ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಭವ್ಯ ಭವಿಷ್ಯದ ಸೂಚಕ: ರಾಘವೇಶ್ವರ ಶ್ರೀ

ಗೋಕರ್ಣ: ಭವ್ಯ ಭವಿಷ್ಯದ ಸೂಚಕ, ದೇಶದ ದಿಶೆಯನ್ನೇ ಬದಲಾಯಿಸಬಲ್ಲ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಯ ಸಂಕಲ್ಪ ವಿದ್ಯಾ ಚಾತುರ್ಮಾಸ್ಯ ಸಂದರ್ಭದಲ್ಲಿ ಸಾಕಾರಗೊಂಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕವನದ ಆವರಣದಲ್ಲಿ ನಡೆದ 27ನೇ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ತಕ್ಷಶಿಲೆಯ ಪುನಃಸೃಷ್ಟಿ ಇದಾಗಲಿದೆ. ದೇಶದ ಭವಿಷ್ಯವನ್ನೇ ಬದಲಾಯಿಸಬಲ್ಲ ವ್ಯಕ್ತಿತ್ವಗಳು ಇಲ್ಲಿ ನಿರ್ಮಾಣವಾಗಲಿವೆ ಎಂದರು. ಶಿವನ ಆತ್ಮಲಿಂಗ ಕ್ಷೇತ್ರ, ಆಂಜನೇಯನ ಜನ್ಮಭೂಮಿ, ಶ್ರೀಶಂಕರರು ಮೂರು ಬಾರಿ ಪಾದಸ್ಪರ್ಶ ಮಾಡಿದ ಪುಣ್ಯಭೂಮಿ, ದೈವರಾತರ ಕರ್ಮಭೂಮಿಯಾದ ಗೋಕರ್ಣದ […]

Continue Reading

ರಾಘವೇಶ್ವರ ಶ್ರೀ ಸೀಮೋಲ್ಲಂಘನೆ, ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ

ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 26ನೇ ಚಾತುರ್ಮಾಸ್ಯ ಸೀಮೋಲ್ಲಂಘನ ಹಾಗೂ ಶ್ರೀಮಠದ ವತಿಯಿಂದ ನೀಡಲಾಗುವ ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ (ಸೆ. 2) ಗೋಕರ್ಣ ಬಳಿಯ ಅಶೋಕವನದಲ್ಲಿ ನಡೆಯಲಿದೆ. ಸೀಮೋಲ್ಲಂಘನೆ ಅಂಗವಾಗಿ ಗಂಗಾವಳಿ ನದಿಯನ್ನು ದಾಟಿ ಅಶೋಕೆಗೆ ಮರಳಿ ಧರ್ಮಸಭೆ ನಡೆಸುವರು. ಕೆ.ಎಸ್.ಗುರುಮೂರ್ತಿ ಶಿಕಾರಿಪುರ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ಅನುಗ್ರಹಿಸಲಿದ್ದಾರೆ ಎಂದು ಚಾತುರ್ಮಾಸ್ಯ ಸಮಿತಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಮೂಲತಃ ಶಿರವಂತೆ ಸೀಮೆ ಹೊಸಳ್ಳಿ ಗ್ರಾಮದ ಕಲ್ಸೇಮನೆ ವಾಸಿ ಸಿಬ್ಬಯ್ಯನವರ ಪುತ್ರರಾದ ಗುರುಮೂರ್ತಿಯವರು […]

Continue Reading

ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ

  ಮಠ ಸನಾತನ ಸಂಸ್ಥೆಯಾದರೆ, ಹವ್ಯಕ ಮಹಾಸಭೆಯು ಪುರಾತನ ಸಂಸ್ಥೆಯಾಗಿದೆ. ಸಮಾಜದ ಹಿತ ಸಾಧನೆಯಲ್ಲಿ ನಿರತವಾಗಿರುವ ಮಹಾಸಭೆಯು ಇತ್ತೀಚಿನ ದಿನಗಳಲ್ಲಿ ಅನೇಕಾನೇಕ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಮೂಲಮಠವಾದ; ಗೋಕರ್ಣದ ಅಶೋಕೆಯ ಪರಿಸರದಲ್ಲಿ ಚಾತುರ್ಮಾಸ್ಯ ವ್ರತವನ್ನು ನಡೆಸುತ್ತಿರುವ ಪೂಜ್ಯ ಶ್ರೀಗಳು, ಹವ್ಯಕ ಮಹಾಸಭೆಯಿಂದ ಸಮರ್ಪಿಸಲಾದ ಗುರುಭಿಕ್ಷಾ ಸೇವೆ, ಗುರುಪಾದುಕಾ ಪೂಜೆ, ಗೋಸೇವೆಗಳನ್ನು ಸ್ವೀಕರಿಸಿ ಮಾತನಾಡಿ; ಭಾರತೀಯ ವಿದ್ಯೆಗೆ ಒತ್ತು ಕೊಡಲಾಗಿಯೇ, ಈ ವರ್ಷದ ಚಾತುರ್ಮಾಸ್ಯವನ್ನು “ವಿದ್ಯಾ ಚಾತುರ್ಮಾಸ್ಯ” […]

Continue Reading

ಗೋನಿರ್ಭರತೆಯಿಂದ ಆತ್ಮನಿರಭರತೆ ಸಾಧ್ಯ – ಶ್ರೀಸಂಸ್ಥಾನ

ರಾಸಾಯನಿಕ ಕೃಷಿ ಒಂದಲ್ಲಒಂದು ದಿನ ರೈತನಕುತ್ತಿಗೆಗೆ ಉರುಳಾಗುತ್ತದೆ. ದೇಶೀ ಗೋವನ್ನು ಸಾಕಿಕೊಂಡುಇದ್ದವರುಯಾರೂಆತ್ಮಹತ್ಯೆ ಮಾಡಿಕೊಂಡಿಲ್ಲ. ಸ್ವಾವಲಂಬಿ ಎಂಬುದಕ್ಕೆ ಗೋವು ಬಲುದೊಡ್ಡ ನಿದರ್ಶನ. ಗೋನಿರ್ಭರತೆಯಿಂದಆತ್ಮನಿರಭರತೆ ಸಾಧ್ಯವಾಗುತ್ತದೆ.ದೇಶದ ಗಮನ ಗೋವಿನ ಕಡೆಗೆ ಹರಿಯುವಂತೆ ಮಾಡಬೇಕು.ಗೋವು ದೇಶಕ್ಕೆ ಬೆಳಕಿನ ಕಿರಣವಾಗಿದ್ದು, ತಂತ್ರಜ್ಞಾನಗಳು ಗೋಜ್ಞಾನದಕಡೆಗೆಕೊಂಡೊಯ್ಯುವಂತಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಶ್ರೀರಾಮಾಂದ್ರಾಪುರ ಮಠದ ವತಿಯಿಂದ ಎ೧ ಲಾಜಿಕ್ಸ್ ಮಂಗಳೂರು ಸಹಕಾರದಲ್ಲಿ ದೇಸೀ ಗೋವು ಆಧಾರಿತಕೃಷಿಯಕುರಿತು ದೇಸೀ ಗೋವು – ಸ್ವಾವಲಂಬಿ ಸಾವಯವ ಕೃಷಿ ವೆಬಿನಾರ್ ಸರಣಿಕಾರ್ಯಕ್ರಮದಲ್ಲಿ ಪರಮಪೂಜ್ಯರು ವಿಶೇಷ ಆಶೀರ್ವಚನ ನೀಡಿದರು. […]

Continue Reading

ಉರುವಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನ

ಉರುವಾಲು ಶ್ರೀಭಾರತೀ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಣ್ಣಪ್ಪ ದ್ವಜಾರೋಹಣ ನಡೆಸಿದರು. ಸೇವಾಸಮಿತಿ ಅಧ್ಯಕ್ಷ ಶಂಕರನಾರಾಯಣ ಭಟ್, ಮುಖ್ಯಶಿಕ್ಷಕಿ ಶೋಭಿತಾ ಕೆ. ಆರ್. ಮತ್ತಿತ್ತರರು ಉಪಸ್ಥಿತರಿದ್ದರು.

Continue Reading

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಈ ದಿನ ಸ್ಮರಿಸಬೇಕಾದ ಭಾರತೀಯರಾದ ನಮ್ಮ ಆದ್ಯ ಕರ್ತವ್ಯ – ಶ್ರೀ ರಾಜಶೇಖರ್ ಕಾಕುಂಜೆ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ನಡೆಸಲಾಯಿತು. ಬಿ.ಎ.ಎಸ್.ಎಫ್. ಪ್ರಧಾನ ವ್ಯವಸ್ಥಾಪಕ ಶ್ರೀ ರಾಜಶೇಖರ್ ಕಾಕುಂಜೆ ಇವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಭಾರತೀಯರನ್ನು ಈ ದಿನ ಸ್ಮರಿಸಬೇಕಾದುದು ನಮ್ಮ ಆದ್ಯ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಕೋವಿಡ್ – 19 ರ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಅರಿವು ಮೂಡಿಸಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಇದರ ಅಧ್ಯಕ್ಷ ಶ್ರೀ ಹರೀಶ್ ಕೆ., ಕಾರ್ಯದರ್ಶಿ ಶ್ರೀ ಶ್ರೀಧರ್ ರಾಜ್ […]

Continue Reading

ಉರುವಾಲು ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶ

ಶ್ರೀರಾಮಚಂದ್ರಾಪುರಮಠದ ಧರ್ಮಚಕ್ರ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಉರುವಾಲು ಶ್ರೀ ಭಾರತೀ ಆಂಗ್ಲಮಾದ್ಯಮ ಪ್ರೌಢಶಾಲೆ ಒಟ್ಟು ೧೦ ಮಕ್ಕಳು ಪರೀಕ್ಷೆ ಬರೆದಿದ್ದು, ೮ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಹಾಗೂ ೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶೇ.೧೦೦ ಫಲಿತಾಂಶ ದಾಖಲಿಸಿದೆ. ಅಸ್ಮಿತ್ ೬೧೩ ಅಂಕ ಪಡೆಯುವ ಮೂಲಕ ಶಾಲೆ ಪ್ರಥಮ ಸ್ಥಾನ, ಅಪೂರ್ವ ೬೦೭ ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Continue Reading

ಹಂಪಿನಗರ ಶ್ರೀಭಾರತೀ ವಿದ್ಯಾಲಯಕ್ಕೆ ರಾಜ್ಯದಲ್ಲಿ ಏಳನೇ ರ‍್ಯಾಂಕ್

ಬೆಂಗಳೂರು ಹಂಪಿನಗರ ಶ್ರೀಭಾರತೀ ವಿದ್ಯಾಲಯ ಶಾಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೨೫ ವಿದ್ಯಾರ್ಥಿಗಳು ಹಾಜರಾಗಿದ್ದು, ೬ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, ೧೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆಯುವ ಮೂಲಕ ಶೇ.೮೮ ಫಲಿತಾಂಶ ದಾಖಲಿಸಿದೆ. ಸುದೀಕ್ಷಾ ಶೇ.೯೯.೦೪ (೬೧೯/೬೨೫) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೭ ನೇ ಸ್ಥಾನ ಪಡೆದಿದ್ದಾರೆ. ಗಣಿತ ಹಾಗೂ ಕನ್ನಡ ವಿಷಯಗಳಲ್ಲಿ ಪೂರ್ಣಾಂಕವನ್ನು ಗಳಿಸಿದ್ದಾರೆ. ಸ್ಫೂರ್ತಿ ಹಾಗೂ ಪೂರ್ವಿ ಅವರು ಶೇ.೯೩.೬ ಅಂಕದೊಂದಿಗೆ ಶಾಲೆಗೆ ದ್ವಿತೀಯ ಸ್ಥಾನವನ್ನು, ಪಲ್ಲವಿ ಶೇ.೯೨.೬೪ ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Continue Reading

ಭತ್ತದ ಭಕ್ತಿ – ರಾಮ ನೈವೇದ್ಯ.

ಮಠದಲ್ಲಿ ಎಷ್ಟು ಬಗೆಯ ಸೇವೆಗಳಿದ್ದರೂ ಈ ಸೇವೆ ಅತಿವಿಶಿಷ್ಟವಾದುದು , ನೇರವಾಗಿ ಶ್ರೀರಾಮದೇವರಿಗೇ ಅದು ನೈವೇದ್ಯವಾಗಿ ಸಲ್ಲುವುದಲ್ಲವೇ ? – ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳು , ಶ್ರೀರಾಮಚಂದ್ರಾಪುರಮಠ ರಾಮನೈವೇದ್ಯ ಭತ್ತದ ಭಕ್ತಿಯಲ್ಲಿ ಮುಳ್ಳೇರಿಯ ಮಂಡಲ ಗದ್ದೆ ವ್ಯವಸಾಯವು ವಿರಳವಾಗುತ್ತಿರುವ ಈ ದಿನಗಳಲ್ಲಿ ಹಿರಿಯರು ಮತ್ತು ಅವರ ಮಾರ್ಗದರ್ಶನದಲ್ಲಿ ಮಕ್ಕಳು ರಾಮದೇವರ ನೈವೇದ್ಯಕ್ಕಾಗಿ ಭತ್ತದ ಕೃಷಿ ನಡೆಸಲು ನೇಜಿ ನೆಡುವ ಸುಂದರ ದೃಶ್ಯ ಕಂಡು ಬಂದದ್ದು ಕುಂಬಳೆ ಸೀಮೆ ಪ್ರದೇಶದಲ್ಲಿ. ಕೊರೋನಾ ಕಾರಣದಿಂದ ಎಲ್ಲೆಡೆ ಲಾಕ್ ಡೌನ್, ಪ್ರಯಾಣ, ಶಾಲೆ […]

Continue Reading

ಪೆರಾಜೆ ಗೋಶಾಲೆಯಲ್ಲಿ ಗೋವರ್ಧನಧಾರಿ ಗೋಪಾಲಕೃಷ್ಣ

ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಅಮೃತಧಾರ ಗೋಶಾಲೆಯಲ್ಲಿ ಪ್ರತಿ ವರ್ಷ ಶ್ರಾವಣ ಮಾಸದ ಶ್ರವಣ ನಕ್ಷತ್ರಕ್ಕೆ ಜರಗುವ ಗೋವರ್ಧನಧಾರಿ ಗೋಪಾಲಕೃಷ್ಣ ಪೂಜೆ,ಗೋಪೂಜೆ ಯು ಸೋಮವಾರ ವೇ.ಮೂ ಮಿತ್ತೂರು ತಿರುಮಲೇಶ್ವರ ಭಟ್ ರವರ ನೇತೃತ್ವದಲ್ಲಿ ನಡೆಯಿತು. ಶೀಮಠದ ಮ್ಯಾನೇಜರ್ ಶಿವಪ್ರಸಾದ್ ರವರು ಪೂಜಾಕೈಂಕರ್ಯ ವನ್ನು ನೆರವೇರಿಸಿದರು. ಸೇವಾಸಮಿತಿ ಯ ಅಧ್ಯಕ್ಷರಾದ ಹಾರಕರೆ ನಾರಾಯಣ ಭಟ್ ರವರು ಈ ಕಾರ್ಯಕ್ರಮ ದಲ್ಲಿ ಬಾಗವಹಿಸಿದರು.

Continue Reading

ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ

  ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಉಪಾಕರ್ಮ ಕಾರ್ಯ ರಾಮಚಂದ್ರಾಪುರ ಮಂಡಲದ ವೈದಿಕಪ್ರಧಾನರಾದ ಶೇಷಗಿರಿ ಭಟ್ಟ, ಲಕ್ಷ್ಮೀನಾರಾಯಣ ಭಟ್ಟ ಮಾಗಲು, ರಾಘವೇಂದ್ರ ಪ್ರಸಾದ ಹಾಗೂ ಮತ್ತಿತ್ತರು ಉಪಸ್ಥಿತರಿದ್ದರು.

Continue Reading

ಅಂದು ಅರಿಯದೆ ಬರೆದೆ!!ಅದೇ ಇಂದು ಬಾಳದಾರಿಗೆ ರಾಮದೀವಿಗೆಯ ಅರಿವಿನತ್ತ ಕರೆದೊಯ್ಯುತಿದೆ!!!….

ಅದೇಕೋ ನಾನಾರಿಯೆ ಬಾಲ್ಯದ ದಿನದಲೊಂದು ಹೀಗೊಂದು ಅಭ್ಯಾಸವಿತ್ತು ನನಗೆ.ಕೈಗೆ ಸಿಕ್ಕ ಯಾವುದೇ ಪೇಪರ್, ಪುಸ್ತಕದ ಮೊದಲ ಮುಖದಲಿ ಹರೇರಾಮ ,ಶ್ರೀ ಗುರುಭ್ಯೋನಮಃ, ಶ್ರೀ ಗುರುಗಣಾಧಿಪತಯೇ ಎಂದು ಬರೆಯುವ ಹುಚ್ಚು… ಅಂದು ಅರಿಯದೇ ,ಅರಿವಿಲ್ಲದೆಯೇ ಬರೆದ ಈ ಪದಗಳು ನನ್ನನ್ನು ಈ ಬಾಳದಾರಿಲಿ ರಾಮದೀವಿಗೆಯತ್ತ, ಆಧ್ಯಾತ್ಮಿಕ ಬದುಕಿನತ್ತದ ಪಥವ ಕರುಣುಸಿದೆ ಎಂದೆನಲು ಇಂದು ಅಚ್ಚರಿಯೂ ಜೊತೆಗೆ ಆನಂದ.. ಮೈರೋಮಾಂಚನ..!! ಬಾಲ್ಯದ ಶಾಲಾಕಾಲೇಜುಗಳ ದಿನದಲಿ ಶ್ರೀಸವಾರಿಯು ಊರಿಗೆ ಬಂದಾಗ , ಶಾಲೆಗೆ ರಜೆಯ ಮಾಡಿ ಗುರುಮಂತ್ರಾಕ್ಷತೆ ಸ್ವೀಕರಿಸುವ ಸಲುವಾಗಿ ಓಡೋಡಿ […]

Continue Reading

ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆ

ಅಮೃತಧಾರ ಗೋಶಾಲೆ ಹೊಸಾಡಿನಲ್ಲಿ ನಡೆದ ಸಕಲರ ಕ್ಷೇಮಾರ್ಥವಾಗಿ ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆಯಂದು ಭರತ ಕೃಷ್ಣ ಭಂಡಾರಕರ ಇವರು ಆಗಮಿಸಿ ಪ್ರಸಾದ ಸ್ವೀಕರಿಸಿದರು.

Continue Reading

ಮೇವು ಸಂಸ್ಕರಣಾ ಘಟಕ ಲೋಕಾರ್ಪಣೆ

ಗೋವುಗಳನ್ನು ತಮ್ಮ ಮನೆಯ ಸದಸ್ಯರಂತೆ, ಗೋಪಾಲಕರನ್ನು ತಮ್ಮ ಮಕ್ಕಳಂತೆ ಕಾಣುವ ಅಪರೂಪದ ಅಪ್ಪಟ ಗೋಪ್ರೇಮಿ ಮತ್ತು ಭಾರತೀಯ ಗೋತಳಿಯ ಮಹಾಸಂರಕ್ಷಕರಾದ ಹೊಸಾಡ ಗೋಶಾಲೆಯ ಮಾನ್ಯ ಗೌರವಾಧ್ಯಕ್ಷರಾದ ಹುಬ್ಬಳ್ಳಿಯ ಭಾರತಿ ಗಂಗಾಧರ ಪಾಟೀಲ್ ಮತ್ತು ಕುಟುಂಬದವರ ಆರ್ಥಿಕ ನೆರವಿನೊಂದಿಗೆ ರೂಪಿತವಾದ ಬಾಲ ಮುಕುಂದ ಕೃಪಾ ಹೆಸರಿನ ನೂತನ ಮೇವು ಸಂಸ್ಕರಣಾ ಘಟಕವು ಕಾಮಧೇನುವಿನ ವಿಶೇಷ ಪೂಜೆಯೊಂದಿಗೆ ಗೋಪಾಲಕರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿತು. ವಯಸ್ಸಾದ ಮತ್ತು ಸಣ್ಣ ವಯಸ್ಸಿನ ಗೋವುಗಳಿಗೆ ಹಸಿರು ಹುಲ್ಲುಗಳ ಸತ್ವವನ್ನು ಸಂಪೂರ್ಣವಾಗಿ ಸೇವಿಸಲು ಸುಲಭವಾಗುವಂತೆ ಹಸಿರು ಹುಲ್ಲಿನ […]

Continue Reading

ವಿವಿವಿ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸದಿಕ್ಕು: ರಾಘವೇಶ್ವರ ಶ್ರೀ

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ ಸ್ಥಾಪನೆಯ ಉದ್ದೇಶ ಎಂದು ಹೇಳಿದರು.ಚಾಣಕ್ಯ ಇಡೀ ಗುರುಕುಲಕ್ಕೆ […]

Continue Reading

ಪಿಯುಸಿ ಫಲಿತಾಂಶ ವಿಶೇಷ ದಾಖಲೆ

ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ವಿಶೇಷ ದಾಖಲೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲಿಸಿದರೆ ವಾಣಿಜ್ಯ ವಿಭಾಗದಲ್ಲಿ ಶೇ. 95 ಫಲಿತಾಂಶ ದಾಖಲಿಸಿದೆ. ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಭೈರವಿ ವಿನಾಯಕ ಹೆಗಡೆ ಅವರು ಶೇ. 84.33 ಅಂಕ ಗಳಿಸಿದ್ದಾರೆ. ಅವರು ಸಂಸ್ಕೃತದಲ್ಲಿ 98 ಅಂಕ ಮತ್ತು ಭೌತಶಾಸ್ತ್ರದಲ್ಲಿ87 ಅಂಕ […]

Continue Reading

ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ – ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ

ಅಶೋಕೆ: ಜಗತ್ತನ್ನು ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕನ್ನು ಹುಡುಕುತ್ತಿದೆಯಾದರೂ, ಸಿಗುತ್ತಿಲ್ಲ. ಈ ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂಬ ಹಾರೈಕೆ ಎಲ್ಲರದ್ದಾಗಬೇಕಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಅವರು ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ ೨೭ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮಾ. ಶಾರ್ವರಿ ಎಂದರೆ ಕತ್ತಲು, […]

Continue Reading

5ರಿಂದ ರಾಘವೇಶ್ವರ ಶ್ರೀ ಚಾತುರ್ಮಾಸ್ಯ: ಭಕ್ತರ ಭೇಟಿಗೆ ಅವಕಾಶ ಇಲ್ಲ

ಬೆಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಈ ತಿಂಗಳ 5ರಿಂದ ಸೆಪ್ಟೆಂಬರ್ 2ರವರೆಗೆ ಗೋಕರ್ಣದ ಅಶೋಕೆಯಲ್ಲಿ ಶ್ರೀಶಂಕರಾಚಾರ್ಯರು ಮೂಲಮಠ ಸ್ಥಾಪಿಸಿದ ಪರಿಸರದಲ್ಲಿ ನಡೆಯಲಿದೆ. ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾ ಚಾತುರ್ಮಾಸ್ಯವಾಗಿ ಈ ಬಾರಿಯ ಚಾತುರ್ಮಾಸ್ಯವನ್ನು ಸರ್ಕಾರದ ನೀತಿ ನಿಯಮಗಳ ಚೌಕಟ್ಟಿನಲ್ಲಿ ಆಚರಿಸಲಾಗುತ್ತಿದೆ. ಸಮಗ್ರ ಭಾರತೀಯ ವಿದ್ಯೆಗಳ ಅಧ್ಯಯನದ ಸುಸ್ಥಾನವಾಗಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಹಾಗೂ ಅದಕ್ಕೆ ಪೀಠಿಕೆಯಾಗಿ ಮೂಡಿ ಬರುತ್ತಿರುವ ಅಪೂರ್ವ ಗುರುಕುಲಗಳ ಕಾರ್ಯ ಈ ಬಾರಿಯ ಚಾತುರ್ಮಾಸ್ಯದ […]

Continue Reading