ಬದಿಯಡ್ಕದ ಶ್ರೀಭಾರತೀ ವಿದ್ಯಾಪೀಠದಲ್ಲಿ ಮಾತಾಪಿತೃ ಪೂಜೆ : ಹೆತ್ತವರ ಸೇವೆಗೆ ಪ್ರತಿಜ್ಞಾಬದ್ಧರಾದ ಮಕ್ಕಳು – ಭಾವುಕರಾದ ಹೆತ್ತವರು
ಬದಿಯಡ್ಕ: ನವೆಂಬರ್ 23ರಂದು ಇಲ್ಲಿನ ಶ್ರೀಭಾರತೀ ವಿದ್ಯಾಪೀಠ ಶಾಲೆಯಲ್ಲಿ ಮಾತಾಪಿತೃ ಪೂಜೆಯು ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪೂಜಾ ವಿಧಾನಗಳ ಬಗ್ಗೆ ತಿಳಿಸಿ ಮಕ್ಕಳಿಂದ ಪಾಲಕರ ಪಾದ ಪೂಜೆ ನೆರವೇರಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಮಕ್ಕಳು ‘ತಂದೆ-ತಾಯಿ ನಮ್ಮ ಕಣ್ಣಿಗೆ ಕಾಣುವ ದೇವರು. ಅವರ ಆಶೀರ್ವಾದದಿಂದ ಜೀವನದಲ್ಲಿ ಏನು ಬೇಕಾದರೂ ಸಾಧಿಸಲು ಸಾಧ್ಯ. ನಾವು ಹೆತ್ತವರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೇವೆ.’ ಎಂದು ಹೆತ್ತವರ ಪಾದಸ್ಪರ್ಶಿಸಿ ಪ್ರತಿಜ್ಞೆಗೈದರು. ಈ ಸಂದರ್ಭದಲ್ಲಿ ಹೆತ್ತವರು […]
Continue Reading