ಉತ್ಥಾನ ದ್ವಾದಶಿಯಂದು ಶ್ರೀಕರಾರ್ಚಿತ ಶ್ರೀರಾಮನಿಗೆ ೧೨೨ ಕೆಜಿ ಗೋಧಿ ಪಾಯಸ ನೈವೇದ್ಯ

ಬೆಂಗಳೂರು: ಉತ್ಥಾನದ್ವಾದಶಿಯ ಪುಣ್ಯಕಾಲದಂದು ಶ್ರೀಸಂಸ್ಥಾನದವರ ಸಂಕಲ್ಪದಂತೆ ಸಪರಿವಾರ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಅಖಂಡ (ಖಂಡವಿಲ್ಲದ ಇಡಿಯ ಗೋಧಿ) ಗೋಧಿ ಪಾಯಸವನ್ನು ನೈವೇದ್ಯವಾಗಿ ಸಮರ್ಪಿಸಲಾಯಿತು.   ಮುಂಜಾನೆ ಶ್ರೀಸಂಸ್ಥಾನದವರು ರಾಮದೇವರ ಪೂಜೆ ಗೈಯ್ಯುವ ವೇಳೆಗೆ ಘಮಘಮಿಸುವ ತುಂಡಿಲ್ಲದ ಗೋಧಿಯ ಪಾಯಸವನ್ನು ಸಿದ್ಧಪಡಿಸಲಾಗಿತ್ತು. ಒಟ್ಟು 8 ದ್ರೋಣದ ಪ್ರಮಾಣದಲ್ಲಿ ಅಂದ್ರೆ ಒಂದು ದ್ರೋಣಕ್ಕೆ 16 ಸೇರಿನ ಪ್ರಮಾಣದಲ್ಲಿ ಒಟ್ಟು 122.850 ಕೆಜಿ ಇಡಿ ಗೋಧಿಯ ಪಾಯಸ ಶ್ರೀರಾಮನಿಗೆ ಸಮರ್ಪಿತಗೊಂಡಿತು. ಶ್ರೀಸಂಸ್ಥಾನದ ಕರದಿಂದ ಅರ್ಚಿತಗೊಳ್ಳುವ ಶ್ರೀರಾಮನಿಗೆ ಪಾಯಸ ಸಮಪರ್ಣೆಗೊಂಡ ಬಳಿಕ ಪ್ರಸಾದವಾಗಿ ಈ […]

Continue Reading

ಮಂಗಳೂರು ಶ್ರೀಭಾರತೀ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ : ಮಾತಾಪಿತೃ ಪೂಜೆಯೊಂದಿಗೆ ಆಚರಣೆ

ಮಂಗಳೂರು: ನಂತೂರಿನ ಶ್ರೀಭಾರತೀ ಸಮೂಹ ಸಂಸ್ಥೆಗಳ ಪ್ರೌಢಶಾಲೆಯಲ್ಲಿ‌ ಮಕ್ಕಳ ದಿನಾಚರಣೆಯಂದು ಮಾತಾಪಿತೃ ಪೂಜೆ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.   ಶಾಲೆಯ ಶಂಕರಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾತಾಪಿತೃ ಪೂಜೆ ಕಾರ್ಯಕ್ರಮದಲ್ಲಿ 10ನೆಯ ತರಗತಿಯ ಮಕ್ಕಳು ತಮ್ಮ ತಂದೆ-ತಾಯಿಗಳ ಪಾದಪೂಜೆ ನೆರವೇರಿಸಿದರು.   ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ಶ್ರೀ ಕೇಶವ ಭಟ್ ದಿವಾಣ ಮಾತನಾಡಿ, ತಂದೆ-ತಾಯಿ ನಮ್ಮ‌ ಕಣ್ಣಿಗೆ ಕಾಣುವ ದೇವರು. ಅವರ ಆಶೀರ್ವಾದ ಇದ್ದಾಗ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯ ಎಂದರು. ಹೆತ್ತವರನ್ನು ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಳ್ಳುವ […]

Continue Reading

ಮಕ್ಕಳ ಬದುಕಲ್ಲಿ ದೀಪಾವಳಿಯ ಬೆಳಕು ಮೂಡಿಸಿದ ಶ್ರೀರಾಮಚಂದ್ರಾಪುರಮಠ

ಬೆಂಗಳೂರು: ಹಲವು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕವೇ ಜನಸಾಮಾನ್ಯರ ಹಿತಕ್ಕಾಗಿ ದುಡಿಯುತ್ತಿರುವ ಶ್ರೀರಾಮಚಂದ್ರಾಪುರಮಠವು ಪುಟ್ಟ ಪುಟ್ಟ ಮಕ್ಕಳ ಮುಖದಲ್ಲೂ ನಗುವರಳಿಸಿದೆ. “Fly Higher India” ಸಂಸ್ಥೆಯ ಮೂಲಕ ಇಂತಹದೊಂದು ಅನುಕರಣೀಯ ಕಾರ್ಯವನ್ನು ಶ್ರೀಮಠ ಮಾಡಿದೆ.   Fly Higher India, ಇದೊಂದು ಸರ್ಕಾರೇತರ ಸಂಸ್ಥೆಯಾಗಿದ್ದು ದೇಶಾದ್ಯಂತ ಈ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಇದರಡಿಯಲ್ಲಿ ಅದೆಷ್ಟೋ ಕಾರ್ಯಕರ್ತರು ನಿರಂತರ ಕೆಲಸ ಮಾಡುತ್ತಿದ್ದಾರೆ. ಈ ಸಂಸ್ಥೆಯು ತಿಂಗಳಲ್ಲಿ ಒಂದು ಭಾನುವಾರ ಯಾವುದಾದರೂ ಬಡ ಮಕ್ಕಳ ಶಾಲೆ, ಅನಾಥಾಶ್ರಮ ಅಥವಾ […]

Continue Reading

ಸಾಗರ ವಲಯೋತ್ಸವದ ಅಂಗವಾಗಿ ಶ್ರೀದೇವೀ ಪಾರಾಯಣ

ಸಾಗರ: ಸಾಗರ ನಗರದ ಪೂರ್ವ ಮತ್ತು ಪಶ್ಚಿಮ ವಲಯಗಳ ವಲಯೋತ್ಸವ ನವೆಂಬರ 17, ಶನಿವಾರದಂದು ನಡೆಯಿತು.   ಬೆಳಗ್ಗೆ 8.30ಕ್ಕೆ ವಲಯೋತ್ಸವನ್ನು ಗುರುವಂದನೆ ಹಾಗೂ ದೀಪಪ್ರಜ್ವಲನಗಳ ಮೂಲಕ ಉದ್ಘಾಟಿಸಲಾಯಿತು.   ಬಳಿಕ ಶ್ರೀದೇವೀ ಪಾರಾಯಣ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಂಕಲ್ಪ, ಮಹಿಳೆಯರಿಂದ ಕುಂಕುಮಾರ್ಚನೆ, ಭಜನರಾಮಾಯಣ ಪಠಣ, ರುದ್ರ ಪಠಣ ನಡೆಯಿತು.   ಮಧ್ಯಾಹ್ನದ ಸಭಾ ಕಾರ್ಯಕ್ರಮದಲ್ಲಿ ಸಾಗರ ಮಂಡಲದಿಂದ ವಿದ್ಯಾ ಸಹಾಯನಿಧಿಯನ್ನು ಮಕ್ಕಳಿಗೆ ವಿತರಿಸಲಾಯಿತು. ಸಂಜೆ ಗೋಪೂಜೆ, ಕಾರ್ತೀಕ ದೀಪೋತ್ಸವ ನಡೆಸಲಾಯಿತು.  

Continue Reading

ಶ್ರೀಕ್ಷೇತ್ರ ಗೋಕರ್ಣದಲ್ಲಿ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ಲಕ್ಷಬಿಲ್ವಾರ್ಚನೆ – ತೆಪ್ಪೋತ್ಸವ

ಗೋಕರ್ಣ: ಶ್ರೀಸಂಸ್ಥಾನದವರ ದಿವ್ಯಾಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಶ್ರೀಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ವಿಲಂಬ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ನವೆಂಬರ್ 22ರಂದು ಗುರುವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ ಸಹಿತ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.   ಮುಂಜಾನೆ ಲಕ್ಷಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ಅನಂತರ ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ಜರುಗಲಿವೆ.   ರಾತ್ರಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ […]

Continue Reading

ಕಲ್ಲಡ್ಕದ ಶ್ರೀಉಮಾಶಿವ ಕ್ಷೇತ್ರದಲ್ಲಿ ಶ್ರೀಶನೈಶ್ಚರ ಕಲ್ಪೋಕ್ತ ಪೂಜೆ ಸಂಪನ್ನ

ಕಲ್ಲಡ್ಕ: ಕಲ್ಲಡ್ಕದ ಕಲ್ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಶ್ರೀಸಂಸ್ಥಾನದವರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಶನಿವಾರ ಸಂಜೆ ಸಾಮೂಹಿಕ  ಶ್ರೀಶನೈಶ್ಚರ ಕಲ್ಪೋಕ್ತ ಪೂಜೆ ನೆರವೇರಿತು.   ಸೇವಾಸಮಿತಿಯ ಅಧ್ಯಕ್ಷರಾದ ರಾಕೋಡಿ ಶ್ರೀ ಈಶ್ವರ ಭಟ್ ಮತ್ತು ಪದಾಧಿಕಾರಿಗಳು, ಮಂಗಳೂರು ಮಂಡಲ ಗುರಿಕಾರರಾದ ಶ್ರೀ ಉದಯ ಕುಮಾರ್ ಖಂಡಿಗ, ಮೂಲಮಠ ಪ್ರತಿನಿಧಿ ಮುಳ್ಳುಂಜ ಶ್ರೀ ವೆಂಕಟೇಶ್ವರ ಭಟ್, ಕಲ್ಲಡ್ಕ ಹವ್ಯಕ ವಲಯಾಧ್ಯಕ್ಷ ಶ್ರೀ ಯು.ಎಸ್. ಚಂದ್ರಶೇಖರ ಭಟ್ ನೆಕ್ಕಿದರವು, ವಿಟ್ಲ ವಲಯ ದಿಗ್ದರ್ಶಕ ಶ್ರೀ ಸತೀಶ ಪಂಜಿಗದ್ದೆ, ಕೇಪು ವಲಯ […]

Continue Reading

ಮಗನ ಜನ್ಮದಿನ ವಿಶಿಷ್ಟವಾಗಿ ಆಚರಣೆ : ಗೋವಿಗಾಗಿ ಮೇವು ಸಮರ್ಪಿಸಿದ ಹೆತ್ತವರು

ಬಜಕೂಡ್ಲು: ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಪಾಶ್ಚಾತ್ಯ ಸಂಪ್ರದಾಯದಲ್ಲಿ ಆಚರಿಸುವ ಹೆತ್ತವರ ನಡುವೆ ಶ್ರೀಮಠದ ಭಕ್ತರಾದ ಮುಳ್ಳೇರಿಯ ಮಂಡಲ ವಿದ್ಯಾರ್ಥಿವಾಹಿನಿ ವಿಭಾಗದ ಪ್ರಧಾ‌ನರಾದ ಶ್ರೀ ಕೇಶವಪ್ರಸಾದ ಎಡಕ್ಕಾನ ಅವರು ತಮ್ಮ ಸುಪುತ್ರನ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿ ಇತರರಿಗೂ ಮಾದರಿಯಾಗಿದ್ದಾರೆ.   ನವೆಂಬರ್ ೧೫ರಂದು ಶ್ರೀ ಕೇಶವಪ್ರಸಾದ ಎಡಕ್ಕಾನ ಅವರ ಪುತ್ರ ಕು. ರಾಮಶರ್ಮನ ಹುಟ್ಟುಹಬ್ಬವಿತ್ತು. ಅಂದು ಮಗನ ಹೆಸರಿನಲ್ಲಿ ಬಜಕೂಡ್ಲು ಅಮೃತಧಾರಾ ಗೋಶಾಲೆಯಲ್ಲಿ ಗೋಪೂಜಾ ಸೇವೆ ಹಾಗೂ ಗೋವಿಗಾಗಿ ಮೇವು ಯೋಜನೆಯಲ್ಲಿ ಒಂದು ದಿನದ ಮೇವು ಸಮರ್ಪಿಸಿ […]

Continue Reading

ಶ್ರೀ ಭಾರತೀ ವಿದ್ಯಾಲಯದಲ್ಲಿ ಸಂಸ್ಕೃತೋತ್ಸವ ಸಮಾರೋಪ ಸಮಾರಂಭ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಂಸ್ಕೃತದ ಕುರಿತು ಒಲವು ಮೂಡಿಸುವ ಹಾಗೂ ಭಾಷೆಯ ವ್ಯಾಪಕ ಬಳಕೆಗೆ ಪೂರಕ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಶ್ರೀ ಭಾರತೀ ವಿದ್ಯಾಲಯದಲ್ಲಿ ಒಂದು ವಾರಗಳ ಕಾಲ ನಡೆದ ಸಂಸ್ಕೃತೋತ್ಸವವು ಯಶಸ್ವಿಯಾಗಿ ಸಂಪನ್ನಗೊಂಡಿತು.   ಸಮಾರೋಪ ಸಮಾರಂಭಕ್ಕೆ ಗುರುವಂದನೆ ಹಾಗೂ ದೀಪೋಜ್ವಲನದ ಮೂಲಕ ಚಾಲನೆ‌ ನೀಡಲಾಯಿತು. ಅಲ್ಲದೇ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.   ಶಾಲೆಯ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶ್ರೀಮತಿ ಡಾ. ಶಾರದಾ ಜಯಗೋವಿಂದ್ ಇವರು ಉಪಸ್ಥಿತರಿದ್ದರು. […]

Continue Reading

ಅಮೃತಧಾರಾ ಗೋಶಾಲೆಯಲ್ಲಿ ಸಂಪನ್ನಗೊಂಡಿತು ಗೋಮಾತಾಸಪರ್ಯಾ~ಗೋಪಾಷ್ಟಮೀ

  ಪೆರ್ಲ: ಗೋಪಾಷ್ಟಮಿಯ ಶುಭ ಸಂದರ್ಭದಲ್ಲಿ ಶುದ್ಧ ದೇಶೀಯ ತಳಿಯ ಗೋಮಯದಿಂದ ತಯಾರಿಸಿದ ಗೋವರ್ಧನಗಿರಿಯಲ್ಲಿ ಗುರುವಾರ ರಾತ್ರಿ ಭಗವಾನ್ ಶ್ರೀಕೃಷ್ಣನಿಗೆ ನಡೆದ ರಂಗಪೂಜೆಯನ್ನು ದೀಪದ ಬೆಳಕಿನಲ್ಲಿ ಭಕ್ತಿಭಾವದೊಂದಿಗೆ ಆಚರಿಸಿ ಅನೇಕ ಭಕ್ತಾದಿಗಳು ಕಣ್ತುಂಬಿಕೊಂಡರು.   ಶ್ರೀಸಂಸ್ಥಾನದವರ ದಿಗ್ದರ್ಶನದಲ್ಲಿ ನಡೆಯುತ್ತಿರುವ ಕಾಸರಗೋಡು -ಬಜಕೂಡ್ಲು ಅಮೃತಧಾರಾ ಗೋಶಾಲೆಯ ಗೋವರ್ಧನ ಧರ್ಮಮಂದಿರದಲ್ಲಿ ಕಳೆದ ಒಂದುವಾರದಿಂದ ನಡೆದು ಬರುತ್ತಿದ್ದ ಗೋಮಾತಾ ಸಪರ್ಯಾ ಹಾಗೂ ೮ನೇ ವರ್ಷದ ಗೋಪಾಷ್ಟಮೀ ಮಹೋತ್ಸವವು ಗುರುವಾರ ರಾತ್ರಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪನ್ನವಾಯಿತು. ಬೆಳಗ್ಗೆ ಗಣಪತಿ ಹವನ, ಕಾಮಧೇನು ಹವನ, […]

Continue Reading

ಕಸಾಯಿಖಾನೆಗೆ ಸಾಗಿಸುತ್ತಿದ್ದ ಎತ್ತುಗಳ ರಕ್ಷಣೆ: ರಕ್ಷಿಸಿದ ಎತ್ತುಗಳಿಗೆ ಅಗತ್ಯ ಮೇವು ನೀಡಲು ದಾನಿಗಳಿಗೆ ಕೋರಿಕೆ

ಬೆಂಗಳೂರು: ನಗರದ ಚಿಕ್ಕಜಾಲ ಪೊಲೀಸ್ ಠಾಣಾ‌ ವ್ಯಾಪ್ತಿಯ ರಾಮಗಿರಿ ಸರ್ಕಲ್ ಬಳಿ ಎರಡು ಟ್ರಕ್ ಗಳಲ್ಲಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಎತ್ತುಗಳನ್ನು ಪೊಲೀಸರು ರಕ್ಷಿಸಿದ್ದಾರೆ.   ಈ ಎತ್ತುಗಳನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಿಂದ ಬೆಂಗಳೂರು ನಗರಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ರಾತ್ರಿ ವೇಳೆಯಲ್ಲಿ ಗಸ್ತು ನಡೆಸುತ್ತಿದ್ದ ಪೊಲೀಸರು ಈ ಎತ್ತುಗಳನ್ನು ಹಿಡಿದಿರುತ್ತಾರೆ. ಈ ದೇಶೀ ತಳಿಯ ಎತ್ತುಗಳನ್ನು ಬಾಗೆಪಲ್ಲಿಯ ಸಂತೆಯಲ್ಲಿ ಮಾರಾಟ ಮಾಡಲೆಂದು ಸಾಗಿಸುತ್ತಿದ್ದುದಾಗಿ ಸಾಗಾಟಗಾರರು ಹೇಳಿದರೂ ಇದನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.   ಠಾಣಾಧಿಕಾರಿಗಳು ಚಿಕ್ಕಜಾಲ ಠಾಣೆಯಲ್ಲಿ ಕೇಸು […]

Continue Reading

ಮುಂಬೈನಲ್ಲಿ ರಕ್ತದಾನ ಶಿಬಿರ: ಶ್ರೀಮಠದ ಶಿಷ್ಯ ವರ್ಗ ಹಾಗೂ ಪೇಜಾವರ ಮಠದ ಸಹಯೋಗದಲ್ಲಿ ಆಯೋಜನೆ

ಮುಂಬೈ: ಶ್ರೀರಾಮಚಂದ್ರಾಪುರ ಮಠದ ಮುಂಬೈ ಹಾಗೂ ಡೊಂಬಿವಿಲಿ ವಲಯದ ಶಿಷ್ಯರು ಪೇಜಾವರ ಮಠದ ಸಹಯೋಗದಲ್ಲಿ, ಶ್ರೀಸಂಸ್ಥಾನದ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಮುಂಬೈನ ಪ್ರಭಾತ ಕಾಲೋನಿಯಲ್ಲಿರುವ ಮಾಧ್ವಭವನದಲ್ಲಿ ಇದೇ ನವೆಂಬರ್ 25 ರಂದು ರಕ್ತದಾನ ಶಿಬಿರ ಅಯೋಜಿಸಿದ್ದಾರೆ.   ಆ ದಿನ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಆರೋಗ್ಯವಂತ ಜನರು ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾಗುವಂತೆ ಕೋರಲಾಗಿದೆ.   ರಕ್ತದಾನಿಗಳಿಗೆ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೇ ರಕ್ತದಾನ […]

Continue Reading

ಶ್ರೀಭಾರತೀವಿದ್ಯಾಲಯಕ್ಕೆ ಪುಸ್ತಕ ಕೊಡುಗೆ: ಸಾವಿರಾರು ರೂಪಾಯಿ‌‌ ಮೌಲ್ಯದ ಪುಸ್ತಕ ಕೊಡುಗೆ ನೀಡಿದ ಶ್ರೀಮತಿ ಡಾ.ಶಾರದಾ ಜಯಗೋವಿಂದ

ಬೆಂಗಳೂರು: ಇಂದಿನ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು‌ ಬೆಳೆಸುವ ಹಾಗೂ ಉಳಿಸುವ ನಿಟ್ಟಿನಲ್ಲಿ ಗೋಸ್ವರ್ಗ ಚಾತುರ್ಮಾಸ್ಯ ಪ್ರಶಸ್ತಿ ಪುರಸ್ಕೃತರೂ, ಶಿಕ್ಷಣ ತಜ್ಞರೂ ಆದ ಶ್ರೀಮತಿ ಡಾ. ಶಾರದಾ ಜಯಗೋವಿಂದ ಇಪ್ಪತ್ತೈದು ಸಾವಿರ ರೂಪಾಯಿ ಮೌಲ್ಯದ 163 ಪುಸ್ತಕವನ್ನು ಹಂಪಿನಗರದಲ್ಲಿರುವ ಶ್ರೀಭಾರತೀ ವಿದ್ಯಾಲಯಕ್ಕೆ‌ ಕೊಡುಗೆಯಾಗಿ ನೀಡಿದ್ದಾರೆ.   ಉತ್ತಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಶಾಲೆಯ ಆಡಳಿತ ಮಂಡಳಿಯ ಸದಸ್ಯರೂ ಆಗಿರುವ ಶ್ರೀಮತಿ ಡಾ. ಶಾರದಾ ಜಯಗೋವಿಂದ್ ಅವರು ವಿದ್ಯಾರ್ಥಿಗಳಿಗೆ‌ ಈ ಪುಸ್ತಕಗಳನ್ನು‌ ಓದುವ ಮೂಲಕ ತಮ್ಮ ಜ್ಞಾನ ಹೆಚ್ಚಿಸಿಕೊಳ್ಳುವಂತೆ‌ ಕರೆ‌ […]

Continue Reading

ವಿಶಿಷ್ಟವಾಗಿ ಮಕ್ಕಳ‌ ದಿನಾಚರಣೆ ಆಚರಿಸಿದ ಶ್ರೀಭಾರತೀವಿದ್ಯಾಪೀಠ: ಸಂಭ್ರಮಿಸಿದ ವಿದ್ಯಾರ್ಥಿಗಳು

ಮುಜುಂಗಾವು: ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಶ್ರೀಭಾರತೀ ವಿದ್ಯಾಪೀಠ ಮುಜುಂಗಾವಿನಲ್ಲಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಆಚರಿಸಲಾಯಿತು.   ಮಕ್ಕಳ‌ ದಿನಾಚರಣೆಯಂದು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ pic and act ಮತ್ತು pic and speech ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳು ಚೀಟಿ ಆಯ್ದುಕೊಂಡು ತಮಗೆ ಬಂದ ವಿಷಯದ ಕುರಿತು ಅಭಿನಯ ಹಾಗೂ ಭಾಷಣ ಪ್ರಸ್ತುತಪಡಿಸಿದರು.   ಬಳಿಕ‌ ನಡೆದ‌‌ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ಶ್ರೀ ಶ್ಯಾಂಭಟ್ ದರ್ಬೆಮಾರ್ಗ ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ತ್ವ ಹಾಗೂ ಮಕ್ಕಳ‌ […]

Continue Reading

ಮೂರೂರು ಪ್ರಗತಿ ವಿದ್ಯಾಲಯದಲ್ಲಿ‌ ಮಕ್ಕಳ ದಿನಾಚರಣೆ: ಮಾನವೀಯ ಮೌಲ್ಯ ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕಿವಿಮಾತು

ಮೂರೂರು: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ನವೆಂಬರ್ 14ರಂದು ಮಕ್ಕಳ‌ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.   ಮಕ್ಕ‌ಳ‌ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಏರ್ಪಡಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ‌ ಮುಖ್ಯ ಗುರುಗಳಾದ ಶ್ರೀ‌ ಎಮ್.ಜಿ. ಭಟ್ ಮಾತನಾಡಿ, ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ‌ ಸೌಂದರ್ಯ ಬೆಳೆಸಿಕೊಳ್ಳಿ.‌ ಮಾನವೀಯ ಮೌಲ್ಯಗಳೊಂದಿಗೆ ಸರ್ವತೋಮುಖವಾಗಿ ಅಧ್ಯಯನದಲ್ಲಿ ಪ್ರಗತಿ ಹೊಂದಿ ಸಾಧಕರಾಗಿ ಎಂದು ಕರೆ ನೀಡಿದರು.   ಅಲ್ಲದೇ ಎಸ್. ಎಸ್. ಎಲ್. ಸಿ. ಮಕ್ಕಳಿಗೆ ಶಾಲೆಯ […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಗೆ ಛದ್ಮವೇಷದ ಮೆರುಗು

ಬೆಂಗಳೂರು: ನವೆಂಬರ್ 14ರ ಮಕ್ಕಳ‌ ದಿನಾಚರಣೆಯನ್ನು ವಿಜಯನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ಛದ್ಮವೇಷ ಸ್ಪರ್ಧೆಯೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.   ಮಕ್ಕಳು ಭೂಮಿ, ನೀರು, ಪರಿಸರ, ಭೀಮ, ಶ್ರೀಕೃಷ್ಣ, ರಾಧೆ, ದಾಸರು, ವಾಟ್ಸಪ್ ಹೀಗೆ ವಿವಿಧ ವೇಷ ಧರಿಸಿ ಬಂದು ರಂಜಿಸಿದರು.   ವಿದ್ಯಾರ್ಥಿಗಳಿಗಾಗಿ ಆಟೋಟಗಳು, ಸಂಗೀತ, ಹಿತನುಡಿ ಸೇರಿದಂತೆ ವಿವಿಧ ಸಾಂಸ್ಕೃತಿಕ‌ ಚಟುವಟಿಕೆಗಳನ್ನು ಕೂಡ ಏರ್ಪಡಿಸಲಾಗಿತ್ತು.   ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞೆ ಶ್ರೀಮತಿ ಡಾ.ಶಾರದಾ ಜಯಗೋವಿಂದ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ‌ ಮಕ್ಕಳಿಗೆ ಸಿಹಿ ವಿತರಿಸಲಾಯಿತು.

Continue Reading

ಸಂಸ್ಕೃತ ಅಧ್ಯಯನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶ್ರೀಭಾರತೀ ವಿದ್ಯಾಲಯದಲ್ಲಿ ಸಂಸ್ಕೃತೋತ್ಸವ

ಬೆಂಗಳೂರು: ಸಂಸ್ಕೃತ ಅಧ್ಯಯನಕ್ಕೆ ಪ್ರೋತ್ಸಾಹ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಕೃ ತದ ಮಹತ್ತವ ತಿಳಿಸುವ ಉದ್ದೇಶದಿಂದ ಶ್ರೀಭಾರತೀ ವಿದ್ಯಾಲಯವು ಸಂಸ್ಕೃತೋತ್ಸವವನ್ನು ಆಯೋಜಿಸಿದೆ.   ಸಂಸ್ಕೃತ ಅಧ್ಯಯನ‌ದ ಮೂಲಕ ಭಾರತೀಯ ಪರಂಪರೆಯನ್ನು ಜನಮಾನಸದಲ್ಲಿ ಉಳಿಸುವುದು ಹಾಗೂ ಬೆಳೆಸುವುದು, ನವೆಂಬರ್ 13ರಂದು ಆರಂಭವಾಗಿರುವ 17ರ ವರೆಗೆ ನಡೆಯಲಿರುವ, ಈ ಸಂಸ್ಕೃತೋತ್ಸವದ ಉದ್ದೇಶವಾಗಿದೆ. ಸಂಸ್ಕೃತೋತ್ಸವದ ಅಂಗವಾಗಿ ಶ್ರೀಭಾರತೀ ವಿದ್ಯಾಲಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.

Continue Reading

ಅನಂತಕುಮಾರ್ ಕುಟುಂಬಕ್ಕೆ ಶ್ರೀರಾಮಚಂದ್ರಾಪುರಮಠದಿಂದ ಸಾಂತ್ವನ ಪತ್ರ

ಕೇಂದ್ರ ಸಚಿವ ಅನಂತಕುಮಾರ್ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಶ್ರೀರಾಮಚಂದ್ರಾಪುರಮಠದಿಂದ ತೇಜಸ್ವಿನಿ ಅವರಿಗೆ ಪತ್ರವನ್ನು ಬರೆಯಲಾಗಿದ್ದು, ಶ್ರೀಕರಾರ್ಚಿತ ಶ್ರೀರಾಮಾದಿ ದೇವತಾನುಗ್ರಹದಿಂದ ಅಗಲಿಕೆಯ ನೋವನ್ನು ಮರೆಯುವ ಶಕ್ತಿಯು ಅವರ ಕುಟುಂಬಕ್ಕೆ ಸಿಗಲಿ ಎಂದು ಹಾರೈಸಲಾಗಿದೆ. ಅನಂತಕುಮಾರ್ ಉತ್ತಮ ರಾಜಕಾರಣಿಗಳಲ್ಲೊಬ್ಬರು, ಬಾಲ್ಯದಲ್ಲಿಯೇ ರಾಷ್ಟ್ರಭಕ್ತಿಗೆ ಸಮರ್ಪಿಸಿಕೊಂಡವರು, ಹಲವಾರು ಉತ್ತಮ ಕಾರ್ಯಗಳನ್ನು ಮಾಡಿದವರು. ಅವರು ಇನ್ನಷ್ಟು ಕಾಲ ಬದುಕಿ ಸತ್ಕಾರ್ಯಗಳನ್ನು ಮಾಡಬೇಕಿತ್ತು, ಆದರೆ ಅಕಾಲಿಕವಾಗಿ ನಿಧನರಾಗಿರುವುದು ಕುಟುಂಬಕ್ಕೆ ನೋವಿನ ಸಂಗತಿ. ಹುಟ್ಟು ಸಾವುಗಳು ವಿಧಿಯ ಅಧೀನವಾದ್ದರಿಂದ ಅಗಲಿಕೆಯ ನೋವಿನಿಂದ ಕುಟುಂಬವು ಹೊರಬರಬೇಕಿದೆ. […]

Continue Reading

ಧಾರ್ಮಿಕ ಕಾರ್ಯಕಮಗಳೊಂದಿಗೆ ನೀರ್ಚಾಲು ವಲಯೋತ್ಸವ ಸಂಪನ್ನ – ಶ್ರೀಮಠದ ರಕ್ಷಣೆಯ ಪ್ರತಿಜ್ಞೆಗೈಯ್ದ ಭಕ್ತರು

ಮುಳ್ಳೇರಿಯಾ ಮಂಡಲದ ನೀರ್ಚಾಲು ವಲಯದ ವಲಯೋತ್ಸವ ಕಾರ್ಯಕ್ರಮವು ೧೧/೧೧/೨೦೧೮ ರಂದು ಅಗ್ರಸಾಲೆ ಶ್ರೀ ಶಾಸ್ತಾರ ಮಂದಿರದಲ್ಲಿ ನಡೆಯಿತು. ವಲಯೋತ್ಸವದ ಪ್ರಯುಕ್ತ ಬೆಳಗ್ಗೆ ಕುಂಕುಮಾರ್ಚನೆ, ಭಜನ ರಾಮಾಯಣ ಪಾರಾಯಣಗಳು ನಡೆದವು. ಕಾರ್ಯಕ್ರಮಕ್ಕೆ ವಲಯದ ನಿವೃತ್ತ ಹಿರಿಯ ಗುರಿಕ್ಕಾರರಾದ ಶ್ರೀ ವಾಶೆ ಸುಬ್ರಹ್ಮಣ್ಯ ಭಟ್ ಧ್ವಜಾರೋಹಣಗೈಯುವ ಮೂಲಕ ಹಾಗೂ ಶ್ರೀಮತಿ ಸರಸ್ವತಿ ಕಡಗಂಜಿ ದೀಪ ಪ್ರಜ್ವಲನೆಗೈಯುವ ಮೂಲಕ ಚಾಲನೆ‌ ನೀಡಿದರು. ೧೧.೦೦ ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಸಭೆಯಲ್ಲಿ ಮಾತನಾಡಿದ ಮುಳ್ಳೇರಿಯಾ ಮಂಡಲ ಕಾರ್ಯದರ್ಶಿ ಶ್ರೀಬಾಲಸುಬ್ರಹ್ಮಣ್ಯ ಭಟ್ ಹಲವು […]

Continue Reading

ಶ್ರೀಭಾರತೀ ವಿದ್ಯಾಲಯದಲ್ಲಿ ಮೂರು ದಿನಗಳ ಜಿಲ್ಲಾ ಸ್ಕೌಟ್‌‌ ಮತ್ತು ಗೈಡ್ಸ್ ಶಿಬಿರ‌ ಯಶಸ್ವಿಯಾಗಿ ಸಂಪನ್ನ

ಬದಿಯಡ್ಕ: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ಮೂರು ದಿನಗಳ ಕಾಲ ಕಾಸರಗೋಡು ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರ ನಡೆಯಿತು. ಶಿಬಿರದ ಮೂರನೇ ದಿನವಾದ ಭಾನುವಾರ ರಾಷ್ಟ್ರದ ಇತಿಹಾಸ, ಪರಂಪರೆಗಳ ಪ್ರದರ್ಶನಗಳು ನಡೆದವು. ಮಂಜೇಶ್ವರ ಉಪಜಿಲ್ಲಾವಿದ್ಯಾಧಿಕಾರಿ ಶ್ರೀ ದಿನೇಶ್ ವಿ. ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸದಸ್ಯ ಶ್ರೀ ಹರೀಶ್ ಗಟ್ಟಿ ಪ್ರದರ್ಶನ ಉದ್ಘಾಟಿಸಿದರು. ಶಿಕ್ಷಣ ತಜ್ಞ, ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಶ್ರೀ ವಿ.ಬಿ. ಕುಳಮರ್ವ ಉಪಸ್ಥಿತರಿದ್ದರು.   ಆ ಬಳಿಕ‌ ಶಿಬಿರದ ಜರುಗಿದ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಮಂಜೇಶ್ವರ […]

Continue Reading

ಹವ್ಯಕ ಮಹಾಮಂಡಲದ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ: ವಿವಿಧ ಮಂಡಲಗಳಲ್ಲಿ ಚೆಕ್ ವಿತರಣೆ

ವಿದ್ಯಾಭ್ಯಾಸ ನಡೆಸಲು ಆರ್ಥಿಕ ತೊಂದರೆ ಎದುರಿಸುತ್ತಿರುವ ಶ್ರೀಮಠದ ಶಿಷ್ಯರ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರೀ ರಾಮಚಂದ್ರಾಪುರ ಮಠ ಪ್ರತಿ ವರ್ಷದಂತೆ ಈ ವರ್ಷವೂ, 2018-19 ನೇ ಸಾಲಿನ ಅರ್ಹ 221 ವಿದ್ಯಾರ್ಥಿಗಳಿಗೆ ಮೊದಲ ಹಂತದಲ್ಲಿ ₹9,36,000ಗಳನ್ನು ಮಂಜೂರುಗೊಳಿಸಿದೆ.   ದಿನಾಂಕ 11.11.2018ನೆಯ ಭಾನುವಾರದಂದು ಮಹಾಮಂಡಲದ ಏಳು ಮಂಡಲಗಳಲ್ಲಿ ಆರ್ಥಿಕ ಸಹಾಯಧನವನ್ನು ಚೆಕ್ ಮೂಲಕ ವಿತರಣೆ ಮಾಡಲಾಯಿತು. ಕುಮಟಾ, ಹೊನ್ನಾವರ, ಮಂಗಳೂರು, ಉಪ್ಪಿನಂಗಡಿ, ಮುಳ್ಳೇರಿಯ, ಉತ್ತರ ಬೆಂಗಳೂರು, ದಕ್ಷಿಣ ಬೆಂಗಳೂರು ಮಂಡಲಗಳ ಒಟ್ಟು 173 ವಿದ್ಯಾರ್ಥಿಗಳಿಗೆ ₹6,70,000ಗಳ ಸಹಾಯಧನ […]

Continue Reading