ಸೇವೆಯಿಂದ ದಿವ್ಯತೆ, ಪವಿತ್ರತೆ ಪ್ರಾಪ್ತಿ: ರಾಘವೇಶ್ವರ ಸ್ವಾಮೀಜಿ

ಮಂಗಳೂರು: ಮಠಕ್ಕೆ ಭೇಟಿ ನೀಡುವುದೇ ಒಂದು ಪುಣ್ಯಸ್ನಾನ ಇದ್ದಂತೆ. ಸೇವೆ ಸಲ್ಲಿಸುವುದು ಇನ್ನಷ್ಟು ಶ್ರೇಷ್ಠ. ನಮ್ಮ ಜೀವ- ಆತ್ಮವನ್ನು ಶುಚಿಗೊಳಿಸುವಂಥದ್ದು. ದಿವ್ಯತೆ, ಶುದ್ಧತೆ, ಪವಿತ್ರತೆ ನಮಗೆ ಗುರುಸೇವೆಯಿಂದ ಪ್ರಾಪ್ತವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಮಾಣಿಯ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ 49ನೇ ವಾರ್ಷಿಕೋತ್ಸವ ಮತ್ತು ಸೂತ್ರಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಮಠದ ಕೆಲಸ ಕಾರ್ಯ, ಸೇವೆ ನಮ್ಮ ಜೀವನದ ಸಾರ್ಥಕತೆಗಾಗಿ ಇರುವಂಥದ್ದು. ಅತೀವ ಶಾಂತಿ- ಸಮಾಧಾನವನ್ನು […]

Continue Reading

ತಮ್ಮತನ ಕಾಯ್ದುಕೊಂಡು ಸಮಗ್ರ ಹಿಂದೂ ಸಮಾಜಕ್ಕೆ ಕೊಡುಗೆ ನೀಡಿ: ರಾಘವೇಶ್ವರ ಶ್ರೀ ಹಿತವಚನ

ಪುತ್ತೂರು: ಹಿಂದೂ ಸಮಾಜದ ಪ್ರತಿಯೊಂದು ಸಮುದಾಯಗಳು ತಮ್ಮ ವೈಶಿಷ್ಯವನ್ನು ಕಾಪಾಡಿಕೊಂಡು ಸಮಗ್ರ ಹಿಂದೂ ಸಮಾಜ ಬೆಳೆಯಲು ಕೊಡುಗೆ ನೀಡಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಪುತ್ತೂರಿನ ಹವ್ಯಕ ಸಭಾಭವನ ಸಮರ್ಪಣಮ್ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಪರಮಪೂಜ್ಯರು, “ಸಮಾಜದ ಯಾವುದೇ ಸಮುದಾಯಗಳು ತಮ್ಮತನವನ್ನು ಮರೆತರೆ ಹಿಂದೂ ಸಮಾಜಕ್ಕೆ ಅಸ್ತಿತ್ವ ಇಲ್ಲ. ಆಯಾ ಸಮಾಜ ತನ್ನ ವೈಶಿಷ್ಟ್ಯಗಳನ್ನು, ನಡೆ, ನುಡಿ, ಆಚಾರ ವಿಚಾರಗಳನ್ನು ಕಾಪಾಡಿಕೊಂಡು ಬಂದರೆ ಮಾತ್ರ ಹಿಂದೂ ಸಮಾಜ ಎದ್ದು ನಿಲ್ಲಲು ಸಾಧ್ಯ. […]

Continue Reading

ಹವ್ಯಕ ಸಭಾಭವನ ಉದ್ಘಾಟನೆ

ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಪುತ್ತೂರಿನಲ್ಲಿ ನೂತನವಾಗಿ ನಿರ್ಮಿಸಿರುವ ‘ಹವ್ಯಕ ಸಭಾಭವನ’ ದ ಉದ್ಘಾಟನಾ ಕಾರ್ಯಕ್ರಮ ಜನವರಿ 2 ಭಾನುವಾರ 11.30 ಕ್ಕೆ ನಡೆಯಲಿದೆ. ಶ್ರೀರಾಮಚಂದ್ರಾಪುರಮಠದ ಗೋಕರ್ಣಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲಿದ್ದು, ಕೇಂದ್ರ ಮಾಜಿ ಸಚಿವರಾದ ಡಿ.ವಿ ಸದಾನಂದ ಗೌಡ ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಅಭ್ಯಾಗತರಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ಸಚಿವರಾದ ಎಸ್ ಅಂಗಾರ, ಸುನಿಲ್ ಕುಮಾರ್, ಸಂಸದ ಹಾಗು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ […]

Continue Reading

ಭಾವ, ರಾಗ, ತಾಳ ಮೇಳೈಸಿದರೆ ಜೀವನ ಆಹ್ಲಾದಕರ: ರಾಘವೇಶ್ವರ ಶ್ರೀ

ಗೋಕರ್ಣ: ಭಾವ, ರಾಗ, ತಾಳ ಮೇಳೈಸಿದಾಗ ಸಂಗೀತ ಹೇಗೆ ಸುಶ್ರಾವ್ಯವಾಗುವುದೋ ಜೀವನ ಆಹ್ಲಾದಕರ ಆಗಬೇಕಾದರೆ ಮನಸ್ಸು, ಮಾತು ಮತ್ತು ಕೃತಿ ಒಂದಾಗಬೇಕು ಎಂದು ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಶುಕ್ರವಾರ ಅಶೋಕೆಯ ವಿದ್ಯಾವಿಶ್ವ ಸಭಾಂಗಣದಲ್ಲಿ ಆಯೋಜಿಸಿದ್ದ ಭಾವಸಂಗೀತೋತ್ಸವದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಜೀವನ ಕೂಡಾ ಒಂದು ಸಂಗೀತ. ಜೀವನ ಮುನ್ನಡೆಯಬೇಕಾದರೆ ಅಂದರೆ ಜೀವನದಲ್ಲಿ ‘ಭರತ’ ಬರಬೇಕಾದರೆ ಭಾವ, ರಾಗ ಹಾಗೂ ತಾಳ ಅಗತ್ಯ. […]

Continue Reading

ಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುತ್ತದೆ – ರಾಘವೇಶ್ವರಶ್ರೀ

ಧರ್ಮಪರ ಸರಕಾರಗಳು ಎಷ್ಟು ಮುಖ್ಯವೋ ಧರ್ಮಪರ ಶಿಕ್ಷಣ ಸಂಸ್ಥೆಗಳೂ ಅಷ್ಟೇ ಮುಖ್ಯ. ಧರ್ಮ-ಸಂಸ್ಕೃತಿ ಆಧಾರಿತ ಶಿಕ್ಷಣ ದೇಶಕ್ಕೆ ಅಗತ್ಯ.ಸರಕಾರಗಳು ರಸ್ತೆ ಸಹಿತ ಮೂಲಭೂತ ಸೌಕರ್ಯಗಳ ಕುರಿತಂತೆ ಬಹಿರಂಗ ಕಾರ್ಯಗಳನ್ನು ಮಾಡಿದರೆ ಶಾಲೆಗಳು ಪ್ರತೀ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಇ) ಇದರ ನೂತನ ಕಟ್ಟಡ ಉದ್ಘಾಟಿಸಿ ಆಶೀರ್ವಚನ ನೀಡಿದರು. […]

Continue Reading

ವಿವಿವಿಯಲ್ಲಿ ಎರಡು ದಿನಗಳ ಸಂಗೀತೋತ್ಸವಕ್ಕೆ ತೆರೆ ಸಂಗೀತ ಮೋಕ್ಷಕ್ಕೆ ಸಾಧನ: ರಾಘವೇಶ್ವರ ಶ್ರೀ

ಗೋಕರ್ಣ: ಸಂಗೀತ ಮೋಕ್ಷಕ್ಕೆ ಸಾಧನ; ಇದು ಕೇವಲ ಮನಸ್ಸಿಗೆ ಮುದನೀಡುವ ಸಾಧನವಲ್ಲ. ಸಂಗೀತದ ಮೂಲಕ ಜನತೆ ಮತ್ತು ಜನಾರ್ದನನನ್ನು ಕೂಡಾ ಮೆಚ್ಚಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಸಂಗೀತೋತ್ಸವದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು, “ಸಂಗೀತ ಮೋಕ್ಷಕ್ಕೆ ಸಾಧನ ಎಂದು ಯಾಜ್ಞವಲ್ಕ್ಯ ಸ್ಮøತಿಯಲ್ಲಿ ಹೇಳಲಾಗಿದೆ. ಆದ್ದರಿಂದ ಸಂಗೀತ ಕೇವಲ ಮನೋರಂಜನೆಯಲ್ಲ ಸಾಧನವಲ್ಲ. ಜನರನ್ನು ಮಾತ್ರವಲ್ಲದೇ ಇದರಿಂದ ಜನಾರ್ದನನ್ನೂ ಮೆಚ್ಚಿಸಬಹುದು. ವಿದ್ಯಾರ್ಥಿಗಳು ಮೇರು ಕಲಾವಿದರಿಂದ ಸ್ಫೂರ್ತಿ ಪಡೆದು ಇಂಥ […]

Continue Reading

ಸಂಗೀತೋತ್ಸವಕ್ಕೆ ಅದ್ದೂರಿ ಚಾಲನೆ: ವಿಷ್ಣುಗುಪ್ತ ವಿವಿಯಲ್ಲಿ ನಾದವೈಭವ

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಬುಧವಾರ ಎರಡು ದಿನಗಳ ಸಂಗೀತೋತ್ಸವಕ್ಕೆ ಖ್ಯಾತ ಸಂಗೀತ ವಿದುಷಿ ವಿ.ಕಾಂಚನ ರೋಹಿಣಿ ಸುಬ್ಬರತ್ನಂ ಚಾಲನೆ ನೀಡಿದರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿದ ಪಾರಂಪರಿಕ ಸಂಗೀತ ವಿದ್ಯೆ, ಕಲೆಯನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಯಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಆಯೋಜಿಸಿದ್ದ ಈ ಸಂಗೀತೋತ್ಸವದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದ ದಿಗ್ಗಜರಿಂದ ಗುರುಕುಲದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾವಿಶ್ವ ಸಭಾಂಗಣದಲ್ಲಿ ದಿನವಿಡೀ ನಡೆದ ಸಂಗೀತೋತ್ಸವದ ಮೊದಲ […]

Continue Reading

ಸೀಮೋಲ್ಲಂಘನೆ ಮುಕ್ತಿಗೆ ಸೋಪಾನ: ರಾಘವೇಶ್ವರ ಶ್ರೀ

ಬೆಂಗಳೂರು: ಸೀಮೋಲ್ಲಂಘನೆ ಎಂದರೆ ಆತ್ಮದ ವಿಸ್ತರಣೆ ಮತ್ತು ಮುಕ್ತಿಗೆ ಸೋಪಾನ. ಆತ್ಮವಿಸ್ತಾರವಾಗಿ ಮುಕ್ತಿ ಪಡೆಯುವುದೇ ನಿಜ ಅರ್ಥದ ಸೀಮೋಲ್ಲಂಘನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ನುಡಿದರು. ಪ್ಲವನಾಮ ಸಂವತ್ಸರದ ವಿಶ್ವವಿದ್ಯಾ ಚಾತುರ್ಮಾಸ್ಯದ ಸೀಮೋಲ್ಲಂಘನೆ ಧರ್ಮಸಭೆಯಲ್ಲಿ ಪಡೀಲು ಮಹಾಬಲೇಶ್ವರ ಭಟ್ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ಅನುಗ್ರಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಮತ್ತೊಬ್ಬರ ದುಃಖ ಪರಿಹರಿಸುವುದು ನಿಜ ಅರ್ಥದ ಸೀಮೋಲ್ಲಂಘನೆ. ಅವರವರ ಕರ್ತವ್ಯವನ್ನು ಮಾಡುವ ಜತೆಗೆ ಕ್ಷೇತ್ರ ವಿಸ್ತಾರ, ಬದುಕಿನ ಆಯಾಮ ವಿಸ್ತರಿಸುವ ಪ್ರಯತ್ನ ಮಾಡಬೇಕು. ಇಡೀ ವಿಶ್ವಕ್ಕೇ ವ್ಯಾಪಿಸುವುದೇ […]

Continue Reading

ಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ; ಅದು ಕರ್ತವ್ಯ – ರಾಘವೇಶ್ವರ ಶ್ರೀ

  ಸಮಾಜಕ್ಕಾಗಿ ಮಾಡುವ ಸಮರ್ಪಣೆ ಅಥವಾ ಕೆಲಸವು ಔದಾರ್ಯವಲ್ಲ. ಅದು ಕರ್ತವ್ಯವೇ ಆಗಿದೆ. ಮನುಷ್ಯ ಸಂಘಜೀವಿಯಾಗಿದ್ದು, ಸಮಾಜದಲ್ಲಿ ಪರಸ್ಪರ ಸಹಕಾರವಿಲ್ಲದೇ ಜೀವನನಡೆಸಲು ಸಾಧ್ಯವಿಲ್ಲ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.   ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ “ವಿಶ್ವವಿದ್ಯಾ~ ಚಾತುರ್ಮಾಸ್ಯ” ದ ಸಂದರ್ಭದಲ್ಲಿ *ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ* ಸ್ವೀಕರಿಸಿ ಮಾತನಾಡಿದ ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಂಘಟನೆಗೆ ಹಾಗೂ ಸಮಾಜಕ್ಕೆ ಇರುವೆಯು ಪರಮಾದರ್ಶವಾಗಿದೆ. ಇರುವೆಯ ಶಿಸ್ತು, ವಿಘ್ನಗಳಿಗೆ ಜಗ್ಗದಿರುವುದು, ಅಂತಃಕಲಹ ಇಲ್ಲದಿರುವುದು, […]

Continue Reading

ರಾಮಾಶ್ರಮದಲ್ಲಿ ವೈಭವದ ಶ್ರೀರಾಮ ಪಟ್ಟಾಭಿಷೇಕ ರಾಮನ ಆದರ್ಶ ಪಾಲನೆಗೆ ರಾಘವೇಶ್ವರ ಶ್ರೀ ಸಲಹೆ

ಬೆಂಗಳೂರು: ರಾಮಾಯಣ ಪಾರಾಯಣದಿಂದ ಧಾರ್ಮಿಕ ವಾತಾವರಣ ನಿರ್ಮಾಣ ಸಾಧ್ಯ. ರಾಮಾಯಣದ ಸತ್ವ- ಶಕ್ತಿ ಅಂಥದ್ದು. ಇಂಥ ಅನೇಕ ಸನ್ನಿವೇಶಗಳು ಸ್ವತಃ ಅನುಭವಕ್ಕೆ ಬಂದಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ‘ಶ್ರೀರಾಮಸಾಮ್ರಾಜ್ಯ ಪಟ್ಟಾಭಿμÉೀಕ’ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀಗಳು, ಆಡಳಿತ ಎಂದರೆ ರಾಮರಾಜ್ಯದ ನೆನಪಾಗುತ್ತದೆ. ರಾಮನ ನಂತರ ಕೋಟ್ಯಂತರ ರಾಜರು ಆಳಿದ್ದಾರಾದರೂ, ಇಂದಿಗೂ ರಾಮರಾಜ್ಯಕ್ಕೆ ಸಾಟಿಯಿಲ್ಲ. ಹಾಗೆಯೇ ರಾಮಾಯಣ ಆದಿಕಾವ್ಯವಾಗಿದ್ದು, ಅದರ ನಂತರ ಕೋಟ್ಯಂತರ ಕಾವ್ಯ ರಚನೆಯಾಗಿದ್ದರೂ, ರಾಮಾಯಣಕ್ಕೆ ಸಾಟಿಯಿಲ್ಲ. ರಾಮಾಯಣದ ಒಂದೊಂದು […]

Continue Reading

*ಶ್ರೀ ಗುರು ಪೀಠದ ಮೇಲಿನ‌ ಅಚಲ ನಂಬಿಕೆಯು ಭವ್ಯ ಬದುಕಿನ ಸೋಪಾನ* ” : ಅಮ್ಮಂಕಲ್ಲು ರಾಮ ಭಟ್

  ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯದ ಸಭೆಯು ದಿನಾಂಕ ೩೦ – ೦೭ – ೨೦೨೧ ,ಶುಕ್ರವಾರ ಎಡಕ್ಕಾನ ಘಟಕದ ಅಧ್ಯಕ್ಷರಾದ ಸುಬ್ಬಾ ಭಟ್ಟರ ‘ ಸುಖನಿಧಿ ‘ ನಿವಾಸದಲ್ಲಿ ಜರಗಿತು. ಧ್ವಜಾರೋಹಣ , ಶಂಖನಾದ, ಗುರುವಂದನೆಗಳೊಂದಿಗೆ ಆರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ಅಮ್ಮಂಕಲ್ಲು ರಾಮ ಭಟ್ ವಹಿಸಿದರು. ವಲಯ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಮಾತನಾಡಿ ಪ್ರಸ್ತುತ ಬೆಂಗಳೂರಿನ […]

Continue Reading

ಧನ-ಜನಕ್ಕಿಂತ ಜ್ಞಾನಶಕ್ತಿ ಶ್ರೇಷ್ಠ: ರಾಘವೇಶ್ವರ ಶ್ರೀ

ಬೆಂಗಳೂರು: ಜನ ಅಥವಾ ಧನ ಶಕ್ತಿಯಿಂದ ದೇಶ ಬದಲಿಸಲಾಗದು; ಸೈನ್ಯ, ಕೋಶ ಅಥವಾ ಜನಸ್ತೋಮ ಇಲ್ಲದೇ ಶಂಕರಾಚಾರ್ಯರು ತಮ್ಮ ಜ್ಞಾನಪ್ರಭೆಯಿಂದ ಅಖಂಡ ಭಾರತದ ಪುನರುತ್ಥಾನ ಮಾಡಿದಂತೆ, ವಿಷ್ಣುಗುಪ್ತ ವಿಶ್ವವಿದ್ಯಾಪೀಠಪ್ರಾಚೀನ ಜ್ಞಾನಪರಂಪರೆಯ ತಳಹದಿಯಲ್ಲಿ ದೇಶದ ಪುನರ್ ನಿರ್ಮಾಣಕ್ಕೆ ಹೊರಟಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ 28ನೇ ಚಾತುರ್ಮಾಸ್ಯ ವ್ರತಾರಂಭದಲ್ಲಿ ಧರ್ಮಸಂದೇಶ ನೀಡಿದ ಅವರು, “ಇಡೀ ವಿಶ್ವಕ್ಕೆ ಕೋವಿಡ್-19 ಎಂಬ ಗಾಡಾಂಧಕಾರ ಕವಿದ ಸಂಕಷ್ಟದ ಸನ್ನಿವೇಶದಲ್ಲಿ ಈ ಅದ್ಭುತ ಸಂಸ್ಥೆ ಅನಾವರಣಗೊಳ್ಳುತ್ತಿದೆ. ಇದು ದೈವಪ್ರೇರಣೆ. […]

Continue Reading

ಯೋಗ ಜೀವ-ದೇವ ಬೆಸೆಯುವ ಬಂಧ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಯುಕ್ತ ಆಹಾರ, ವಿಹಾರ, ಚಟುವಟಿಕೆ ಮೂಲಕ ನಿದ್ದೆ, ಸ್ವಪ್ನ, ಜಾಗೃತಸ್ಥಿತಿ ಮತ್ತು ಸಮಾದಿ ಸ್ಥಿತಿಯನ್ನು ಆನಂದಿಸುವುದೇ ನಿಜವಾದ ಯೋಗ. ಯೋಗ ಜೀವಾತ್ಮ ಮತ್ತು ಪರಮಾತ್ಮನನ್ನು ಬೆಸೆಯುವ ಪವಿತ್ರ ಬಂಧ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ನುಡಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸೋಮವಾರ ಹಮ್ಮಿಕೊಂಡಿದ್ದ “ಯೋಗಾಂತರಂಗ” ಅಂತರ್ಜಾಲ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಆಹಾರ, ವಿಹಾರ, ಕ್ರಿಯೆ ಯುಕ್ತವಾಗಿದ್ದಾಗ ಜಾಗೃತಿ, ನಿದ್ದೆ, ಸ್ವಪ್ನಸ್ಥಿತಿಯ ಆನಂದ ಸವಿಯುವ […]

Continue Reading

ಸತ್ಕಾರ್ಯಗಳೇ ಸುಖನಿದ್ದೆಯ ಗುಟ್ಟು: ರಾಘವೇಶ್ವರ ಸ್ವಾಮೀಜಿ

ಕಾರವಾರ/ ಗೋಕರ್ಣ: ಭಾರತೀಯ ಪರಂಪರೆಯಲ್ಲಿ ನಿದ್ರೆಯೂ ದೈವಸ್ವರೂಪ. ಸತ್ಯ ಮತ್ತು ಧರ್ಮ ಮಾರ್ಗದಲ್ಲಿ ನಡೆದು ಆತ್ಮಸಾಕ್ಷಿ ಒಪ್ಪುವಂಥ ಸತ್ಕಾರ್ಯಗಳನ್ನು ಮಾಡುವ ಮೂಲಕ ನಿದ್ರಾದೇವಿಯಿಂದ ಸುಖನಿದ್ದೆಯೆಂಬ ವರ ಪಡೆಯೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಸ್ವಾಮೀಜಿ ಸಲಹೆ ಮಾಡಿದರು. ರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಜ್ಞಾನ ವಿಜ್ಞಾನ ಚಿಂತನ ಸತ್ರ ಮಾಲಿಕೆಯಡಿ ‘ಸ್ವಸ್ಥ ಮನಸ್ಸಿಗಾಗಿ ಸುಖನಿದ್ದೆ’ ಎಂಬ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಸಪ್ತಶತಿಯ “ಯಾದೇವಿ ಸರ್ವಭೂತೇಶು ನಿದ್ರಾರೂಪೇಣ ಸಂಸ್ಥಿತಾ..” ಎಂಬ ಸ್ತೋತ್ರ ನಮ್ಮ […]

Continue Reading

ಮಕ್ಕಳ ಕಲಿಕೆಗೆ ಉತ್ತಮ ಪರಿಸರ, ಸಂಸರ್ಗ ಅಗತ್ಯ; ರಾಘವೇಶ್ವರ ಶ್ರೀ

ಕಾರವಾರ: ಗುಣ- ದೋಷಗಳೆರಡಕ್ಕೂ ಸಹವಾಸವೇ ಕಾರಣ. ಆದ್ದರಿಂದ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಪರಿಸರ ಮತ್ತು ಉತ್ತಮ ಸಂಸರ್ಗ ಕಲ್ಪಿಸುವ ಮೂಲಕ ಅವರನ್ನು ಭವಿಷ್ಯದ ಪ್ರಜೆಗಳಾಗಿ ರೂಪುಗೊಳಿಸುವ ಅಗತ್ಯವಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರು ಅಭಿಪ್ರಾಯಪಟ್ಟರು. ಶ್ರೀಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಗುರುಕುಲಗಳ ವಿದ್ಯಾರಂಭ ಸಮಾರಂಭದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ರಾಮಾಯಣದ ರಾಮ ಅಭಯ ಸ್ತೋತ್ರವನ್ನು ಆನ್‍ಲೈನ್ ಮೂಲಕ ಗುರುಕುಲದ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ಮೂಲಕ ವಿದ್ಯಾರಂಭಕ್ಕೆ ಶ್ರೀಗಳು ಚಾಲನೆ ನೀಡಿದರು. ಕಾದ ಕಬ್ಬಿಣದ ಮೇಲೆ […]

Continue Reading

ನಿರಂತರ ಜ್ಞಾನ ದೀಪೋತ್ಸವದಿಂದ ದೇಶ ಪ್ರಜ್ವಲ: ರಾಘವೇಶ್ವರ ಶ್ರೀ

ಕಾರವಾರ/ ಗೋಕರ್ಣ: ಒಂದು ದೀಪದಿಂದ ಸಾವಿರ ದೀಪಗಳು ಹೊತ್ತಿಕೊಳ್ಳುವಂತೆ ಒಬ್ಬ ಸಾಧಕ ಅಸಂಖ್ಯಾತ ಯುವ ಮನಸ್ಸುಗಳಿಗೆ ಪ್ರೇರಣೆಯಾಗಬಲ್ಲರು. ಇಂಥ ಜ್ಞಾನ ದೀಪೋತ್ಸವ ನಿರಂತರವಾದಾಗ ಇಡೀ ದೇಶ ಪ್ರಜ್ವಲಿಸಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಭಾನುವಾರ ಆಯೋಜಿಸಿದ್ದ ‘ಸಾಧನೆಯ ಮಾರ್ಗ’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಅತ್ಯಂತ ಕಿರಿಯ ವಯಸ್ಸಿನಲ್ಲೇ ಮಹತ್ಸಾಧನೆ ಮಾಡಿ ದೇಶ ಹಾಗೂ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಡಾ.ಕಾರ್ತಿಕ್ ಹೆಗಡೆಕಟ್ಟಿ […]

Continue Reading

ಪ್ರಧಾನಿ ಕಚೇರಿಯ ಉಪ ಕಾರ್ಯದರ್ಶಿ ಡಾ.ಕಾರ್ತಿಕ ಹೆಗಡೆಕಟ್ಟೆ ಜತೆ ಸಂವಾದ ನಾಳೆ

ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಈ ತಿಂಗಳ 30ರಂದು ಭಾನುವಾರ ಬೆಳಿಗ್ಗೆ 11.45ರಿಂದ “ಸಾಧನೆಯ ಮಾರ್ಗ” ಎಂಬ ಅಂತರ್ಜಾಲ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರಧಾನಿ ಕಾರ್ಯಾಲಯದ ಉಪ ಕಾರ್ಯದರ್ಶಿ, ಉತ್ತರ ಕನ್ನಡ ಮೂಲದ ಪ್ರತಿಭಾವಂತ ಯುವ ಐಎಎಸ್ ಅಧಿಕಾರಿ ಡಾ.ಕಾರ್ತಿಕ ಹೆಗಡೆಕಟ್ಟೆ ಅವರು ‘ಸಾಧನೆಯ ಮಾರ್ಗ’ ವಿಷಯದ ಬಗ್ಗೆ ವಿಚಾರ ಮಂಡಿಸುವರು. ವಿದ್ಯಾ ಪರಿಷತ್ ಅಧ್ಯಕ್ಷ ಎಂ.ಆರ್.ಹೆಗಡೆ, ಆಡಳಿತಾಧಿಕಾರಿ ಸುರೇಂದ್ರ ಹೆಗಡೆ ಮತ್ತಿತರರು ಭಾಗವಹಿಸುವರು. […]

Continue Reading

ಕಲಿಕೆ ಜ್ಞಾನಮಯ, ಆನಂದಮಯವಾದರೆ ವಿದ್ಯೆ ಸಾರ್ಥಕ: ರಾಘವೇಶ್ವರ ಶ್ರೀ

ಗೋಕರ್ಣ: ಕಲಿಕೆ ಜ್ಞಾನಮಯ ಮತ್ತು ಆನಂದಮಯವಾಗಿದ್ದಾಗ ಮಾತ್ರ ವಿದ್ಯೆ ಸಾರ್ಥಕವಾಗುತ್ತದೆ ಎಂದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ಆಯೋಜಿಸಿದ್ದ ‘ಆತಂಕದ ಪರಿಸ್ಥಿತಿಯಲ್ಲಿ ಧನಾತ್ಮಕವಾಗಿ ಯೋಚಿಸಲು ಸರಳ ಸೂತ್ರಗಳು’ ಎಂಬ ಅಂತರ್ಜಾಲ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಇಂದಿನ ಶಿಕ್ಷೆ ಜ್ಞಾನ ಮತ್ತು ಭೀತಿಯಿಂದ ಕೂಡಿದೆ. ಈ ಪರಿಸ್ಥಿತಿ ಬದಲಾಗಬೇಕು. ವಿದ್ಯಾರ್ಥಿಗಳು ಇಷ್ಟಪಟ್ಟು ಪರೀಕ್ಷೆಯನ್ನು ಸ್ವೀಕಾರ ಮಾಡುವಂತಿರಬೇಕು; ಮಗು ಖುಷಿ ಖುಷಿಯಾಗಿದ್ದಷ್ಟೂ […]

Continue Reading

ಸಿದ್ಧಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ನಿಧಿಕುಂಭ

ಗಂಗಾಪುರ ಗ್ರಾಮದ ಶ್ರೀ ರಾಘವೇಂದ್ರ ಗೋಆಶ್ರಮದ ಆವರಣದಲ್ಲಿರುವ ಶ್ರೀ ಸಿದ್ಧಾಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಬುಧವಾರ ನಿಧಿಕುಂಭ ಕಾರ್ಯಕ್ರಮ ನಡೆಯಿತು. ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ದಿವ್ಯ ಅನುಗ್ರಹದಲ್ಲಿ ಸೌರ ಯುಗಾದಿಯ ಪರ್ವ ಕಾಲದಲ್ಲಿ ವೇ. ಮೂ. ಸುಕುಮಾರ್ ಜೋಯಿಸ ಕರುವಜೆ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀ ಸಿದ್ಧಾಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರುದ್ರ ಪಠನ ಮಾಡಲಾಯಿತು. ಸಮಿತಿ ಹಾಗೂ ಭಕ್ತರಿಂದ ನಿಧಿ ಸಮರ್ಪಣೆ ನಡೆಯಿತು. […]

Continue Reading

ಮಾತೃತ್ವಮ್ ಸಂಘಟನೆಯಿಂದ ಮೇವು ಸಮರ್ಪಣೆ

    ಮಾಲೂರು: ಮುಂದಿನ ಪೀಳಿಗೆಗಾಗಿ ಗೋವಿಗಳನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಮಾತೆಯರೆಲ್ಲರೂ ಗೋಸೇವೆಗೆ ಮುಂದಾದಾಗ ಎಲ್ಲಾ ಗೋಶಾಲೆಗಳು ಸಮೃದ್ಧತೆಯಿಂದ ಕೂಡಿರುತ್ತದೆ ಎಂದು ಮಾತೃತ್ವಮ್ ನ ಕೇಂದ್ರ ಕಾರ್ಯದರ್ಶಿ ನಾಗರತ್ನ ಜಿ. ಶರ್ಮ ಹೇಳಿದರು.   ಅವರು ಮಾಲೂರು ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮಕ್ಕೆ ಗೋವಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಮಾತೃತ್ವಮ್ ಸಂಘಟನೆಯ ಮಾಸದ ಮಾತೆಯರು ಆಗಮಿಸಿ ಮೇವು ಸಮರ್ಪಣೆ ಮಾಡಿದ ಬಳಿಕ ಮಾತನಾಡಿದರು.   ಗೋಆಶ್ರಮ ಸಮಿತಿ ಅಧ್ಯಕ್ಷ ಡಾ. ಶ್ಯಾಮಪ್ರಸಾದ ಮಾತನಾಡಿ ಬದುಕಿನಲ್ಲಿ […]

Continue Reading