ಕಾಂಚೀ – ರಾಮಚಂದ್ರಾಪುರಮಠ ; ಶಂಕರಪೀಠಗಳ ಸಮಾಗಮ
ಕಾಂಚೀ ಕಾಮಕೋಟಿ ಮಠದ ಜಗದ್ಗುರುಶಂಕರಾಚಾರ್ಯ ಶ್ರೀಶ್ರೀ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಹಾಗೂ ಶ್ರೀಗೋಕರ್ಣ ಸಂಸ್ಥಾನ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಕಾಂಚೀಮಠದಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದರು. ಕಾಂಚೀ ಶಂಕರಾಚಾರ್ಯರ ವಿಶೇಷ ನಿಮಂತ್ರಣದ ಮೇರೆಗೆ ಕಾಂಚೀಪುರಂನಲ್ಲಿರುವ ಮಠಕ್ಕೆ ಭೇಟಿನೀಡಿದ ಶ್ರೀರಾಮಚಂದ್ರಾಪುರಮಠದ ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳನ್ನು ಕಾಂಚೀ ಮಠದಿಂದ ವಿಶೇಷವಾಗಿ ಗೌರವಿಸಿ ಸ್ವಾಗತಿಸಿದರು. ಆನಂತರ ಪೂಜ್ಯ ಶ್ರೀಗಳು ಕಾಂಚೀ ಮೀನಾಕ್ಷಿ ದೇವಿಗೆ ವಿಶೇಷ ಫಲಪಂಚಾಂಮೃತಾಭಿಷೇಕವನ್ನು ನೆರವೇರಿಸಿ, ಕಂಚಿಯ ಬ್ರಹ್ಮೈಕ್ಯ ಪರಮಾಚಾರ್ಯರು ಹಾಗೂ ಬ್ರಹ್ಮೈಕ್ಯ ಜಯೇಂದ್ರ ಸರಸ್ವತಿಗಳ ವೃಂದಾವನವನ್ನು […]
Continue Reading