Category: ಸುದ್ದಿ
ಮುಳ್ಳೆರಿಯಾ ಹವ್ಯಕ ಮಂಡಲ ಸಭೆ : ಗೋವಿಗಾಗಿ ಮೇವು ಯೋಜನೆಯ ಕುರಿತು ಮಾಹಿತಿ
ಗುತ್ತಿಗಾರು : ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ಮಾಸಿಕ ಸಭೆಯು ಗುತ್ತಿಗಾರು ವಲಯದ ಅಧ್ಯಕ್ಷ ಅಡಿಕೆಹಿತ್ಲು ಶ್ರೀ ಸೀತಾರಾಮ ಭಟ್ ಅವರ ಮನೆಯಲ್ಲಿ 25.11.2018ರಂದು ಜರಗಿತು. ಮಂಡಲಾಧ್ಯಕ್ಷ ಪ್ರೊ. ಟಿ. ಶ್ರೀಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶ್ರೀ ಬಾಲಸುಬ್ರಹ್ಮಣ್ಯ ಭಟ್ ಸರ್ಪಮಲೆಯವರು ಪ್ರಸ್ತಾವನೆಗೈದು, ಗತಸಭೆಯ ವರದಿಯನ್ನು ಮಂಡಿಸಿದರು. ಕೋಶಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಭಟ್ ಗಬ್ಲಲಡ್ಕ ಇವರು ಲಕ್ಷ್ಮೀಲಕ್ಷಣದ ಮಾಹಿತಿ ನೀಡಿ ಲೆಕ್ಕಪತ್ರ ಮಂಡಿಸಿದರು. ವಲಯ ಪದಾಧಿಕಾರಿಗಳು ಮತ್ತು ವಿಭಾಗ ಪ್ರಧಾನರು ವರದಿ ನೀಡಿ […]
Continue Readingಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಗತಿ ವಿದ್ಯಾಲಯದ ಪ್ರತಿಭೆಗಳ ಸಾಧನೆ
ಮೂರೂರು: ಅಂಕೋಲಾದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾಕಾರಂಜಿಯಲ್ಲಿ ಮೂರೂರು ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ವಿಭಾಗದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಸೃಜನ್ ನಾಯ್ಕ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾನೆ. ಪ್ರೌಢಶಾಲಾ ವಿಭಾಗದಲ್ಲಿ ಕುಮಾರಿ ಅಶ್ವಿನಿ ಭೈರವ್ ಹೆಗಡೆ ನೀಲ್ಕೋಡ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿಗಳ ಸಾಧನೆಗೆ ಮುಖ್ಯ ಅಧ್ಯಾಪಕರು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ,ಸಿಬ್ಬಂದಿ ಶುಭಕೋರಿ […]
Continue Readingಪಂಚಗವ್ಯ ಪ್ರಶಿಕ್ಷಣ-ಬಜಕೊಡ್ಲು
ಭಾರತೀಯ ಗೋಪರಿವಾರ-ಕರ್ನಾಟಕ ವತಿಯಿಂದ ಈ ಬಾರಿಯ ಪಂಚಗವ್ಯ ಪ್ರಶಿಕ್ಷಣವನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೇರ್ಲ ಸಮೀಪದ ಬಜಕೊಡ್ಲುವಿನಲ್ಲಿರುವ ಅಮೃತಧಾರ ಗೋಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜನವರಿ 18ರಿಂದ 20ರವರೆಗೆ ಮೂರುದಿನಗಳ ಕಾಲ ಪಂಚಗವ್ಯ ಪ್ರಶಿಕ್ಷಣ ನಡೆಯಲಿದೆ. ಜನವರಿ 16ರ ಬೆಳಗ್ಗೆ 9ಗಂಟೆಗೆ ಪ್ರಾರಂಭವಾಗಿ ಜನವರಿ 18ರ ಸಂಜೆ 5 ಘಂಟೆಗೆ ಮುಕ್ತಾಯಗೊಳ್ಳುತ್ತದೆ. ★ಪಂಚಗವ್ಯ ಪ್ರಶಿಕ್ಷಣ-ಬಜಕೊಡ್ಲು ಶಿಬಿರದಲ್ಲಿ… ◆ಗೋವುಗಳ ಪರಿಚಯ ◆ಗವ್ಯ ಉತ್ಪನ್ನಗಳ ಪರಿಚಯ ◆ಗವ್ಯ ಉತ್ಪನ್ನಗಳ ತಯಾರಿಕೆ (ಮಾಹಿತಿ ಮತ್ತು ಪ್ರಾಯೋಗಿಕ ತರಬೇತಿ) ◆ಗೋ ಆಧಾರಿತ ಕೃಷಿ ◆ಗೋ […]
Continue Readingಪಂಚಗವ್ಯ ಪ್ರಶಿಕ್ಷಣ-ಗಂವ್ಹಾರ
ಭಾರತೀಯ ಗೋಪರಿವಾರ-ಕರ್ನಾಟಕ ವತಿಯಿಂದ ಈ ಬಾರಿಯ ಪಂಚಗವ್ಯ ಪ್ರಶಿಕ್ಷಣವನ್ನು ಕಲಬುರಗಿ(ಗುಲ್ಬರ್ಗ) ಜಿಲ್ಲೆಯ ಜೀವರ್ಗಿ ತಾಲೂಕಿನ ಗಂವ್ಹಾರದ ಶ್ರೀತ್ರಿವಿಕ್ರಮಾನಂದ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಜನವರಿ 4ರಿಂದ 6ರವರೆಗೆ ಮೂರುದಿನಗಳ ಕಾಲ ಪಂಚಗವ್ಯ ಪ್ರಶಿಕ್ಷಣ ನಡೆಯಲಿದೆ. ಜನವರಿ 4ರ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಿ ಜನವರಿ 6ರ ಸಂಜೆ 5 ಘಂಟೆಗೆ ಮುಕ್ತಾಯಗೊಳ್ಳುತ್ತದೆ. ★ಪಂಚಗವ್ಯ ಪ್ರಶಿಕ್ಷಣ-ಗಂವ್ಹಾರ ಶಿಬಿರದಲ್ಲಿ… ◆ಗೋವುಗಳ ಪರಿಚಯ ◆ಗವ್ಯ ಉತ್ಪನ್ನಗಳ ಪರಿಚಯ ◆ಗವ್ಯ ಉತ್ಪನ್ನಗಳ ತಯಾರಿಕೆ (ಮಾಹಿತಿ ಮತ್ತು ಪ್ರಾಯೋಗಿಕ ತರಬೇತಿ) ◆ಗೋ ಆಧಾರಿತ ಕೃಷಿ ◆ಗೋ ಆಧಾರಿತ […]
Continue Readingಮೂರೂರು ಪ್ರಗತಿ ವಿದ್ಯಾಲಯದಲ್ಲಿ ಕ್ರೀಡೋತ್ಸವ
ಮೂರೂರು: ಪ್ರಗತಿ ವಿದ್ಯಾಲಯದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನವೆಂಬರ್ 27 ಮತ್ತು 28ರಂದು ಎರಡು ದಿನಗಳ ಕ್ರೀಡೋತ್ಸವ ಜರುಗಿತು. 27ರಂದು ಆಡಳಿತ ಮಂಡಳಿಯ ಸದಸ್ಯ ಶ್ರೀ ಟಿ. ಆರ್. ಜೋಷಿ ಕ್ರೀಡೋತ್ಸವವನ್ನು ಉದ್ಘಾಟಿಸಿ, ಮಾತನಾಡಿ, ಮಕ್ಕಳೆಲ್ಲರೂ ಸ್ಪರ್ಧಾತ್ಮಕ ಮನೋಭಾವ ಮತ್ತು ಸಂಭ್ರಮದಿಂದ ಭಾಗವಹಿಸಬೇಕು ಎಂದು ಹೇಳಿದರು. ಕ್ರೀಡೋತ್ಸವದಲ್ಲಿ ಓಟ, ಚಕ್ರ ಎಸೆತ, ಗುಂಡೆಸೆತ, ಎತ್ತರ ಜಿಗಿತ, ಉದ್ದ ಜಿಗಿತ ಹಾಗೂ ಕಬಡ್ಡಿಗಳನ್ನು ಆಯೋಜಿಸಲಾಗಿತ್ತು. ಪ್ರಾಥಮಿಕ ಶಾಲೆ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ […]
Continue Readingಪ್ರತಿಭಾ ಪುರಸ್ಕಾರ : ಜರ್ಮನಿಯಲ್ಲಿ ಪ್ರಬಂಧ ಮಂಡಿಸಿದ ಮೈತ್ರೇಯ ಹೆಗಡೆಗೆ ಶ್ರೀಸಂಸ್ಥಾನದವರಿಂದ ಆಶೀರ್ವಾದ
ಬೆಂಗಳೂರು: ಶ್ರೀಗಿರಿನಗರ ವಲಯದ ಕುಮಾರ ಮೈತ್ರೇಯ ಹೆಗಡೆ ಜರ್ಮನಿಯಲ್ಲಿ ನಡೆದ ಇಂಟರ್ ನ್ಯಾಷನಲ್ ಆಸ್ಟ್ರೋನಾಟಿಕಲ್ ಕಾಂಗ್ರೆಸ್ ನಲ್ಲಿ ಭಾಗವಹಿಸಿ ‘ಬಿಹೆವಿಯರ್ ಆಫ್ ಬ್ಯಾಕ್ಟೀರಿಯಾ ಇನ್ ಸ್ಪೇಸ್’ ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದಾರೆ. ಈ ಸಾಧನೆಗಾಗಿ ಶ್ರೀಸಂಸ್ಥಾನದವರರ ವಿಶೇಷ ಆಶೀರ್ವಾದಕ್ಕೆ ಕುಮಾರ ಮೈತ್ರೇಯ ಪಾತ್ರರಾದರು. ಕುಮಾರ ಮೈತ್ರೇಯ ಹೆಗಡೆ, ಹವ್ಯಕ ಮಾಸಪತ್ರಿಕೆ ಸಂಪಾದಕ ಶ್ರೀಕಾಂತ ಹೆಗಡೆ ಅಂತ್ರವಳ್ಳಿ ಹಾಗೂ ಶ್ರೀಮತಿ ಕಮಲಿನಿ ಹೆಗಡೆ ಅಂತ್ರವಳ್ಳಿ ದಂಪತಿ ಪುತ್ರ.
Continue Readingಶ್ರೀರಾಮಚಂದ್ರಾಪುರಮಠದ ನೂತನ ಅಂಗಸಂಸ್ಥೆ ‘ಸಮರಸ’ದಲ್ಲಿ ಗಣಪತಿ ಹವನ ಸಂಪನ್ನ
ಮುಳ್ಳೇರಿಯಾ: ಮುಳ್ಳೇರಿಯ ಹವ್ಯಕ ಮಂಡಲ ಚಂದ್ರಗಿರಿ ವಲಯದಲ್ಲಿ ಮುಳ್ಳೇರಿಯದ ದೇಲಂಪಾಡಿ ಪರಿಸರದಲ್ಲಿ ನಿರ್ಮಾಣವಾಗಲಿರುವ ‘ಸಮರಸ’ ಭೂಮಿಯಲ್ಲಿ 24.11.2018ರಂದು ಗಣಪತಿ ಹವನ ಸಂಪನ್ನವಾಯಿತು. ವಲಯ ವೈದಿಕ ಪ್ರಧಾನರಾದ ಶ್ರೀ ನರಸಿಂಹರಾಜ ಪಯ ಅವರು ಗಣಪತಿ ಹವನದ ನೇತೃತ್ವ ವಹಿಸಿದರು. ಸಮರಸ ಟ್ರಸ್ಟಿನ ಅಧ್ಯಕ್ಷರಾದ ಡಾ. ವಿ ವಿ. ರಮಣ ಧ್ವಜಾರೋಹಣ ನೆರವೇರಿಸಿದರು. ಆ ಬಳಿಕ ಭಜನ ರಾಮಾಯಣ ಪಠಣ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮರಸ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ರಾಜಗೋಪಾಲ […]
Continue Readingಮಕ್ಕಳಿಂದ ಮಾತಾಪಿತರಿಗೆ ಪೂಜೆ : ಶ್ರೀಭಾರತೀ ವಿದ್ಯಾಪೀಠದಲ್ಲಿ ಮಾದರಿ ಕಾರ್ಯಕ್ರಮ
ಮುಜುಂಗಾವು: ಇಲ್ಲಿನ ಶ್ರೀಭಾರತೀ ವಿದ್ಯಾಪೀಠದ ಮಕ್ಕಳಿಂದ ಮಾತಾಪಿತೃ ಪೂಜೆ ನೆರವೇರಿತು. ವಿದ್ಯಾಪೀಠ ಶಾಲೆಯಲ್ಲಿ 26.11.2018ರ ಸೋಮವಾರರಂದು ನಡೆದ ಕಾರ್ಯಕ್ರಮವು ದೀಪಪ್ರಜ್ವಲನ, ಗಣಪತಿ ಸ್ತುತಿ, ಗುರುವಂದನೆಗಳೊಂದಿಗೆ ಆರಂಭವಾಯಿತು. ಬಳಿಕ ಮಕ್ಕಳು ಅವರವರ ಮಾತಾಪಿತೃಗಳಿಗೆ ಆರತಿ ಅಕ್ಷತೆಯೊಂದಿಗೆ ಪೂಜೆ ನೆರವೇರಿಸಿದರು. ಅನಂತರ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ಮಾತನಾಡಿದ ಆಡಳಿತಾಧಿಕಾರಿ ಶ್ರೀ ಶ್ಯಾಮ ಭಟ್ ದರ್ಬೆಮಾರ್ಗ, ‘ಇಳೆಗೆ ಇಳಿಸಿದ ನಮ್ಮ ಮಾತಾಪಿತರು ಜಗತ್ತಿನ ತಂದೆತಾಯಿಯರಾದ ಪಾರ್ವತಿಪರಮೇಶ್ವರರಿಗೆ ಸಮಾನರು. ವೃದ್ಧಾಪ್ಯದಲ್ಲಿ ಅವರ ಬೇಕುಬೇಡಗಳನ್ನು ನಾವು ಪೂರೈಸಿ ಸೇವೆಯನ್ನು ಮಾಡಬೇಕು’ ಎಂದು ಕಿವಿಮಾತು […]
Continue Readingಪ್ರತಿಬಿಂಬ ಸಮಾರೋಪ ಸಮಾರಂಭ ಸಂಪನ್ನ- ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಭಾಗಿ
ಸಿದ್ದಾಪುರ: ಹವ್ಯಕರಿಗೆ ಹುಟ್ಟಿನಿಂದಲೇ ಸಂಸ್ಕಾರ ಬರುತ್ತದೆ. ಇಲ್ಲಿಯ ಪ್ರತಿಭೆಗಳು ಶಾಲೆಗೆ ಹೋಗಿ ಬುದ್ಧಿವಂತಿಕೆ ಕಲಿತು ಬಂದಿದ್ದಲ್ಲ. ಹವ್ಯಕರ ವಂಶವಾಹಿನಿಯಲ್ಲಿಯೇ ಪ್ರತಿಭೆ ನೀರಿನಂತೆ ಹರಿಯುತ್ತಿರುತ್ತದೆ. ಅದಕ್ಕೆ ಆಣೆಕಟ್ಟು ಕಟ್ಟಿದರೂ ಅವಕಾಶ ಮಾಡಿಕೊಂಡು ಬೇರೆಡೆ ಹರಿಯುತ್ತದೆ ಎಂದು ಶ್ರೀಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿದರು. ಅಖಿಲ ಹವ್ಯಕ ಮಹಾಸಭಾ (ರಿ) ಬೆಂಗಳೂರು ವತಿಯಿಂದ ಉತ್ತರ ಕನ್ನಡ ಪ್ರಾಂತದ ಹವ್ಯಕರಿಗಾಗಿ ಗೋಸ್ವರ್ಗಸಂಸ್ಥಾನ ಶ್ರೀ ರಾಮದೇವ ಭಾನ್ಕುಳಿ ಮಠದಲ್ಲಿ ಆಯೋಜಿಸಲಾಗಿದ್ದ “ಪ್ರತಿಬಿಂಬ” (ಉತ್ತರ) ಸ್ಪರ್ಧಾ ಕಾರ್ಯಕ್ರಮದ ಸಮಾರೋಪ […]
Continue Readingಯಲ್ಲಾಪುರದಲ್ಲಿ ವಿಶ್ವಹವ್ಯಕ ಸಮ್ಮೇಳನಕ್ಕೆ ಪೂರ್ವಭಾವಿ ಸಿದ್ಧತಾ ಸಭೆ
ಯಲ್ಲಾಪುರ: ಯಲ್ಲಾಪುರ ಪಟ್ಟಣದ ಟಿಎಂಸಿ ಸಭಾಭವನದಲ್ಲಿ ವಿಶ್ವಹವ್ಯಕ ಸಮ್ಮೇಳನದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಶ್ರೀ ಡಾ. ಗಿರಿಧರ ಕಜೆ ಮಾತನಾಡಿ, ಹವ್ಯಕ ಸಮಾಜವನ್ನು ಒಗ್ಗೂಡಿಸಲು ಮತ್ತು ಹವ್ಯಕರ ಏಳಿಗೆಗೆ ಚಿಂತನೆ ನಡೆಸಲು ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಡಿಸೆಂಬರ್ ೨೮ ರಿಂದ ೩೦ ರವರೆಗೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಅಲ್ಲದೇ ಎಲ್ಲ ಹವ್ಯಕ ಬಂಧುಗಳು ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಅವರು ಮನವಿ […]
Continue Readingಮುಂಬೈ ಹವ್ಯಕವಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ
ಮುಂಬೈ: ಮಹಾನಗರ ಮುಂಬೈ ವಲಯ ವ್ಯಾಪ್ತಿಯಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ೬೧ ಬಾಟಲ್ ರಕ್ತ ಸಂಗ್ರಹವಾಯಿತು. ನಗರದ ಪೇಜಾವರ ಮಠ ಹಾಗೂ ಸಂತ ಕ್ರೂಜ್ ಪ್ರದೇಶದಲ್ಲಿ 26-11-2018 ರಂದು ಜೆ.ಜೆ. ಪಥಪೆಧಿ, ಥಾಣೆ ರಕ್ತನಿಧಿಯವರ ಸಹಯೋಗದಲ್ಲಿ ಮುಂಬೈ ಹವ್ಯಕವಲಯವು ಆಯೋಜಿಸಿದ್ದ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಪೆನ್ ಉಡುಗೊರೆ : ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಹಾಗೂ ರಕ್ತನಿಧಿ ಸಿಬ್ಬಂದಿಗೆ ಮುಂಬೈ ವಲಯ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಗುಡ್ಡೆಬಾಳ್ ಅವರು ಪ್ರತಿಯೊಬ್ಬರಿಗೆ ಕಾಣಿಕೆಯಾಗಿ […]
Continue Readingಗೋವಾ ಹವ್ಯಕ ವಲಯದಲ್ಲಿ ಕಾರ್ತಿಕ ದೀಪೋತ್ಸವ; ಕುಂಕುಮಾರ್ಚನೆ, ಅಷ್ಟಾವಧಾನ ಸೇವೆಯ ಜೊತೆಗೆ ಆಹಾರೋತ್ಸವದ ಸಡಗರ
ಗೋವಾ: ಗೋವಾ ಹವ್ಯಕವಲಯವು ಕಾರ್ತಿಕ ದೀಪೋತ್ಸವವನ್ನು ಬಹಳ ವಿಶೇಷವಾಗಿ ಆಚರಿಸಿದೆ. ದಿನಾಂಕ 24.11.2018ರ ಶನಿವಾರ ಮಡಗಾಂವ್ ನ ಗಜಾನನ ಮಹಾರಾಜರ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ, ಅಷ್ಟಾವಧಾನ ಸೇವೆ, ದೀಪಾರಾಧನೆ ಹಾಗೂ ಆಹಾರೋತ್ಸವಗಳನ್ನು ಏರ್ಪಡಿಸಲಾಗಿತ್ತು. ಗುರುವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವಲಯದ ಮಾತೃ ವಿಭಾಗ ಪ್ರಧಾನೆ ಶ್ರೀಮತಿ ಮಮತಾ ಹೆಗಡೆ ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಾ ಹೆಗಡೆ ಇವರ ನೇತೃತ್ವದಲ್ಲಿ ಹದಿನೈದು ಮಹಿಳೆಯರು ಕುಂಕುಮಾರ್ಚನೆ ನಡೆಸಿದರು. ವಲಯದ ಸಂಸ್ಕಾರ ಪ್ರಧಾನ ಶ್ರೀ ಮಹಾಬಲ ಭಟ್ […]
Continue Readingಪ್ರಧಾನಮಠದಲ್ಲಿ ವಿದ್ಯಾಸಹಾಯನಿಧಿ ವಿತರಣೆ ಕಾರ್ಯಕ್ರಮ
ರಾಮಚಂದ್ರಾಪುರ (ಹೊಸನಗರ) : ಶ್ರೀಮಠವು ಧಾರ್ಮಿಕಕಾರ್ಯಗಳಿಗೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳ ಶೈಕ್ಷಣಿಕ ಉದ್ದೇಶಕ್ಕೆಆರ್ಥಿಕ ನೆರವು ನೀಡುವುದರಲ್ಲೂ ಯಾವಾಗಲೂ ಮುಂದು ಎಂದು ಮಂಡಲ ಅಧ್ಯಕ್ಷ ರಮೇಶ ಗುಂಡೂಮನೆ ಹೇಳಿದರು. ಹೊಸನಗರದ ಪ್ರಧಾನ ಮಠದಲ್ಲಿ ೨೫-೧೧-೨೦೧೮ (ಭಾನುವಾರ)ರಂದು ನಡೆದ ವಿದ್ಯಾಸಹಾಯ ನಿಧಿ 2018- 19ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ವಿದ್ಯಾಸಹಾಯ ನಿಧಿಯು ಹಣಕಾಸಿನ ನೆರವು ಮಾತ್ರವಲ್ಲದೇ ಬದುಕಿಗೆ ಬೆಳಕು ನೀಡುವ ಅನುಗ್ರಹವೂ ಆಗಿದೆ’ ಎಂದರು. ವಿದ್ಯಾರ್ಥಿಗಳು ಸಮಾಜ ಗೌರವಿಸುವ ಸ್ಥಾನವನ್ನು ಸಂಪಾದಿಸಿ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಕಿವಿಮಾತು […]
Continue Readingಉಪ್ಪಿನಪಟ್ಟಣ-ಸಾಗರಗಳಲ್ಲಿ ಅಮೃತಪಥ
ಶ್ರೀಸಂಸ್ಥಾನದವರು ನಿರ್ದೇಶಿಸಿದಂತೆ ಗೋವುಗಳ ಪಥವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಅಮೃತಪಥ ಕಾರ್ಯಕ್ರಮ ಸಾಗರ ಮತ್ತು ಕುಮಟ ಮಂಡಲಗಳಲ್ಲಿ ನಡೆಯಿತು. ಸಾಗರ ನಗರದ ಪೂರ್ವ ಮತ್ತು ಪಶ್ಚಿಮ ವಲಯಗಳ ನೇತೃತ್ವದಲ್ಲಿ ಶನಿವಾರ ನಗರದ ಅಗ್ರಹಾರದಲ್ಲಿ ಹಾಗೂ ಕುಮಟ ಮಂಡಲದ ಉಪ್ಪಿನಪಟ್ಟಣ ವಲಯದಲ್ಲಿ ಅಮೃತಪಥ ಕಾರ್ಯಕ್ರಮ ನಡೆಯಿತು. ಹಲವು ಮಂದಿ ಶಿಷ್ಯಭಕ್ತರು ಭಾಗವಹಿಸಿದ್ದರು.
Continue Readingಮೂರೂರು ಶಾಲೆ ವಿದ್ಯಾರ್ಥಿಯ ಸಾಧನೆ : ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ – ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಮಟಾ : ಮೂರೂರಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಕುಮಾರ ಅಭಿ ಆರ್. ಅಡಿಗುಂಡಿ ರಾಜ್ಯಮಟ್ಟದ ಚಕ್ರ ಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನ.21, 22ರಂದು ನಡೆದ ರಾಜ್ಯಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕು. ಅಭಿ 39.75 ಮೀಟರ್ ದೂರ ಚಕ್ರ ಎಸೆಯುವುದರೊಂದಿಗೆ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾನೆ. […]
Continue Readingಈ ಸಲದ ಧರ್ಮಭಾರತಿಯಲ್ಲಿ…
ಅಯ್ಯಪ್ಪ, ಅಯ್ಯನಾರ್, ಅಯ್ಯನ್, ಬೇಟೆ ಅಯ್ಯಪ್ಪ ಎಂದೆಲ್ಲ ಗುರುತಿಸಿಕೊಳ್ಳುವ; ವೈದಿಕಕ್ಕೂ ಜನಪದಕ್ಕೂ ಸಲ್ಲುವ ದೈವ ಶಾಸ್ತಾರನ ಕುರಿತು ಡಾ. ಮನೋರಮಾ ಬಿ. ಎನ್. ಅವರ ಮಾಹಿತಿಪೂರ್ಣ ಬರಹ. ಆಧುನಿಕ ಕಾಲದಲ್ಲಿ, ಮಹಿಳೆಯರ ಆರೋಗ್ಯ ಸಮಸ್ಯೆಗಳಲ್ಲಿ ಮುಂಚೂಣಿಯಲ್ಲಿರುವ PCOS ಬಗ್ಗೆ ಡಾ.ಸುವರ್ಣಿನೀ ಕೊಣಲೆಯವರ ಲೇಖನ. ಪ್ರಜೆ ಹೊರಟ. ಮಾರಾಪು ಕಟ್ಟಿಕೊಂಡು. ರಾಜನನ್ನು ಕಾಣಲು. ಗೊತ್ತಿಲ್ಲದ ದಾರಿಯಲ್ಲಿ ಹದಿಮೂರು ದಿನದ ಪಯಣ. ನಡೆದೇ ನಡೆದನವ. ಮುಂದೇನಾಯಿತು? ಶ್ರೀಗೋಪಾಲಕೃಷ್ಣ ಕುಂಟಿನಿಯವರ ಕಥೆಯಲ್ಲಿ. ದಿವ್ಯಸನ್ನಿಧಿಯಲ್ಲಿ ಶ್ರೀಸಂಸ್ಥಾನದವರ ಪ್ರವಚನಾಮೃತ – ನಲಿವಿನ […]
Continue Reading