ಪಶು ಆಹಾರ ಸಮರ್ಪಣೆ
ಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.
Continue Readingಬಜಗೋಡ್ಲು: ಇಡಿಯಡ್ಕದ ಶಂಕರನಾರಾಯಣ ಭಟ್ ಮತ್ತು ಶಕುಂತಲಾ ಬಜಗೋಡ್ಲುಗೋಶಾಲೆಗೆ ಆಗಮಿಸಿ, ಒಂದು ಚೀಲ ಬೂಸಾ ಸಮರ್ಪಿಸಿದರಲ್ಲದೆ ತಾವೇ ಕೈಯಾರೆ ಗೋವುಗಳಿಗೆ ನೀಡುವ ಕೆಲಸವನ್ನೂ ಮಾಡಿದರು.
Continue Readingಬಜಕೂಡ್ಲು: ಅಮೃತಧಾರಾ ಗೋಶಾಲೆಯ ಗೋವುಗಳ ಮೇವುಗಾಗಿ ಮುಳಿಹುಲ್ಲು ಸಂಗ್ರಹಿಸುವ ಶ್ರಮದಾನವು ಜ.೧೨ ದಂದು ಪೆರ್ಲ ಪರಿಸರದಲ್ಲಿ ಜರಗಿತು. ಶ್ರಮದಾನದಲ್ಲಿ ಅಕ್ಷಯ ಯುವಕ ಮಂಡಲ ಬಿರ್ಮುಲೆಯ ಮಾಧವ, ಪ್ರಕಾಶ್ ಕಾಮತ್, ರವಿ, ರಮೇಶ, ಸದಾಶಿವ, ವಿನೋದ, ಗಂಗಾಧರ, ರೋಹಿತ್ ಕುಲಾಲ್, ರಮೇಶ ನಾಯಕ್, ಹಾಗು ಹುಲ್ಲು ಕತ್ತರಿಸುವ ಯಂತ್ರದಲ್ಲಿ ಉತ್ತರ ಪ್ರದೇಶದ ಗೌತಮ್, ಬಿಮಲ್,ಶೇರ್ ಸಿಂಗ್ ಹಾಗು ಅನಿಲ್ ಮತ್ತು ಹುಲ್ಲು ಸಾಗಾಟದಲ್ಲಿ ಶಿವಪ್ರಸಾದ್ ಟ್ರನ್ಸಪೋರ್ಟನ ರಾಮಣ್ಣ ಸಹಕರಿಸಿದರು. ಶ್ರಮದಾನದಲ್ಲಿ ಮುಳ್ಳೇರಿಯಾ ಮಹಾಮಂಡಲದ ಅಧ್ಯಕ್ಷರು, ಎಣ್ಮಕಜೆ ಹವ್ಯಕ ವಲಯದ […]
Continue Readingಮಾಲೂರು: ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ “ಚಿಗುರು” ಗ್ರೂಪ್ ನ ೨೦ ಸದಸ್ಯರು ಗೋ ವೀಕ್ ಎಂಡ್ ಆಚರಿಸಿದರು. ಜ.೧೧ ಸಂಜೆಯಿಂದ ಜ. ೧೨ ಸಂಜೆಯವರೆಗೆ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಹರಿಸಿ, ವಿವಿಧ ಆಟೋಟ, ಚಟುವಟಿಕೆ ನಡೆಸಿ ಗೋ ಶಾಲೆಗೂ ಕಾಣಿಕೆ ಸಮರ್ಪಿಸಿದರು.
Continue Readingಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕೃತ ಪಾಠಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಕೃತಜ್ಞತೆ’ ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ ಸಂದೀಪ ಭಟ್ಟ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ’ ಎಂದು ಕರೆ ನೀಡಿದರು. ಮಹಾಮಂಡಲದ ವೈದಿಕ ವಿಭಾಗದ ನೀಲಕಂಠ ಯಾಜಿ ಮಾತನಾಡಿ, ಇಂದು ನೀಡಿರುವ ವಿದ್ಯಾರ್ಥಿ ಸಹಾಯನಿಧಿ ವಿದ್ಯಾರ್ಥಿಗಳಿಗೆ ಶ್ರೀಸಂಸ್ಥಾನದವರು ಆಶೀರ್ವದಿಸಿ […]
Continue Readingಬೆಂಗಳೂರು: ರಸ ಋಷಿಯೆಂದೇ ಯಕ್ಷಗಾನ ಪ್ರಿಯರಿಂದ ಕರೆಸಿಕೊಂಡಿದ್ದ ಖ್ಯಾತ ಭಾಗವತ, ಪ್ರಸಂಗಕರ್ತ ಮತ್ತು ಸೃಜನಶೀಲ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ ಅವರ ನಿಧನದಿಂದ ಈ ಅಪೂರ್ವ ಕಲೆಯ ಪ್ರಮುಖ ಕೊಂಡಿ ಕಳಚಿಕೊಂಡಂತಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹ್ವಾಸ್ವಾಮೀಜಿಯವರು ಬಣ್ಣಿಸಿದ್ದಾರೆ. ಯಕ್ಷರಂಗದ ಧ್ರುವನಕ್ಷತ್ರ ಎನಿಸಿಕೊಂಡ ಅವರ ಅಪೂರ್ವ ಸಾಧನೆ ಅಜರಾಮರ ಎಂದು ಸ್ವಾಮೀಜಿ ವಿವರಿಸಿದ್ದಾರೆ. ಯಕ್ಷಗಾನದ ಸ್ವರೂಪ, ವೈವಿಧ್ಯ ಮತ್ತು ಗುಣಮಟ್ಟದ ಬಗೆಗಿನ ವಿಶ್ವಕೋಶ ಎನಿಸಿಕೊಂಡಿದ್ದ ಭಾಗವತರು, ನೋತಿಗುಡ್ಡದ ಕುಟೀರದಲ್ಲಿ ಯಕ್ಷಕಲೆಯ ಮೌನಕ್ರಾಂತಿಗೆ […]
Continue Readingಮಾಲೂರು: ಗೋಪಾಲ್ಸ್ ಟೀಮ್ನ್ ಸುಮಾರು ೫೦೦ ಜನ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಸಂಕ್ರಮಣ ಆಚರಣೆ ಮಾಡಿ ಸಂತೋಷ ಪಟ್ಟರು. ಗೋ ಶಾಲೆ ವತಿಯಿಂದ ಎತ್ತಿನಬಂಡಿ ಸವಾರಿ, ಎಲ್ಲರಿಗೂ ಊಟೋ ಪಚಾರ ಮಾಡಲಾಯಿತು. ಕಾರ್ಯಕ್ರಮಕ್ಕೆ ಗೋಶಾಲೆಯ ಎಲ್ಲರೂ ಗೋಪಾಲ್ಸ್ ತಂಡಕ್ಕೆ ಸಂಪೂರ್ಣ ಸಹಕಾರ ನೀಡಿದರು.
Continue Readingಗೋಸ್ವರ್ಗ: ಸೋಂದಾ ಸ್ವರ್ಣವಲ್ಲೀ ಮಠದ ಆಡಳಿತದಲ್ಲಿರುವ ಶಿರಸಿ ಇಸಳೂರು ಶ್ರೀನಿಕೇತನ ಶಿಕ್ಷಣ ಸಂಸ್ಥೆಯ ೩೫೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಗೋಸ್ವರ್ಗಕ್ಕೆ ಆಗಮಿಸಿದ್ದರು. ಶಾಲಾ ಪ್ರವಾಸಕ್ಕಾಗಿ ಬಂದ ವಿದ್ಯಾರ್ಥಿಗಳು ಗೋವುಗಳ ಸಮೂಹ, ಗೋತೀರ್ಥದ ವರ್ಣಮಯ ಮತ್ಸ್ಯಗಳನ್ನು ನೋಡಿ ಹರ್ಷಗೊಂಡರು. ಹಲವು ಸ್ಥಳಗಳ ಸಂದರ್ಶನದಿಂದ ದಣಿವಾಗಿ ಬಂದ ಚಿಣ್ಣರಿಗೆ ಗೋಸ್ವರ್ಗದ ಗೋಸ್ವಾದು ತಂಪನ್ನೆರೆಯಿತು. ಗೋಸ್ವರ್ಗ, ಶ್ರೀರಾಮ ಸನ್ನಿಧಿಯ ದರ್ಶನ ಪೂರೈಸಿ ಗೋಸ್ವರ್ಗದ ಪ್ರಸಾದ ಭೋಜನ ಸ್ವೀಕರಿಸಿದ ವಿದ್ಯಾರ್ಥಿಗಳು ಭಾನ್ಕುಳಿ ಮಠದ ವಿಶಾಲ ಅಂಗಳದಲ್ಲಿ ನಲಿದಾಡಿದರು. ವಿದ್ಯಾರ್ಥಿಗಳ ಜೊತೆ ಪಾಲಕರು, ಶಿಕ್ಷಕ ವೃಂದದವರು […]
Continue Readingವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೆ ಪ್ರಯುಕ್ತ ಶ್ರೀರಾಮಚಂದ್ರಾಪುರ ಮಠದ ಮಾತೃತ್ವಮ್ ಆಯೋಜಿಸಿದ ದೇಸೀ ಗವ್ಯ ಉತ್ಪನ್ನ ಮಾರಾಟ ಮಳಿಗೆಯನ್ನು ಮಂಗಳವಾರ ಉದ್ಘಾಟಿಸಲಾಯಿತು. ದೇವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಬಡಜ ಉದ್ಘಾಟಿಸಿ, ಮಾತನಾಡಿ, ಗವ್ಯ ಉತ್ಪನ್ನದ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವರು ಮಾತನಾಡಿ, ಸ್ವದೇಶೀ ಗೋವುಗಳನ್ನು ಉಳಿಸಿ, ಬೆಳೆಸುವುದು ಮುಖ್ಯ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ […]
Continue Readingಹೊಸಾಡ: ಅಮೃತಧಾರ ಗೋಶಾಲೆಯಲ್ಲಿ ಶ್ರೀ ರವಿಶಂಕರ ಗುರೂಜಿಗಳ ಶಿಷ್ಯವೃಂದದ ಆರ್ಟ್ ಒಫ್ ಲಿವಿಂಗ್ ಸಂಸ್ಥೆಯ ಕುಮಟಾ ವಿಭಾಗದಿಂದ ಒಂದು ದಿನದ ಶಿಬಿರ ವನ್ನು ಏರ್ಪಡಿಸಿಲಾಗಿತ್ತು. ಕಾಮಧೇನು ಪೂಜೆ, ಭಾರತೀಯ ಗೋ ತಳಿ ಗೋವುಗಳ ದರ್ಶನ, ಧ್ಯಾನ, ಗುರು ಪೂಜೆ, ಭಜನೆ, ಶಾಹಿನಾಯಿ ವಾದನ, ಗವ್ಯೋತ್ಪನ್ನದ ಪ್ರಾಮುಖ್ಯತೆ ಹೀಗೆ ಹಲವು ಸಂಸ್ಕೃತಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ೫೦ ಕಾರ್ಯಕರ್ತರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ದತ್ತಾತ್ರೇಯ ಭಟ್ಟ ಹುಬ್ಬಳ್ಳಿ ಯವರು ಆಗಮಿಸಿ ಗವ್ಯೋತ್ಪನ್ನದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ […]
Continue Readingಬೆಂಗಳೂರು: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ನಿಧನಕ್ಕೆ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದ್ದಾರೆ. ಎಲ್ಲರೂ ಪ್ರೀತಿಸಿದ, ಎಲ್ಲರನ್ನೂ ಪ್ರೀತಿಸಿದ ಮಗುವಿನ ಮನಸ್ಸಿನ ಮಹಾಜ್ಞಾನಿಗಳು ಇಲ್ಲದ ಶೂನ್ಯ ಎಂದೂ ತುಂಬದು ಎಂದು ಸ್ವಾಮೀಜಿಯವರು ತಮ್ಮ ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ. ನಮ್ಮ ಸಂನ್ಯಾಸ ಸ್ವೀಕಾರ, ಪೀಠಾರೋಹಣ ಹಾಗೂ ಎಲ್ಲ ಮಹತ್ಕಾರ್ಯಗಳಲ್ಲಿ ಪೇಜಾವರ ಶ್ರೀಗಳು ಜತೆಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಶ್ರೀಮಠದ ಹಲವು ಕಾರ್ಯಕ್ರಮಗಳಲ್ಲಿ ಜತೆಯಾಗುತ್ತಿದ್ದ ಪೇಜಾವರ ಶ್ರೀಗಳು ಕಳೆದ ವರ್ಷ ನಡೆದ ವಿಶ್ವ ಹವ್ಯಕ […]
Continue Readingಹೊಸನಗರ: ಪರಮಪೂಜ್ಯ ಶ್ರೀ ಸಂಸ್ಥಾನದವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಗಶೀರ್ಷ ಕೃಷ್ಣ ಅಮಾವಾಸ್ಯೆಯಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರ ಸನ್ನಿಧಿಯಲ್ಲಿ ಸೂರ್ಯಗ್ರಹಣ ಶಾಂತಿ ಹವನ ಮತ್ತು ಶತಾಧಿಕ ರುದ್ರಮಂತ್ರ ಪಠಣ, ಅಭಿಷೇಕ, ಹಾಗೂ ರುದ್ರ ಹವನ ಸಂಪನ್ನಗೊಂಡಿದೆ. ೧೩೦ ರುದ್ರಾಧ್ಯಾಯಿಗಳ ಕೂಡುವಿಕೆಯಲ್ಲಿ ೧೪೧೫ ರುದ್ರ ಸಮರ್ಪಣೆ ಆಗಿದೆ.
Continue Readingಗೋಸ್ವರ್ಗ: ಗೋವುಗಳಿಗೆ ಅಮವಾಸ್ಯೆ ಹಾಗೂ ಗ್ರಹಣದ ದಿನದಂದು ಶಿರಸಿಯ ಮಾರ್ವಾಡಿ ವಿಷ್ಣು ಸಮಾಜ ಬಾಂಧವರು ಗೋಗ್ರಾಸ ಸಮರ್ಪಿಸಿದರು. ಗೋಪ್ರೀಮಿಗಳಾದ ಶಿರಸಿಯಲ್ಲಿ ನೆಲೆಸಿರುವ ರಾಜಸ್ಥಾನದ ಮಾರ್ವಾಡಿ ಸಮಾಜದವರು 50ಕೆ.ಜಿ ಹಿಂಡಿ ಹಾಗೂ 50ಕೆ.ಜಿ ಬೆಲ್ಲವನ್ನು ತಂದು ಗೋಸ್ವರ್ಗದ ಗೋವುಗಳಿಗೆ ನೀಡಿದರು.
Continue Readingಗೋಸ್ವರ್ಗ: ಮಾತೃತ್ವಮ್ ಸಂಘಟನೆಯಿಂದ ಗೋಸ್ವರ್ಗ ೨ ಲಾರಿ ಮೇವನ್ನು ಬರಮಾಡಿಕೊಳ್ಳಲಾಯಿತು. ಸಿದ್ದಾಪುರ ನಗರದ ಮಾತೃತ್ವಮ್ ಅಧ್ಯಕ್ಷೆ ರಾಧಿಕಾ ಭಟ್ಟ, ಕಾರ್ಯದರ್ಶಿ ಚಂದ್ರಮತಿ ಆರ್ ಹೆಗಡೆ ಹರ್ಗಿ, ಕೋಶಾಧ್ಯಕ್ಷೆ ಮೇಧಾ ಭಟ್ಟ, ಭವತಾರಿಣಿ ಸಮತಿಯ ಅಧ್ಯಕ್ಷೆ ಸಾವಿತ್ರಿ ಹೆಗಡೆ, ಹಾಗೂ ಮಾಸದ ಮಾತೆಯರಾದ ಇಂದಿರಾ ಶಾನಭಾಗ, ಸರಸ್ವತಿ ಹೆಗಡೆ, ಅನಿತಾ ಭಟ್ಟ, ಪೂಜಾಭುವನಿ, ಸುಜಯಾ ಹೆಗಡೆ, ಹೇಮಾ ಅಡಿಗಳ್, ಹಾಗೂ ಗೀತಾ ಹೆಗಡೆ,ಪಧ್ಮಾ ಹೆಗಡೆ, ಸಂದರ್ಭದಲ್ಲಿಪಾಲ್ಗೊಂಡರು.
Continue Readingಗೋಸ್ವರ್ಗ: ಶ್ರೀರಾಮದೇವ ಭಾನ್ಕುಳಿಮಠದಲ್ಲಿ ಸಿದ್ದಾಪುರ ಮಂಡಲದ ಮಾತೃವಿಭಾಗ ಮತ್ತು ವಿದ್ಯಾರ್ಥಿ ವಿಭಾಗದ ಸಂಯೋಜನೆಯಲ್ಲಿ ಮಂಡಲ ಮತ್ತು ಎಲ್ಲಾ ವಲಯಗಳ ಸಹಭಾಗಿತ್ವದಲ್ಲಿ ವಿಧ್ಯಾರ್ಥಿ ವಿಕಸನ ಶಿಬಿರ ಮತ್ತು ಸಂತತಿ ಮಂಗಲ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಮಹಾಮಂಡಲದ ಅಧ್ಯಕ್ಷರಾದ ಆರ್ ಎಸ್ ಹೆಗಡೆ ಮಾತನ್ನಾಡುತ್ತ ಶ್ರೀ ರಾಮಚಂದ್ರಾಪುರ ಮಠವು ಮಹಾಮಂಡಲ ವ್ಯಾಪ್ತಿಯಲ್ಲಿ ಪ್ರತೀ ಮಂಡಲದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸುತ್ತಿದೆ, ಪ್ರತೀ ಶಿಷ್ಯರು ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆದು ಹವ್ಯಕ ಧರ್ಮದ ಮಹತ್ವವನ್ನು ಅರಿತು ನಡೆಯಬೇಕಾಗಿದೆಯೆಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಶಿಕ್ಷಣ […]
Continue Readingಹೊಸಾಡ: ಪಾಶ್ಚಾತ್ಯ ಸಂಸ್ಕೃತಿಯಂತೆ ಜನ್ಮದಿನವನ್ನು ಆಚರಿಸುವ ಈ ದಿನದಲ್ಲಿ ಗೋವಿನ ಜೊತೆ ಆಚರಿಸಿದ ಗೋಪ್ರೇಮಿಯೊಬ್ಬರು ಎಲ್ಲರಿಗೂ ಮಾದರಿಯಾಗಿದ್ದಾರೆ. ಕಿಶೋರ ಶೆಟ್ಟಿ ಕುಮಟಾ ಇವರು ತಮ್ಮ ಜನ್ಮದಿನವನ್ನು ಹೊಸಾಡ ಗೋಶಾಲೆಯಲ್ಲಿರುವ ಗೋವುಗಳ ಜೊತೆಗೆ ಆಚರಿಸಿದರು. ಬದುಕಿನುದ್ದಕ್ಕೂ ಅಮೃತವನ್ನು ನೀಡುವ ಗೋವೆ ನಮ್ಮ ಮಾತೆ ಎಂಬ ಭಾವ ಅವರದಾಗಿದೆ.
Continue Readingವೇಣೂರು: ಸಮಾಜದ ಸಹಭಾಗಿತ್ವದಲ್ಲಿ ಭಾರತೀಯ ಗೋ ತಳಿಗಳನ್ನು ಸಂರಕ್ಷಿಸುವ ಮೌನ ಕ್ರಾಂತಿಗೆ ಮಾತೃತ್ವಮ್ ಮುನ್ನುಡಿ ಬರೆದಿದೆ ಎಂದು ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು ನುಡಿದರು. ಭಾರತೀಯ ಗೋತಳಿಗಳನ್ನು ಉಳಿಸಿ ಬೆಳೆಸುವ ಗೋಶಾಲೆಗಳಿಗೆ 10 ಲಕ್ಷ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಸುಮಾರು 60 ಲೋಡ್ ಒಣಹುಲ್ಲು ವಿತರಿಸುವ ಯೋಜನೆ ಅಂಗವಾಗಿ ವೇಣೂರು ಸಮೀಪದ ಗುಂಡೂರು ಅಮೃತಧಾರಾ ಗೋಶಾಲೆಗೆ ಸಾಂಕೇತಿಕವಾಗಿ ಒಂದು ಲೋಡ್ ಒಣಹುಲ್ಲು ಹಸ್ತಾಂತರಿಸಿ ಅವರು ಮಾತನಾಡಿದರು. “ಗೋವಿನ ಹೊಟ್ಟೆ ತಣಿಸುವ ಪುಣ್ಯ ಕೆಲಸದಲ್ಲಿ ಸಾವಿರಾರು ಮಂದಿ ಮಾತೆಯರು […]
Continue Readingಬಜಕೂಡ್ಲು: ಕಾಮದುಘಾ ಯೋಜನೆಯಡಿ ಕಾರ್ಯಾಚರಿಸುತ್ತಿರುವ ಅಮೃತಧಾರಾ ಗೋಶಾಲೆ, ಗೋಲೋಕ ಬಜಕೂಡ್ಲು ಇಲ್ಲಿ ಸ್ವಚ್ಛ ಭಾರತ ಪರಿಕಲ್ಪನೆಯಲ್ಲಿ ದೇಶೀ ಗೋವಿನ ಗೋಮಯದಿಂದ ಪ್ರಾಯೋಗಿಕವಾಗಿ ಹಣತೆಗಳನ್ನು ಯಶಸ್ವಿಯಾಗಿ ತಯಾರಿಸಲಾಯಿತು. ಮುಂದಿನ ಹಂತದಲ್ಲಿ ಬೃಹತ್ ಮಟ್ಟದಲ್ಲಿ ಗೋಮಯದ ಹಣತೆಗಳನ್ನು ತಯಾರಿಸುವ ಯೋಜನೆಯನ್ನು ರೂಪಿಸಲಾಗುತ್ತಿದೆ. ಗೋಶಾಲೆಯ ಪದಾಧಿಕಾರಿಗಳಾಗಿರುವ ಜಗದೀಶ್ ಗೋಳಿತ್ತಡ್ಕ, ಗಣರಾಜ ಕಡಪ್ಪು ಇವರು ಯೋಜನೆಯ ರೂವಾರಿಗಳಾಗಿ ಕಾರ್ಯನಿರತರಾಗಿದ್ದಾರೆ.
Continue Readingನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾ ಕೂಟ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಸ್ಥಳೀಯ ಕಾರ್ಪೊರೇಟರ್ ಶಕೀಲಾ ಕಾವ ಉದ್ಘಾಟಿಸಿ, ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವಿಗೆ ಮಹತ್ವ ಕೊಡದೆ ಎಲ್ಲರೂ ಭಾಗವಹಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪಥಸಂಚಲನ ಗೌರವ ಸ್ವೀಕರಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತೇಜೋಮಯ ಅವರು ಮಾತನಾಡಿ, ಸಂಸ್ಥೆಯ ಜೊತೆಗಿನ ಅನನ್ಯ ಸಂಬಂಧವನ್ನು ನೆನಪಿಸಿ ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯನ್ನು ಶ್ಲಾಘಿಸಿದರು. ಕ್ರೀಡಾ […]
Continue Readingನಂತೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆ ಆಡಳಿತಕ್ಕೊಳಪಟ್ಟಿರುವ ಶ್ರೀ ಭಾರತೀ ಪದವಿ ಕಾಲೇಜು ಎನ್ನೆಸ್ಸೆಸ್ ಘಟಕ, ಇಡ್ಕಿದು ಗ್ರಾ.ಪಂ. ಮತ್ತು ವಿಟ್ಲಮುಡ್ನೂರು ಗ್ರಾ.ಪಂ. ಸಹಯೋಗದಲ್ಲಿ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಸ್ವಚ್ಛತೆಯೆಡೆಗೆ ನಮ್ಮ ನಡಿಗೆ ಎಂಬ ಕಾರ್ಯಕ್ರಮ ಗುರುವಾರ ಆಯೋಜಿಸಲಾಗಿತ್ತು. ವಿಟ್ಲ ಸಮೀಪದ ಕಂಬಳಬೆಟ್ಟು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ಆಂದೋಲನವನ್ನು ಉದ್ಘಾಟಿಸಲಾಯಿತು. ಇಡ್ಕಿದು ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ಜಾಥಾವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ […]
Continue Readingಮುಳ್ಳೇರಿಯ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಶ್ವರ ಭಾರತೀ ಮಹಾಸ್ವಾಮಿ ಗಳವರ ನಿರ್ದೇಶಾನುಸಾರ ಹವ್ಯಕ ಮಹಾಮಂಡಲಾಂತರ್ಗತ ಮುಳ್ಳೇರಿಯ ಮಂಡಲದ ಆಶ್ರಯದಲ್ಲಿ ಪಳ್ಳತ್ತಡ್ಕ ವಲಯದ ಮುದ್ದು ಮಂದಿರದಲ್ಲಿ ವಿಶಿಷ್ಟ ಕಲ್ಪನೆಯ ಸಪ್ತ ಮಂಗಲಗಳಲ್ಲಿ ಒಂದಾದ, ನಮ್ಮ ಮುಂದಿನ ಪೀಳಿಗೆಯ ಶೇಯಸ್ಸಿಗಾಗಿ ನಾವು ಕೈಗೊಳ್ಳುವ ಕ್ರಮಗಳ ಕುರಿತು ತಿಳಿದು ಕೊಳ್ಳುವ ಸಂತತಿ ಮಂಗಲ ಕಾರ್ಯಕ್ರಮ ಮುಳ್ಳೆರಿಯ ಮಂಡಲ ಮಾತೃ ಪ್ರಧಾನರ ನೇತೃತ್ವದಲ್ಲಿ ಜರಗಿತು. ಕಾರ್ಯಕ್ರಮವನ್ನು ಮಹಾಮಂಡಲ ಮಾತೃತ್ವಮ್ ಅಧ್ಯಕ್ಷೆ ಶ್ರೀಮತಿ ಈಶ್ವರಿ ಬೇಕ೯ಡವು ಉದ್ಘಾಟಿಸಿದರು. ಮಂಡಲ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಸರ್ಪಮಲೆ ಸಮಾರಂಭದಲ್ಲಿ ಅಧ್ಯಕ್ಷತೆ […]
Continue Reading