ಕೊಲ್ಲೂರಿನಲ್ಲಿ ಧಾರ್ಮಿಕ ಪೂಜಾ ಪದ್ಧತಿಯನ್ನು ಸ್ಥಾಪಿಸಿದವರು ರಾಮಚಂದ್ರಾಪುರ ಮಠದ 33ನೇ ಜಗದ್ಗುರುಗಳು : ರಾಮಚಂದ್ರಾಪುರ ಶ್ರೀ

  ಕೊಲ್ಲೂರಿನ ಮೂಕಾಂಬಿಕಾ ದೇವಾಲಯದಲ್ಲಿ ಧಾರ್ಮಿಕ ಪೂಜಾಪದ್ಧತಿಯನ್ನು ಸ್ಥಾಪಿಸಿದವರು ಶ್ರೀ ರಾಮಚಂದ್ರಾಪುರ ಮಠದ 33ನೇ ಪೀಠಾಧಿಪತಿಗಳಾದ ಬ್ರಹ್ಮೈಕ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಎಂದು ಶ್ರೀರಾಮಚಂದ್ರಾಪುರ ಮಠದ 36ನೇ ಪೀಠಾಧಿಪತಿಗಳಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗರದ ಶಾಖಾ ಮಠದಲ್ಲಿ ನಡೆದ 33ನೇ ಪೀಠಾಧಿಪತಿಗಳ ಸಂಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, 33 ನೇ ರಾಘವೇಶ್ವರರು ಅಧ್ಯಯನ – ತಪಸ್ಸು ಹಾಗೂ ಗ್ರಂಥ ರಚನೆಗಳಿಗೆ ಪ್ರಸಿದ್ಧರಾಗಿದ್ದು, ಅಂದು ರಾಮಚಂದ್ರಾಪುರ ಮಠದ ಕೀರ್ತಿಯನ್ನು ಹೆಚ್ಚಿಸಿದ […]

Continue Reading

ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕ್ರೀಡಾಕೂಟ ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಪರಿಪೂರ್ಣ ತರಬೇತಿ ಲಭ್ಯ : ಪ್ರದೀಪ್ ಕುಮಾರ್ ಆಚಾರ್ಯ ಶ್ಲಾಘನೆ

  ನಂತೂರು, ನ.26 : ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಮಧ್ಯಮ ವರ್ಗದ ಕುಟುಂಬದಲ್ಲಿ ಬಂದ ಮಕ್ಕಳಿಗೆ ಎಲ್ಲಾ ಸೌಲಭ್ಯ ಒದಗಿಸಲು ಕಷ್ಟವಾಗುತ್ತದೆ. ಆದರೆ ಉತ್ತಮ ಆಹಾರ ತೆಗೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಆ ಮೂಲಕ ಕ್ರೀಡಾರಂಗವನ್ನು ಆಯ್ಕೆ ಮಾಡಿ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಅತೀ ಅವಶ್ಯ. ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಎಲ್ಲಾ ರೀತಿಯಲ್ಲಿ ಪರಿಪೂರ್ಣ ತರಬೇತಿ ಸಿಗುತ್ತಿರುವುದು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಾರಣವಾಗಿದೆ ಎಂದು ಕಾಮನ್ ವೆಲ್ತ್ ಗೇಮ್ಸ್ […]

Continue Reading

ಚಾತುರ್ಮಾಸ್ಯ ಪ್ರಶಸ್ತಿಯ ಪರಮಾನುಗ್ರಹಕ್ಕೆ ಪಾತ್ರರಾದ ಶ್ರೀಧರಣ್ಣ ಶ್ರೀರಾಮ ಸಾಯುಜ್ಯಕ್ಕೆ

ಪಿಡಿಎಸ್ ಎಂದೇ ಖ್ಯಾತರಾದ ಸಾಗರ ಸಮೀಪದ ಭೀಮನಕೋಣೆಯ ನಮ್ಮ ಶ್ರೀಧರಣ್ಣ ಕೆಲಕಾಲದ ಅಸೌಖ್ಯದಿಂದ ಇಂದು ಬೆಳಗಿನ ಜಾವ ಕಾಲವಶರಾದರು ಎಂಬ ಸುದ್ದಿ ತೀವ್ರ ನೋವಿನದ್ದು. ನಮ್ಮ ಮಠದ ಕಾರ್ಯ ಎಂದರೆ ತನ್ನ ಸ್ವಂತ ಕಾರ್ಯಕ್ಕಿಂತ ಹೆಚ್ಚಿನದು ಎಂದು ದೃಢವಾಗಿ ನಂಬಿ ಕಾರ್ಯ ಮಾಡಿದವರು ಅವರು. ಶ್ರೀ ಮಠದ ವ್ಯವಸ್ಥೆಯಲ್ಲಿ ಹಲವಾರು ಮಹತ್ವದ ಹುದ್ದೆಗಳನ್ನು ನಿರ್ವಹಿಸಿ, ಗುರುಗಳ ಪ್ರೀತಿಗೆ ಪಾತ್ರರಾದವರು. ದೊಡ್ಡ ದೊಡ್ಡ ಮಹತ್ವದ ಕಾರ್ಯಗಳ ಸಂಪೂರ್ಣ ನೇತೃತ್ವ ಇದ್ದಾಗಲೂ, ಹಣಕಾಸಿನ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆ ತೋರಿದವರು. […]

Continue Reading

ಗ್ರಾಮರಾಜ್ಯ ಟ್ರಸ್ಟ್ ವಿಷ ಮುಕ್ತ ಅಡುಗೆ ಮನೆ – ಮುಕ್ತ ಮಾತು

ಶ್ರೀರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಗ್ರಾಮರಾಜ್ಯ ಟ್ರಸ್ಟ್ ಇದರ ಸಮಾಜ ಕ್ಷೇಮದ ಚಿಂತನೆಯ ೧೫ ಸಾರ್ಥಕ ವರ್ಷಗಳ ಸೇವೆಯ ಸಲುವಾಗಿ ಸಮಾಜದ ಜೊತೆಗೆ ಬೆರೆಯುವ , ಸಮಾಜದೊಂದಿಗೆ ಜೋಡಿಸಿಕೊಳ್ಳುವ ಅಭಿಯಾನವೇ ” ವಿಷ ಮುಕ್ತ ಅಡುಗೆ ಮನೆ – ಮುಕ್ತ ಮಾತು ” ಕಾರ್ಯಕ್ರಮ. ಇತ್ತೀಚೆಗೆ ಈ ಕಾರ್ಯಕ್ರಮಕ್ಕೆ ನಿವೃತ್ತ ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳು , ಸಾಹಿತಿಗಳು , ಕಾದಂಬರಿಕಾರರು , ಮೇಲಾಗಿ ಶ್ರೀ ಸಂಸ್ಥಾನದವರು ನಡೆಸಿಕೊಡುವ ರಾಮಕಥೆಯ ಕವಿ , ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ […]

Continue Reading

ನವೆಂಬರ್ – 05 – ಪೂರ್ಣಿಮೆ – ಬುಧವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ಕೆ.ಎನ್ ಶಂಕರ ಹಾಲ್ತೋಟ ಮೊಕ್ಕಾಂ – ಶ್ರೀರಾಮಾಶ್ರಮ ಗಿರಿನಗರ 6.00am ಶ್ರೀಪೂಜೆ 5.52pm ಶ್ರೀಪೂಜೆ

Continue Reading

ನಂತೂರು ಭಾರತೀ ಸಮೂಹ ಸಂಸ್ಥೆ : ಸಾಂಸ್ಕೃತಿಕ, ವಿಜ್ಞಾನ ಉತ್ಸವ ಸಂಸ್ಕೃತಿ, ವಿಜ್ಞಾನಕ್ಕೆ ಮಹತ್ವ : ದೀಪಕ್ ರೈ ಪಾಣಾಜೆ

  ನಂತೂರು: ಇಂದು ಸಂಸ್ಕೃತಿ ಮತ್ತು ವಿಜ್ಞಾನಕ್ಕೆ ಮಹತ್ವ ನೀಡಲಾಗಿದೆ. ಕಲಾ ಪ್ರದರ್ಶನವೂ ಅಗತ್ಯ. ಈ ನಿಟ್ಟಿನಲ್ಲಿ ಶ್ರೀ ಭಾರತೀ ಸಮೂಹ ಸಂಸ್ಥೆ ಶಿಕ್ಷಣ, ಸಂಸ್ಕೃತಿ, ಕಲೆ, ವಿಜ್ಞಾನಕ್ಕೆ ಮಹತ್ವ ನೀಡಿದೆ ಎಂದು ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಹೇಳಿದರು. ಅವರು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ಅಂತರ್ ಶಾಲೆ ಸಾಂಸ್ಕೃತಿಕ, ವಿಜ್ಞಾನ ಉತ್ಸವ ಉದ್ಘಾಟಿಸಿ, ಮಾತನಾಡಿದರು. […]

Continue Reading

ಗ್ರಾಮರಾಜ್ಯ ಟ್ರಸ್ಟ್ ಗೆ ಗಣ್ಯ ಮಾನ್ಯರ ಭೇಟಿ

  ಶ್ರೀ ರಾಮಚಂದ್ರಾಪುರ ಮಠದ ಅಂಗ ಸಂಸ್ಥೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಸಂಕಲ್ಪದ ಯೋಜನೆ ಗ್ರಾಮರಾಜ್ಯ ಟ್ರಸ್ಟ್ (ರಿ). ಈ ಸಂಸ್ಥೆಗೆ ಸಾರ್ಥಕ ೧೫ ಸಂವತ್ಸರಗಳು ತುಂಬಿರುವ ಶುಭ ಸಂದರ್ಭದಲ್ಲಿ ಸಮಾಜದ ಸ್ವಾಸ್ಥ್ಯ ಮತ್ತು ತನ್ಮೂಲಕ ನೆಮ್ಮದಿ ಎನ್ನುವ ಕಲ್ಪನೆಯ ಅಡಿಯಲ್ಲಿ ವಿಷ ಮುಕ್ತ ಅಡುಗೆ ಮನೆಯ ಕಲ್ಪನೆ ಸಮಾಜಕ್ಕೆ ಸಾಧ್ಯವಾದಷ್ಟು ತಲುಪಿಸುವ ಯೋಚನೆ ನಮ್ಮದು. ಈ ನಿಟ್ಟಿನಲ್ಲಿ ಸಮಾಜದ ಕೆಲವು ಗಣ್ಯ ಮಾನ್ಯರನ್ನು ಆಹ್ವಾನಿಸಿ ಶ್ರೀಸಂಸ್ಥಾನದವರ ಪರಿಕಲ್ಪನೆ ಮತ್ತು ಸಮಾಜಕ್ಕೆ ಗಣ್ಯರ ಮೂಲಕ […]

Continue Reading

ಅಕ್ಟೋಬರ್ – 26 – ಪಂಚಮಿ – ಭಾನುವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ವೆಂಕಟರಮಣ ಸಾದಂಗಾಯ ಮೊಕ್ಕಾಂ – ಶ್ರೀರಾಮಾಶ್ರಮ ಗಿರಿನಗರ 6.00am ಶ್ರೀಪೂಜೆ 12.15pm ಪೀಠಕ್ಕೆ, ಭಿಕ್ಷಾಂಗ ಪಾದುಕಾಪೂಜೆ, ಪಾದುಕಾಪೂಜೆ ಮಂಗಳಾರತಿ ಆಶೀರ್ವಾದ ಸಾಮೂಹಿಕ ಫಲಸಮರ್ಪಣೆ ವಿವಿದ ಯೋಜನೆಗಳಿಗೆ ದೇಣಿಗೆ ಸಮರ್ಪಣೆ ಆಶೀರ್ವಚನ ಆಶೀರ್ವಾದ ಸಾಮೂಹಿಕ ಮಂತ್ರಾಕ್ಷತೆ 5.55pm ಶ್ರೀಪೂಜೆ

Continue Reading

ಗೋದೀಪ ~ ದೀಪಾವಳಿ ಗೋಪೂಜೆ – ಶ್ರೀರಾಮಚಂದ್ರಾಪುರ ಮಠ , ಗಿರಿನಗರ

  ಹಳ್ಳಿಗಳು ಹಾಗೂ ಹಳ್ಳಿಗರು ಬೆಂಗಳೂರನ್ನು ಸೇರುತ್ತಾ ಸಾಗಿದಂತೆ ಬೆಂಗಳೂರು ದೊಡ್ಡದಾಗುತ್ತಾ ಹೋಗಿದೆ. ನಾವು ಹಳ್ಳಿಗಳನ್ನು ಮಾತ್ರ ಬಿಟ್ಟುಬಂದಿಲ್ಲ, ಈ ಮಾಯಾ ನಗರಿಗೆ ಬರುವಾಗ ನಮ್ಮ ಸಂಸ್ಕೃತಿಯನ್ನೂ ಬಿಟ್ಟು ಬಂದಿರುವುದು ದುರಂತ. ಇಂದು ಹಳ್ಳಿಗಳಲ್ಲಿಯೂ ಕೂಡ ನಗರದ ಸಂಸ್ಕೃತಿ ಬೆಳೆಯುತ್ತಿರುವುದು ಆತಂಕಕಾರಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ ನಡೆದ ‘ಗೋದೀಪ – ದೀಪಾವಳಿ ಗೋಪೂಜೆ’ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಗೋಸಂದೇಶ ನೀಡಿದ ಶ್ರೀಗಳು, ಭಗವಾನ್ ಶ್ರೀಕೃಷ್ಣನು ಗೋಪೂಜೆಯ ಪ್ರವರ್ತಕನಾಗಿದ್ದು, […]

Continue Reading

ಗುರಿಕ್ಕಾರರ ಗುರುಮಾರ್ಗ – ಒಂದು ಸಂವಾದ ಕಾರ್ಯಾಗಾರ

ಸಮಾಜದಲ್ಲಿ ಗುರಿಕ್ಕಾರರ ಮಹತ್ವ, ಗುರಿಕ್ಕಾರರು ಎದುರಿಸುತ್ತಿರುವ ಸಮಸ್ಯೆಗಳು, ವೈದಿಕರು – ಗುರಿಕ್ಕಾರರು – ಶಿಷ್ಯರೊಂದಿಗಿನ ಸಮನ್ವಯತೆ, ಸಂಘಟನೆಯ ಪದಾಧಿಕಾರಿಗಳು – ಗುರಿಕ್ಕಾರ ನಡುವಿನ ಸಮನ್ವಯತೆ ಈ ವಿಷಯಗಳನ್ನು ಆಧರಿಸಿ ಮಂಡಲದ ಎಲ್ಲಾ ವಲಯಗಳ ಎಲ್ಲಾ ಗುರಿಕ್ಕಾರರು ಮತ್ತು ಪದಾಧಿಕಾರಿಗಳು ಭಾಗವಹಿಸಿ ಚರ್ಚಿಸಿ ಒಂದು ಸಂವಾದ ರೂಪದಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನವೇ  ಈ ಕಾರ್ಯಾಗಾರದ  ಧ್ಯೇಯೋದ್ದೇಶವಾಗಿತ್ತು.   2022ರಲ್ಲಿ ನಡೆಸಿದ ಗುರಿಕ್ಕಾರರ ಸಮಾವೇಶ ನಿರೀಕ್ಷಿತ ಯಶಸ್ಸು ಕಾಣದಿದ್ದುದರಿಂದ  ಈ ಬಾರಿ ಮಂಡಲದ ನಾಲ್ಕು ಕಡೆ 3/4 ವಲಯಗಳನ್ನು ಸೇರಿಸಿ […]

Continue Reading

ಗೋದೀಪ – ದೀಪಾವಳೀ ವಿಶೇಷ ಗೋಪೂಜೆ –  ಗೋಸಂರಕ್ಷಣೆ – ಲೋಕಕಲ್ಯಾಣಕಾಗಿ ವಿಶ್ವಜನನಿಯ ವಿಶಿಷ್ಟ ಪೂಜೆ –  ಶ್ರೀಗಳಿಂದ ಗೋ ಸಂದೇಶ – ಗಣ್ಯ ~ ಮಾನ್ಯರಿಂದ ವಿಶೇಷ ಗೋಪೂಜೆ – ಗೋ ಗಾನಾಮೃತ – ಗೋಸೂಕ್ತ ಪಾರಾಯಣ – ಗೋಸೂಕ್ತ ಹವನ

    ಗೋಸಂರಕ್ಷಣೆ ಹಾಗೂ ಲೋಕಕಲ್ಯಾಣದ ಮಹಾಸಂಕಲ್ಪದೊಂದಿಗೆ ದೀಪಾವಳಿಯ ಪುಣ್ಯಪರ್ವದಲ್ಲಿ ವಿಶ್ವಜನನಿಯ ವಿಶಿಷ್ಟ ಪೂಜಾ ಕಾರ್ಯಕ್ರಮ ‘ಗೋದೀಪ – ದೀಪಾವಳೀ ವಿಶೇಷ ಗೋಪೂಜೆ’ಯು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಾದ ಶ್ರೀರಾಮಾಶ್ರಮದಲ್ಲಿ ದಿನಾಂಕ 22.10.2025 ಬುಧವಾರ ಸಂಜೆ 5 ಗಂಟೆಯಿಂದ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೀಪಾವಳಿ ಗೋಪೂಜೆಯ ಗೋಸಂದೇಶವನ್ನು ಶ್ರೀಗಳು ಅನುಗ್ರಹಿಸಲಿದ್ದಾರೆ. ಆಹ್ವಾನಿತ ಗಣ್ಯ-ಮಾನ್ಯ ದಂಪತಿಗಳಿಂದ ಏಕಕಾಲಕ್ಕೆ ವಿಶೇಷರೀತಿಯಲ್ಲಿ ಸಾಲಂಕೃತ ಗೋವುಗಳಿಗೆ ಪೂಜೆ ನಡೆಯಲಿದ್ದು, […]

Continue Reading

ಶ್ರೀಸಂಸ್ಥಾನದವರ ಈ ಬಾರಿಯ ಬೆಂಗಳೂರಿನ ಶ್ರೀರಾಮಾಶ್ರಮದಲ್ಲಿನ ವಸತಿಯ ಸಂದರ್ಭದಲ್ಲಿ ಶ್ರೀಪೂಜೆಯ ಸಮಯ

ಶುಭೋದಯ ಬೆಂಗಳೂರು! ಬೆಂಗಳೂರಿಗರೇ, ಬೆಳಗ್ಗೆ-ಬೆಳಗ್ಗೆಯೇ ವಾಹನ ಶಬ್ದ ಕೇಳಿ ಕೇಳಿ ಸಾಕಾಗಿದೆಯೇ? ಕಛೇರಿಯ ಒತ್ತಡಗಳಿಂದ ಮನಸ್ಸು ಬೇಸತ್ತು ಹೋಗಿದೆಯೇ? ನೆಮ್ಮದಿ, ಸಮಾಧಾನ ಬೇಕು ಅನ್ನಿಸುತ್ತಿದೆಯೇ? ನಿಮಗೊಂದು ಶುಭ ಸುದ್ದಿ. ಪರಮಪೂಜ್ಯ ಶ್ರೀಸಂಸ್ಥಾನದವರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ವಸತಿಯ ಸಂದರ್ಭದಲ್ಲಿ ಪ್ರತಿದಿನ ಬೆಳಗ್ಗೆ ೬ ಗಂಟೆಗೆ ಶ್ರೀಪೂಜೆಯನ್ನು ಕೈಗೊಳಲಿದ್ದಾರೆ. ನೀವು, ರಾಮದೇವಸ್ಥಾನದ ಆವರಣದಲ್ಲಿ, ಗೋವುಗಳ ‘ಅಂಬಾ’ ಆಲಾಪದ ಮಧ್ಯೆ‌ ಕೂತಿದ್ದೀರಿ, ಕಣ್ಣಲ್ಲಿ ಗುರುಗಳನ್ನು ಹಾಗೂ ರಾಮದೇವರನ್ನು ತುಂಬಿಕೊಂಡಿದ್ದೀರಿ, ಕಿವಿಗಳಿಂದ ವೇದಮಂತ್ರ, ಘಂಟೆ, ಶಂಖ, ನಗಾರಿ ಶುಭವಾದ್ಯಗಳ ಘೋಷ ಕೇಳುತ್ತಿದ್ದೀರಿ, ಮನಸ್ಸಿನಲ್ಲಿ […]

Continue Reading

ರಾಮಚಂದ್ರಾಪುರ-ಶಕಟಪುರ ಶಂಕರಪೀಠಗಳ ಸಮಾಗಮ 

ಶ್ರೀರಾಮಚಂದ್ರಾಪುರ ಮಠ‌ ಹಾಗೂ ಶಕಟಪುರ ಮಠಗಳ ನಡುವೆ ಅದ್ವೈತದ ಬಾಂಧವ್ಯವಿದೆ. ಇದು ರಾಜರಾಜೇಶ್ವರೀ ಅನುಗ್ರಹಿಸಿರುವ ಬಾಂಧವ್ಯ. ಈ ಬಾಂಧವ್ಯಕ್ಕೆ ಅವಳೇ ಸೇತುವೆ. ಎರಡೆಂದು ಕಂಡರೂ ಈ ಪೀಠಗಳು ಒಂದೇ ಎನ್ನುವ ಭಾವವೇರ್ಪಟ್ಟಿದೆ ಎಂದು ಶ್ರೀಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ನುಡಿದರು. ಶಕಟಪುರದ ಶ್ರೀವಿದ್ಯಾಪೀಠದ ಪರಮಪೂಜ್ಯ ಶ್ರೀಜಗದ್ಗುರು ಬದರೀ ಶಂಕರಾಚಾರ್ಯ ಶ್ರೀತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು. ಶಕಟಪುರದ […]

Continue Reading

ಶಿಷ್ಯ ಹಿತಮ್ – ಸುವರ್ಣ ಪಾದುಕೆಯ ಸ್ವರ್ಣಿಮಯಾತ್ರೆ

  ಶ್ರೀರಾಮಚಂದ್ರಾಪುರ ಮಠದ ಶಿಷ್ಯತ್ವವನ್ನು ಅಂಗೀಕರಿಸಿದ ಪ್ರತಿಯೊಬ್ಬ ಭಕ್ತನ ಹಿತವನ್ನು ಬಯಸಿ ಅವರ ಹೆಸರು, ನಕ್ಷತ್ರ,.ರಾಶಿಯನ್ನು ಹೇಳಿ, ಸಂಕಲ್ಪ ಮಾಡಿ ಭಗವಂತನಲ್ಲಿ ಸಂಪ್ರಾರ್ಥನೆ ಮಾಡಿ ವಿಹಿತವಾದ ಒಂದು ಉತ್ತಮ ಕರ್ಮವನ್ನು ಮಾಡುವುದು’ ಶಿಷ್ಯ ಹಿತಮ್’ ನ ಉದ್ದೇಶ. ಇದರ ಅಂಗವಾಗಿ ಶ್ರೀಗುರುಪೀಠದ ಆಶೀರ್ವಾದವನ್ನು ಪಡೆದುಕೊಂಡು ಸುವರ್ಣ ಪಾದುಕೆಯು ಶಿಷ್ಯರ ಮನೆ ಮನೆಗಳಿಗೆ ಆಗಮಿಸಲಿದೆ. ‘ ಶ್ರೀಗುರುಗಳು ಶಿಷ್ಯರಿಗೆ ತಾವಾಗಿಯೇ ತಿಳಿದು ಕೊಟ್ಟ ಅನುಗ್ರಹಕ್ಕೆ ತುಂಬಾ ಫಲವಿದೆಯಂತೆ. ಅದೇ ರೀತಿಯಲ್ಲಿ ನಾವು ಕರೆಯದೆ ಗುರುಗಳು ತಾವಾಗಿಯೇ ನಮ್ಮ ಮನೆಗಳಿಗೆ […]

Continue Reading

ಅಕ್ಟೊಬರ್ – 11 – ಪಂಚಮಿ – ಶನಿವಾರ

  ಕಾರ್ಯಕ್ರಮದ ವಿವರ ಭಿಕ್ಷಾಸೇವೆ – ಡಾ. ವಿಶ್ವನಾಥ ಭಟ್ ಮೊಕ್ಕಾಂ – ರಾಮಾಶ್ರಮ ಗಿರಿನಗರ 6.00am ಶ್ರೀಪೂಜೆ 12.00pmಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ ಆಶೀರ್ವಾದ 1.15pm ಪ್ರಯಾಣ ಗಿರಿನಗರ 3.15pm ರಾಮಾಶ್ರಮದಲ್ಲಿ ಸ್ವಾಗತ, ಫಲಸಮರ್ಪಣೆ 6.03pm ಶ್ರೀಪೂಜೆ

Continue Reading

ಶ್ರೀಮಠದ ಅಂಗ ಸಂಸ್ಥೆಗಳಲ್ಲಿ ನವರಾತ್ರಿ ಉತ್ಸವ

ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಸೆ.22ರಿಂದ ಅ.2ರವರೆಗೆ ನವರಾತ್ರ ನಮಸ್ಯಾ ಕಾರ್ಯಕ್ರಮ ನಡೆಯಿತು. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ, ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ, ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಸಂಪನ್ನಗೊಂಡಿತು. ——— ನವರಾತ್ರಿ ಮಹೋತ್ಸವದ ಅಂಗವಾಗಿ ಬೆಂಗಳೂರು ಶ್ರೀ ಭಾರತೀ ವಿದ್ಯಾಲಯದಲ್ಲಿ 26 ಸೆಪ್ಟೆಂಬರ್ 2025ರಂದು ಭಕ್ತಿಯಿಂದ ಹಾಗೂ ಸಂಭ್ರಮದಿಂದ ಸರಸ್ವತಿ ಪೂಜೆ ಆಚರಿಸಲಾಯಿತು. ವಿದ್ಯೆ ಮತ್ತು ಜ್ಞಾನದ […]

Continue Reading

ಸೇವೆಗೆ ಫಲ ಇದೆ ಅದು ಶಾಶ್ವತ ಧನ್ಯತೆ ನೀಡಲಿದೆ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ನಿಸ್ವಾರ್ಥವಾದ ಸೇವೆಗೆ ವಿಶೇಷ ಫಲವಿದೆ ಮತ್ತು ಅದು ಶಾಶ್ವತವಾದ ಧನ್ಯತೆಯನ್ನು ನೀಡಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.   ಸಾಗರ ಅಗ್ರಹಾರದ ಶ್ರೀರಾಘವೇಶ್ವರ ಸಭಾ ಭವನ ಸಮಿತಿ  ಏರ್ಪಡಿಸಿದ್ದ ಭವನ  ನಿರ್ಮಾಣಕ್ಕೆ ಸಹಕರಿಸಿದವರಿಗೆ ಗೌರವ ಸಮರ್ಪಣೆ ಧನ್ಯಾನುಗ್ರಹ ಸಮಾರಂಭದಲ್ಲಿ ಅವರು ದಿವ್ಯಸಾನ್ನಿಧ್ಯವಹಿಸಿ ದಾನಿಗಳಿಗೆ ಆಶೀರ್ವದಿಸಿ ನಂತರ ಆಶೀರ್ವಚನ ನೀಡಿದರು. ನಮ್ಮ ದೊಡ್ಡ ಗುರುಗಳು ಆ ಕಷ್ಟ ಕಾಲದಲ್ಲಿಯೂ ಇಲ್ಲಿಯ ನೆಲ ಖರೀದಿಸಿ ಕಾಪಾಡಿಕೊಂಡು ಬಂದಿರುವುದು ಒಂದು ಸಂಗತಿಯಾದರೆ ತಾಯಿ […]

Continue Reading

ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಇಲ್ಲ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಆತ್ಮ ವಿಶ್ವಾಸಕ್ಕಿಂತ ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಬೇರೆ ಯಾವುದೂ ಇಲ್ಲ. ನಾವು ಮಾಡುವ ಕೆಲಸದಲ್ಲಿ ಯಶಸ್ಸು ಸಾಧ್ಯ ಎನ್ನುವ ಆತ್ಮವಿಶ್ವಾಸ ಇದ್ದರೆ ಆ ಕೆಲಸದಲ್ಲಿ ಸಾಧನೆ ಖಚಿತ. ಆರಂಭದಲ್ಲಿಯೇ ಸಾಧ್ಯವಾ.. ಸಾಧ್ಯವಿಲ್ಲ ಎನ್ನುವ ಅನುಮಾನಗಳು ಹುಟ್ಟಿದರೆ ಒಂದು ಹೆಜ್ಜೆಯನ್ನೂ ಮುಂದಿಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀರಾಘವೇಶ್ವರ ಭವನದಲ್ಲಿ ಕಳೆದ 15 ದಿನಗಳಿಂದ ನಡೆದ ‘ನವರಾತ್ರ ನಮಸ್ಯಾ’ ಸಮಾರೋಪ ಧಾರ್ಮಿಕ ಸಭೆಯಲ್ಲಿ ಶನಿವಾರ ಅವರು ಆಶೀರ್ವಚನ […]

Continue Reading

ಸಂಘ ಜೀವಿಯಾಗಿ ಬದುಕಿ, ಆಧ್ಯಾತ್ಮಿಕಕ್ಕೆ ಶರಣಾಗಿ : ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು

ಸಾಗರ: ಸಾಮಾಜಿಕವಾಗಿ ಬದುಕನ್ನು ಕಂಡುಕೊಳ್ಳುವವನಿಗೆ ಒಂಟಿತನ ಎಂದೂ ಕಾಡುವುದಿಲ್ಲ ಹಾಗಾಗಿ ಸಂಘ ಜೀವಿಯಾಗಿ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾ ಲಲಿತೋಪಾಖ್ಯಾನ ಪ್ರವಚನದ ಸಮಾರೋಪದಲ್ಲಿ ಅವರು ನುಡಿದರು. ಪ್ರಸ್ತುತ ದಿನಮಾನದಲ್ಲಿ ವೃದ್ದರನ್ನು ಒಂಟಿಯಾಗಿ ಬಿಟ್ಟು ಹೋಗಲಾಗುತ್ತಿದೆ ಆಗೆಲ್ಲ ಅವರನ್ನು ಒಂಟಿತನ ಕಾಡುವುದು ಸಹಜ ಆದರೆ ಸಂಘ ಜೀವಿಯಾಗುವುದು ಒಂದು ಪ್ರಯೋಜನವಾದರೆ ಮೊದಲಿಂದಲೂ ಆಧ್ಯಾತ್ಮಿಕಕ್ಕೆ ಶರಣಾಗಿ ಬದುಕಿದರೆ ಕೊನೆಯಲ್ಲಿ […]

Continue Reading