ಸೆಪ್ಟೆಂಬರ್ – 30 – ಅಷ್ಟಮಿ – ಮಂಗಳವಾರ
ಕಾರ್ಯಕ್ರಮದ ವಿವರ ಮೊಕ್ಕಾಂ – ರಾಘವೇಶ್ವರ ಸಭಾಭವನ – ಸಾಗರ 9.30am ಶ್ರೀಪೂಜೆ 3.15pm ಲಲಿತೋಪಾಖ್ಯಾನ ಪ್ರವಚನ 7.30pm ಶ್ರೀಪೂಜೆ
Continue Readingಕಾರ್ಯಕ್ರಮದ ವಿವರ ಮೊಕ್ಕಾಂ – ರಾಘವೇಶ್ವರ ಸಭಾಭವನ – ಸಾಗರ 9.30am ಶ್ರೀಪೂಜೆ 3.15pm ಲಲಿತೋಪಾಖ್ಯಾನ ಪ್ರವಚನ 7.30pm ಶ್ರೀಪೂಜೆ
Continue Readingಸಾಗರ: ದೇವಿಯಲ್ಲಿ ಸಹಜಾನಂದದ ಪ್ರತೀಕವಾದ ಕರುಣೆಯ ಮಂದಹಾಸವೂ ಇದೆ. ವಿವಿಧ ರೀತಿಯ ಆಯುಧಗಳನ್ನು ದೇವಿ ಧರಿಸಿದ್ದಾಳೆ. ನಾವು ಭಂಡಾಸುರರಾದರೆ ದೇವಿ ಆಯುಧ ಪ್ರಯೋಗ ಮಾಡುತ್ತಾಳೆ. ನಾವು ಪುಣ್ಯದ ದಾರಿಯಲ್ಲಿ ಸಾಗಿದರೆ ದೇವಿಯ ಕರುಣೆಗೆ ಪಾತ್ರರಾಗುತ್ತೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ‘ನವರಾತ್ರ ನಮಸ್ಯಾ’ ದ ಏಳನೇ ದಿನ ಲಲಿತೋಪಾಖ್ಯಾನ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿದರು. ನಮ್ಮ ನಡೆ ನುಡಿಗಳು ನಾವು ದೇವಿಯ ಕರುಣಾಪೂರಿತ […]
Continue Readingಸಾಗರ: ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ ಬದಲಾಗಿ ದೇವಿಯ ಆರಾಧನೆ ಕಾಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆ, […]
Continue Readingಕಾರ್ಯಕ್ರಮದ ವಿವರ ಮೊಕ್ಕಾಂ – ರಾಘವೇಶ್ವರ ಸಭಾಭವನ – ಸಾಗರ 9.30am ಶ್ರೀಪೂಜೆ 3.15pm ಲಲಿತೋಪಾಖ್ಯಾನ ಪ್ರವಚನ 7.30pm ಶ್ರೀಪೂಜೆ
Continue Readingಸಾಗರ: ನಾವು ನಮ್ಮ ವಶದಲ್ಲಿರಬೇಕು. ಹಾಗಿದ್ದರೆ ಮಾತ್ರ ನೆಮ್ಮದಿ. ಮನಸ್ಸು, ದೇಹ ನಮ್ಮ ವಶದಲ್ಲಿಲ್ಲ ಎಂದಾದರೆ ಯಾವ ಸಾಧನೆಯನ್ನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ‘ನವರಾತ್ರ ನಮಸ್ಯಾ’ದ ಐದನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಇಂದು ಊರು, ರಾಜ್ಯ ಜಗತ್ತು ತನ್ನ ವಶವಾಗಬೇಕು ಎನ್ನುವ ಮನಸ್ಸು ಹೊಂದಿರುವ ಮನುಷ್ಯ ತನ್ನನ್ನು ತಾನು ವಶವಿಟ್ಟುಕೊಳ್ಳಲಾಗದಿರುವ ಪರಿಸ್ಥಿತಿಯಲ್ಲಿದ್ದಾನೆ. ಕ್ಷಣಕ್ಕೂ […]
Continue Readingಸಾಗರ: ಜಗತ್ತಿನಲ್ಲಿ ಸಹನೆಗಿಂತ ಮತ್ತೊಂದು ದೊಡ್ಡ ಅಸ್ತ್ರ ಇಲ್ಲವೇ ಇಲ್ಲ. ಕಷ್ಟ ಎದುರಿಸುವ ಆತ್ಮಸ್ಥೈರ್ಯ ಸದಾ ಬೆಳೆಸಿಕೊಳ್ಳಬೇಕು, ದೇವತೆಗಳಿಗೂ ಕಷ್ಟ ಬಂದಾಗ ಅದನ್ನು ಸಹನೆಯಿಂದ ಕೇಳಿ, ಸ್ಥೈರ್ಯ ನೀಡಿದ ದೇವಿ ಸಹನೆಗೊಂದು ಆದರ್ಶ ಎಂದು ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ – ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾ 4 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ದೇವಿಯ ಸಹನೆಯನ್ನು ಬಣ್ಣಿಸುವಾಗ […]
Continue Readingಸಾಗರ : ದೇವಿಯ ನಾಮ ಕಿವಿಯ ಮೇಲೆ ಬೀಳುವುದಕ್ಕೂ ಪುಣ್ಯಯೋಗ ಬೇಕು ಅದೃಷ್ಟವೂ ಇರಬೇಕು ಅನುಷ್ಠಾನದ ಭಾವವಿರಬೇಕು ಅಂತವರ ಬದುಕಿನಲ್ಲಿ ಆಕೆಯ ಕರುಣೆಯ ಕಿರಣ ಬೀಳಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಮೂರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ದೇವರ ಪೂಜೆ ಮಾಡುವುದು ಎಷ್ಟು ಮುಖ್ಯವೋ ಅದರಲ್ಲಿ ಏಕಾಗ್ರತೆಯೂ ಅಷ್ಟೇ ಮುಖ್ಯ ಮತ್ತು ಪ್ರಾರ್ಥನೆಯೂ ಒಳ್ಳೆಯದೇ ಇರಬೇಕು, […]
Continue Readingಸಾಗರ: ಕರ್ಮದಿಂದ ಅಲ್ಲ ತ್ಯಾಗದಿಂದ ಮಾತ್ರ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯವಾಗುತ್ತದೆ. ನಮ್ಮಲ್ಲಿ ಸ್ವಾರ್ಥ ಇಲ್ಲದೆ, ನಮ್ಮಲ್ಲಿರುವ ಸಮಸ್ತವನ್ನು ಸಮರ್ಪಿಸುವ ಮನೋಭಾವ ಇದ್ದಾಗ ದೇವರ ಒಲುಮೆ ಸಾಧ್ಯ. ಅಂತಹ ಒಲುಮೆ ಪಡೆಯಬೇಕಾದರೆ ನಮ್ಮಲ್ಲಿರುವ ನಾನು ನನ್ನದು ಎನ್ನುವ ಮೋಹ ತ್ಯಜಿಸಬೇಕು. ಅದೇ ತ್ಯಾಗ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಎರಡನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಆಶೀರ್ವಚನ ನೀಡಿದರು. ನಿತ್ಯ ಬೇರೆಬೇರೆ […]
Continue Readingಬೆಂಗಳೂರು: ಗ್ರಾಮರಾಜ್ಯದ ಮುಖ್ಯಸ್ಥಾನಕ್ಕೆ ಯೋಜನಾ ಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶ ಶರ್ಮಾ ಸಂಪ ಭೇಟಿ ನೀಡಿದರು. ‘ಗ್ರಾಮರಾಜ್ಯ’ ನಮ್ಮ ದಿನಸಿ ಮತ್ತಿತರ ಗೃಹೋಪಯೋಗಿ ವಸ್ತುಗಳನ್ನು ರೈತರು ಮತ್ತು ಉತ್ಪಾದಕರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ತಲುಪಿಸುವ ಒಂದು ಸಮಾಜೋಪಯೋಗಿ ಸಂಸ್ಥೆ. ವಾಣಿಜ್ಯದ ಆಸಕ್ತಿ ಇರದ ಸೇವಾಸಂಸ್ಥೆ. ಈ ಮೂಲಕ ಗ್ರಾಮಗಳನ್ನು ಸದೃಢಗೊಳಿಸುವ ಮಹತ್ತ್ವಾಕಾಂಕ್ಷೆಯ ಅಭಿಯಾನ. ಜೊತೆಗೆ ಗ್ರಾಹಕರ ದೈನಂದಿನವನ್ನೂ ಸ್ವಸ್ಥಗೊಳಿಸುವ ಸದುದ್ದೇಶವೂ ಇದರದ್ದು. ಬೆಂಗಳೂರಿನಲ್ಲಿ ಕೇಂದ್ರಸ್ಥಾನವಲ್ಲದೆ, ಅಸಂಖ್ಯ ಶಾಖೆಗಳನ್ನೂ ಹೊಂದಿ, ರಾಜ್ಯದ ಆಯ್ದ ಪ್ರದೇಶಗಳಲ್ಲೂ ಇದು ಕಾರ್ಯ […]
Continue Readingಮಾಣಿ: ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ಶಾಸನತಂತ್ರ ಸೇವಾಖಂಡ ಕಾರ್ಯಗಾರ – ೨ ೨೧/೦೯/೨೦೨೫ರಂದು ನಡೆಯಿತು. ಬೆಳಗ್ಗೆ ಶ್ರೀರಾಮ ದೇವರ ಸನ್ನಿಧಿ ಮುಂಭಾಗದಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಸಂಪನ್ಮೂಲ ಖಂಡದ ಶ್ರೀಸಂಯೋಜಕ ಹಾರಕರೆ ನಾರಾಯಣ ಭಟ್ ಹಾಗೂ ಮುಳ್ಳೇರಿಯ ಮಂಡಲ ಅಧ್ಯಕ್ಷ ಸರ್ಪಮಲೆ ಬಾಲಸುಬ್ರಹ್ಮಣ್ಯ ಭಟ್ ದೀಪಪ್ರಜ್ವಲಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಶಾಸನ ತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಅರ್ಹತೆಯ ಅಷ್ಟ ಸೂತ್ರಗಳ ಬಗ್ಗೆ ಸೇವಾ ಬಿಂದುಗಳಿಗೆ ತಿಳಿಸಿಕೊಟ್ಟರು. ಶಾಸನ ತಂತ್ರದ ಕಾರ್ಯದರ್ಶಿ […]
Continue Readingಸಾಗರ: ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ ಮಾಡುವುದಕ್ಕೆ ಮನಸ್ಸಿಲ್ಲ. ದುಃಖ ಬೇಡ, ಆದರೆ ದುಃಖದ ಮೂಲವಾದ ಪಾಪ ಮಾಡುವುದನ್ನು ನಿಲ್ಲಿಸುವುದಿಲ್ಲ. ಇದು ಬದಲಾಗಿ ಪುಣ್ಯದ ಕಾರ್ಯದಲ್ಲಿ ಮನಸ್ಸು, ದುಃಖದಿಂದ ದೂರವಿರುವ ಕಾರ್ಯ ಮಾಡುವಂತಾಗಲು ಇರುವ ದಾರಿ ಒಂದೇ. ಅದು ಜಗನ್ಮಾತೆಯಾದ ರಾಜರಾಜೇಶ್ವರಿಯ ಧ್ಯಾನ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು. ಸೋಮವಾರ ಸಾಗರದ ರಾಘವೇಶ್ವರ ಸಭಾಭವನದಲ್ಲಿ ಆರಂಭಗೊಂಡ ’ನವರಾತ್ರ ನಮಸ್ಯಾ’ ಕಾರ್ಯಕ್ರಮದಲ್ಲಿ ಶ್ರೀ […]
Continue Readingಸಾಗರ: ರಾಘವೇಶ್ವರ ಸಭಾ ಭವನದಲ್ಲಿ ಸೆ.೨೨ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು. ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು ೧೦ ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು ೧.೫ ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. ೨ ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ […]
Continue Readingಸಾಗರ: ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಸಭಾ ಭವನದಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಸೆ.22 ರಿಂದ ನಡೆಯಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ […]
Continue Readingಗೋಕರ್ಣ: ಅಶೋಕೆಯಲ್ಲಿ ನಡೆದ ಮುಳ್ಳೇರಿಯಾ ಮಂಡಲದ ಛಾತ್ರ ಭಿಕ್ಷೆಯಂದು ಶ್ರೀರಾಮಚಂದ್ರಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ವಿ. ವಿ. ವಿ. ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳ ಸಾಂಕೇತಿಕವಾಗಿ ಸಮರ್ಪಣೆ ಮಾಡಲಾಗಿತ್ತು. ಗುಂಪೆ ವಲಯದ ಮಾತೃಪ್ರಧಾನೆ ಗುಂಪೆ ಕಾವೇರಿ ಅಮ್ಮ ವಾಗ್ದಾನ ಮಾಡಿದಂತೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಅಂದಾಜು ೨೦,೦೦೦ ಮೌಲ್ಯದ ಕಲಿಕೋಪಕರಣಗಳನ್ನು ಶ್ರೀಮಠದ ಶಾಸನತಂತ್ರದ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ ಎಡಪ್ಪಾಡಿ ಮೂಲಕ ಸೆ.೧೫ ರಂದು ಸಮರ್ಪಣೆ ಮಾಡಿದರು. ಅಶೋಕೆಯ ಇಂಜಿನಿಯರ್ ವಿಷ್ಣುಪ್ರಸಾದ್ ಬನಾರಿ ಉಪಸ್ಥಿತರಿದ್ದರು.
Continue Readingಮಂಗಳೂರು: ದ.ಕ. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ವತಿಯಿಂದ ನಡೆದ ೨೦೨೫-೨೬ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ಅಮನ್ ಕೆ. ದೇವಾಡಿಗ ೧೪ರ ವಯೋಮಾನ ವಿಭಾಗದ ೫೦ ಮೀ., ೧೦೦ ಮೀ. ಮತ್ತು ೨೦೦ ಮೀ. ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ೩ […]
Continue Readingಬೆಂಗಳೂರು: ಯೋಜನಾ ಖಂಡದ ಉದ್ದೇಶ, ರೂಪುರೇಷೆಗಳನ್ನು ಸದಸ್ಯರಿಗೆ ತಿಳಿಸುವ ಮತ್ತು ಸದಸ್ಯರ ಜವಾಬ್ದಾರಿಯ ಕಾರ್ಯದೀಕ್ಷೆಯನ್ನು ವಿಧಿಸುವ ಕಾರ್ಯಾಗಾರ ಬೆಂಗಳೂರಿನ ರಾಮಚಂದ್ರಾಪುರಮಠದ ಶಾಖೆ ರಾಮಾಶ್ರಮದಲ್ಲಿ ೧೪ ಸೆಪ್ಟೆಂಬರ್ ೨೦೨೫ ರಂದು ನಡೆಯಿತು. ಸಭಾ ಪೂಜೆಯನ್ನು ಯೋಜನಾಖಂಡದ ಸಂಯೋಜಕ ಕೆ ಎನ್ ಭಟ್ ನಡೆಸಿದರು. ಯೋಜನಾಖಂಡದ ಶ್ರೀ ಸಂಯೋಜಕ ವಿದ್ವಾನ್ ಜಗದೀಶ ಶರ್ಮ ಸಂಪ ಸಮಗ್ರವಾಗಿ ಶಾಸನ ತಂತ್ರ, ಅದರ ಕಾರ್ಯವಿಧಾನ, ಯೋಜನಾ ಖಂಡ, ಅದರಲ್ಲಿನ ಉಪಖಂಡ, ಅವುಗಳ ಕಾರ್ಯ ವ್ಯಾಪ್ತಿ ಇದೆಲ್ಲದರ ಕುರಿತು ವಿವರವಾಗಿ ಬಿಡಿಸಿ ತಿಳಿಸಿಕೊಟ್ಟರು. ಶಾಸನತಂತ್ರದ […]
Continue Readingಸಾಗರ: ನವರಾತ್ರ ನಮಸ್ಯಾ ಕಾರ್ಯಕ್ರಮದ ಪ್ರಯುಕ್ತ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಪುರ ಪ್ರವೇಶದ ಅಲಂಕಾರವನ್ನು ಗಣ್ಯರು ವೀಕ್ಷಿಸಿದರು. ಸಾಗರದಲ್ಲಿ ಭರ್ಜರಿಯಾಗಿ ನಡೆಯುತ್ತಿರುವ ಶ್ರೀ ಗುರುಗಳ ಪುರ ಪ್ರವೇಶದ ಸುಂದರ ಅಲಂಕಾರವನ್ನು ನೋಡಲು ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ಮಾಜಿ ಸಚಿವ ಹರತಾಳು ಹಾಲಪ್ಪ, ನಗರಸಭಾ ಸದಸ್ಯ ಟಿ ಡಿ ಮೇಘರಾಜ್, ಪುರ ಪ್ರವೇಶ ಮತ್ತು ನಗರ ಅಲಂಕಾರ ಸಮಿತಿಯ ಸಂಚಾಲಕ ಗಣೇಶ್ ಪ್ರಸಾದ್ ಕೆ. ಆರ್., ಸಾಗರ ಪುರ ಪ್ರವೇಶ ಗೀತೆಯ ಸಂಗೀತ […]
Continue Readingಸಾಗರ: ಶ್ರೀ ರಾಮಚಂದ್ರಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾಗರ ಪುರ ಪ್ರವೇಶ ಸೆ.20 ರಂದು ಸಂಜೆ 5 ಗಂಟೆಗೆ ಅತ್ಯಂತ ಅದ್ಧೂರಿ ಯಾಗಿ ನಡೆಯಲಿದೆ. ಸಾಗರ ಪೇಟೆ ಪೊಲೀಸ್ ಠಾಣೆ ಎದುರು ಪೂರ್ಣಕುಂಭ ಸ್ವಾಗತ ಹಾಗೂ ಬೃಹತ್ ಮೆರವಣಿಗೆಯಲ್ಲಿ ಶ್ರೀಗಳನ್ನು ಬರಮಾಡಿ ಕೊಳ್ಳಲಾಗುತ್ತಿದೆ ಎಂದು ಕೆ.ಎಸ್.ಗುರುಮೂರ್ತಿ ಹೇಳಿದರು. ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಸೆ. 22ರಿಂದ ಅ. 4 ರವರೆಗೆ ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಸಭಾ ಭವನದಲ್ಲಿ ಹೊಸನಗರ ರಾಮಚಂದ್ರಪುರ ಮಠದ […]
Continue Readingಮುಳ್ಳೇರಿಯಾ: ಮಂಡಲದ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಭೊಜನ ಶಾಲೆಗೆ ಹ್ಯಾಪಿ ಹವ್ಯಕ ವಾಟ್ಸಪ್ ಬಳಗದಿಂದ ಸಹಾಯಧನವನ್ನು ವಿತರಿಸಲಾಯಿತು. ಗುಂಪಿನಲ್ಲಿರುವ 60 ಜನರು ಈ ಕಾರ್ಯದಲ್ಲಿ ಭಾಗಿಯಾಗಿ 60606 ರೂ. ಸಂಗ್ರಹಿಸಿ ವಿದ್ಯಾಪೀಠಕ್ಕೆ ಸಮರ್ಪಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ ಹಿಳ್ಳೆಮನೆ, ಕೋಶಾಧಿಕಾರಿ ಉದನೇಶ್ವರ ಪ್ರಸಾದ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಭೆ ಮಾರ್ಗ, ಹಿರಿಯ ಅಧ್ಯಾಪಕರಾದ ಬಾಲಕೃಷ್ಣ ಶರ್ಮ ದೇಣಿಗೆಯನ್ನು ಸ್ವೀಕರಿಸಿದರು. […]
Continue Readingಹನೂರು: ಕೌದಳ್ಳಿಯಲ್ಲಿ ಗೋಫಲ ಟ್ರಸ್ಟ್ನ ಘಟಕಕ್ಕೆ ಶ್ರೀಕ್ಷೇತ್ರ ಸಿದ್ಧಗಿರಿ ಮಹಾಸಂಸ್ಥಾನ, ಕನ್ನೇರಿ ಮಠದ ಪೀಠಾಧಿಪತಿಗಳಾದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿಯವರು ಭೇಟಿ ನೀಡಿದರು. 2017 ರಲ್ಲಿ ಹನೂರು ತಾಲೂಕಿನಲ್ಲಿ ಬರಗಾಲ ಸಂದರ್ಭದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ರಾಮಚಂದ್ರಪುರ ಮಠವು ಗೋವುಗಳಿಗೆ ಮೇವು ಕೊಟ್ಟಿರುವುದನ್ನು ಗಮನಕ್ಕೆ ತರಲಾಯಿತು. ಶ್ರೀ ರಾಮಚಂದ್ರಾಪುರ ಮಠವು ಈಗ ಗೋಫಲ ಟ್ರಸ್ಟಿನ ಮೂಲಕ ಸಾವಯವ ಗೊಬ್ಬರ ಘಟಕ ಮಾಡಿ ಗೋಪಾಲಕರಿಂದ ಉತ್ತಮ ಮೌಲ್ಯದೊಂದಿಗೆ ಸೆಗಣಿ ಖರೀದಿ ಮಾಡುವುದರ ಮೂಲಕ ಗೋಪಾಲಕರಿಗೆ […]
Continue Reading