪರ್ ಜೆನಿರಿಕ್ ನಿರ್ದೇಶಕ ಶಿವಾನಂದ ಜಿ. ಹೆಗಡೆ ಮತ್ತು ಸಹೋದ್ಯೋಗಿಗಳು ಆಗಮಿಸಿ ಅಭಯ ಗೋ ದತ್ತು ಯೋಜನೆಯಡಿಯಲ್ಲಿ ೫೦ ಗೋವುಗಳನ್ನು ದತ್ತು ಸ್ವೀಕರಿಸಿ ಹೊಸ ಚರಿತ್ರೆಯನ್ನು ಸೃಷ್ಟಿಸಿದರು.
Continue Readingಮುಳ್ಳೇರಿಯ: ಶ್ರೀ ಮಜ್ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಪೊಸಡಿ ಗುಂಪೆಯ ಶ್ರೀ ಶಂಕರ ಧ್ಯಾನ ಮಂದಿರದಲ್ಲಿ ಪ್ರತೀ ತಿಂಗಳ ಪರ್ವ ದಿನಗಳಲ್ಲಿ ನಡೆಸುವ ಭಜನಾ ಕಾರ್ಯಕ್ರಮವನ್ನು ಗೋ ದಿನದ ಅಂಗವಾಗಿ ಜ.೧೪ ರಂದು ಗುಂಪೆ ವಲಯದ ಶಿಷ್ಯ ಬಾಂಧವರ ನೇತೃತ್ವದಲ್ಲಿ ನಡೆಸಲಾಯಿತು. ಮುಳ್ಳೇರಿಯ ಮಂಡಲ ಸಂಘಟನಾ ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಧ್ವಜಾರೋಹಣ ಗೈದರು. ಗುರುವಂದನೆ, ರಾಮತಾರಕ ಜಪದೊಂದಿಗೆ ಆರಂಭವಾದ ಭಜನಾ ಕಾರ್ಯಕ್ರಮವನ್ನು ಶಾಂತಿ ಮಂತ್ರದೊಂದಿಗೆ ಕೊನೆಗೊಳಿಸಲಾಯಿತು. […]
Continue Readingಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.
Continue Readingಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವುಗಾಗಿ ಮುಳಿಹುಲ್ಲು ಸಂಗ್ರಹಿಸುವ ಶ್ರಮದಾನವು ಜ.೧೨ ದಂದು ಪೆರ್ಲ ಪರಿಸರದಲ್ಲಿ ಜರಗಿತು. ಶ್ರಮದಾನದಲ್ಲಿ ಅಕ್ಷಯ ಯುವಕ ಮಂಡಲ ಬಿರ್ಮುಲೆಯ ಮಾಧವ, ಪ್ರಕಾಶ್ ಕಾಮತ್, ರವಿ, ರಮೇಶ, ಸದಾಶಿವ, ವಿನೋದ, ಗಂಗಾಧರ, ರೋಹಿತ್ ಕುಲಾಲ್, ರಮೇಶ ನಾಯಕ್, ಹಾಗು ಹುಲ್ಲು ಕತ್ತರಿಸುವ ಯಂತ್ರದಲ್ಲಿ ಉತ್ತರ ಪ್ರದೇಶದ ಗೌತಮ್, ಬಿಮಲ್,ಶೇರ್ ಸಿಂಗ್ ಹಾಗು ಅನಿಲ್ ಮತ್ತು ಹುಲ್ಲು ಸಾಗಾಟದಲ್ಲಿ ಶಿವಪ್ರಸಾದ್ ಟ್ರನ್ಸಪೋರ್ಟನ ರಾಮಣ್ಣ ಸಹಕರಿಸಿದರು. ಶ್ರಮದಾನದಲ್ಲಿ ಮುಳ್ಳೇರಿಯಾ ಮಹಾಮಂಡಲದ ಅಧ್ಯಕ್ಷರು, ಎಣ್ಮಕಜೆ ಹವ್ಯಕ ವಲಯದ […]
Continue Readingಮಾಲೂರು: ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ “ಚಿಗುರು” ಗ್ರೂಪ್ ನ ೨೦ ಸದಸ್ಯರು ಗೋ ವೀಕ್ ಎಂಡ್ ಆಚರಿಸಿದರು. ಜ.೧೧ ಸಂಜೆಯಿಂದ ಜ. ೧೨ ಸಂಜೆಯವರೆಗೆ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಹರಿಸಿ, ವಿವಿಧ ಆಟೋಟ, ಚಟುವಟಿಕೆ ನಡೆಸಿ ಗೋ ಶಾಲೆಗೂ ಕಾಣಿಕೆ ಸಮರ್ಪಿಸಿದರು.
Continue Readingಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕೃತ ಪಾಠಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಕೃತಜ್ಞತೆ’ ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಸಂದೀಪ ಭಟ್ಟ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ’ ಎಂದು ಕರೆ ನೀಡಿದರು. ಮಹಾಮಂಡಲದ ವೈದಿಕ ವಿಭಾಗದ ನೀಲಕಂಠ ಯಾಜಿ ಮಾತನಾಡಿ, ಇಂದು ನೀಡಿರುವ ವಿದ್ಯಾರ್ಥಿ ಸಹಾಯನಿಧಿ ವಿದ್ಯಾರ್ಥಿಗಳಿಗೆ ಶ್ರೀಸಂಸ್ಥಾನದವರು ಆಶೀರ್ವದಿಸಿ […]
Continue Readingಬೆಂಗಳೂರು: ರಸ ಋಷಿಯೆಂದೇ ಯಕ್ಷಗಾನ ಪ್ರಿಯರಿಂದ ಕರೆಸಿಕೊಂಡಿದ್ದ ಖ್ಯಾತ ಭಾಗವತ, ಪ್ರಸಂಗಕರ್ತ ಮತ್ತು ಸೃಜನಶೀಲ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ ಅವರ ನಿಧನದಿಂದ ಈ ಅಪೂರ್ವ ಕಲೆಯ ಪ್ರಮುಖ ಕೊಂಡಿ ಕಳಚಿಕೊಂಡಂತಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹ್ವಾಸ್ವಾಮೀಜಿಯವರು ಬಣ್ಣಿಸಿದ್ದಾರೆ. ಯಕ್ಷರಂಗದ ಧ್ರುವನಕ್ಷತ್ರ ಎನಿಸಿಕೊಂಡ ಅವರ ಅಪೂರ್ವ ಸಾಧನೆ ಅಜರಾಮರ ಎಂದು ಸ್ವಾಮೀಜಿ ವಿವರಿಸಿದ್ದಾರೆ. ಯಕ್ಷಗಾನದ ಸ್ವರೂಪ, ವೈವಿಧ್ಯ ಮತ್ತು ಗುಣಮಟ್ಟದ ಬಗೆಗಿನ ವಿಶ್ವಕೋಶ ಎನಿಸಿಕೊಂಡಿದ್ದ ಭಾಗವತರು, ನೋತಿಗುಡ್ಡದ ಕುಟೀರದಲ್ಲಿ ಯಕ್ಷಕಲೆಯ ಮೌನಕ್ರಾಂತಿಗೆ […]
Continue Readingಮಾಲೂರು: ಗೋಪಾಲ್ಸ್ ಟೀಮ್ನ್ ಸುಮಾರು ೫೦೦ ಜನ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಸಂಕ್ರಮಣ ಆಚರಣೆ ಮಾಡಿ ಸಂತೋಷ ಪಟ್ಟರು. ಗೋ ಶಾಲೆ ವತಿಯಿಂದ ಎತ್ತಿನಬಂಡಿ ಸವಾರಿ, ಎಲ್ಲರಿಗೂ ಊಟೋ ಪಚಾರ ಮಾಡಲಾಯಿತು. ಕಾರ್ಯಕ್ರಮಕ್ಕೆ ಗೋಶಾಲೆಯ ಎಲ್ಲರೂ ಗೋಪಾಲ್ಸ್ ತಂಡಕ್ಕೆ ಸಂಪೂರ್ಣ ಸಹಕಾರ ನೀಡಿದರು.
Continue Readingಗೋಸ್ವರ್ಗ: ಸೋಂದಾ ಸ್ವರ್ಣವಲ್ಲೀ ಮಠದ ಆಡಳಿತದಲ್ಲಿರುವ ಶಿರಸಿ ಇಸಳೂರು ಶ್ರೀನಿಕೇತನ ಶಿಕ್ಷಣ ಸಂಸ್ಥೆಯ ೩೫೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗೋಸ್ವರ್ಗಕ್ಕೆ ಆಗಮಿಸಿದ್ದರು. ಶಾಲಾ ಪ್ರವಾಸಕ್ಕಾಗಿ ಬಂದ ವಿದ್ಯಾರ್ಥಿಗಳು ಗೋವುಗಳ ಸಮೂಹ, ಗೋತೀರ್ಥದ ವರ್ಣಮಯ ಮತ್ಸ್ಯಗಳನ್ನು ನೋಡಿ ಹರ್ಷಗೊಂಡರು. ಹಲವು ಸ್ಥಳಗಳ ಸಂದರ್ಶನದಿಂದ ದಣಿವಾಗಿ ಬಂದ ಚಿಣ್ಣರಿಗೆ ಗೋಸ್ವರ್ಗದ ಗೋಸ್ವಾದು ತಂಪನ್ನೆರೆಯಿತು. ಗೋಸ್ವರ್ಗ, ಶ್ರೀರಾಮ ಸನ್ನಿಧಿಯ ದರ್ಶನ ಪೂರೈಸಿ ಗೋಸ್ವರ್ಗದ ಪ್ರಸಾದ ಭೋಜನ ಸ್ವೀಕರಿಸಿದ ವಿದ್ಯಾರ್ಥಿಗಳು ಭಾನ್ಕುಳಿ ಮಠದ ವಿಶಾಲ ಅಂಗಳದಲ್ಲಿ ನಲಿದಾಡಿದರು. ವಿದ್ಯಾರ್ಥಿಗಳ ಜೊತೆ ಪಾಲಕರು, ಶಿಕ್ಷಕ ವೃಂದದವರು […]
Continue Readingವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ಶ್ರೀರಾಮಚಂದ್ರಾಪುರ ಮಠದ ಮಾತೃತ್ವಮ್ ಆಯೋಜಿಸಿದ ದೇಸೀ ಗವ್ಯ ಉತ್ಪನ್ನ ಮಾರಾಟ ಮಳಿಗೆಯನ್ನು ಮಂಗಳವಾರ ಉದ್ಘಾಟಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಬಡಜ ಉದ್ಘಾಟಿಸಿ, ಮಾತನಾಡಿ, ಗವ್ಯ ಉತ್ಪನ್ನದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವರು ಮಾತನಾಡಿ, ಸ್ವದೇಶೀ ಗೋವುಗಳನ್ನು ಉಳಿಸಿ, ಬೆಳೆಸುವುದು ಮುಖ್ಯ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ […]
Continue Readingಹೊಸಾಡ: ಅಮೃತಧಾರ ಗೋಶಾಲೆಯಲ್ಲಿ ಶ್ರೀ ರವಿಶಂಕರ ಗುರೂಜಿಗಳ ಶಿಷ್ಯವೃಂದದ ಆರ್ಟ್ ಒಫ್ ಲಿವಿಂಗ್ ಸಂಸ್ಥೆಯ ಕುಮಟಾ ವಿಭಾಗದಿಂದ ಒಂದು ದಿನದ ಶಿಬಿರ ವನ್ನು ಏರ್ಪಡಿಸಿಲಾಗಿತ್ತು. ಕಾಮಧೇನು ಪೂಜೆ, ಭಾರತೀಯ ಗೋ ತಳಿ ಗೋವುಗಳ ದರ್ಶನ, ಧ್ಯಾನ, ಗುರು ಪೂಜೆ, ಭಜನೆ, ಶಾಹಿನಾಯಿ ವಾದನ, ಗವ್ಯೋತ್ಪನ್ನದ ಪ್ರಾಮುಖ್ಯತೆ ಹೀಗೆ ಹಲವು ಸಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ೫೦ ಕಾರ್ಯಕರ್ತರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ದತ್ತಾತ್ರೇಯ ಭಟ್ಟ ಹುಬ್ಬಳ್ಳಿ ಯವರು ಆಗಮಿಸಿ ಗವ್ಯೋತ್ಪನ್ನದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ […]
Continue Readingಬೆಂಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ. ಎಲ್ಲರೂ ಪ್ರೀತಿಸಿದ, ಎಲ್ಲರನ್ನೂ ಪ್ರೀತಿಸಿದ ಮಗುವಿನ ಮನಸ್ಸಿನ ಮಹಾಜ್ಞಾನಿಗಳು ಇಲ್ಲದ ಶೂನ್ಯ ಎಂದೂ ತುಂಬದು ಎಂದು ಸ್ವಾಮೀಜಿಯವರು ತಮ್ಮ ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ. ನಮ್ಮ ಸಂನ್ಯಾಸ ಸ್ವೀಕಾರ, ಪೀಠಾರೋಹಣ ಹಾಗೂ ಎಲ್ಲ ಮಹತ್ಕಾರ್ಯಗಳಲ್ಲಿ ಪೇಜಾವರ ಶ್ರೀಗಳು ಜತೆಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಶ್ರೀಮಠದ ಹಲವು ಕಾರ್ಯಕ್ರಮಗಳಲ್ಲಿ ಜತೆಯಾಗುತ್ತಿದ್ದ ಪೇಜಾವರ ಶ್ರೀಗಳು ಕಳೆದ ವರ್ಷ ನಡೆದ ವಿಶ್ವ ಹವ್ಯಕ […]
Continue Reading