ಸಂಗೀತೋತ್ಸವಕ್ಕೆ ಅದ್ದೂರಿ ಚಾಲನೆ: ವಿಷ್ಣುಗುಪ್ತ ವಿವಿಯಲ್ಲಿ ನಾದವೈಭವ
ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಬುಧವಾರ ಎರಡು ದಿನಗಳ ಸಂಗೀತೋತ್ಸವಕ್ಕೆ ಖ್ಯಾತ ಸಂಗೀತ ವಿದುಷಿ ವಿ.ಕಾಂಚನ ರೋಹಿಣಿ ಸುಬ್ಬರತ್ನಂ ಚಾಲನೆ ನೀಡಿದರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಿದ್ದರು. ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿದ ಪಾರಂಪರಿಕ ಸಂಗೀತ ವಿದ್ಯೆ, ಕಲೆಯನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿಯಲು ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಆಯೋಜಿಸಿದ್ದ ಈ ಸಂಗೀತೋತ್ಸವದಲ್ಲಿ ಕರ್ನಾಟಕ ಸಂಗೀತ ಕ್ಷೇತ್ರದ ದಿಗ್ಗಜರಿಂದ ಗುರುಕುಲದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾವಿಶ್ವ ಸಭಾಂಗಣದಲ್ಲಿ ದಿನವಿಡೀ ನಡೆದ ಸಂಗೀತೋತ್ಸವದ ಮೊದಲ […]
Continue Reading